Homeಕರ್ನಾಟಕFCI ನಿಂದ ಅಕ್ಕಿ ಕೊಳ್ಳುವವರಿಲ್ಲ: ಅಕ್ಕಿ ವ್ಯರ್ಥವಾದರೂ ಸರಿ ಜನರ ಹಸಿವು ನೀಗಿಸಬಾರದು ಎನ್ನುವ ಧೋರಣೆ...

FCI ನಿಂದ ಅಕ್ಕಿ ಕೊಳ್ಳುವವರಿಲ್ಲ: ಅಕ್ಕಿ ವ್ಯರ್ಥವಾದರೂ ಸರಿ ಜನರ ಹಸಿವು ನೀಗಿಸಬಾರದು ಎನ್ನುವ ಧೋರಣೆ ಬಿಜೆಪಿಯದ್ದು – ಕಾಂಗ್ರೆಸ್ ಟೀಕೆ

- Advertisement -
- Advertisement -

FCI ನಿಂದ ಅಕ್ಕಿ ಕೊಳ್ಳುವವರಿಲ್ಲ, ಅಕ್ಕಿ ವ್ಯರ್ಥವಾದರೂ ಸರಿ ಜನರ ಹಸಿವು ನೀಗಿಸಬಾರದು ಎನ್ನುವ ಧೋರಣೆ ಬಿಜೆಪಿಯದ್ದು ಎಂದು ಕಾಂಗ್ರೆಸ್ ಟೀಕಿಸಿದೆ.

ಕರ್ನಾಟಕ ಸೇರಿದಂತೆ ರಾಜ್ಯಗಳಿಗೆ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿಯಲ್ಲಿ ಅಕ್ಕಿ ಕೊಳ್ಳಲು ಅವಕಾಶ ನಿರಾಕರಿಸಿದ ನಂತರ FCI ಇ-ಹರಾಜಿನಲ್ಲಿ ಅಕ್ಕಿ ಕೊಳ್ಳುವವರಿಲ್ಲದ ಪತ್ರಿಕಾ ವರದಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಪಕ್ಷ ‘ಬಿಜೆಪಿಯ ರಾಜಕೀಯ ದುರುದ್ದೇಶವು ಜನತೆಯನ್ನು ಬಲಿಪಶು ಮಾಡುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಕರ್ನಾಟಕಕ್ಕೆ ಅಕ್ಕಿ ಪೂರೈಸಲು ನಿರಾಕರಿಸಿದ ಕೇಂದ್ರ ಆಹಾರ ನಿಗಮದ ಹರಾಜು ಪ್ರಕ್ರಿಯೆಯಲ್ಲಿ ಅಕ್ಕಿ ಖರೀದಿಗೆ ಖಾಸಗಿ ಕಂಪೆನಿಗಳು ಆಸಕ್ತಿಯೇ ತೋರುತ್ತಿಲ್ಲ. ನಮ್ಮ ಸರ್ಕಾರ 34 ರೂಪಾಯಿಗಳ ಖರೀದಿ ದರಕ್ಕೆ ಕೇಳಿದರೂ ನಿರಾಕರಿಸಿದ ಕೇಂದ್ರ ಸರ್ಕಾರ ಖಾಸಗಿಯವರಿಗೆ 31 ರೂಪಾಯಿಗಳಿಗೆ ನೀಡಲು ಸಿದ್ಧವಾದರೂ ಖರೀದಿದಾರರು ಮುಂದೆ ಬರುತ್ತಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

“ಪಡಿತರ ವಿತರಣಾ ಯೋಜನೆಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್, ಆಹಾರ ಭದ್ರತಾ ಕಾಯ್ದೆ ಜಾರಿಗೆ ತಂದಿದ್ದು ಕಾಂಗ್ರೆಸ್, ಅನ್ನಭಾಗ್ಯ ಜಾರಿಗೆ ತಂದಿದ್ದು ಕಾಂಗ್ರೆಸ್, ರಾಜ್ಯದಲ್ಲಿ ಅನ್ನಭಾಗ್ಯ ಜಾರಿಗೆ ಬರುವಾಗ ಕೇಂದ್ರದಲ್ಲಿದ್ದಿದ್ದು ಕಾಂಗ್ರೆಸ್‌. ಆದರೆ, ಬಿಜೆಪಿ ನಾಯಕರು “ಮೋದಿ ಅಕ್ಕಿ“ ಎಂದು ಬೊಬ್ಬೆ ಹೊಡೆಯುತ್ತಿರುವುದು ನೋಡಿದರೆ ಮೋದಿಯೇ ತಮ್ಮ ಜಮೀನಿನಲ್ಲಿ ಉತ್ತಿ, ಬಿತ್ತಿ, ಬೆಳೆದು ಅಕ್ಕಿ ತಂದುಕೊಡುತ್ತಿರುವಂತೆ ಭಾಸವಾಗುತ್ತಿದೆ. ಗರೀಬ್ ಕಲ್ಯಾಣ್ ಯೋಜನೆ ಡಿಸೆಂಬರ್ ನಂತರ ಸ್ಥಗಿತಗೊಳ್ಳಲಿದೆ, ಆಗ ಯಾರ ಅಕ್ಕಿ ಎಂದು ಬೊಬ್ಬೆ ಹೊಡೆಯುತ್ತಾರೆ?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

“ಇ-ಹರಾಜು ಮೂಲಕ ಕೇಂದ್ರ ಖಾಸಗಿಯವರಿಗೆ ಅಕ್ಕಿ ಮಾರಾಟ ಮಾಡುತ್ತಿದೆ.‌ ನಾವು ಕೊಡಲು ಒಪ್ಪಿದ ಮೊತ್ತಕ್ಕಿಂತ ಕಡಿಮೆ‌ ಮೊತ್ತದಲ್ಲಿ ಅಕ್ಕಿ ಮಾರಾಟ ಮಾಡಲು ಹರಾಜು ಕರೆದಿದ್ದರೂ ಅಕ್ಕಿಯನ್ನು ಕೇಳುವವರೇ ಗತಿಯಿಲ್ಲ. ಇದರ ಬದಲು ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡಬಹುದಿತ್ತು. ಕನಿಷ್ಠ ಪಕ್ಷ ಇದರಿಂದ ರಾಜ್ಯದ ಬಡವರ ಹೊಟ್ಟೆಯಾದರೂ ತುಂಬುತಿತ್ತು” ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ಕೇಂದ್ರಕ್ಕೆ ಒಂದು ಕೆಜಿ ಅಕ್ಕಿಗೆ ₹34 ಕೊಡಲು ನಾವು ಒಪ್ಪಿದ್ದೆವು. ಆದರೆ, ನಮಗೆ ಅಕ್ಕಿ‌ ನಿರಾಕರಿಸಿದ ಕೇಂದ್ರ ಸರ್ಕಾರ ಎಫ್‌ಸಿಐ ಮೂಲಕ‌ ಕೆಜಿಗೆ ₹31.75ರ ಬೆಲೆ ನಿಗದಿ ಪಡಿಸಿ ಖಾಸಗಿಯವರಿಗೆ ಮಾರಲು ಇ-ಹರಾಜು ಕರೆದಿದೆ. ಇದು ರಾಜ್ಯ ಬಿಜೆಪಿ ನಾಯಕರ ದೃಷ್ಟಿಯಲ್ಲಿ ದ್ರೋಹ ಎನಿಸುವುದಿಲ್ಲವೇ? ಈ ಬಗ್ಗೆ ಮಾತಾಡಲು ರಾಜ್ಯ ಬಿಜೆಪಿ ನಾಯಕರಿಗೆ ಧಮ್ ಇಲ್ಲವೇ” ಎಂದು ಪ್ರಶ್ನಿಸಿದ್ದಾರೆ.

ರಾಜ್ಯಗಳಿಗೆ ಅಕ್ಕಿ ಮಾರಬಾರದೆಂದು ಆದೇಶಿಸಿದ್ದ ಕೇಂದ್ರ ಸರ್ಕಾರವು ಮಾರುಕಟ್ಟೆಯಲ್ಲಿ ಏರುತ್ತಿರುವ ಬೆಲೆಗಳನ್ನು ನಿಯಂತ್ರಿಸಲು ಅಕ್ಕಿ ಮತ್ತು ಗೋಧಿ ಧಾನ್ಯಗಳನ್ನು ಇ-ಹರಾಜು ಮಾಡಲು ಭಾರತೀಯ ಆಹಾರ ನಿಗಮಕ್ಕೆ (ಎಫ್‌ಸಿಐ) ಸೂಚಿಸಿತ್ತು. ಆದರೆ ಕಳೆದ ವಾರ ಎಫ್‌ಸಿಐ 3.86 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಹರಾಜಿಗಿಟ್ಟರೂ ಸಹ ಕೇವಲ 170 ಮೆಟ್ರಿಕ್ ಟನ್‌ಗಳಿಗೆ ಬಿಡ್‌ಗಳನ್ನು ಸ್ವೀಕರಿಸಿದೆ. ಅಂದರೆ ಹೆಚ್ಚಿನ ಖರೀದಿದಾರರು ಮುಂದಾಗಿಲ್ಲ ಎಂಬುದು ಸ್ಪಷ್ಟವಾಗಿದೆ. ರಾಜ್ಯ ಸರ್ಕಾರಗಳು ಈ ಬಿಡ್‌ನಲ್ಲಿ ಭಾಗವಹಿಸುವಂತಿಲ್ಲ ಮತ್ತು ಖಾಸಗಿ ಉದ್ದಿಮೆದಾರರು ಮಾತ್ರ ಭಾಗವಹಿಸಬಹುದಾಗಿದ್ದರಿಂದ ಎಫ್‌ಸಿಐಗೆ ಈ ಸಂಕಷ್ಟ ಎದುರಾಗಿದೆ.

ಒಂದು ತಿಂಗಳ ಹಿಂದೆಯಷ್ಟೆ ಕರ್ನಾಟಕ ಸರ್ಕಾರವು ಅನ್ನ ಭಾಗ್ಯ ಯೋಜನೆಯಡಿ ಎಲ್ಲಾ ಬಿಪಿಎಲ್ ಕುಟುಂಬಗಳಿಗೆ ತಿಂಗಳಿಗೆ ಪ್ರತಿ ವ್ಯಕ್ತಿಗೆ 10 ಕೆಜಿ ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡಲು ಎಫ್‌ಸಿಐನಿಂದ 2.28 ಲಕ್ಷ ಮೆಟ್ರಿಕ್ ಟನ್‌ಗಳನ್ನು ಕೋರಿತ್ತು. ಜೂನ್ 12 ರಂದು ಎರಡು ಪತ್ರಗಳಲ್ಲಿ ಎಫ್‌ಸಿಐ ಸುಮಾರು 2.22 ಲಕ್ಷ ಮೆಟ್ರಿಕ್ ಟನ್ ಪೂರೈಸಲು ಒಪ್ಪಿಕೊಂಡಿತ್ತು. ಆದರೆ ಒಂದು ದಿನದ ನಂತರ, ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯವು ರಾಜ್ಯ ಸರ್ಕಾರಗಳಿಗೆ ಧಾನ್ಯಗಳನ್ನು ಮಾರಾಟ ಮಾಡುವುದರ ವಿರುದ್ಧ FCI ಗೆ ನಿರ್ದೇಶನ ನೀಡಿತು. ಜೂನ್ 14 ರಂದು, ಎಫ್‌ಸಿಐ ಕರ್ನಾಟಕಕ್ಕೆ ಅಕ್ಕಿ ಹಂಚಿಕೆ ಆದೇಶವನ್ನು ರದ್ದುಗೊಳಿಸಿತು.

ಅಲ್ಲದೇ ಕೇಂದ್ರ ಸರ್ಕಾರದ ಸೂಚನೆಗೆ ಅನುಗುಣವಾಗಿ FCI ಇ-ಹರಾಜಿನಲ್ಲಿ ಅಕ್ಕಿ ಮಾರಲು ನಿರ್ಧರಿಸಿತ್ತು. ಆದರೆ 3 ಲಕ್ಷದ 86 ಸಾವಿರ ಟನ್ ಅಕ್ಕಿ ಇದ್ದರೆ ಕೇವಲ 170 ಟನ್‌ಗೆ ಮಾತ್ರ ಬಿಡ್ ಸಲ್ಲಿಸಲಾಗಿದೆ. ಹಾಗಾಗಿ ಈ ಸಮಸ್ಯೆಗೆ ಪರಿಹಾರವೆಂದರೆ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿಯಲ್ಲಿ ಅಕ್ಕಿ ಕೊಳ್ಳದಂತೆ ತಂದಿರುವ ಆದೇಶವನ್ನು ವಾಪಸ್ ಪಡೆದು ಅವಕಾಶ ನೀಡಬೇಕಿದೆ.

ಇದನ್ನೂ ಓದಿ; ‘ಅನ್ನಭಾಗ್ಯ’ ಯೋಜನೆಗೆ 10ವರ್ಷ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...