Homeಕರ್ನಾಟಕಅಪ್ಪು ನಿಧನ: ಹೃದಯಾಘಾತದ ಬಗ್ಗೆ ಪ್ಯಾನಿಕ್‌ ಆಗುವ ಅಗತ್ಯವಿಲ್ಲ- ವೈದ್ಯರು

ಅಪ್ಪು ನಿಧನ: ಹೃದಯಾಘಾತದ ಬಗ್ಗೆ ಪ್ಯಾನಿಕ್‌ ಆಗುವ ಅಗತ್ಯವಿಲ್ಲ- ವೈದ್ಯರು

- Advertisement -
- Advertisement -

ನಟ ಪುನೀತ್‌ ರಾಜ್‌ಕುಮಾರ್‌ ಅವರು ಹೃದಯಾಘಾತದಿಂದ ನಿಧನರಾದ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾಗಿರುವ ಜನರು ಹೃದಯದ ಪರೀಕ್ಷೆಗೆ ಹೆಚ್ಚಿನ ಸಂಖ್ಯೆಯಲ್ಲಿ ಮುಂದಾಗಿದ್ದಾರೆ. ಹೃದಯ ಪರೀಕ್ಷೆಗೆಂದು ಆಸ್ಪತ್ರೆಗಳಿಗೆ ದೌಡಾಯಿಸುತ್ತಿದ್ದಾರೆ.

ಬೆಂಗಳೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಹಲವು ಜನರು ಮೊದಲ ಬಾರಿಗೆ ಹೃದ್ರೋಗ ಸಂಬಂಧಿ ಹೊರರೋಗಿಗಳಾಗಿ ಧಾವಿಸಿದ್ದಾರೆ. CT ಆಂಜಿಯೋಗ್ರಾಮ್‌ ಮಾಡಿಸಿಕೊಂಡಿದ್ದಾರೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ.

“ಸಾಮಾನ್ಯವಾಗಿ ದಿನಕ್ಕೆ ಸುಮಾರು 1,200 ರೋಗಿಗಳು ಬರುತ್ತಾರೆ. ರಜೆ ದಿನಗಳಲ್ಲಿ, ಶುಕ್ರವಾರ, ಶನಿವಾರ ಮತ್ತು ಭಾನುವಾರದಂದು ಕಡಿಮೆ ಹೊರರೋಗಿಗಳು ದಾಖಲಾಗುತ್ತಿದ್ದರು. ಆದರೆ ಆಸ್ಪತ್ರೆಯು ಸೋಮವಾರ ಒಂದೇ ದಿನ ಸುಮಾರು 1,600 ಜನರನ್ನು ಪರೀಕ್ಷಿಸಿದೆ. ಇದು ವೈದ್ಯರು, ದಾದಿಯರು ಮತ್ತು ಸಹಾಯಕ ಸಿಬ್ಬಂದಿಗೆ ಒತ್ತಡ ಉಂಟು ಮಾಡಿದೆ” ಎಂದು ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಹೇಳಿದ್ದಾರೆ.

ಸೋಮವಾರ ಹೆಚ್ಚಿನ ಸಂಖ್ಯೆಯ ಜನರು ಆಸ್ಪತ್ರೆಗೆ ಆಗಮಿಸಿದ್ದರಿಂದ ಕೋವಿಡ್‌ ಸುರಕ್ಷತಾ ಕ್ರಮಗಳನ್ನು ಅನುಸರಿಸುವುದೂ ಕಷ್ಟವಾಯಿತು.

ಇದನ್ನೂ ಓದಿರಿ: ಪುನೀತ್‌ ರಾಜ್‌ಕುಮಾರ್‌ಗೆ ಅಪಮಾನ: ಆರೋಪಿಯನ್ನು ಬಂಧಿಸಿದ ಬೆಂಗಳೂರು ಪೊಲೀಸರು

“ಹೊರರೋಗಿಗಳಾಗಿ ಬಂದವರ ಸಂಖ್ಯೆ ಶೇ. 30ರಷ್ಟು ಹೆಚ್ಚಾಗಿದೆ. ಅದರಲ್ಲಿ ಮೂರನೇ ಒಂದರಷ್ಟು ಮಂದಿಗೆ ಯಾವುದೇ ಹೃದಯ ಸಂಬಂಧಿ ಕಾಯಿಲೆಗಳು ಇರಲಿಲ್ಲ. ಶೇ.10ರಿಂದ ಶೇ.20ರಷ್ಟು ಮಂದಿ ಆತಂಕಕ್ಕೆ ಒಳಗಾಗಿ ಆಸ್ಪತ್ರೆಗೆ ಬಂದಿದ್ದರು” ಎಂದು ಹಿರಿಯ ಹೃದ್ರೋಗತಜ್ಞ ಡಾ.ಕೆ.ಎಸ್‌.ರವೀಂದ್ರನಾಥ್‌ ಹೇಳಿದ್ದಾರೆ.

ಡಾ.ಮಂಜುನಾಥ್ ಅವರ ಪ್ರಕಾರ, “ಆಸ್ಪತ್ರೆಗೆ ಭೇಟಿ ನೀಡಿದ ಅನೇಕ ರೋಗಿಗಳು ಪುನೀತ್‌‌ ಸಾವಿನ ಸುದ್ದಿಯಿಂದ ಘಾಸಿಯಾಗಿದ್ದು, ಅದರ ಪರಿಣಾಮವಾಗಿ ರಾತ್ರಿ ಸರಿಯಾಗಿ ನಿದ್ದೆ ಮಾಡಿಲ್ಲ. ಜೊತೆಗೆ ಎದೆ ನೋವು ಅನುಭವಿಸಿದ್ದಾರೆ”.

ಎಚ್‌ಎಎಲ್‌ ಏರ್‌ಪೋರ್ಟ್ ರಸ್ತೆಯಲ್ಲಿನ ಮಣಿಪಾಲ್‌ ಆಸ್ಪತ್ರೆಯ ವೈದ್ಯರಾದ ಡಾ.ರಂಜನ್‌ ಶೆಟ್ಟಿ ಅವರ ಪ್ರಕಾರ, ಡಜನ್‌ಗಟ್ಟಲೆ ರೋಗಿಗಳು 20-45 ವರ್ಷ ವಯಸ್ಸಿನವರಾಗಿದ್ದರು. ಸಕ್ರ ವರ್ಡ್ ಆಸ್ಪತ್ರೆಯ ಡಾ.ಶ್ರೀಕಂಠ ಬಿ.ಶೆಟ್ಟಿ ಅವರು, “30 ವರ್ಷ ವಯೋಮಾನದ ಹೆಚ್ಚು ಮಂದಿ ಆಸ್ಪತ್ರೆಗೆ ಧಾವಿಸಿದ್ದರು” ಎಂದು ತಿಳಿಸಿದ್ದಾರೆ.

“ತಮ್ಮ ಜೀವನದಲ್ಲಿ ಎಂದಿಗೂ ವರ್ಕ್‌‌ಔಟ್‌ ಮಾಡದ, ಇತ್ತೀಚೆಗೆ ಜಿಮ್‌ಗೆ ಸೇರಿದವರು ಕಠಿಣ ವ್ಯಾಯಾಮದ ಕಾರಣ ಎದೆನೋವು ಎಂದು ಆಸ್ಪತ್ರೆಗೆ ಬರುತ್ತಿದ್ದಾರೆ. ಹೃದಯವನ್ನು ಸುಸ್ಥಿತಿಯಲ್ಲಿ ಇಡಲು ಜೀವನಕ್ರಮವನ್ನು ಅನುಸರಿಸಬೇಕು. ನಾವು ಆರೋಗ್ಯಕರ ಆಯ್ಕೆಗಳನ್ನು ಮಾಡಿಕೊಳ್ಳಬೇಕಾಗಿದೆ” ಎಂದಿದ್ದಾರೆ ಡಾ.ಶೆಟ್ಟಿ.

‘ನಾನುಗೌರಿ.ಕಾಂ’ ಜೊತೆ ಮಾತಾಡಿದ ಆಸ್ಟರ್‌ ಸಿಎಂಐ ಆಸ್ಪತ್ರೆಯ ಡಾ.ಸಂಜಯ್‌ ಭಟ್‌ ಅವರು, “ಜನ ಪ್ಯಾನಿಕ್ ಆಗುತ್ತಿರುವುದು ನಿಜ. ಹೃದಯ ಸಂಬಂಧಿ ಕಾಯಿಲೆಗಳು ಇದ್ದೇ ಇರುತ್ತವೆ. ವಾಸ್ತವದಲ್ಲಿ ಕಾಲಕಾಲಕ್ಕೆ ಹೃದಯವನ್ನು ಪರೀಕ್ಷಿಸಿಕೊಳ್ಳುವುದು ಅಗತ್ಯ. ಕೊಲಸ್ಟ್ರಾಲ್‌, ಸಕ್ಕರೆ ಅಂಶವನ್ನು ಪರೀಕ್ಷಿಸಿಕೊಳ್ಳಬೇಕು. 40 ವರ್ಷ ದಾಟಿದ ಮೇಲೆ ವರ್ಷಕ್ಕೊಮ್ಮೆ ಇಸಿಜಿ ಮಾಡಿಸಿಕೊಳ್ಳಬೇಕು. ಜನ ಕಾಳಜಿ ವಹಿಸಬೇಕು. ಆದರೆ ಪ್ಯಾನಿಕ್ ಆಗುವ ಅಗತ್ಯವೇನೂ ಇಲ್ಲ. ಪುನೀತ್‌ ರಾಜ್‌ಕುಮಾರ್‌ ಅವರಿಗೆ ಹೃದಯಾಘಾತವಾಯಿತು ಎಂದ ಮಾತ್ರಕ್ಕೆ ಎಲ್ಲರಿಗೂ ಆಗುತ್ತೆ ಎಂದೇನಿಲ್ಲ” ಎಂದರು.

 ಇದನ್ನೂ ಓದಿರಿ: ಪುನೀತ್‌ ಫಿಟ್‌ನೆಟ್‌‌: ಡಾ.ದೇವಿ ಶೆಟ್ಟಿ ಹೆಸರಲ್ಲಿ ಫೇಕ್‌ ನ್ಯೂಸ್‌ ಹರಿದಾಟ

“ವ್ಯಾಯಾಮವನ್ನು ಮಿತಿಮೀರಿಯೂ ಮಾಡಬಾರದು. ವ್ಯಾಯಾಮ ಮಾಡದೆ ಒಂದೇ ಕಡೆ ಕೂತರೆ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತವೆ. ಮಧ್ಯಮ ಪ್ರಮಾಣದಲ್ಲಿ ವ್ಯಾಯಾಮವನ್ನು ಮಾಡಬೇಕು. ದಿನಕ್ಕೆ ಒಂದು ಗಂಟೆಯಂತೆ, ವಾರದಲ್ಲಿ ಕನಿಷ್ಠ ಐದು ಗಂಟೆ ಮಾಡಬಹುದು. ದಿನಕ್ಕೆ ಎರಡು ಅಥವಾ ಮೂರು ಗಂಟೆ ವ್ಯಾಯಾಮ ಮಾಡುವವರಿಗೂ, ಮ್ಯಾರಾಥಾನ್‌ ಓಡುವವರಿಗೂ ಹೃದಯ ಸಂಬಂಧಿ ಕಾಯಿಲೆ ಉಂಟಾಗಬಹುದು” ಎನ್ನುತ್ತಾರೆ ಡಾ.ಸಂಜಯ್‌.

“ಮೊದಲೇ ಹೃದಯ ಸಮಸ್ಯೆ ಇರುವವರು ನಿಗದಿತವಾಗಿ ವೈದ್ಯರ ಬಳಿ ಪರೀಕ್ಷಿಸಿಕೊಳ್ಳಬೇಕು. ಆದರೆ ಹೆದರಿಕೊಂಡು ಎಲ್ಲರೂ ದಿಢೀರನೇ ಡಾಕ್ಟರ್‌ ಬಳಿ ಹೋಗುವ ಅಗತ್ಯವಿಲ್ಲ. ಯುವಕರು ಹೆಚ್ಚಿನ ಪ್ರಮಾಣದಲ್ಲಿ ಪ್ಯಾನಿಕ್‌ ಆಗುತ್ತಿದ್ದಾರೆ. ಯುವಜನರು ಧೂಮಪಾನ ಬಿಟ್ಟರೆ ಸಾಕು. ಗಾಬರಿಯಾಗುವ ಅಗತ್ಯವಿಲ್ಲ. ಅತಿಯಾದ ತೂಕ ಇರಬಾರದು. ಮಧುಮೇಹ ಇರುವವರು ನಿಯಂತ್ರಣಕ್ಕೆ ಆದ್ಯತೆ ನೀಡಬೇಕು. ಫ್ಯಾಟ್‌ ಫುಡ್‌, ಕರಿದ ಪದಾರ್ಥ ಸೇವಿಸುವುದು ಕಡಿಮೆ ಮಾಡಬೇಕು” ಎಂದು ತಿಳಿಸಿದರು.

ಪುನೀತ್‌ ನಿಧನ: ಜನರಲ್ಲಿ ಭೀತಿ ಹುಟ್ಟಿಸಿ ದುಡ್ಡು ಕೀಳಲು ಯತ್ನ

ಪುನೀತ್ ರಾಜ್‌ಕುಮಾರ್‌ ಅವರು ಹೃದಯಾಘಾತದಿಂದ ನಿಧನರಾಗಿರುವುದನ್ನೇ ಬಂಡವಾಳ ಮಾಡಿಕೊಳ್ಳಲು ಖಾಸಗಿ ಆಸ್ಪತ್ರೆಗಳು ಹೊರಟಿವೆ ಎಂಬ ಟೀಕೆಗಳು ವ್ಯಕ್ತವಾಗುತ್ತಿವೆ.

ಕ್ರೆಡೆನ್‌ ಡಯಗ್ನಾಟಿಕ್ಸ್‌ ಎಂಬ ಸಂಸ್ಥೆಯ ಹೆಸರಿನ ಬ್ಯಾನರ್‌ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಪುನೀತ್ ರಾಜ್‌ಕುಮಾರ್‌ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿರುವ ಸದರಿ ಸಂಸ್ಥೆಯು, “ಇಸಿಜಿ, ಆರ್‌ಬಿಎಸ್‌, ಕ್ರಿಟಿನೈನ್‌‌, ಬಿಪಿ, ಕೊಲಸ್ಟ್ರಾಲ್‌ ಪರೀಕ್ಷೆ ಮಾಡಿಸಿಕೊಳ್ಳಿ. ಆಫರ್‌ ಫ್ರೈಸ್‌ 300 ರೂ.” ಹೇಳಿದೆ. ಅಕ್ಟೋಬರ್‌ 31ರಂದು ತಪಾಸಣೆ ಶಿಬಿರವನ್ನು ಕೈಗೊಂಡಿರುವುದಾಗಿ ತಿಳಿಸಿರುವ ಈ ಬ್ಯಾನರ್‌‌ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.

ಬರಹಗಾರ ಧನಂಜಯ್ ಎನ್. ಅವರು ಫೇಸ್‌ಬುಕ್‌ ಪೋಸ್ಟ್ ಹಾಕಿ ಕಟುವಾಗಿ ಟೀಕಿಸಿದ್ದಾರೆ.

ಹೃದಯ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಹೇಳಿದ್ದು ತಪ್ಪಲ್ಲ, ಆದರೆ ನಮ್ಮತ್ರ ಚೆಕ್ ಮಾಡಿಸಿಕೊಳ್ಳಿ ಅಂತ ಆಫರ್ ಇಟ್ಟು ಬಂಡವಾಳ ಮಾಡಿಕೊಳ್ಳುತ್ತಿರುವುದು ದೊಡ್ಡ ತಪ್ಪು” ಎಂದು ಶಿವರಾಜ್‌ ಮೋತಿ ಅಭಿಪ್ರಾಯಟ್ಟಿದ್ದಾರೆ.


ಇದನ್ನೂ ಓದಿರಿ: ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...