Homeಮುಖಪುಟಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ...

ಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

- Advertisement -
- Advertisement -

ದೇಶದಲ್ಲಿ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ಮೇಲೆ ಅತೀವ ಕೆಲಸದ ಹೊರೆಯನ್ನು ಹೇರಿ ಅವರ ಖಾಸಗಿ ಜೀವನವನ್ನು ಕಿತ್ತುಕೊಳ್ಳುವ ಮೂಲಕ ಮಾನಸಿಕ ಒತ್ತಡಕ್ಕೆ ತಳ್ಳುತ್ತಿರುವ ಪರಿಸ್ಥಿತಿ ಗಂಭೀರ ಹಂತಕ್ಕೆ ತಲುಪಿದೆ. ಅದಾಗ್ಯೂ ಕೆಲ ಕಾರ್ಪೋರೇಟ್‌ ಬಂಡವಾಳಶಾಹಿಗಳು ಕೆಲಸದ ಅವಧಿಯನ್ನು ಇನ್ನಷ್ಟು ಹೆಚ್ಚಿಸುವ ಮೂಲಕ ಉದ್ಯೋಗಿಗಳನ್ನು ಇನ್ನಷ್ಟು ಸಂಕಷ್ಟಕ್ಕೆ ನೂಕಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಪೂರಕವಾಗಿಯೇ ಸರ್ಕಾರಗಳು ಕೂಡ ವರ್ತಿಸುತ್ತಿವೆ.

ಇಂತಹ ಸಂದರ್ಭದಲ್ಲಿ ದೇಶದ ಸಂಸತ್ತಿನಲ್ಲಿ ಮಹತ್ವದ ಮಸೂದೆಯೊಂದು ಮಂಡನೆಯಾಗಿದೆ. ಅದೇ ‘ಸಂಪರ್ಕ ಕಡಿತ ಹಕ್ಕು ಮಸೂದೆ’ (Right to Disconnect Bill). ಅಧಿಕೃತ ಕೆಲಸದ ಸಮಯದ ನಂತರ ಮತ್ತು ರಜಾದಿನಗಳಲ್ಲಿ ಕೆಲಸಕ್ಕೆ ಸಂಬಂಧಿಸಿದ ಕರೆಗಳು, ಸಂದೇಶಗಳು ಮತ್ತು ಇಮೇಲ್‌ಗಳನ್ನು ನಿರಾಕರಿಸುವ ಕಾನೂನುಬದ್ಧ ಹಕ್ಕನ್ನು ಉದ್ಯೋಗಿಗಳಿಗೆ ನೀಡುವ ಈ ಮಹತ್ವದ ಮಸೂದೆಯನ್ನು ಎನ್‌ಸಿಪಿ (ಎಸ್‌ಪಿ) ಸಂಸದೆ ಸುಪ್ರಿಯಾ ಸುಳೆ ಶುಕ್ರವಾರ (ಡಿಸೆಂಬರ್ 5) ಲೋಕಸಭೆಯಲ್ಲಿ ಮಂಡಿಸಿದ್ದಾರೆ.

ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

ಅಧಿಕೃತ ಕೆಲಸದ ಸಮಯದ ನಂತರ ಮತ್ತು ರಜಾದಿನಗಳಲ್ಲಿ ಕೆಲಸಕ್ಕೆ ಸಂಬಂಧಿಸಿದ ಕರೆಗಳು, ಸಂದೇಶಗಳು ಮತ್ತು ಇಮೇಲ್‌ಗಳಿಗೆ ಪ್ರತಿಕ್ರಿಯಿಸುವಂತೆ ಉದ್ಯೋಗಿಗಳನ್ನು ಒತ್ತಾಯಿಸಬಾರದು ಎಂದು ಈ ಮಸೂದೆ ಹೇಳುತ್ತದೆ. ಶಿಸ್ತು ಕ್ರಮದ ಭಯವಿಲ್ಲದೆ, ಕರೆಗಳು ಮತ್ತು ಇಮೇಲ್‌ಗಳನ್ನು ನಿರಾಕರಿಸುವ ಹಕ್ಕನ್ನು ಇದು ಪ್ರತಿಯೊಬ್ಬ ಕೆಲಸಗಾರರಿಗೆ ನೀಡುತ್ತದೆ.

ಉದ್ಯೋಗಿಗಳು ಕೆಲಸದ ಸಮಯದ ನಂತರ ಕೆಲಸಕ್ಕೆ ಸಂಬಂಧಿಸಿದ ಕರೆಗಳು, ಇಮೇಲ್‌ಗಳು ಅಥವಾ ಸಂದೇಶಗಳಿಗೆ ಉತ್ತರಿಸುವ ಅಗತ್ಯವಿಲ್ಲ. ಪ್ರತಿಕ್ರಿಯಿಸಲು ನಿರಾಕರಿಸಿದ್ದಕ್ಕಾಗಿ ಯಾವುದೇ ಉದ್ಯೋಗಿ ವಿರುದ್ದ ಶಿಸ್ತು ಕ್ರಮ ಕೈಗೊಳ್ಳುವಂತಿಲ್ಲ. ಈ ನಿಯಮ ಫೋನ್ ಕರೆಗಳು, ಪಠ್ಯ ಸಂದೇಶಗಳು, ಇಮೇಲ್‌ಗಳು, ವಿಡಿಯೋ ಕರೆಗಳು ಮುಂತಾದ ಎಲ್ಲಾ ರೀತಿಯ ಸಂವಹನಕ್ಕೂ ಅನ್ವಯಿಸುತ್ತದೆ. ಅಗತ್ಯವಿದ್ದರೆ, ಉದ್ಯೋಗದಾತರು ಮತ್ತು ಉದ್ಯೋಗಿಗಳು ತುರ್ತು ಸಂಪರ್ಕ ನಿಯಮಗಳ ಬಗ್ಗೆ ಪರಸ್ಪರ ಪೂರ್ವ ಒಪ್ಪಂದ ಮಾಡಿಕೊಂಡಿರಬೇಕು. ಕಾನೂನು ಉಲ್ಲಂಘಿಸುವ ಸಂಸ್ಥೆಗಳಿಗೆ ಒಟ್ಟು ಉದ್ಯೋಗಿ ಸಂಭಾವನೆಯ ಶೇಕಡಾ 1 ರಷ್ಟು ದಂಡ ವಿಧಿಸಲು ಮಸೂದೆ ಪ್ರಸ್ತಾಪಿಸಿದೆ.

ತುರ್ತು ನಿಯಮಗಳು

ನೌಕರರ ವೈಯಕ್ತಿಕ ಸಮಯವನ್ನು ರಕ್ಷಿಸುವುದರ ಜೊತೆಗೆ, ನಿಜವಾದ ತುರ್ತು ಪರಿಸ್ಥಿತಿಗಳನ್ನು ಪರಿಹರಿಸಲು ಒಂದು ಕಾರ್ಯವಿಧಾನವನ್ನು ಸಹ ಮಸೂದೆ ಪ್ರಸ್ತಾಪಿಸುತ್ತದೆ. ಕೆಲಸದ ಸಮಯದ ನಂತರ ನೌಕರರನ್ನು ಸಂಪರ್ಕಿಸಲು ಪರಸ್ಪರ ಒಪ್ಪಿದ ನಿಯಮಗಳನ್ನು ರೂಪಿಸಲು ಸಮಿತಿಯನ್ನು ಸ್ಥಾಪಿಸಲು ಇದು ಸಲಹೆ ನೀಡುತ್ತದೆ.

ಉದ್ಯೋಗದಾತರು ಮತ್ತು ಉದ್ಯೋಗಿ ಪರಸ್ಪರ ಪೂರ್ವ ಮಾತುಕತೆ ನಡೆಸಿ ಒಪ್ಪಿಕೊಂಡ ಸಮಯದ ಅವಧಿಯಲ್ಲಿ ಯಾವುದೇ ರೀತಿಯ ಸಂವಹನದ ಮೂಲಕ ಸಂಪರ್ಕಿಸಬಹುದು. ನೌಕರರು ಕಚೇರಿ ಸಮಯವನ್ನು ಮೀರಿ ಕೆಲಸ ಮಾಡುತ್ತಿದ್ದರೆ, ಅವರೊಂದಿಗೆ ಸಂವಹನ ನಡೆಸಬಹುದು. ಆದರೆ, ಅವರು ಸಾಮಾನ್ಯ ವೇತನ ದರದಲ್ಲಿ ಅಧಿಕಾವಧಿಗೆ ವೇತನ ಪಡೆಯುತ್ತಿರಬೇಕು ಎಂದು ಮಸೂದೆ ಹೇಳುತ್ತದೆ.

ಈ ಮಸೂದೆಯ ಅಗತ್ಯವೇನು?

ಡಿಜಿಟಲ್ ಸಂವಹನ ಸಾಧನಗಳಿಂದ ಹೆಚ್ಚಿನ ಲಾಭವಿದೆ. ಆದರೆ, ಅವುಗಳ ಮೂಲಕ ಉದ್ಯೋಗಿಗಳು ಕೆಲಸದ ಅವಧಿಯ ಹೊರತಾಗಿಯೂ ನಿರಂತರ ಸಂಪರ್ಕದಲ್ಲಿ ಇರಬೇಕು ಎಂಬ ಸಂಸ್ಕೃತಿ ಬೆಳೆದಿದೆ. ಇದರಿಂದ ಉದ್ಯೋಗಿಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ನಿದ್ರಾಹೀನತೆ, ಒತ್ತಡ ಮತ್ತು ಮಾನಸಿಕ ಸುಸ್ತು, ಹಾಗೂ ಸಂದೇಶಗಳಿಗೆ ತಕ್ಷಣ ಪ್ರತಿಕ್ರಿಯಿಸಬೇಕೆಂಬ ಟೆಲಿಪ್ರೆಶರ್ ಅವುಗಳಲ್ಲಿ ಪ್ರಮುಖವಾಗಿವೆ. ಜೊತೆಗೆ, ಕೆಲಸಕ್ಕೆ ಸಂಬಂಧಿಸಿದ ಸಂದೇಶಗಳನ್ನು ನಿರಂತರವಾಗಿ ಪರಿಶೀಲಿಸುವ ಅಭ್ಯಾಸದಿಂದ ‘ಮಾಹಿತಿ ಅತಿಭಾರ’ (info-obesity) ಉಂಟಾಗುತ್ತಿದೆ ಎಂದು ಮಸೂದೆ ಹೇಳುತ್ತದೆ.

ಸುಪ್ರಿಯಾ ಸುಳೆ ಅವರು 2019ರಲ್ಲೂ ಇದೇ ರೀತಿಯ ಮಸೂದೆಯನ್ನು ಮಂಡಿಸಿದ್ದರು. ಇದೀಗ ಡಿಜಿಟಲ್ ಸಂವಹನ ಸಾಧನಗಳ ಮೂಲಕ ಉದ್ಯೋಗಿಗಳ ಮೇಲೆ ಹೇರುತ್ತಿರುವ ಒತ್ತಡವನ್ನು ಇನ್ನಷ್ಟು ವಿವರಿಸಿ ಮತ್ತು ಈ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿ ಹೊಸ ಮಸೂದೆ ಮಂಡಿಸಿದ್ದಾರೆ. ಭಾರತ ಪ್ರಸ್ತುತ ಜಗತ್ತಿನಲ್ಲೇ ಹೆಚ್ಚು ಬೇಡಿಕೆಯಿರುವ ವಾರಕ್ಕೆ 48 ಗಂಟೆಗಳ ಕೆಲಸದ ಮಿತಿಯನ್ನು ಅನುಸರಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...