Homeಮುಖಪುಟಕಚ್ಚತೀವು ವಿವಾದ 50 ವರ್ಷಗಳ ಹಿಂದೆಯೇ ಪರಿಹರಿಸಲಾಗಿದೆ, ಈಗ ಚರ್ಚಿಸುವ ಅಗತ್ಯವಿಲ್ಲ: ಶ್ರೀಲಂಕಾ

ಕಚ್ಚತೀವು ವಿವಾದ 50 ವರ್ಷಗಳ ಹಿಂದೆಯೇ ಪರಿಹರಿಸಲಾಗಿದೆ, ಈಗ ಚರ್ಚಿಸುವ ಅಗತ್ಯವಿಲ್ಲ: ಶ್ರೀಲಂಕಾ

- Advertisement -
- Advertisement -

ಕಚ್ಚತೀವು ದ್ವೀಪವನ್ನು ಬಿಟ್ಟುಕೊಟ್ಟಿದ್ದಕ್ಕಾಗಿ ಪ್ರತಿಪಕ್ಷಗಳ ವಿರುದ್ಧ ಭಾರತದ ಪ್ರಧಾನಿ ನರೇಂದ್ರ ಮೋದಿ ಟೀಕೆ ಮಾಡಿದ ಮೂರು ದಿನಗಳ ನಂತರ, ಶ್ರೀಲಂಕಾ ಏಪ್ರಿಲ್ 4ರಂದು ಈ ವಿಷಯದ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ್ದು, ಈ ವಿವಾದ 50 ವರ್ಷಗಳ ಹಿಂದೆ ಪರಿಹರಿಸಿರುವುದರಿಂದ ಈಗ ಚರ್ಚಿಸುವ ಅಗತ್ಯವಿಲ್ಲ ಎಂದು ಹೇಳಿದೆ.

ಮಾರ್ಚ್ 31ರಿಂದ ಮೋದಿ ಅವರು ದೇಶಾದ್ಯಂತ ವಿವಿಧ ಪ್ರಚಾರ ಕಾರ್ಯಕ್ರಮಗಳಲ್ಲಿ ಪದೇ ಪದೇ ಕಚ್ಚತೀವು ದ್ವೀಪದ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಕಚ್ಚತೀವು ಭಾರತದ ಭೂಪ್ರದೇಶವಾಗಿದ್ದು, 1974ರಲ್ಲಿ ಶ್ರೀಲಂಕಾದೊಂದಿಗೆ ಮಾಡಿಕೊಂಡಿದ್ದ ಕಡಲ ಗಡಿ ಒಪ್ಪಂದದ ವೇಳೆ ಇಂದಿರಾಗಾಂಧಿ ಅವರು ದ್ವೀಪವನ್ನು ಶ್ರೀಲಂಕಾಗೆ ಬಿಟ್ಟುಕೊಟ್ಟಿದ್ದಾರೆ. ತಮಿಳುನಾಡಿನ ಡಿಎಂಕೆ ಇದಕ್ಕೆ ಸಮ್ಮತಿಸಿತ್ತು ಎಂದು ಪ್ರಧಾನಿ ಮೋದಿ ಆರೋಪಿಸಿದ್ದರು. ತಮಿಳುನಾಡು ದಿವಂಗತ ಮುಖ್ಯಮಂತ್ರಿ ಕರುಣಾನಿಧಿ ಅವರ ಒಪ್ಪಿಗೆಯ ಮೇರೆಗೆ ಶ್ರೀಲಂಕಾಕ್ಕೆ ಕಚ್ಚತೀವು ನೀಡಲಾಗಿದೆ. ಈಗ ಬಿಜೆಪಿಯು ಕಚ್ಚತೀವು ವಾಪಸ್ ಪಡೆಯುವಂತೆ ಬಿಜೆಪಿ ವಿದೇಶಾಂಗ ಸಚಿವ ಜೈಶಂಕರ್‌ಗೆ ಪತ್ರ ನೀಡಿದೆ. ಅದನ್ನು ಭಾರತಕ್ಕೆ ವಾಪಸ್ ತರಬೇಕು, ಇದು ನಮ್ಮ ನಿಲುವು. ಕೇಂದ್ರ ಮೀನುಗಾರರ ರಕ್ಷಣೆಗಾಗಿ ಕಚ್ಚತೀವು ಮರಳಿ ತರಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ನಾವು ಮಾಡುತ್ತಿದ್ದೇವೆ ಎಂದು ಬಿಜೆಪಿಯ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಅಣ್ಣಾಮಲೈ ಹೇಳಿದ್ದರು.

ಇದರ ಬೆನ್ನಲ್ಲಿ ಶ್ರೀಲಂಕಾದ ವಿದೇಶಾಂಗ ಸಚಿವ ಅಲಿ ಸಬ್ರಿ ಅಧಿಕೃತ ಹೇಳಿಕೆಯನ್ನು ಹೊರಡಿಸಿದ್ದು, ಇದು 50 ವರ್ಷಗಳ ಹಿಂದೆ ಪರಿಹರಿಸಲ್ಪಟ್ಟ ಸಮಸ್ಯೆಯಾಗಿರುವುದರಿಂದ ಈ ಬಗ್ಗೆ ಈಗ ಚರ್ಚಿಸುವ ಅಗತ್ಯವಿಲ್ಲ ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ. ಅಂತಹ ಸಮಸ್ಯೆಗಳು ಮತ್ತೆ ಉದ್ಭವಿಸುತ್ತವೆ ಎಂದು ನಾನು ಭಾವಿಸುವುದಿಲ್ಲ ಎಂದು ಹೇಳಿದ್ದಾರೆ.

ಇಫ್ತಾರ್ ಕಾರ್ಯಕ್ರಮವೊಂದರಲ್ಲಿ ಶ್ರೀಲಂಕಾದ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದ್ವೀಪದ ಬಗ್ಗೆ ಯಾವುದೇ ವಿವಾದವಿಲ್ಲ. ಇದಕ್ಕೆ ಯಾರು ಹೊಣೆ ಎಂದು ಅವರು ಆಂತರಿಕ ರಾಜಕೀಯ ಚರ್ಚೆ ನಡೆಸುತ್ತಿದ್ದಾರೆ. ಅದನ್ನು ಬಿಟ್ಟರೆ ಕಚ್ಚತ್ತೀವು ವಾಪಸು ಪಡೆಯುವ ಬಗ್ಗೆ ಯಾರೂ ಮಾತನಾಡುತ್ತಿಲ್ಲ ಎಂದು ಹೇಳಿದ್ದಾರೆ.

ಕೊಲಂಬೊದ ಪ್ರತಿಕ್ರಿಯೆ ತುಲನಾತ್ಮಕವಾಗಿ ತಡವಾಗಿ ಬಂದಿದ್ದರೂ, ಶ್ರೀಲಂಕಾದ ಮಾಧ್ಯಮಗಳು ಕಚ್ಚತೀವು ಕುರಿತ ಬೆಳವಣಿಗೆಗಳನ್ನು ನಿಕಟವಾಗಿ ಗಮನಿಸಿದೆ. ಹಲವಾರು ಶ್ರೀಲಂಕಾದ ಪತ್ರಿಕೆಗಳು ಸಂಪಾದಕೀಯಗಳನ್ನು ಪ್ರಕಟಿಸಿದವು, ಇದು ಚುನಾವಣಾ ಲಾಭಕ್ಕಾಗಿ ವಿಷಯವನ್ನು ಎತ್ತಿ ಹಿಡಿದಿದ್ದಕ್ಕಾಗಿ ಭಾರತೀಯ ಪ್ರಧಾನ ಮಂತ್ರಿಯನ್ನು ಟೀಕಿಸಿದೆ ಮತ್ತು ಇದು ದ್ವೀಪ ರಾಷ್ಟ್ರ ಮತ್ತು ಭಾರತದ ನಡುವಿನ ಸೌಹಾರ್ದತೆಗೆ ಹಾನಿ ಮಾಡುತ್ತದೆ ಎಂದು ಎಚ್ಚರಿಸಿದೆ.

ಲೋಕಸಭೆ ಚುನಾವಣೆ ಹಿನ್ನೆಲೆ ಮೀನುಗಾರರ ಸಮಸ್ಯೆಯನ್ನು ಮುಂದಿಟ್ಟು, ಬಿಜೆಪಿ ತಮಿಳುನಾಡಿನಲ್ಲಿ ರಾಜಕೀಯಕ್ಕೆ ಮುಂದಾಗಿದೆ. ಕಚ್ಚತೀವು ದ್ವೀಪದ ಕುರಿತ ಭಾರತದಲ್ಲಿ ಚರ್ಚೆ ಉದ್ಭವಿಸಿದಾಗ, ಶ್ರೀಲಂಕಾದ ಸಚಿವ ಜೀವನ್ ಥೋಂಡಮನ್ ಮಾತನಾಡಿ, ಕಚ್ಚತೀವು ಬಗ್ಗೆ ಭಾರತ ಅಧಿಕೃತ ಸಂವಹನ ನಡೆಸಿರುವ ಬಗ್ಗೆ ನಿರಾಕರಿಸಿದ್ದಾರೆ. ಕಚ್ಚತೀವು ದ್ವೀಪವು ಶ್ರೀಲಂಕಾದ ಭಾಗವಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಶ್ರೀಲಂಕಾಕ್ಕೆ ಸಂಬಂಧಿಸಿದಂತೆ ಕಚ್ಚತೀವು ದ್ವೀಪವು ಶ್ರೀಲಂಕಾದ ನಿಯಂತ್ರಣ ರೇಖೆಯೊಳಗೆ ಬರುತ್ತದೆ. ಇಲ್ಲಿಯವರೆಗೆ ಕಚ್ಚತೀವು ದ್ವೀಪದ ಅಧಿಕಾರವನ್ನು ಹಿಂದಿರುಗಿಸಲು ಭಾರತದಿಂದ ಅಧಿಕೃತ ಸಂವಹನ ನಡೆದಿಲ್ಲ. ಅಂತಹ ಸಂವಹನವಿದ್ದರೆ, ವಿದೇಶಾಂಗ ಸಚಿವಾಲಯ ಅದಕ್ಕೆ ಉತ್ತರ ನೀಡಲಿದೆ ಎಂದು ಜೀವನ್ ಥೋಂಡಮಾನ್ ಹೇಳಿದ್ದರು.

ಇದನ್ನು ಓದಿ: ಸಂಘಪರಿವಾರ, ಬಿಜೆಪಿ ನಾಯಕರ ಅಂಗಸಂಸ್ಥೆಗಳಿಗೆ 62% ಸೈನಿಕ ಶಾಲೆಗಳನ್ನು ಹಸ್ತಾಂತರಿಸಿದ ಕೇಂದ್ರ ಸರಕಾರ: ವರದಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...