Homeಮುಖಪುಟಕಚ್ಚತೀವು ವಿವಾದ 50 ವರ್ಷಗಳ ಹಿಂದೆಯೇ ಪರಿಹರಿಸಲಾಗಿದೆ, ಈಗ ಚರ್ಚಿಸುವ ಅಗತ್ಯವಿಲ್ಲ: ಶ್ರೀಲಂಕಾ

ಕಚ್ಚತೀವು ವಿವಾದ 50 ವರ್ಷಗಳ ಹಿಂದೆಯೇ ಪರಿಹರಿಸಲಾಗಿದೆ, ಈಗ ಚರ್ಚಿಸುವ ಅಗತ್ಯವಿಲ್ಲ: ಶ್ರೀಲಂಕಾ

- Advertisement -
- Advertisement -

ಕಚ್ಚತೀವು ದ್ವೀಪವನ್ನು ಬಿಟ್ಟುಕೊಟ್ಟಿದ್ದಕ್ಕಾಗಿ ಪ್ರತಿಪಕ್ಷಗಳ ವಿರುದ್ಧ ಭಾರತದ ಪ್ರಧಾನಿ ನರೇಂದ್ರ ಮೋದಿ ಟೀಕೆ ಮಾಡಿದ ಮೂರು ದಿನಗಳ ನಂತರ, ಶ್ರೀಲಂಕಾ ಏಪ್ರಿಲ್ 4ರಂದು ಈ ವಿಷಯದ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ್ದು, ಈ ವಿವಾದ 50 ವರ್ಷಗಳ ಹಿಂದೆ ಪರಿಹರಿಸಿರುವುದರಿಂದ ಈಗ ಚರ್ಚಿಸುವ ಅಗತ್ಯವಿಲ್ಲ ಎಂದು ಹೇಳಿದೆ.

ಮಾರ್ಚ್ 31ರಿಂದ ಮೋದಿ ಅವರು ದೇಶಾದ್ಯಂತ ವಿವಿಧ ಪ್ರಚಾರ ಕಾರ್ಯಕ್ರಮಗಳಲ್ಲಿ ಪದೇ ಪದೇ ಕಚ್ಚತೀವು ದ್ವೀಪದ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಕಚ್ಚತೀವು ಭಾರತದ ಭೂಪ್ರದೇಶವಾಗಿದ್ದು, 1974ರಲ್ಲಿ ಶ್ರೀಲಂಕಾದೊಂದಿಗೆ ಮಾಡಿಕೊಂಡಿದ್ದ ಕಡಲ ಗಡಿ ಒಪ್ಪಂದದ ವೇಳೆ ಇಂದಿರಾಗಾಂಧಿ ಅವರು ದ್ವೀಪವನ್ನು ಶ್ರೀಲಂಕಾಗೆ ಬಿಟ್ಟುಕೊಟ್ಟಿದ್ದಾರೆ. ತಮಿಳುನಾಡಿನ ಡಿಎಂಕೆ ಇದಕ್ಕೆ ಸಮ್ಮತಿಸಿತ್ತು ಎಂದು ಪ್ರಧಾನಿ ಮೋದಿ ಆರೋಪಿಸಿದ್ದರು. ತಮಿಳುನಾಡು ದಿವಂಗತ ಮುಖ್ಯಮಂತ್ರಿ ಕರುಣಾನಿಧಿ ಅವರ ಒಪ್ಪಿಗೆಯ ಮೇರೆಗೆ ಶ್ರೀಲಂಕಾಕ್ಕೆ ಕಚ್ಚತೀವು ನೀಡಲಾಗಿದೆ. ಈಗ ಬಿಜೆಪಿಯು ಕಚ್ಚತೀವು ವಾಪಸ್ ಪಡೆಯುವಂತೆ ಬಿಜೆಪಿ ವಿದೇಶಾಂಗ ಸಚಿವ ಜೈಶಂಕರ್‌ಗೆ ಪತ್ರ ನೀಡಿದೆ. ಅದನ್ನು ಭಾರತಕ್ಕೆ ವಾಪಸ್ ತರಬೇಕು, ಇದು ನಮ್ಮ ನಿಲುವು. ಕೇಂದ್ರ ಮೀನುಗಾರರ ರಕ್ಷಣೆಗಾಗಿ ಕಚ್ಚತೀವು ಮರಳಿ ತರಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ನಾವು ಮಾಡುತ್ತಿದ್ದೇವೆ ಎಂದು ಬಿಜೆಪಿಯ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಅಣ್ಣಾಮಲೈ ಹೇಳಿದ್ದರು.

ಇದರ ಬೆನ್ನಲ್ಲಿ ಶ್ರೀಲಂಕಾದ ವಿದೇಶಾಂಗ ಸಚಿವ ಅಲಿ ಸಬ್ರಿ ಅಧಿಕೃತ ಹೇಳಿಕೆಯನ್ನು ಹೊರಡಿಸಿದ್ದು, ಇದು 50 ವರ್ಷಗಳ ಹಿಂದೆ ಪರಿಹರಿಸಲ್ಪಟ್ಟ ಸಮಸ್ಯೆಯಾಗಿರುವುದರಿಂದ ಈ ಬಗ್ಗೆ ಈಗ ಚರ್ಚಿಸುವ ಅಗತ್ಯವಿಲ್ಲ ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ. ಅಂತಹ ಸಮಸ್ಯೆಗಳು ಮತ್ತೆ ಉದ್ಭವಿಸುತ್ತವೆ ಎಂದು ನಾನು ಭಾವಿಸುವುದಿಲ್ಲ ಎಂದು ಹೇಳಿದ್ದಾರೆ.

ಇಫ್ತಾರ್ ಕಾರ್ಯಕ್ರಮವೊಂದರಲ್ಲಿ ಶ್ರೀಲಂಕಾದ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದ್ವೀಪದ ಬಗ್ಗೆ ಯಾವುದೇ ವಿವಾದವಿಲ್ಲ. ಇದಕ್ಕೆ ಯಾರು ಹೊಣೆ ಎಂದು ಅವರು ಆಂತರಿಕ ರಾಜಕೀಯ ಚರ್ಚೆ ನಡೆಸುತ್ತಿದ್ದಾರೆ. ಅದನ್ನು ಬಿಟ್ಟರೆ ಕಚ್ಚತ್ತೀವು ವಾಪಸು ಪಡೆಯುವ ಬಗ್ಗೆ ಯಾರೂ ಮಾತನಾಡುತ್ತಿಲ್ಲ ಎಂದು ಹೇಳಿದ್ದಾರೆ.

ಕೊಲಂಬೊದ ಪ್ರತಿಕ್ರಿಯೆ ತುಲನಾತ್ಮಕವಾಗಿ ತಡವಾಗಿ ಬಂದಿದ್ದರೂ, ಶ್ರೀಲಂಕಾದ ಮಾಧ್ಯಮಗಳು ಕಚ್ಚತೀವು ಕುರಿತ ಬೆಳವಣಿಗೆಗಳನ್ನು ನಿಕಟವಾಗಿ ಗಮನಿಸಿದೆ. ಹಲವಾರು ಶ್ರೀಲಂಕಾದ ಪತ್ರಿಕೆಗಳು ಸಂಪಾದಕೀಯಗಳನ್ನು ಪ್ರಕಟಿಸಿದವು, ಇದು ಚುನಾವಣಾ ಲಾಭಕ್ಕಾಗಿ ವಿಷಯವನ್ನು ಎತ್ತಿ ಹಿಡಿದಿದ್ದಕ್ಕಾಗಿ ಭಾರತೀಯ ಪ್ರಧಾನ ಮಂತ್ರಿಯನ್ನು ಟೀಕಿಸಿದೆ ಮತ್ತು ಇದು ದ್ವೀಪ ರಾಷ್ಟ್ರ ಮತ್ತು ಭಾರತದ ನಡುವಿನ ಸೌಹಾರ್ದತೆಗೆ ಹಾನಿ ಮಾಡುತ್ತದೆ ಎಂದು ಎಚ್ಚರಿಸಿದೆ.

ಲೋಕಸಭೆ ಚುನಾವಣೆ ಹಿನ್ನೆಲೆ ಮೀನುಗಾರರ ಸಮಸ್ಯೆಯನ್ನು ಮುಂದಿಟ್ಟು, ಬಿಜೆಪಿ ತಮಿಳುನಾಡಿನಲ್ಲಿ ರಾಜಕೀಯಕ್ಕೆ ಮುಂದಾಗಿದೆ. ಕಚ್ಚತೀವು ದ್ವೀಪದ ಕುರಿತ ಭಾರತದಲ್ಲಿ ಚರ್ಚೆ ಉದ್ಭವಿಸಿದಾಗ, ಶ್ರೀಲಂಕಾದ ಸಚಿವ ಜೀವನ್ ಥೋಂಡಮನ್ ಮಾತನಾಡಿ, ಕಚ್ಚತೀವು ಬಗ್ಗೆ ಭಾರತ ಅಧಿಕೃತ ಸಂವಹನ ನಡೆಸಿರುವ ಬಗ್ಗೆ ನಿರಾಕರಿಸಿದ್ದಾರೆ. ಕಚ್ಚತೀವು ದ್ವೀಪವು ಶ್ರೀಲಂಕಾದ ಭಾಗವಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಶ್ರೀಲಂಕಾಕ್ಕೆ ಸಂಬಂಧಿಸಿದಂತೆ ಕಚ್ಚತೀವು ದ್ವೀಪವು ಶ್ರೀಲಂಕಾದ ನಿಯಂತ್ರಣ ರೇಖೆಯೊಳಗೆ ಬರುತ್ತದೆ. ಇಲ್ಲಿಯವರೆಗೆ ಕಚ್ಚತೀವು ದ್ವೀಪದ ಅಧಿಕಾರವನ್ನು ಹಿಂದಿರುಗಿಸಲು ಭಾರತದಿಂದ ಅಧಿಕೃತ ಸಂವಹನ ನಡೆದಿಲ್ಲ. ಅಂತಹ ಸಂವಹನವಿದ್ದರೆ, ವಿದೇಶಾಂಗ ಸಚಿವಾಲಯ ಅದಕ್ಕೆ ಉತ್ತರ ನೀಡಲಿದೆ ಎಂದು ಜೀವನ್ ಥೋಂಡಮಾನ್ ಹೇಳಿದ್ದರು.

ಇದನ್ನು ಓದಿ: ಸಂಘಪರಿವಾರ, ಬಿಜೆಪಿ ನಾಯಕರ ಅಂಗಸಂಸ್ಥೆಗಳಿಗೆ 62% ಸೈನಿಕ ಶಾಲೆಗಳನ್ನು ಹಸ್ತಾಂತರಿಸಿದ ಕೇಂದ್ರ ಸರಕಾರ: ವರದಿ

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೆನಡಾದ ಸಾರ್ವತ್ರಿಕ ಚುನಾವಣೆಗೆ ಭಾರತದಿಂದ ‘ಆಯ್ಧ ಅಭ್ಯರ್ಥಿಗಳಿಗೆ’ ರಹಸ್ಯವಾಗಿ ಹಣಕಾಸಿನ ನೆರವು: ವರದಿ

0
2021ರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಆಯ್ದ ಅಭ್ಯರ್ಥಿಗಳಿಗೆ ರಹಸ್ಯವಾಗಿ ಹಣಕಾಸಿನ ನೆರವು ನೀಡಲು ಭಾರತ ಸರ್ಕಾರವು ತನ್ನ ಪ್ರಾಕ್ಸಿ ಏಜೆಂಟ್‌ಗಳ ಮೂಲಕ ಪ್ರಯತ್ನಿಸಿರಬಹುದು ಎಂದು ಕೆನಡಾದಲ್ಲಿ ವಿದೇಶಿ ಹಸ್ತಕ್ಷೇಪದ ಕುರಿತು ತನಿಖೆ ನಡೆಸುತ್ತಿರುವ ಕೆನಡಾದ...