Homeಕರ್ನಾಟಕFCI ನಿಂದ ಅಕ್ಕಿ ಕೊಳ್ಳುವವರಿಲ್ಲ: ಅಕ್ಕಿ ವ್ಯರ್ಥವಾದರೂ ಸರಿ ಜನರ ಹಸಿವು ನೀಗಿಸಬಾರದು ಎನ್ನುವ ಧೋರಣೆ...

FCI ನಿಂದ ಅಕ್ಕಿ ಕೊಳ್ಳುವವರಿಲ್ಲ: ಅಕ್ಕಿ ವ್ಯರ್ಥವಾದರೂ ಸರಿ ಜನರ ಹಸಿವು ನೀಗಿಸಬಾರದು ಎನ್ನುವ ಧೋರಣೆ ಬಿಜೆಪಿಯದ್ದು – ಕಾಂಗ್ರೆಸ್ ಟೀಕೆ

- Advertisement -
- Advertisement -

FCI ನಿಂದ ಅಕ್ಕಿ ಕೊಳ್ಳುವವರಿಲ್ಲ, ಅಕ್ಕಿ ವ್ಯರ್ಥವಾದರೂ ಸರಿ ಜನರ ಹಸಿವು ನೀಗಿಸಬಾರದು ಎನ್ನುವ ಧೋರಣೆ ಬಿಜೆಪಿಯದ್ದು ಎಂದು ಕಾಂಗ್ರೆಸ್ ಟೀಕಿಸಿದೆ.

ಕರ್ನಾಟಕ ಸೇರಿದಂತೆ ರಾಜ್ಯಗಳಿಗೆ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿಯಲ್ಲಿ ಅಕ್ಕಿ ಕೊಳ್ಳಲು ಅವಕಾಶ ನಿರಾಕರಿಸಿದ ನಂತರ FCI ಇ-ಹರಾಜಿನಲ್ಲಿ ಅಕ್ಕಿ ಕೊಳ್ಳುವವರಿಲ್ಲದ ಪತ್ರಿಕಾ ವರದಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಪಕ್ಷ ‘ಬಿಜೆಪಿಯ ರಾಜಕೀಯ ದುರುದ್ದೇಶವು ಜನತೆಯನ್ನು ಬಲಿಪಶು ಮಾಡುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಕರ್ನಾಟಕಕ್ಕೆ ಅಕ್ಕಿ ಪೂರೈಸಲು ನಿರಾಕರಿಸಿದ ಕೇಂದ್ರ ಆಹಾರ ನಿಗಮದ ಹರಾಜು ಪ್ರಕ್ರಿಯೆಯಲ್ಲಿ ಅಕ್ಕಿ ಖರೀದಿಗೆ ಖಾಸಗಿ ಕಂಪೆನಿಗಳು ಆಸಕ್ತಿಯೇ ತೋರುತ್ತಿಲ್ಲ. ನಮ್ಮ ಸರ್ಕಾರ 34 ರೂಪಾಯಿಗಳ ಖರೀದಿ ದರಕ್ಕೆ ಕೇಳಿದರೂ ನಿರಾಕರಿಸಿದ ಕೇಂದ್ರ ಸರ್ಕಾರ ಖಾಸಗಿಯವರಿಗೆ 31 ರೂಪಾಯಿಗಳಿಗೆ ನೀಡಲು ಸಿದ್ಧವಾದರೂ ಖರೀದಿದಾರರು ಮುಂದೆ ಬರುತ್ತಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

“ಪಡಿತರ ವಿತರಣಾ ಯೋಜನೆಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್, ಆಹಾರ ಭದ್ರತಾ ಕಾಯ್ದೆ ಜಾರಿಗೆ ತಂದಿದ್ದು ಕಾಂಗ್ರೆಸ್, ಅನ್ನಭಾಗ್ಯ ಜಾರಿಗೆ ತಂದಿದ್ದು ಕಾಂಗ್ರೆಸ್, ರಾಜ್ಯದಲ್ಲಿ ಅನ್ನಭಾಗ್ಯ ಜಾರಿಗೆ ಬರುವಾಗ ಕೇಂದ್ರದಲ್ಲಿದ್ದಿದ್ದು ಕಾಂಗ್ರೆಸ್‌. ಆದರೆ, ಬಿಜೆಪಿ ನಾಯಕರು “ಮೋದಿ ಅಕ್ಕಿ“ ಎಂದು ಬೊಬ್ಬೆ ಹೊಡೆಯುತ್ತಿರುವುದು ನೋಡಿದರೆ ಮೋದಿಯೇ ತಮ್ಮ ಜಮೀನಿನಲ್ಲಿ ಉತ್ತಿ, ಬಿತ್ತಿ, ಬೆಳೆದು ಅಕ್ಕಿ ತಂದುಕೊಡುತ್ತಿರುವಂತೆ ಭಾಸವಾಗುತ್ತಿದೆ. ಗರೀಬ್ ಕಲ್ಯಾಣ್ ಯೋಜನೆ ಡಿಸೆಂಬರ್ ನಂತರ ಸ್ಥಗಿತಗೊಳ್ಳಲಿದೆ, ಆಗ ಯಾರ ಅಕ್ಕಿ ಎಂದು ಬೊಬ್ಬೆ ಹೊಡೆಯುತ್ತಾರೆ?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

“ಇ-ಹರಾಜು ಮೂಲಕ ಕೇಂದ್ರ ಖಾಸಗಿಯವರಿಗೆ ಅಕ್ಕಿ ಮಾರಾಟ ಮಾಡುತ್ತಿದೆ.‌ ನಾವು ಕೊಡಲು ಒಪ್ಪಿದ ಮೊತ್ತಕ್ಕಿಂತ ಕಡಿಮೆ‌ ಮೊತ್ತದಲ್ಲಿ ಅಕ್ಕಿ ಮಾರಾಟ ಮಾಡಲು ಹರಾಜು ಕರೆದಿದ್ದರೂ ಅಕ್ಕಿಯನ್ನು ಕೇಳುವವರೇ ಗತಿಯಿಲ್ಲ. ಇದರ ಬದಲು ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡಬಹುದಿತ್ತು. ಕನಿಷ್ಠ ಪಕ್ಷ ಇದರಿಂದ ರಾಜ್ಯದ ಬಡವರ ಹೊಟ್ಟೆಯಾದರೂ ತುಂಬುತಿತ್ತು” ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ಕೇಂದ್ರಕ್ಕೆ ಒಂದು ಕೆಜಿ ಅಕ್ಕಿಗೆ ₹34 ಕೊಡಲು ನಾವು ಒಪ್ಪಿದ್ದೆವು. ಆದರೆ, ನಮಗೆ ಅಕ್ಕಿ‌ ನಿರಾಕರಿಸಿದ ಕೇಂದ್ರ ಸರ್ಕಾರ ಎಫ್‌ಸಿಐ ಮೂಲಕ‌ ಕೆಜಿಗೆ ₹31.75ರ ಬೆಲೆ ನಿಗದಿ ಪಡಿಸಿ ಖಾಸಗಿಯವರಿಗೆ ಮಾರಲು ಇ-ಹರಾಜು ಕರೆದಿದೆ. ಇದು ರಾಜ್ಯ ಬಿಜೆಪಿ ನಾಯಕರ ದೃಷ್ಟಿಯಲ್ಲಿ ದ್ರೋಹ ಎನಿಸುವುದಿಲ್ಲವೇ? ಈ ಬಗ್ಗೆ ಮಾತಾಡಲು ರಾಜ್ಯ ಬಿಜೆಪಿ ನಾಯಕರಿಗೆ ಧಮ್ ಇಲ್ಲವೇ” ಎಂದು ಪ್ರಶ್ನಿಸಿದ್ದಾರೆ.

ರಾಜ್ಯಗಳಿಗೆ ಅಕ್ಕಿ ಮಾರಬಾರದೆಂದು ಆದೇಶಿಸಿದ್ದ ಕೇಂದ್ರ ಸರ್ಕಾರವು ಮಾರುಕಟ್ಟೆಯಲ್ಲಿ ಏರುತ್ತಿರುವ ಬೆಲೆಗಳನ್ನು ನಿಯಂತ್ರಿಸಲು ಅಕ್ಕಿ ಮತ್ತು ಗೋಧಿ ಧಾನ್ಯಗಳನ್ನು ಇ-ಹರಾಜು ಮಾಡಲು ಭಾರತೀಯ ಆಹಾರ ನಿಗಮಕ್ಕೆ (ಎಫ್‌ಸಿಐ) ಸೂಚಿಸಿತ್ತು. ಆದರೆ ಕಳೆದ ವಾರ ಎಫ್‌ಸಿಐ 3.86 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಹರಾಜಿಗಿಟ್ಟರೂ ಸಹ ಕೇವಲ 170 ಮೆಟ್ರಿಕ್ ಟನ್‌ಗಳಿಗೆ ಬಿಡ್‌ಗಳನ್ನು ಸ್ವೀಕರಿಸಿದೆ. ಅಂದರೆ ಹೆಚ್ಚಿನ ಖರೀದಿದಾರರು ಮುಂದಾಗಿಲ್ಲ ಎಂಬುದು ಸ್ಪಷ್ಟವಾಗಿದೆ. ರಾಜ್ಯ ಸರ್ಕಾರಗಳು ಈ ಬಿಡ್‌ನಲ್ಲಿ ಭಾಗವಹಿಸುವಂತಿಲ್ಲ ಮತ್ತು ಖಾಸಗಿ ಉದ್ದಿಮೆದಾರರು ಮಾತ್ರ ಭಾಗವಹಿಸಬಹುದಾಗಿದ್ದರಿಂದ ಎಫ್‌ಸಿಐಗೆ ಈ ಸಂಕಷ್ಟ ಎದುರಾಗಿದೆ.

ಒಂದು ತಿಂಗಳ ಹಿಂದೆಯಷ್ಟೆ ಕರ್ನಾಟಕ ಸರ್ಕಾರವು ಅನ್ನ ಭಾಗ್ಯ ಯೋಜನೆಯಡಿ ಎಲ್ಲಾ ಬಿಪಿಎಲ್ ಕುಟುಂಬಗಳಿಗೆ ತಿಂಗಳಿಗೆ ಪ್ರತಿ ವ್ಯಕ್ತಿಗೆ 10 ಕೆಜಿ ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡಲು ಎಫ್‌ಸಿಐನಿಂದ 2.28 ಲಕ್ಷ ಮೆಟ್ರಿಕ್ ಟನ್‌ಗಳನ್ನು ಕೋರಿತ್ತು. ಜೂನ್ 12 ರಂದು ಎರಡು ಪತ್ರಗಳಲ್ಲಿ ಎಫ್‌ಸಿಐ ಸುಮಾರು 2.22 ಲಕ್ಷ ಮೆಟ್ರಿಕ್ ಟನ್ ಪೂರೈಸಲು ಒಪ್ಪಿಕೊಂಡಿತ್ತು. ಆದರೆ ಒಂದು ದಿನದ ನಂತರ, ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯವು ರಾಜ್ಯ ಸರ್ಕಾರಗಳಿಗೆ ಧಾನ್ಯಗಳನ್ನು ಮಾರಾಟ ಮಾಡುವುದರ ವಿರುದ್ಧ FCI ಗೆ ನಿರ್ದೇಶನ ನೀಡಿತು. ಜೂನ್ 14 ರಂದು, ಎಫ್‌ಸಿಐ ಕರ್ನಾಟಕಕ್ಕೆ ಅಕ್ಕಿ ಹಂಚಿಕೆ ಆದೇಶವನ್ನು ರದ್ದುಗೊಳಿಸಿತು.

ಅಲ್ಲದೇ ಕೇಂದ್ರ ಸರ್ಕಾರದ ಸೂಚನೆಗೆ ಅನುಗುಣವಾಗಿ FCI ಇ-ಹರಾಜಿನಲ್ಲಿ ಅಕ್ಕಿ ಮಾರಲು ನಿರ್ಧರಿಸಿತ್ತು. ಆದರೆ 3 ಲಕ್ಷದ 86 ಸಾವಿರ ಟನ್ ಅಕ್ಕಿ ಇದ್ದರೆ ಕೇವಲ 170 ಟನ್‌ಗೆ ಮಾತ್ರ ಬಿಡ್ ಸಲ್ಲಿಸಲಾಗಿದೆ. ಹಾಗಾಗಿ ಈ ಸಮಸ್ಯೆಗೆ ಪರಿಹಾರವೆಂದರೆ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿಯಲ್ಲಿ ಅಕ್ಕಿ ಕೊಳ್ಳದಂತೆ ತಂದಿರುವ ಆದೇಶವನ್ನು ವಾಪಸ್ ಪಡೆದು ಅವಕಾಶ ನೀಡಬೇಕಿದೆ.

ಇದನ್ನೂ ಓದಿ; ‘ಅನ್ನಭಾಗ್ಯ’ ಯೋಜನೆಗೆ 10ವರ್ಷ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....