Homeಕರ್ನಾಟಕಅಪ್ಪು ನಿಧನ: ಹೃದಯಾಘಾತದ ಬಗ್ಗೆ ಪ್ಯಾನಿಕ್‌ ಆಗುವ ಅಗತ್ಯವಿಲ್ಲ- ವೈದ್ಯರು

ಅಪ್ಪು ನಿಧನ: ಹೃದಯಾಘಾತದ ಬಗ್ಗೆ ಪ್ಯಾನಿಕ್‌ ಆಗುವ ಅಗತ್ಯವಿಲ್ಲ- ವೈದ್ಯರು

- Advertisement -
- Advertisement -

ನಟ ಪುನೀತ್‌ ರಾಜ್‌ಕುಮಾರ್‌ ಅವರು ಹೃದಯಾಘಾತದಿಂದ ನಿಧನರಾದ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾಗಿರುವ ಜನರು ಹೃದಯದ ಪರೀಕ್ಷೆಗೆ ಹೆಚ್ಚಿನ ಸಂಖ್ಯೆಯಲ್ಲಿ ಮುಂದಾಗಿದ್ದಾರೆ. ಹೃದಯ ಪರೀಕ್ಷೆಗೆಂದು ಆಸ್ಪತ್ರೆಗಳಿಗೆ ದೌಡಾಯಿಸುತ್ತಿದ್ದಾರೆ.

ಬೆಂಗಳೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಹಲವು ಜನರು ಮೊದಲ ಬಾರಿಗೆ ಹೃದ್ರೋಗ ಸಂಬಂಧಿ ಹೊರರೋಗಿಗಳಾಗಿ ಧಾವಿಸಿದ್ದಾರೆ. CT ಆಂಜಿಯೋಗ್ರಾಮ್‌ ಮಾಡಿಸಿಕೊಂಡಿದ್ದಾರೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ.

“ಸಾಮಾನ್ಯವಾಗಿ ದಿನಕ್ಕೆ ಸುಮಾರು 1,200 ರೋಗಿಗಳು ಬರುತ್ತಾರೆ. ರಜೆ ದಿನಗಳಲ್ಲಿ, ಶುಕ್ರವಾರ, ಶನಿವಾರ ಮತ್ತು ಭಾನುವಾರದಂದು ಕಡಿಮೆ ಹೊರರೋಗಿಗಳು ದಾಖಲಾಗುತ್ತಿದ್ದರು. ಆದರೆ ಆಸ್ಪತ್ರೆಯು ಸೋಮವಾರ ಒಂದೇ ದಿನ ಸುಮಾರು 1,600 ಜನರನ್ನು ಪರೀಕ್ಷಿಸಿದೆ. ಇದು ವೈದ್ಯರು, ದಾದಿಯರು ಮತ್ತು ಸಹಾಯಕ ಸಿಬ್ಬಂದಿಗೆ ಒತ್ತಡ ಉಂಟು ಮಾಡಿದೆ” ಎಂದು ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಹೇಳಿದ್ದಾರೆ.

ಸೋಮವಾರ ಹೆಚ್ಚಿನ ಸಂಖ್ಯೆಯ ಜನರು ಆಸ್ಪತ್ರೆಗೆ ಆಗಮಿಸಿದ್ದರಿಂದ ಕೋವಿಡ್‌ ಸುರಕ್ಷತಾ ಕ್ರಮಗಳನ್ನು ಅನುಸರಿಸುವುದೂ ಕಷ್ಟವಾಯಿತು.

ಇದನ್ನೂ ಓದಿರಿ: ಪುನೀತ್‌ ರಾಜ್‌ಕುಮಾರ್‌ಗೆ ಅಪಮಾನ: ಆರೋಪಿಯನ್ನು ಬಂಧಿಸಿದ ಬೆಂಗಳೂರು ಪೊಲೀಸರು

“ಹೊರರೋಗಿಗಳಾಗಿ ಬಂದವರ ಸಂಖ್ಯೆ ಶೇ. 30ರಷ್ಟು ಹೆಚ್ಚಾಗಿದೆ. ಅದರಲ್ಲಿ ಮೂರನೇ ಒಂದರಷ್ಟು ಮಂದಿಗೆ ಯಾವುದೇ ಹೃದಯ ಸಂಬಂಧಿ ಕಾಯಿಲೆಗಳು ಇರಲಿಲ್ಲ. ಶೇ.10ರಿಂದ ಶೇ.20ರಷ್ಟು ಮಂದಿ ಆತಂಕಕ್ಕೆ ಒಳಗಾಗಿ ಆಸ್ಪತ್ರೆಗೆ ಬಂದಿದ್ದರು” ಎಂದು ಹಿರಿಯ ಹೃದ್ರೋಗತಜ್ಞ ಡಾ.ಕೆ.ಎಸ್‌.ರವೀಂದ್ರನಾಥ್‌ ಹೇಳಿದ್ದಾರೆ.

ಡಾ.ಮಂಜುನಾಥ್ ಅವರ ಪ್ರಕಾರ, “ಆಸ್ಪತ್ರೆಗೆ ಭೇಟಿ ನೀಡಿದ ಅನೇಕ ರೋಗಿಗಳು ಪುನೀತ್‌‌ ಸಾವಿನ ಸುದ್ದಿಯಿಂದ ಘಾಸಿಯಾಗಿದ್ದು, ಅದರ ಪರಿಣಾಮವಾಗಿ ರಾತ್ರಿ ಸರಿಯಾಗಿ ನಿದ್ದೆ ಮಾಡಿಲ್ಲ. ಜೊತೆಗೆ ಎದೆ ನೋವು ಅನುಭವಿಸಿದ್ದಾರೆ”.

ಎಚ್‌ಎಎಲ್‌ ಏರ್‌ಪೋರ್ಟ್ ರಸ್ತೆಯಲ್ಲಿನ ಮಣಿಪಾಲ್‌ ಆಸ್ಪತ್ರೆಯ ವೈದ್ಯರಾದ ಡಾ.ರಂಜನ್‌ ಶೆಟ್ಟಿ ಅವರ ಪ್ರಕಾರ, ಡಜನ್‌ಗಟ್ಟಲೆ ರೋಗಿಗಳು 20-45 ವರ್ಷ ವಯಸ್ಸಿನವರಾಗಿದ್ದರು. ಸಕ್ರ ವರ್ಡ್ ಆಸ್ಪತ್ರೆಯ ಡಾ.ಶ್ರೀಕಂಠ ಬಿ.ಶೆಟ್ಟಿ ಅವರು, “30 ವರ್ಷ ವಯೋಮಾನದ ಹೆಚ್ಚು ಮಂದಿ ಆಸ್ಪತ್ರೆಗೆ ಧಾವಿಸಿದ್ದರು” ಎಂದು ತಿಳಿಸಿದ್ದಾರೆ.

“ತಮ್ಮ ಜೀವನದಲ್ಲಿ ಎಂದಿಗೂ ವರ್ಕ್‌‌ಔಟ್‌ ಮಾಡದ, ಇತ್ತೀಚೆಗೆ ಜಿಮ್‌ಗೆ ಸೇರಿದವರು ಕಠಿಣ ವ್ಯಾಯಾಮದ ಕಾರಣ ಎದೆನೋವು ಎಂದು ಆಸ್ಪತ್ರೆಗೆ ಬರುತ್ತಿದ್ದಾರೆ. ಹೃದಯವನ್ನು ಸುಸ್ಥಿತಿಯಲ್ಲಿ ಇಡಲು ಜೀವನಕ್ರಮವನ್ನು ಅನುಸರಿಸಬೇಕು. ನಾವು ಆರೋಗ್ಯಕರ ಆಯ್ಕೆಗಳನ್ನು ಮಾಡಿಕೊಳ್ಳಬೇಕಾಗಿದೆ” ಎಂದಿದ್ದಾರೆ ಡಾ.ಶೆಟ್ಟಿ.

‘ನಾನುಗೌರಿ.ಕಾಂ’ ಜೊತೆ ಮಾತಾಡಿದ ಆಸ್ಟರ್‌ ಸಿಎಂಐ ಆಸ್ಪತ್ರೆಯ ಡಾ.ಸಂಜಯ್‌ ಭಟ್‌ ಅವರು, “ಜನ ಪ್ಯಾನಿಕ್ ಆಗುತ್ತಿರುವುದು ನಿಜ. ಹೃದಯ ಸಂಬಂಧಿ ಕಾಯಿಲೆಗಳು ಇದ್ದೇ ಇರುತ್ತವೆ. ವಾಸ್ತವದಲ್ಲಿ ಕಾಲಕಾಲಕ್ಕೆ ಹೃದಯವನ್ನು ಪರೀಕ್ಷಿಸಿಕೊಳ್ಳುವುದು ಅಗತ್ಯ. ಕೊಲಸ್ಟ್ರಾಲ್‌, ಸಕ್ಕರೆ ಅಂಶವನ್ನು ಪರೀಕ್ಷಿಸಿಕೊಳ್ಳಬೇಕು. 40 ವರ್ಷ ದಾಟಿದ ಮೇಲೆ ವರ್ಷಕ್ಕೊಮ್ಮೆ ಇಸಿಜಿ ಮಾಡಿಸಿಕೊಳ್ಳಬೇಕು. ಜನ ಕಾಳಜಿ ವಹಿಸಬೇಕು. ಆದರೆ ಪ್ಯಾನಿಕ್ ಆಗುವ ಅಗತ್ಯವೇನೂ ಇಲ್ಲ. ಪುನೀತ್‌ ರಾಜ್‌ಕುಮಾರ್‌ ಅವರಿಗೆ ಹೃದಯಾಘಾತವಾಯಿತು ಎಂದ ಮಾತ್ರಕ್ಕೆ ಎಲ್ಲರಿಗೂ ಆಗುತ್ತೆ ಎಂದೇನಿಲ್ಲ” ಎಂದರು.

 ಇದನ್ನೂ ಓದಿರಿ: ಪುನೀತ್‌ ಫಿಟ್‌ನೆಟ್‌‌: ಡಾ.ದೇವಿ ಶೆಟ್ಟಿ ಹೆಸರಲ್ಲಿ ಫೇಕ್‌ ನ್ಯೂಸ್‌ ಹರಿದಾಟ

“ವ್ಯಾಯಾಮವನ್ನು ಮಿತಿಮೀರಿಯೂ ಮಾಡಬಾರದು. ವ್ಯಾಯಾಮ ಮಾಡದೆ ಒಂದೇ ಕಡೆ ಕೂತರೆ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತವೆ. ಮಧ್ಯಮ ಪ್ರಮಾಣದಲ್ಲಿ ವ್ಯಾಯಾಮವನ್ನು ಮಾಡಬೇಕು. ದಿನಕ್ಕೆ ಒಂದು ಗಂಟೆಯಂತೆ, ವಾರದಲ್ಲಿ ಕನಿಷ್ಠ ಐದು ಗಂಟೆ ಮಾಡಬಹುದು. ದಿನಕ್ಕೆ ಎರಡು ಅಥವಾ ಮೂರು ಗಂಟೆ ವ್ಯಾಯಾಮ ಮಾಡುವವರಿಗೂ, ಮ್ಯಾರಾಥಾನ್‌ ಓಡುವವರಿಗೂ ಹೃದಯ ಸಂಬಂಧಿ ಕಾಯಿಲೆ ಉಂಟಾಗಬಹುದು” ಎನ್ನುತ್ತಾರೆ ಡಾ.ಸಂಜಯ್‌.

“ಮೊದಲೇ ಹೃದಯ ಸಮಸ್ಯೆ ಇರುವವರು ನಿಗದಿತವಾಗಿ ವೈದ್ಯರ ಬಳಿ ಪರೀಕ್ಷಿಸಿಕೊಳ್ಳಬೇಕು. ಆದರೆ ಹೆದರಿಕೊಂಡು ಎಲ್ಲರೂ ದಿಢೀರನೇ ಡಾಕ್ಟರ್‌ ಬಳಿ ಹೋಗುವ ಅಗತ್ಯವಿಲ್ಲ. ಯುವಕರು ಹೆಚ್ಚಿನ ಪ್ರಮಾಣದಲ್ಲಿ ಪ್ಯಾನಿಕ್‌ ಆಗುತ್ತಿದ್ದಾರೆ. ಯುವಜನರು ಧೂಮಪಾನ ಬಿಟ್ಟರೆ ಸಾಕು. ಗಾಬರಿಯಾಗುವ ಅಗತ್ಯವಿಲ್ಲ. ಅತಿಯಾದ ತೂಕ ಇರಬಾರದು. ಮಧುಮೇಹ ಇರುವವರು ನಿಯಂತ್ರಣಕ್ಕೆ ಆದ್ಯತೆ ನೀಡಬೇಕು. ಫ್ಯಾಟ್‌ ಫುಡ್‌, ಕರಿದ ಪದಾರ್ಥ ಸೇವಿಸುವುದು ಕಡಿಮೆ ಮಾಡಬೇಕು” ಎಂದು ತಿಳಿಸಿದರು.

ಪುನೀತ್‌ ನಿಧನ: ಜನರಲ್ಲಿ ಭೀತಿ ಹುಟ್ಟಿಸಿ ದುಡ್ಡು ಕೀಳಲು ಯತ್ನ

ಪುನೀತ್ ರಾಜ್‌ಕುಮಾರ್‌ ಅವರು ಹೃದಯಾಘಾತದಿಂದ ನಿಧನರಾಗಿರುವುದನ್ನೇ ಬಂಡವಾಳ ಮಾಡಿಕೊಳ್ಳಲು ಖಾಸಗಿ ಆಸ್ಪತ್ರೆಗಳು ಹೊರಟಿವೆ ಎಂಬ ಟೀಕೆಗಳು ವ್ಯಕ್ತವಾಗುತ್ತಿವೆ.

ಕ್ರೆಡೆನ್‌ ಡಯಗ್ನಾಟಿಕ್ಸ್‌ ಎಂಬ ಸಂಸ್ಥೆಯ ಹೆಸರಿನ ಬ್ಯಾನರ್‌ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಪುನೀತ್ ರಾಜ್‌ಕುಮಾರ್‌ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿರುವ ಸದರಿ ಸಂಸ್ಥೆಯು, “ಇಸಿಜಿ, ಆರ್‌ಬಿಎಸ್‌, ಕ್ರಿಟಿನೈನ್‌‌, ಬಿಪಿ, ಕೊಲಸ್ಟ್ರಾಲ್‌ ಪರೀಕ್ಷೆ ಮಾಡಿಸಿಕೊಳ್ಳಿ. ಆಫರ್‌ ಫ್ರೈಸ್‌ 300 ರೂ.” ಹೇಳಿದೆ. ಅಕ್ಟೋಬರ್‌ 31ರಂದು ತಪಾಸಣೆ ಶಿಬಿರವನ್ನು ಕೈಗೊಂಡಿರುವುದಾಗಿ ತಿಳಿಸಿರುವ ಈ ಬ್ಯಾನರ್‌‌ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.

ಬರಹಗಾರ ಧನಂಜಯ್ ಎನ್. ಅವರು ಫೇಸ್‌ಬುಕ್‌ ಪೋಸ್ಟ್ ಹಾಕಿ ಕಟುವಾಗಿ ಟೀಕಿಸಿದ್ದಾರೆ.

ಹೃದಯ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಹೇಳಿದ್ದು ತಪ್ಪಲ್ಲ, ಆದರೆ ನಮ್ಮತ್ರ ಚೆಕ್ ಮಾಡಿಸಿಕೊಳ್ಳಿ ಅಂತ ಆಫರ್ ಇಟ್ಟು ಬಂಡವಾಳ ಮಾಡಿಕೊಳ್ಳುತ್ತಿರುವುದು ದೊಡ್ಡ ತಪ್ಪು” ಎಂದು ಶಿವರಾಜ್‌ ಮೋತಿ ಅಭಿಪ್ರಾಯಟ್ಟಿದ್ದಾರೆ.


ಇದನ್ನೂ ಓದಿರಿ: ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...