Homeಕರೋನಾ ತಲ್ಲಣರಾಜ್ಯದಲ್ಲಿ ಲಾಕ್‌ಡೌನ್, ನೈಟ್ ಕರ್ಫ್ಯೂ ಹೇರುವುದಿಲ್ಲ- ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ಲಾಕ್‌ಡೌನ್, ನೈಟ್ ಕರ್ಫ್ಯೂ ಹೇರುವುದಿಲ್ಲ- ಸಿಎಂ ಯಡಿಯೂರಪ್ಪ

ಹೊರಾಂಗಣ ಕಾರ್ಯಕ್ರಮಗಳಿಗೆ ಹೆಚ್ಚಿನ ನಿರ್ಬಂಧಗಳಿಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ

- Advertisement -
- Advertisement -

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್, ನೈಟ್ ಕರ್ಫ್ಯೂ ಹೇರಲಾಗುತ್ತದೆ ಎಂಬ ವದಂತಿಗೆ ಮುಖ್ಯಮಂತ್ರಿ ಯಡಿಯೂರಪ್ಪ ತೆರೆ ಎಳೆದಿದ್ದು, ಲಾಕ್‌ಡೌನ್ ಅಥವಾ ನೈಟ್ ಕರ್ಫ್ಯೂ ಹೇರುವ ಯಾವುದೇ ಉದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕ ಸೇರಿದಂತೆ ದೇಶದ ಕೆಲ ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳು ಏರುತ್ತಿರುವ ಹಿನ್ನೆಲೆ, ಬುಧವಾರ ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದದರು. ಸಭೆಯಲ್ಲಿ ರಾಜ್ಯಗಳಲ್ಲಿ ಕೊರೊನಾ ಪರಿಸ್ಥಿತಿ ಹಾಗೂ ಕೊರೊನಾ ಎರಡನೇ ಅಲೆ ತಡೆಯಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ.

ಸಭೆ ಬಳಿಕ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಯಡಿಯೂರಪ್ಪ, ಲಾಕ್‌ಡೌನ್ ಅಥವಾ ನೈಟ್ ಕರ್ಫ್ಯೂ ಹೇರುವ ಪ್ರಶ್ನೆಯೇ ಇಲ್ಲ ಎಂಬುವುದನ್ನು ಸ್ಪಷ್ಟ ಪಡಿಸಿದ್ದಾರೆ. ಈಗಿರುವ ಪರಿಸ್ಥಿತಿಯೇ ಮುಂದುವರಿಯಲಿದೆ. ಜನ ಮಾಸ್ಕ್ ಹಾಕುವುದನ್ನು ಮರೆತಿದ್ದಾರೆ. ಮಾಸ್ಕ್ ಕಡ್ಡಾಯವಾಗಿ ಧರಿಸದಿದ್ದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಲಾಕ್‌ಡೌನ್‌ ಬೇಡವೆಂದರೆ ಸರ್ಕಾರದೊಂದಿಗೆ ಕೊರೊನಾ ನಿಯಂತ್ರಿಸಲು ಸಹಕರಿಸಿ: ಯಡಿಯೂರಪ್ಪ

ಕೊರೊನಾ ನಿಯಂತ್ರಣಕ್ಕಾಗಿ ಮದುವೆ ಸಮಾರಂಭ, ಬರ್ತ್ ಡೇ ಪಾರ್ಟಿ, ಸಿನಿಮಾ ಹಾಲ್ ಸೇರಿದಂತೆ ಎಲ್ಲ ರೀತಿಯ ಒಳಾಂಗಣ ಚಟುವಟಿಕೆಗಳಿಗೆ ಕಠಿಣ ಮಾರ್ಗಸೂಚಿ ರಚಿಸಲಾಗುತ್ತದೆ. ಈಗಿರುವ ಕೊರೊನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಸಾರ್ವಜನಿಕ ಸಭೆ ಸಮಾರಂಭಗಳು ನಡೆಯುವ ಹೊರಾಂಗಣ ಕಾರ್ಯಕ್ರಮಗಳಿಗೆ ಹೆಚ್ಚಿನ ನಿರ್ಬಂಧಗಳಿಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಪ್ರಕರಣಗಳ ಸಂಖ್ಯೆ ಹೆಚ್ಚಿರುವ ಜಿಲ್ಲೆಗಳಲ್ಲಿ ಕೊರೊನಾ ಪರೀಕ್ಷೆ ಹೆಚ್ಚು ಮಾಡುತ್ತಿದ್ದು, ಜನ ಸೇರುವ ಕಡೆ ಮುನ್ನೆಚ್ಚರಿಕೆಗೆ ಸೂಚನೆ ನೀಡುತ್ತೇವೆ. ಜೊತೆಗೆ ಬೆಂಗಳೂರಿನಲ್ಲಿ 3 ಕೋವಿಡ್ ಕೇರ್ ಸೆಂಟರ್‌ಗಳನ್ನು ತೆರೆಯಲು ನಿರ್ಧಾರ ಮಾಡಿರುವುದಾಗಿ ತಿಳಿಸಿದ್ದಾರೆ.

ಬೆಂಗಳೂರು, ಬೀದರ್ ಹಾಗೂ ಕಲಬುರಗಿ ಈ ಮೂರು ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಿಸುವಲ್ಲಿ ಹೆಚ್ಚಿನ ನಿಗಾ ವಹಿಸುವಂತೆಯೂ ಕೇಂದ್ರ ತಿಳಿಸಿದೆ. ಎರಡಕ್ಕಿಂತ ಹೆಚ್ಚು ಕೊರೊನಾ ಪ್ರಕರಣಗಳು ಕಂಡು ಬಂದ ಪ್ರದೇಶವನ್ನು ಮೈಕ್ರೋ ಕಂಟೈನ್ಮೆಂಟ್ ಜೋನ್ ಆಗಿ ಘೋಷಿಸಲು ಯೋಜಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಸುದ್ದಿಗಾರರಿಗೆ ತಿಳಿಸಿದ್ದಾರೆ.


ಇದನ್ನೂ ಓದಿ: ಕೃಷಿ ಕಾಯ್ದೆಗಳಿಗೆ ವಿರೋಧ: ಬಸವಕಲ್ಯಾಣದಿಂದ ಬಳ್ಳಾರಿವರೆಗೆ ಸಾಗುತ್ತಿರುವ 400 ಕಿ.ಮೀ ರೈತ ಪಾದಯಾತ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....