Homeಕರ್ನಾಟಕಅಪ್ಪು ನಿಧನ: ಹೃದಯಾಘಾತದ ಬಗ್ಗೆ ಪ್ಯಾನಿಕ್‌ ಆಗುವ ಅಗತ್ಯವಿಲ್ಲ- ವೈದ್ಯರು

ಅಪ್ಪು ನಿಧನ: ಹೃದಯಾಘಾತದ ಬಗ್ಗೆ ಪ್ಯಾನಿಕ್‌ ಆಗುವ ಅಗತ್ಯವಿಲ್ಲ- ವೈದ್ಯರು

- Advertisement -
- Advertisement -

ನಟ ಪುನೀತ್‌ ರಾಜ್‌ಕುಮಾರ್‌ ಅವರು ಹೃದಯಾಘಾತದಿಂದ ನಿಧನರಾದ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾಗಿರುವ ಜನರು ಹೃದಯದ ಪರೀಕ್ಷೆಗೆ ಹೆಚ್ಚಿನ ಸಂಖ್ಯೆಯಲ್ಲಿ ಮುಂದಾಗಿದ್ದಾರೆ. ಹೃದಯ ಪರೀಕ್ಷೆಗೆಂದು ಆಸ್ಪತ್ರೆಗಳಿಗೆ ದೌಡಾಯಿಸುತ್ತಿದ್ದಾರೆ.

ಬೆಂಗಳೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಹಲವು ಜನರು ಮೊದಲ ಬಾರಿಗೆ ಹೃದ್ರೋಗ ಸಂಬಂಧಿ ಹೊರರೋಗಿಗಳಾಗಿ ಧಾವಿಸಿದ್ದಾರೆ. CT ಆಂಜಿಯೋಗ್ರಾಮ್‌ ಮಾಡಿಸಿಕೊಂಡಿದ್ದಾರೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ.

“ಸಾಮಾನ್ಯವಾಗಿ ದಿನಕ್ಕೆ ಸುಮಾರು 1,200 ರೋಗಿಗಳು ಬರುತ್ತಾರೆ. ರಜೆ ದಿನಗಳಲ್ಲಿ, ಶುಕ್ರವಾರ, ಶನಿವಾರ ಮತ್ತು ಭಾನುವಾರದಂದು ಕಡಿಮೆ ಹೊರರೋಗಿಗಳು ದಾಖಲಾಗುತ್ತಿದ್ದರು. ಆದರೆ ಆಸ್ಪತ್ರೆಯು ಸೋಮವಾರ ಒಂದೇ ದಿನ ಸುಮಾರು 1,600 ಜನರನ್ನು ಪರೀಕ್ಷಿಸಿದೆ. ಇದು ವೈದ್ಯರು, ದಾದಿಯರು ಮತ್ತು ಸಹಾಯಕ ಸಿಬ್ಬಂದಿಗೆ ಒತ್ತಡ ಉಂಟು ಮಾಡಿದೆ” ಎಂದು ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಹೇಳಿದ್ದಾರೆ.

ಸೋಮವಾರ ಹೆಚ್ಚಿನ ಸಂಖ್ಯೆಯ ಜನರು ಆಸ್ಪತ್ರೆಗೆ ಆಗಮಿಸಿದ್ದರಿಂದ ಕೋವಿಡ್‌ ಸುರಕ್ಷತಾ ಕ್ರಮಗಳನ್ನು ಅನುಸರಿಸುವುದೂ ಕಷ್ಟವಾಯಿತು.

ಇದನ್ನೂ ಓದಿರಿ: ಪುನೀತ್‌ ರಾಜ್‌ಕುಮಾರ್‌ಗೆ ಅಪಮಾನ: ಆರೋಪಿಯನ್ನು ಬಂಧಿಸಿದ ಬೆಂಗಳೂರು ಪೊಲೀಸರು

“ಹೊರರೋಗಿಗಳಾಗಿ ಬಂದವರ ಸಂಖ್ಯೆ ಶೇ. 30ರಷ್ಟು ಹೆಚ್ಚಾಗಿದೆ. ಅದರಲ್ಲಿ ಮೂರನೇ ಒಂದರಷ್ಟು ಮಂದಿಗೆ ಯಾವುದೇ ಹೃದಯ ಸಂಬಂಧಿ ಕಾಯಿಲೆಗಳು ಇರಲಿಲ್ಲ. ಶೇ.10ರಿಂದ ಶೇ.20ರಷ್ಟು ಮಂದಿ ಆತಂಕಕ್ಕೆ ಒಳಗಾಗಿ ಆಸ್ಪತ್ರೆಗೆ ಬಂದಿದ್ದರು” ಎಂದು ಹಿರಿಯ ಹೃದ್ರೋಗತಜ್ಞ ಡಾ.ಕೆ.ಎಸ್‌.ರವೀಂದ್ರನಾಥ್‌ ಹೇಳಿದ್ದಾರೆ.

ಡಾ.ಮಂಜುನಾಥ್ ಅವರ ಪ್ರಕಾರ, “ಆಸ್ಪತ್ರೆಗೆ ಭೇಟಿ ನೀಡಿದ ಅನೇಕ ರೋಗಿಗಳು ಪುನೀತ್‌‌ ಸಾವಿನ ಸುದ್ದಿಯಿಂದ ಘಾಸಿಯಾಗಿದ್ದು, ಅದರ ಪರಿಣಾಮವಾಗಿ ರಾತ್ರಿ ಸರಿಯಾಗಿ ನಿದ್ದೆ ಮಾಡಿಲ್ಲ. ಜೊತೆಗೆ ಎದೆ ನೋವು ಅನುಭವಿಸಿದ್ದಾರೆ”.

ಎಚ್‌ಎಎಲ್‌ ಏರ್‌ಪೋರ್ಟ್ ರಸ್ತೆಯಲ್ಲಿನ ಮಣಿಪಾಲ್‌ ಆಸ್ಪತ್ರೆಯ ವೈದ್ಯರಾದ ಡಾ.ರಂಜನ್‌ ಶೆಟ್ಟಿ ಅವರ ಪ್ರಕಾರ, ಡಜನ್‌ಗಟ್ಟಲೆ ರೋಗಿಗಳು 20-45 ವರ್ಷ ವಯಸ್ಸಿನವರಾಗಿದ್ದರು. ಸಕ್ರ ವರ್ಡ್ ಆಸ್ಪತ್ರೆಯ ಡಾ.ಶ್ರೀಕಂಠ ಬಿ.ಶೆಟ್ಟಿ ಅವರು, “30 ವರ್ಷ ವಯೋಮಾನದ ಹೆಚ್ಚು ಮಂದಿ ಆಸ್ಪತ್ರೆಗೆ ಧಾವಿಸಿದ್ದರು” ಎಂದು ತಿಳಿಸಿದ್ದಾರೆ.

“ತಮ್ಮ ಜೀವನದಲ್ಲಿ ಎಂದಿಗೂ ವರ್ಕ್‌‌ಔಟ್‌ ಮಾಡದ, ಇತ್ತೀಚೆಗೆ ಜಿಮ್‌ಗೆ ಸೇರಿದವರು ಕಠಿಣ ವ್ಯಾಯಾಮದ ಕಾರಣ ಎದೆನೋವು ಎಂದು ಆಸ್ಪತ್ರೆಗೆ ಬರುತ್ತಿದ್ದಾರೆ. ಹೃದಯವನ್ನು ಸುಸ್ಥಿತಿಯಲ್ಲಿ ಇಡಲು ಜೀವನಕ್ರಮವನ್ನು ಅನುಸರಿಸಬೇಕು. ನಾವು ಆರೋಗ್ಯಕರ ಆಯ್ಕೆಗಳನ್ನು ಮಾಡಿಕೊಳ್ಳಬೇಕಾಗಿದೆ” ಎಂದಿದ್ದಾರೆ ಡಾ.ಶೆಟ್ಟಿ.

‘ನಾನುಗೌರಿ.ಕಾಂ’ ಜೊತೆ ಮಾತಾಡಿದ ಆಸ್ಟರ್‌ ಸಿಎಂಐ ಆಸ್ಪತ್ರೆಯ ಡಾ.ಸಂಜಯ್‌ ಭಟ್‌ ಅವರು, “ಜನ ಪ್ಯಾನಿಕ್ ಆಗುತ್ತಿರುವುದು ನಿಜ. ಹೃದಯ ಸಂಬಂಧಿ ಕಾಯಿಲೆಗಳು ಇದ್ದೇ ಇರುತ್ತವೆ. ವಾಸ್ತವದಲ್ಲಿ ಕಾಲಕಾಲಕ್ಕೆ ಹೃದಯವನ್ನು ಪರೀಕ್ಷಿಸಿಕೊಳ್ಳುವುದು ಅಗತ್ಯ. ಕೊಲಸ್ಟ್ರಾಲ್‌, ಸಕ್ಕರೆ ಅಂಶವನ್ನು ಪರೀಕ್ಷಿಸಿಕೊಳ್ಳಬೇಕು. 40 ವರ್ಷ ದಾಟಿದ ಮೇಲೆ ವರ್ಷಕ್ಕೊಮ್ಮೆ ಇಸಿಜಿ ಮಾಡಿಸಿಕೊಳ್ಳಬೇಕು. ಜನ ಕಾಳಜಿ ವಹಿಸಬೇಕು. ಆದರೆ ಪ್ಯಾನಿಕ್ ಆಗುವ ಅಗತ್ಯವೇನೂ ಇಲ್ಲ. ಪುನೀತ್‌ ರಾಜ್‌ಕುಮಾರ್‌ ಅವರಿಗೆ ಹೃದಯಾಘಾತವಾಯಿತು ಎಂದ ಮಾತ್ರಕ್ಕೆ ಎಲ್ಲರಿಗೂ ಆಗುತ್ತೆ ಎಂದೇನಿಲ್ಲ” ಎಂದರು.

 ಇದನ್ನೂ ಓದಿರಿ: ಪುನೀತ್‌ ಫಿಟ್‌ನೆಟ್‌‌: ಡಾ.ದೇವಿ ಶೆಟ್ಟಿ ಹೆಸರಲ್ಲಿ ಫೇಕ್‌ ನ್ಯೂಸ್‌ ಹರಿದಾಟ

“ವ್ಯಾಯಾಮವನ್ನು ಮಿತಿಮೀರಿಯೂ ಮಾಡಬಾರದು. ವ್ಯಾಯಾಮ ಮಾಡದೆ ಒಂದೇ ಕಡೆ ಕೂತರೆ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತವೆ. ಮಧ್ಯಮ ಪ್ರಮಾಣದಲ್ಲಿ ವ್ಯಾಯಾಮವನ್ನು ಮಾಡಬೇಕು. ದಿನಕ್ಕೆ ಒಂದು ಗಂಟೆಯಂತೆ, ವಾರದಲ್ಲಿ ಕನಿಷ್ಠ ಐದು ಗಂಟೆ ಮಾಡಬಹುದು. ದಿನಕ್ಕೆ ಎರಡು ಅಥವಾ ಮೂರು ಗಂಟೆ ವ್ಯಾಯಾಮ ಮಾಡುವವರಿಗೂ, ಮ್ಯಾರಾಥಾನ್‌ ಓಡುವವರಿಗೂ ಹೃದಯ ಸಂಬಂಧಿ ಕಾಯಿಲೆ ಉಂಟಾಗಬಹುದು” ಎನ್ನುತ್ತಾರೆ ಡಾ.ಸಂಜಯ್‌.

“ಮೊದಲೇ ಹೃದಯ ಸಮಸ್ಯೆ ಇರುವವರು ನಿಗದಿತವಾಗಿ ವೈದ್ಯರ ಬಳಿ ಪರೀಕ್ಷಿಸಿಕೊಳ್ಳಬೇಕು. ಆದರೆ ಹೆದರಿಕೊಂಡು ಎಲ್ಲರೂ ದಿಢೀರನೇ ಡಾಕ್ಟರ್‌ ಬಳಿ ಹೋಗುವ ಅಗತ್ಯವಿಲ್ಲ. ಯುವಕರು ಹೆಚ್ಚಿನ ಪ್ರಮಾಣದಲ್ಲಿ ಪ್ಯಾನಿಕ್‌ ಆಗುತ್ತಿದ್ದಾರೆ. ಯುವಜನರು ಧೂಮಪಾನ ಬಿಟ್ಟರೆ ಸಾಕು. ಗಾಬರಿಯಾಗುವ ಅಗತ್ಯವಿಲ್ಲ. ಅತಿಯಾದ ತೂಕ ಇರಬಾರದು. ಮಧುಮೇಹ ಇರುವವರು ನಿಯಂತ್ರಣಕ್ಕೆ ಆದ್ಯತೆ ನೀಡಬೇಕು. ಫ್ಯಾಟ್‌ ಫುಡ್‌, ಕರಿದ ಪದಾರ್ಥ ಸೇವಿಸುವುದು ಕಡಿಮೆ ಮಾಡಬೇಕು” ಎಂದು ತಿಳಿಸಿದರು.

ಪುನೀತ್‌ ನಿಧನ: ಜನರಲ್ಲಿ ಭೀತಿ ಹುಟ್ಟಿಸಿ ದುಡ್ಡು ಕೀಳಲು ಯತ್ನ

ಪುನೀತ್ ರಾಜ್‌ಕುಮಾರ್‌ ಅವರು ಹೃದಯಾಘಾತದಿಂದ ನಿಧನರಾಗಿರುವುದನ್ನೇ ಬಂಡವಾಳ ಮಾಡಿಕೊಳ್ಳಲು ಖಾಸಗಿ ಆಸ್ಪತ್ರೆಗಳು ಹೊರಟಿವೆ ಎಂಬ ಟೀಕೆಗಳು ವ್ಯಕ್ತವಾಗುತ್ತಿವೆ.

ಕ್ರೆಡೆನ್‌ ಡಯಗ್ನಾಟಿಕ್ಸ್‌ ಎಂಬ ಸಂಸ್ಥೆಯ ಹೆಸರಿನ ಬ್ಯಾನರ್‌ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಪುನೀತ್ ರಾಜ್‌ಕುಮಾರ್‌ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿರುವ ಸದರಿ ಸಂಸ್ಥೆಯು, “ಇಸಿಜಿ, ಆರ್‌ಬಿಎಸ್‌, ಕ್ರಿಟಿನೈನ್‌‌, ಬಿಪಿ, ಕೊಲಸ್ಟ್ರಾಲ್‌ ಪರೀಕ್ಷೆ ಮಾಡಿಸಿಕೊಳ್ಳಿ. ಆಫರ್‌ ಫ್ರೈಸ್‌ 300 ರೂ.” ಹೇಳಿದೆ. ಅಕ್ಟೋಬರ್‌ 31ರಂದು ತಪಾಸಣೆ ಶಿಬಿರವನ್ನು ಕೈಗೊಂಡಿರುವುದಾಗಿ ತಿಳಿಸಿರುವ ಈ ಬ್ಯಾನರ್‌‌ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.

ಬರಹಗಾರ ಧನಂಜಯ್ ಎನ್. ಅವರು ಫೇಸ್‌ಬುಕ್‌ ಪೋಸ್ಟ್ ಹಾಕಿ ಕಟುವಾಗಿ ಟೀಕಿಸಿದ್ದಾರೆ.

ಹೃದಯ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಹೇಳಿದ್ದು ತಪ್ಪಲ್ಲ, ಆದರೆ ನಮ್ಮತ್ರ ಚೆಕ್ ಮಾಡಿಸಿಕೊಳ್ಳಿ ಅಂತ ಆಫರ್ ಇಟ್ಟು ಬಂಡವಾಳ ಮಾಡಿಕೊಳ್ಳುತ್ತಿರುವುದು ದೊಡ್ಡ ತಪ್ಪು” ಎಂದು ಶಿವರಾಜ್‌ ಮೋತಿ ಅಭಿಪ್ರಾಯಟ್ಟಿದ್ದಾರೆ.


ಇದನ್ನೂ ಓದಿರಿ: ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...