Homeಕರ್ನಾಟಕಮತಾಂತರ ನಿಷೇಧ ಕಾಯ್ದೆ ಬಗ್ಗೆ ಆತಂಕ ಬೇಡ: ಸಿಎಂ ಹೇಳಿಕೆ

ಮತಾಂತರ ನಿಷೇಧ ಕಾಯ್ದೆ ಬಗ್ಗೆ ಆತಂಕ ಬೇಡ: ಸಿಎಂ ಹೇಳಿಕೆ

- Advertisement -
- Advertisement -

ಮತಾಂತರ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಹುಬ್ಭಳ್ಳಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹಿಂದು, ಕ್ರಿಶ್ಚಿಯನ್, ಇಸ್ಲಾಂ ಹಾಗೂ ಸಿಖ್ ಧರ್ಮಗಳು ಸಂವಿಧಾನದಲ್ಲಿ ಗುರುತಿಸಲಾಗಿರುವ ಧರ್ಮಗಳಾಗಿದ್ದು, ಅವರ ಪ್ರಾರ್ಥನೆ, ಆಚರಣೆಗಳಿಗೆ ಯಾವುದೇ ತೊಂದರೆ ಇಲ್ಲ. ಬಡತನದ ದುರುಪಯೋಗ ಪಡೆದು, ಆಸೆ, ಆಮಿಷಗಳನ್ನು ಒಡ್ಡಿ ಮತಾಂತರ ಮಾಡುವುದಕ್ಕೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.

ಮತಾಂತರದ ವಿಷಯ ಇಂದಿನದಲ್ಲ. ಈ ಬಗ್ಗೆ ಸ್ವತಂತ್ರದ ನಂತರದಲ್ಲಿ ಬಹಳ ದೊಡ್ಡ ಚರ್ಚೆಯಾಗಿದೆ. ವಿವಿಧ ರಾಜ್ಯಗಳಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಇವುಗಳನ್ನು ಅವಲೋಕಿಸಿ, ಕಾನೂನು ಜಾರಿಗೆ ತರಬೇಕೆನ್ನುವುದು ಕರ್ನಾಟಕದ ಬಹುತೇಕ ಜನರ ಅಪೇಕ್ಷೆಯೂ ಆಗಿದೆ. ಈ ಹಿನ್ನೆಲೆಯಲ್ಲಿ ಕಾನೂನು ಇಲಾಖೆ ಪರಿಶೀಲನೆ ಮಾಡುತ್ತಿದೆ. ಪರಿಶೀಲನೆಯ ನಂತರ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡನೆಯಾಗಲಿದೆ. ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಬಹುತೇಕವಾಗಿ ಕಾನೂನು ಇಲಾಖೆ ಕರಡು ಕಾಯ್ದೆಗೆ ಒಪ್ಪಿಗೆ ನೀಡಿದಲ್ಲಿ ಅಧಿವೇಶನದಲ್ಲಿ ವಿಷಯ ಚರ್ಚೆಗೆ ಬರಲಿದೆ ಎಂದು ಮಾಹಿತಿ ನೀಡಿದರು.

ಮತಾಂತರ ಒಳ್ಳೆಯದಲ್ಲ. ಮತಾಂತರ ಸಮಾಜಕ್ಕೆ ಒಳ್ಳೆಯದಲ್ಲ. ಬಡವರು, ದೀನದಲಿತರು ಅದಕ್ಕೆ ಒಳಗಾಗಬಾರದು. ಅವರ ಮನೆತನ, ಕುಟುಂಬದಲ್ಲಿ ಬಹಳಷ್ಟು ತೊಂದರೆಯಾಗುವುದರಿಂದ ಮತಾಂತರ ನಿಷೇಧ ಕಾಯ್ದೆಯನ್ನು ತರುವ ಪ್ರಯತ್ನವನ್ನು ನಮ್ಮ ಸರ್ಕಾರ ಮಾಡಲಿದೆ ಎಂದು ತಿಳಿಸಿದರು.

ಬೆಳಗಾವಿ ಅಧಿವೇಶನದಲ್ಲಿ ಅರ್ಥಪೂರ್ಣ ಚರ್ಚೆ

ಬೆಳಗಾವಿಯಲ್ಲಿ 2 ವರ್ಷಗಳ ನಂತರ ಅಧಿವೇಶನ ನಡೆಯಲಿದ್ದು, ಇದಕ್ಕಾಗಿ ಸರ್ಕಾರ ಸಂಪೂರ್ಣ ಸಿದ್ಧತೆಗಳನ್ನು ಕೈಗೊಂಡಿದೆ. ಅಧಿವೇಶನದಲ್ಲಿ ಅಭಿವೃದ್ಧಿಯ ಪರವಾದ ಹಾಗೂ ಜನರಿಗೆ ಉಪಯುಕ್ತವಾಗುವ ಚರ್ಚೆಯಾಗಬೇಕೆಂದು ಬಯಸುತ್ತೇನೆ ಎಂದು ಬೊಮ್ಮಾಯಿ ತಿಳಿಸಿದರು.

ಮಹತ್ವದ ಹಾಗೂ ಅರ್ಥಪೂರ್ಣ ಚರ್ಚೆಗಳಾಗಬೇಕೆನ್ನುವುದು ಉತ್ತರ ಕರ್ನಾಟಕ ಭಾಗದ ಜನರ ಅಪೇಕ್ಷೆಯೂ ಹೌದು. ಸರ್ಕಾರವು ಸಮಗ್ರ ಕರ್ನಾಟಕ ಅದರಲ್ಲಿಯೂ ವಿಶೇಷವಾಗಿ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ದಿಗೆ ಸಂಬಂಧಿಸಿದ ಚರ್ಚೆಗಳನ್ನು ಸ್ವಾಗತಿಸುತ್ತೇವೆ. ಕೆಲವು ವಿಚಾರಗಳಲ್ಲಿ ನಿರ್ಧಾರಕ್ಕೆ ಬರಬೇಕೆನ್ನುವ ಉದ್ದೇಶವಿದೆ ಎಂದರು.

ಮತಾಂತರ ನಿಷೇಧದ ಸುತ್ತ

ಮತಾಂತರ ನಿಷೇಧ ಕಾಯ್ದೆಯ ಚರ್ಚೆ ಮುನ್ನಲೆಗೆ ಬಂದ ಬಳಿಕ ಮತೀಯ ಶಕ್ತಿಗಳು ಗಲಭೆ ಸೃಷ್ಟಿಸಲು ಯತ್ನಿಸಿವೆ. ಹಿಂದೂಗಳನ್ನು ಮತಾಂತರ ಮಾಡಲು ಯತ್ನಿಸಲಾಗುತ್ತಿದೆ ಎಂದು ಆರೋಪಿಸಿ ಹಾಸನ ಜಿಲ್ಲೆಯ ಬೇಲೂರಿನಲ್ಲಿ ಕ್ರಿಶ್ಚಿಯನ್ನರ ಪ್ರಾರ್ಥನಾ ಮಂದಿರದ ಮೇಲೆ ದಾಳಿ ಮಾಡಿದ ಘಟನೆ ಇತ್ತೀಚೆಗೆ ನಡೆದಿತ್ತು. ಮತಾಂತರ ಮಾಡಲು ಯತ್ನಿಸಲಾಗಿದೆ ಎಂಬ ಆರೋಪವನ್ನು ಪ್ರಾರ್ಥನೆಯಲ್ಲಿ ತೊಡಗಿದ್ದ ಮಹಿಳೆಯರು ಅಲ್ಲಗಳೆದಿದ್ದರು. ಜೊತೆಗೆ ದಾಳಿ ನಡೆಸಿದವರಿಗೆ ಛೀ ಮಾರಿ ಹಾಕಿದ್ದರು. ಪ್ರಕರಣವೂ ದಾಖಲಾಗಿದೆ.

ಧಾರ್ಮಿಕತೆಯ ಆಯ್ಕೆಯು ವ್ಯಕ್ತಿಯ ವೈಯಕ್ತಿನ ನಿಲುವು. ಅದರಲ್ಲಿ ರಾಜಕೀಯ ಪ್ರೇರಿತ ಮತೀಯ ಶಕ್ತಿಗಳು ರಾಜಕಾರಣ ಮಾಡಲು ಹೊರಟಿವೆ ಎಂಬ ಆರೋಪಗಳು ಕೇಳಿಬಂದಿವೆ. ಮತಾಂತರ ನಿಷೇಧದ ಹೆಸರಲ್ಲಿ ಮತೀಯ ಸಂಘಟನೆಗಳು ಗಲಭೆಗಳನ್ನು ಸೃಷ್ಟಿಸುವ ಆತಂಕ ಪ್ರಜ್ಞಾವಂತರಲ್ಲಿ ಮನೆ ಮಾಡಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕತೆಯ ಹೆಸರಲ್ಲಿ ನಡೆಯುತ್ತಿರುವ ಮತೀಯ ಗೂಂಡಾಗಿರಿ ಪ್ರಕರಣಗಳು ಜನರನ್ನು ಆತಂಕಕ್ಕೆ ತಳ್ಳಿವೆ.


ಇದನ್ನೂ ಓದಿರಿ: ಬೇಲೂರು: ಚರ್ಚ್‌ ಮೇಲೆ ದಾಳಿ ಮಾಡಿದವರ ಬಂಧನ ಇನ್ನೂ ಆಗಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...