Homeಕರ್ನಾಟಕಜಾಮೀನು ಮೇಲೆ ಹೊರಗಿರುವವರಿಂದ ನೈತಿಕತೆಯ ಪಾಠ ಕಲಿಯಬೇಕಿಲ್ಲ: ಬೊಮ್ಮಾಯಿ

ಜಾಮೀನು ಮೇಲೆ ಹೊರಗಿರುವವರಿಂದ ನೈತಿಕತೆಯ ಪಾಠ ಕಲಿಯಬೇಕಿಲ್ಲ: ಬೊಮ್ಮಾಯಿ

- Advertisement -
- Advertisement -

ಜಾಮೀನು ಮೇಲೆ ಹೊರಗಿರುವವರಿಂದ ನಾವು ನೈತಿಕತೆಯ ಪಾಠ ಕಲಿಯುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ.

ಮುಖ್ಯಮಂತ್ರಿ ಬಸಬರಾಜ ಬೊಮ್ಮಾಯಿಯವರು ರೇಸ್ ಕೋರ್ಸ್ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ರಾಜ್ಯದ ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್‌‌ನವರು ಮಾತನಾಡುತ್ತಾರೆ. ರಾಹುಲ್ ಗಾಂಧಿ, ಅವರ ರಾಷ್ಟ್ರೀಯ ಅಧ್ಯಕ್ಷರು ಸೋನಿಯಾ ಗಾಂಧಿಯವರು ಬೇಲ್ ಮೇಲೆ ಹೊರಗಿದ್ದಾರೆ. ಇಲ್ಲಿನ ಅಧ್ಯಕ್ಷರು ಕೂಡ ಬೇಲ್ ಮೇಲೆ ಹೊರಗಿದ್ದಾರೆ. ಇಂತಹವರಿಂದ ನಾವು ನೈತಿಕತೆಯ ಪಾಠ ಕಲಿಯುವ ಅವಶ್ಯಕತೆ ಇಲ್ಲ ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕರ್ನಾಟಕ ಮತ್ತು ಭಾರತದ ಜನತೆ ಈಗಾಗಲೇ ತಿರಸ್ಕಾರ ಮಾಡಿದ್ದಾರೆ. ಮುಂಬರುವ 2023ರ ಚುನಾವಣೆಯಲ್ಲಿಯೂ ಕೂಡ ಅವರಿಗೆ ಸೋಲು ಕಟ್ಟಿಟ್ಟ ಬುತ್ತಿ. ನಿನ್ನೆ ಸಿದ್ದರಾಮಯ್ಯ ಅವರು ಆರು ತಿಂಗಳಾದ ಮೇಲೆ ನಮ್ಮ ಸರ್ಕಾರ ಬರುತ್ತದೆ ಅಂತ ಹೇಳಿರುವುದು ಕನಸು. ಅವರ ಕನಸಾಗಿಯೇ ಉಳಿಯುತ್ತದೆ. ಇನ್ಮುಂದೆ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಅನ್ನುವುದು ಕನಸಿನ ಮಾತು ಎಂದು ತಿಳಿಸಿದ್ದಾರೆ.

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಜತೆ ಜತೆಯಾಗಿಯೇ ಪಾದಯಾತ್ರೆ ಮಾಡಬೇಕು. ನಾವು ಅದಕ್ಕೆ ಬೇಡ ಅಂದಿಲ್ಲ‌. ಅವರು ಜೊತೆ ಜೊತೆಯಾಗಿ ಬಂದಾಗಲೇ ರಾಜಕಾರಣ ಸರಿ ಅಗುತ್ತದೆ. ಒಬ್ಬರು ಮುಂದೆ ಹೋಗಿ ಇನ್ನೊಬ್ಬರು ಹಿಂದೆ ಇರಬಾರದು. ಅವರಿಬ್ಬರೂ ಒಟ್ಟಿಗೆ ಇದ್ದಷ್ಟು ನಮಗೆ ಒಳ್ಳೆಯದ್ದು ಎಂದು ಹೇಳಿದ್ದಾರೆ.

ಭಾರತ ಜೋಡೋ ಯಾತ್ರೆಗೆ ಜನಸಾಮಾನ್ಯರಿಂದ ಪ್ರತಿಕ್ರಿಯೆ ಬರುತ್ತಿಲ್ಲ. ಕಷ್ಟಪಟ್ಟು ಬೇರೆ ಬೇರೆ ತಾಲ್ಲೂಕಿನಿಂದ ಜನರನ್ನು ಕರೆದುಕೊಂಡು ಬಂದು ಪ್ರದರ್ಶನ ಮಾಡುತ್ತಿದ್ದಾರೆ. ಅವರ ಜೊತೆಗೆ ಪಾದೆಯಾತ್ರೆ ಮಾಡುವವರ ಜನಸಂಖ್ಯೆ ಕಡಿಮೆಯಿದೆ. ಅಲ್ಲಲ್ಲಿ ಅಷ್ಟೇ ಜನರಿದ್ದಾರೆ, ಇಂದೊಂದು ತರಹ ಶೋ. ಕಾಂಗ್ರೆಸ್ ನವರು, ರಾಹುಲ್ ಗಾಂಧಿ ತಮ್ಮ ರಾಜಕೀಯ ಆಸ್ತಿತ್ವ ಉಳಿಸಿಕೊಳ್ಳಲು ಈ ಶೋ ಮಾಡುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ನಿನ್ನೆ ಮತ್ತು ಇವತ್ತು ರಾಜ್ಯದ ಬಗ್ಗೆ ಮಾತನಾಡಿದ್ದಾರೆ. ನಾನು ಅದನ್ನು ಗಮನಿಸಿದ್ದು, ಇಷ್ಟು ಸಣ್ಣಮಟ್ಟದ ರಾಜಕಾರಣವನ್ನು ಮಾಡುವುದಕ್ಕೆ ನಾವು ಬಯಸುವುದಿಲ್ಲ. ಅವರು ಪಾದಯಾತ್ರೆ ಮಾಡಿಕೊಂಡು ಹೋಗಲಿ. ಜನರು ತೀರ್ಮಾನ ಮಾಡುತ್ತಾರೆ. ಕೀಳು ಮಟ್ಟದ ಮಾತುಗಳು, ಅಧಿಕಾರಿಗಳಿಗೆ ಹೆದರಿಸುವುದು ನಡೆಯುವುದಿಲ್ಲ. ಇದನ್ನು ನಾನು ಸ್ಪಷ್ಟಪಡಿಸುತ್ತೇನೆ. ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಮಾಡುತ್ತಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

‘ರಾಹುಲ್‌, ಭಾರತ್‌ ಜೋಡೋ’ ಕುರಿತು ನಿಂದನಾತ್ಮಕ ಜಾಹೀರಾತು ನೀಡಿದ ರಾಜ್ಯ ಬಿಜೆಪಿ; ಜನಾಕ್ರೋಶ

ದೇಶದ ಬಹುತ್ವವನ್ನು ಒಡೆದು ರಾಜಕೀಯ ಮಾಡುತ್ತಿರುವ ಕೋಮುಶಕ್ತಿಗಳ ವಿರುದ್ಧ ಜನರನ್ನು ಒಟ್ಟುಗೂಡಿಸಿ, ದೇಶದ ಏಕತೆಯನ್ನು ಸ್ಥಾಪಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕೈಗೊಂಡಿರುವ ಭಾರತ್‌ ಜೋಡೋ ಯಾತ್ರೆ ಹಾಗೂ ರಾಹುಲ್‌ ಗಾಂಧಿ ಕುರಿತು ಕರ್ನಾಟಕ ಬಿಜೆಪಿ ಕೀಳು ಅಭಿರುಚಿಯ ಜಾಹೀರಾತು ನೀಡಿ ಜನರ ಆಕ್ರೋಶಕ್ಕೆ ಗುರಿಯಾಗಿದೆ.

‘ಕನ್ನಡಪ್ರಭ’ ಪತ್ರಿಕೆಯಲ್ಲಿ ಪ್ರಕಟವಾಗಿರುವ ಒಂದು ಪುಟದ ಜಾಹೀರಾತು ಅತ್ಯಂತ ಅಸಹನೀಯವಾಗಿದೆ ಎಂದು ಟೀಕೆಗಳು ವ್ಯಕ್ತವಾಗುತ್ತಿದೆ. ಇಂತಹ ಜಾಹೀರಾತನ್ನು ಪ್ರಕಟಿಸಿದ ಪತ್ರಿಕೆಯ ವಿರುದ್ಧವೂ ಅಸಮಾಧಾನ ಹೊರಹಾಕಿದ್ದಾರೆ.

‘ತೋಡೋ ಪಿತಾಮಹನ ಮರಿಮಗನಿಂದ ಜೋಡಿಸಲು ಸಾಧ್ಯವೆ?’ ಎಂಬ ದೊಡ್ಡ ಶೀರ್ಷಿಕೆಯಲ್ಲಿ ಜಾಹೀತಾತು ಪ್ರಕಟಿಸಲಾಗಿದೆ. ಮಹಮ್ಮದ್‌ಅಲಿ ಜಿನ್ನಾ ಹಾಗೂ ಜವಹರಲಾಲ್‌ ನೆಹರೂ ಅವರ ಫೋಟೋಗಳನ್ನು ಇಲ್ಲಿ ಬಳಸಲಾಗಿದೆ. ಕಾಂಗ್ರೆಸ್‌ ಪಕ್ಷದ ಹಸ್ತದ ಗುರುತನ್ನು ಮುದ್ರಿಸಲಾಗಿದೆ.

ಇದನ್ನೂ ಓದಿರಿ: ಭಗವದ್ಗೀತೆಯಲ್ಲಿ ಅದ್ಯಾವ ನೈತಿಕ ಶಿಕ್ಷಣವಿದೆ?

“ರಾಜಕೀಯ ಪಕ್ಷಗಳು ಸಹಜವಾಗಿ ತಮ್ಮ ಸಾಧನೆ ಹೇಳಲು, ಸಕಾರಾತ್ಮಕ ಸಂದೇಶ ನೀಡಲು ಪತ್ರಿಕೆಗಳ‘ ಮುಖಪುಟದ ಜಾಹೀರಾತು ನೀಡುವುದು ವಾಡಿಕೆ. ಆದರೆ ಕರ್ನಾಟಕ ಬಿಜೆಪಿ ಕೋಟಿ ಕೋಟಿ ಖರ್ಚು ಮಾಡಿ ನಕಾರಾತ್ಮಕ ಜಾಹೀರಾತು ನೀಡಿದೆ ಎಂದರೆ ಅವರಲ್ಲಿ ಅದೆಷ್ಟು ಭಯ, ಆತಂಕ, ಅಭದ್ರತೆಯನ್ನು ಭಾರತ್‌ ಜೋಡೋ ಯಾತ್ರೆ ಮೂಡಿಸಿರಬಹುದೆಂದು ಊಹಿಸಬಹುದು” ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ.

“ಈ ಜಾಹೀರಾತಿನಲ್ಲಿ ಬರೆದದ್ದು ನಿಜವೇ ಆಗಿದ್ದರೆ, ನೆಹರೂ ಜಯಂತಿ ದಿನ ಪ್ರಧಾನಿ ಮೋದಿ ನೆಹರೂ ಭಾವಚಿತ್ರಕ್ಕೆ ಹಾರ ಹಾಕಿ ಗೌರವಿಸಿದ್ದೇಕೆ? ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನೆಹರೂ ಅವರ ಕೊಡುಗೆಯನ್ನು ಹಾಡಿ ಹೊಗಳಿದ್ದೇಕೆ? ಹೊಟ್ಟೆಗೆ ಅನ್ನ ತಿನ್ನುವವರು ಮಾಡುವ ಕೆಲಸ ಇದಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಈ ಜಾಹೀರಾತಿನ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು. ಈ ಕುರಿತು ಕಾಯ್ದೆ ಪರಿಣಿತರನ್ನು ವಿಚಾರಿಸಬೇಕು. ಇದು ಕನ್ನಡಪ್ರಭ ಪತ್ರಿಕೆಯ ದುರಂತಕ್ಕೆ ಒಂದು ಉದಾಹರಣೆ ಕೂಡ. ದುಡ್ಡು ಹಾಕಿಕೊಂಡ ಮಾಲೀಕ ಪತ್ರಿಕೆಯನ್ನು ಕಾಲೊರೆಸುವ ಮ್ಯಾಟನ್ನಾಗಿ ಇದನ್ನು ಮಾಡಿಕೊಂಡಿದ್ದಾನೆ” ಎಂದು ಜನರು ಅಭಿಪ್ರಾಯಪಟ್ಟಿದ್ದಾರೆ. (ವಿವರಗಳನ್ನು ‘ಇಲ್ಲಿ’ ಓದಿರಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. 40% ಕೇಸುಗಳು,ಖಾಸಾಗಿ ಶಾಲೆಗಳ ದೂರು, ಪಿಎಸ್ಐ ಕೇಸಲ್ಲಿ ಮುಕ್ಕಿದ್ದು,ಕೋವಿಡ್ ಟೈಮ್ ಅರ್ನಿಂಗ್, ಬಿಟ್ ಕಾಯಿನ್ ಹಗರಣಗಳೆಲ್ಲಾ ವಿಚಾರಣೆಗೊಳಪಡಿಸಿದ್ರೆ ನಿಮ್ಮ ಇಡೀ ಮಂತ್ರಿಮಂಡಲ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲೋಗ್ಯ bumಮಾಯಿಯವರೆ. ನಿಮ್ಮ ನೈ’ತಿಕ’
    ಮಟ್ಟ ಅತ್ಯಂತ ಶ್ರೇಷ್ಠವಾದುದು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...