Homeಕರ್ನಾಟಕಜಾಮೀನು ಮೇಲೆ ಹೊರಗಿರುವವರಿಂದ ನೈತಿಕತೆಯ ಪಾಠ ಕಲಿಯಬೇಕಿಲ್ಲ: ಬೊಮ್ಮಾಯಿ

ಜಾಮೀನು ಮೇಲೆ ಹೊರಗಿರುವವರಿಂದ ನೈತಿಕತೆಯ ಪಾಠ ಕಲಿಯಬೇಕಿಲ್ಲ: ಬೊಮ್ಮಾಯಿ

- Advertisement -
- Advertisement -

ಜಾಮೀನು ಮೇಲೆ ಹೊರಗಿರುವವರಿಂದ ನಾವು ನೈತಿಕತೆಯ ಪಾಠ ಕಲಿಯುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ.

ಮುಖ್ಯಮಂತ್ರಿ ಬಸಬರಾಜ ಬೊಮ್ಮಾಯಿಯವರು ರೇಸ್ ಕೋರ್ಸ್ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ರಾಜ್ಯದ ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್‌‌ನವರು ಮಾತನಾಡುತ್ತಾರೆ. ರಾಹುಲ್ ಗಾಂಧಿ, ಅವರ ರಾಷ್ಟ್ರೀಯ ಅಧ್ಯಕ್ಷರು ಸೋನಿಯಾ ಗಾಂಧಿಯವರು ಬೇಲ್ ಮೇಲೆ ಹೊರಗಿದ್ದಾರೆ. ಇಲ್ಲಿನ ಅಧ್ಯಕ್ಷರು ಕೂಡ ಬೇಲ್ ಮೇಲೆ ಹೊರಗಿದ್ದಾರೆ. ಇಂತಹವರಿಂದ ನಾವು ನೈತಿಕತೆಯ ಪಾಠ ಕಲಿಯುವ ಅವಶ್ಯಕತೆ ಇಲ್ಲ ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕರ್ನಾಟಕ ಮತ್ತು ಭಾರತದ ಜನತೆ ಈಗಾಗಲೇ ತಿರಸ್ಕಾರ ಮಾಡಿದ್ದಾರೆ. ಮುಂಬರುವ 2023ರ ಚುನಾವಣೆಯಲ್ಲಿಯೂ ಕೂಡ ಅವರಿಗೆ ಸೋಲು ಕಟ್ಟಿಟ್ಟ ಬುತ್ತಿ. ನಿನ್ನೆ ಸಿದ್ದರಾಮಯ್ಯ ಅವರು ಆರು ತಿಂಗಳಾದ ಮೇಲೆ ನಮ್ಮ ಸರ್ಕಾರ ಬರುತ್ತದೆ ಅಂತ ಹೇಳಿರುವುದು ಕನಸು. ಅವರ ಕನಸಾಗಿಯೇ ಉಳಿಯುತ್ತದೆ. ಇನ್ಮುಂದೆ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಅನ್ನುವುದು ಕನಸಿನ ಮಾತು ಎಂದು ತಿಳಿಸಿದ್ದಾರೆ.

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಜತೆ ಜತೆಯಾಗಿಯೇ ಪಾದಯಾತ್ರೆ ಮಾಡಬೇಕು. ನಾವು ಅದಕ್ಕೆ ಬೇಡ ಅಂದಿಲ್ಲ‌. ಅವರು ಜೊತೆ ಜೊತೆಯಾಗಿ ಬಂದಾಗಲೇ ರಾಜಕಾರಣ ಸರಿ ಅಗುತ್ತದೆ. ಒಬ್ಬರು ಮುಂದೆ ಹೋಗಿ ಇನ್ನೊಬ್ಬರು ಹಿಂದೆ ಇರಬಾರದು. ಅವರಿಬ್ಬರೂ ಒಟ್ಟಿಗೆ ಇದ್ದಷ್ಟು ನಮಗೆ ಒಳ್ಳೆಯದ್ದು ಎಂದು ಹೇಳಿದ್ದಾರೆ.

ಭಾರತ ಜೋಡೋ ಯಾತ್ರೆಗೆ ಜನಸಾಮಾನ್ಯರಿಂದ ಪ್ರತಿಕ್ರಿಯೆ ಬರುತ್ತಿಲ್ಲ. ಕಷ್ಟಪಟ್ಟು ಬೇರೆ ಬೇರೆ ತಾಲ್ಲೂಕಿನಿಂದ ಜನರನ್ನು ಕರೆದುಕೊಂಡು ಬಂದು ಪ್ರದರ್ಶನ ಮಾಡುತ್ತಿದ್ದಾರೆ. ಅವರ ಜೊತೆಗೆ ಪಾದೆಯಾತ್ರೆ ಮಾಡುವವರ ಜನಸಂಖ್ಯೆ ಕಡಿಮೆಯಿದೆ. ಅಲ್ಲಲ್ಲಿ ಅಷ್ಟೇ ಜನರಿದ್ದಾರೆ, ಇಂದೊಂದು ತರಹ ಶೋ. ಕಾಂಗ್ರೆಸ್ ನವರು, ರಾಹುಲ್ ಗಾಂಧಿ ತಮ್ಮ ರಾಜಕೀಯ ಆಸ್ತಿತ್ವ ಉಳಿಸಿಕೊಳ್ಳಲು ಈ ಶೋ ಮಾಡುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ನಿನ್ನೆ ಮತ್ತು ಇವತ್ತು ರಾಜ್ಯದ ಬಗ್ಗೆ ಮಾತನಾಡಿದ್ದಾರೆ. ನಾನು ಅದನ್ನು ಗಮನಿಸಿದ್ದು, ಇಷ್ಟು ಸಣ್ಣಮಟ್ಟದ ರಾಜಕಾರಣವನ್ನು ಮಾಡುವುದಕ್ಕೆ ನಾವು ಬಯಸುವುದಿಲ್ಲ. ಅವರು ಪಾದಯಾತ್ರೆ ಮಾಡಿಕೊಂಡು ಹೋಗಲಿ. ಜನರು ತೀರ್ಮಾನ ಮಾಡುತ್ತಾರೆ. ಕೀಳು ಮಟ್ಟದ ಮಾತುಗಳು, ಅಧಿಕಾರಿಗಳಿಗೆ ಹೆದರಿಸುವುದು ನಡೆಯುವುದಿಲ್ಲ. ಇದನ್ನು ನಾನು ಸ್ಪಷ್ಟಪಡಿಸುತ್ತೇನೆ. ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಮಾಡುತ್ತಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

‘ರಾಹುಲ್‌, ಭಾರತ್‌ ಜೋಡೋ’ ಕುರಿತು ನಿಂದನಾತ್ಮಕ ಜಾಹೀರಾತು ನೀಡಿದ ರಾಜ್ಯ ಬಿಜೆಪಿ; ಜನಾಕ್ರೋಶ

ದೇಶದ ಬಹುತ್ವವನ್ನು ಒಡೆದು ರಾಜಕೀಯ ಮಾಡುತ್ತಿರುವ ಕೋಮುಶಕ್ತಿಗಳ ವಿರುದ್ಧ ಜನರನ್ನು ಒಟ್ಟುಗೂಡಿಸಿ, ದೇಶದ ಏಕತೆಯನ್ನು ಸ್ಥಾಪಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕೈಗೊಂಡಿರುವ ಭಾರತ್‌ ಜೋಡೋ ಯಾತ್ರೆ ಹಾಗೂ ರಾಹುಲ್‌ ಗಾಂಧಿ ಕುರಿತು ಕರ್ನಾಟಕ ಬಿಜೆಪಿ ಕೀಳು ಅಭಿರುಚಿಯ ಜಾಹೀರಾತು ನೀಡಿ ಜನರ ಆಕ್ರೋಶಕ್ಕೆ ಗುರಿಯಾಗಿದೆ.

‘ಕನ್ನಡಪ್ರಭ’ ಪತ್ರಿಕೆಯಲ್ಲಿ ಪ್ರಕಟವಾಗಿರುವ ಒಂದು ಪುಟದ ಜಾಹೀರಾತು ಅತ್ಯಂತ ಅಸಹನೀಯವಾಗಿದೆ ಎಂದು ಟೀಕೆಗಳು ವ್ಯಕ್ತವಾಗುತ್ತಿದೆ. ಇಂತಹ ಜಾಹೀರಾತನ್ನು ಪ್ರಕಟಿಸಿದ ಪತ್ರಿಕೆಯ ವಿರುದ್ಧವೂ ಅಸಮಾಧಾನ ಹೊರಹಾಕಿದ್ದಾರೆ.

‘ತೋಡೋ ಪಿತಾಮಹನ ಮರಿಮಗನಿಂದ ಜೋಡಿಸಲು ಸಾಧ್ಯವೆ?’ ಎಂಬ ದೊಡ್ಡ ಶೀರ್ಷಿಕೆಯಲ್ಲಿ ಜಾಹೀತಾತು ಪ್ರಕಟಿಸಲಾಗಿದೆ. ಮಹಮ್ಮದ್‌ಅಲಿ ಜಿನ್ನಾ ಹಾಗೂ ಜವಹರಲಾಲ್‌ ನೆಹರೂ ಅವರ ಫೋಟೋಗಳನ್ನು ಇಲ್ಲಿ ಬಳಸಲಾಗಿದೆ. ಕಾಂಗ್ರೆಸ್‌ ಪಕ್ಷದ ಹಸ್ತದ ಗುರುತನ್ನು ಮುದ್ರಿಸಲಾಗಿದೆ.

ಇದನ್ನೂ ಓದಿರಿ: ಭಗವದ್ಗೀತೆಯಲ್ಲಿ ಅದ್ಯಾವ ನೈತಿಕ ಶಿಕ್ಷಣವಿದೆ?

“ರಾಜಕೀಯ ಪಕ್ಷಗಳು ಸಹಜವಾಗಿ ತಮ್ಮ ಸಾಧನೆ ಹೇಳಲು, ಸಕಾರಾತ್ಮಕ ಸಂದೇಶ ನೀಡಲು ಪತ್ರಿಕೆಗಳ‘ ಮುಖಪುಟದ ಜಾಹೀರಾತು ನೀಡುವುದು ವಾಡಿಕೆ. ಆದರೆ ಕರ್ನಾಟಕ ಬಿಜೆಪಿ ಕೋಟಿ ಕೋಟಿ ಖರ್ಚು ಮಾಡಿ ನಕಾರಾತ್ಮಕ ಜಾಹೀರಾತು ನೀಡಿದೆ ಎಂದರೆ ಅವರಲ್ಲಿ ಅದೆಷ್ಟು ಭಯ, ಆತಂಕ, ಅಭದ್ರತೆಯನ್ನು ಭಾರತ್‌ ಜೋಡೋ ಯಾತ್ರೆ ಮೂಡಿಸಿರಬಹುದೆಂದು ಊಹಿಸಬಹುದು” ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ.

“ಈ ಜಾಹೀರಾತಿನಲ್ಲಿ ಬರೆದದ್ದು ನಿಜವೇ ಆಗಿದ್ದರೆ, ನೆಹರೂ ಜಯಂತಿ ದಿನ ಪ್ರಧಾನಿ ಮೋದಿ ನೆಹರೂ ಭಾವಚಿತ್ರಕ್ಕೆ ಹಾರ ಹಾಕಿ ಗೌರವಿಸಿದ್ದೇಕೆ? ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನೆಹರೂ ಅವರ ಕೊಡುಗೆಯನ್ನು ಹಾಡಿ ಹೊಗಳಿದ್ದೇಕೆ? ಹೊಟ್ಟೆಗೆ ಅನ್ನ ತಿನ್ನುವವರು ಮಾಡುವ ಕೆಲಸ ಇದಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಈ ಜಾಹೀರಾತಿನ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು. ಈ ಕುರಿತು ಕಾಯ್ದೆ ಪರಿಣಿತರನ್ನು ವಿಚಾರಿಸಬೇಕು. ಇದು ಕನ್ನಡಪ್ರಭ ಪತ್ರಿಕೆಯ ದುರಂತಕ್ಕೆ ಒಂದು ಉದಾಹರಣೆ ಕೂಡ. ದುಡ್ಡು ಹಾಕಿಕೊಂಡ ಮಾಲೀಕ ಪತ್ರಿಕೆಯನ್ನು ಕಾಲೊರೆಸುವ ಮ್ಯಾಟನ್ನಾಗಿ ಇದನ್ನು ಮಾಡಿಕೊಂಡಿದ್ದಾನೆ” ಎಂದು ಜನರು ಅಭಿಪ್ರಾಯಪಟ್ಟಿದ್ದಾರೆ. (ವಿವರಗಳನ್ನು ‘ಇಲ್ಲಿ’ ಓದಿರಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. 40% ಕೇಸುಗಳು,ಖಾಸಾಗಿ ಶಾಲೆಗಳ ದೂರು, ಪಿಎಸ್ಐ ಕೇಸಲ್ಲಿ ಮುಕ್ಕಿದ್ದು,ಕೋವಿಡ್ ಟೈಮ್ ಅರ್ನಿಂಗ್, ಬಿಟ್ ಕಾಯಿನ್ ಹಗರಣಗಳೆಲ್ಲಾ ವಿಚಾರಣೆಗೊಳಪಡಿಸಿದ್ರೆ ನಿಮ್ಮ ಇಡೀ ಮಂತ್ರಿಮಂಡಲ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲೋಗ್ಯ bumಮಾಯಿಯವರೆ. ನಿಮ್ಮ ನೈ’ತಿಕ’
    ಮಟ್ಟ ಅತ್ಯಂತ ಶ್ರೇಷ್ಠವಾದುದು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...