Homeಕರ್ನಾಟಕFCI ನಿಂದ ಅಕ್ಕಿ ಕೊಳ್ಳುವವರಿಲ್ಲ: ಅಕ್ಕಿ ವ್ಯರ್ಥವಾದರೂ ಸರಿ ಜನರ ಹಸಿವು ನೀಗಿಸಬಾರದು ಎನ್ನುವ ಧೋರಣೆ...

FCI ನಿಂದ ಅಕ್ಕಿ ಕೊಳ್ಳುವವರಿಲ್ಲ: ಅಕ್ಕಿ ವ್ಯರ್ಥವಾದರೂ ಸರಿ ಜನರ ಹಸಿವು ನೀಗಿಸಬಾರದು ಎನ್ನುವ ಧೋರಣೆ ಬಿಜೆಪಿಯದ್ದು – ಕಾಂಗ್ರೆಸ್ ಟೀಕೆ

- Advertisement -
- Advertisement -

FCI ನಿಂದ ಅಕ್ಕಿ ಕೊಳ್ಳುವವರಿಲ್ಲ, ಅಕ್ಕಿ ವ್ಯರ್ಥವಾದರೂ ಸರಿ ಜನರ ಹಸಿವು ನೀಗಿಸಬಾರದು ಎನ್ನುವ ಧೋರಣೆ ಬಿಜೆಪಿಯದ್ದು ಎಂದು ಕಾಂಗ್ರೆಸ್ ಟೀಕಿಸಿದೆ.

ಕರ್ನಾಟಕ ಸೇರಿದಂತೆ ರಾಜ್ಯಗಳಿಗೆ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿಯಲ್ಲಿ ಅಕ್ಕಿ ಕೊಳ್ಳಲು ಅವಕಾಶ ನಿರಾಕರಿಸಿದ ನಂತರ FCI ಇ-ಹರಾಜಿನಲ್ಲಿ ಅಕ್ಕಿ ಕೊಳ್ಳುವವರಿಲ್ಲದ ಪತ್ರಿಕಾ ವರದಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಪಕ್ಷ ‘ಬಿಜೆಪಿಯ ರಾಜಕೀಯ ದುರುದ್ದೇಶವು ಜನತೆಯನ್ನು ಬಲಿಪಶು ಮಾಡುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಕರ್ನಾಟಕಕ್ಕೆ ಅಕ್ಕಿ ಪೂರೈಸಲು ನಿರಾಕರಿಸಿದ ಕೇಂದ್ರ ಆಹಾರ ನಿಗಮದ ಹರಾಜು ಪ್ರಕ್ರಿಯೆಯಲ್ಲಿ ಅಕ್ಕಿ ಖರೀದಿಗೆ ಖಾಸಗಿ ಕಂಪೆನಿಗಳು ಆಸಕ್ತಿಯೇ ತೋರುತ್ತಿಲ್ಲ. ನಮ್ಮ ಸರ್ಕಾರ 34 ರೂಪಾಯಿಗಳ ಖರೀದಿ ದರಕ್ಕೆ ಕೇಳಿದರೂ ನಿರಾಕರಿಸಿದ ಕೇಂದ್ರ ಸರ್ಕಾರ ಖಾಸಗಿಯವರಿಗೆ 31 ರೂಪಾಯಿಗಳಿಗೆ ನೀಡಲು ಸಿದ್ಧವಾದರೂ ಖರೀದಿದಾರರು ಮುಂದೆ ಬರುತ್ತಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

“ಪಡಿತರ ವಿತರಣಾ ಯೋಜನೆಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್, ಆಹಾರ ಭದ್ರತಾ ಕಾಯ್ದೆ ಜಾರಿಗೆ ತಂದಿದ್ದು ಕಾಂಗ್ರೆಸ್, ಅನ್ನಭಾಗ್ಯ ಜಾರಿಗೆ ತಂದಿದ್ದು ಕಾಂಗ್ರೆಸ್, ರಾಜ್ಯದಲ್ಲಿ ಅನ್ನಭಾಗ್ಯ ಜಾರಿಗೆ ಬರುವಾಗ ಕೇಂದ್ರದಲ್ಲಿದ್ದಿದ್ದು ಕಾಂಗ್ರೆಸ್‌. ಆದರೆ, ಬಿಜೆಪಿ ನಾಯಕರು “ಮೋದಿ ಅಕ್ಕಿ“ ಎಂದು ಬೊಬ್ಬೆ ಹೊಡೆಯುತ್ತಿರುವುದು ನೋಡಿದರೆ ಮೋದಿಯೇ ತಮ್ಮ ಜಮೀನಿನಲ್ಲಿ ಉತ್ತಿ, ಬಿತ್ತಿ, ಬೆಳೆದು ಅಕ್ಕಿ ತಂದುಕೊಡುತ್ತಿರುವಂತೆ ಭಾಸವಾಗುತ್ತಿದೆ. ಗರೀಬ್ ಕಲ್ಯಾಣ್ ಯೋಜನೆ ಡಿಸೆಂಬರ್ ನಂತರ ಸ್ಥಗಿತಗೊಳ್ಳಲಿದೆ, ಆಗ ಯಾರ ಅಕ್ಕಿ ಎಂದು ಬೊಬ್ಬೆ ಹೊಡೆಯುತ್ತಾರೆ?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

“ಇ-ಹರಾಜು ಮೂಲಕ ಕೇಂದ್ರ ಖಾಸಗಿಯವರಿಗೆ ಅಕ್ಕಿ ಮಾರಾಟ ಮಾಡುತ್ತಿದೆ.‌ ನಾವು ಕೊಡಲು ಒಪ್ಪಿದ ಮೊತ್ತಕ್ಕಿಂತ ಕಡಿಮೆ‌ ಮೊತ್ತದಲ್ಲಿ ಅಕ್ಕಿ ಮಾರಾಟ ಮಾಡಲು ಹರಾಜು ಕರೆದಿದ್ದರೂ ಅಕ್ಕಿಯನ್ನು ಕೇಳುವವರೇ ಗತಿಯಿಲ್ಲ. ಇದರ ಬದಲು ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡಬಹುದಿತ್ತು. ಕನಿಷ್ಠ ಪಕ್ಷ ಇದರಿಂದ ರಾಜ್ಯದ ಬಡವರ ಹೊಟ್ಟೆಯಾದರೂ ತುಂಬುತಿತ್ತು” ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ಕೇಂದ್ರಕ್ಕೆ ಒಂದು ಕೆಜಿ ಅಕ್ಕಿಗೆ ₹34 ಕೊಡಲು ನಾವು ಒಪ್ಪಿದ್ದೆವು. ಆದರೆ, ನಮಗೆ ಅಕ್ಕಿ‌ ನಿರಾಕರಿಸಿದ ಕೇಂದ್ರ ಸರ್ಕಾರ ಎಫ್‌ಸಿಐ ಮೂಲಕ‌ ಕೆಜಿಗೆ ₹31.75ರ ಬೆಲೆ ನಿಗದಿ ಪಡಿಸಿ ಖಾಸಗಿಯವರಿಗೆ ಮಾರಲು ಇ-ಹರಾಜು ಕರೆದಿದೆ. ಇದು ರಾಜ್ಯ ಬಿಜೆಪಿ ನಾಯಕರ ದೃಷ್ಟಿಯಲ್ಲಿ ದ್ರೋಹ ಎನಿಸುವುದಿಲ್ಲವೇ? ಈ ಬಗ್ಗೆ ಮಾತಾಡಲು ರಾಜ್ಯ ಬಿಜೆಪಿ ನಾಯಕರಿಗೆ ಧಮ್ ಇಲ್ಲವೇ” ಎಂದು ಪ್ರಶ್ನಿಸಿದ್ದಾರೆ.

ರಾಜ್ಯಗಳಿಗೆ ಅಕ್ಕಿ ಮಾರಬಾರದೆಂದು ಆದೇಶಿಸಿದ್ದ ಕೇಂದ್ರ ಸರ್ಕಾರವು ಮಾರುಕಟ್ಟೆಯಲ್ಲಿ ಏರುತ್ತಿರುವ ಬೆಲೆಗಳನ್ನು ನಿಯಂತ್ರಿಸಲು ಅಕ್ಕಿ ಮತ್ತು ಗೋಧಿ ಧಾನ್ಯಗಳನ್ನು ಇ-ಹರಾಜು ಮಾಡಲು ಭಾರತೀಯ ಆಹಾರ ನಿಗಮಕ್ಕೆ (ಎಫ್‌ಸಿಐ) ಸೂಚಿಸಿತ್ತು. ಆದರೆ ಕಳೆದ ವಾರ ಎಫ್‌ಸಿಐ 3.86 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಹರಾಜಿಗಿಟ್ಟರೂ ಸಹ ಕೇವಲ 170 ಮೆಟ್ರಿಕ್ ಟನ್‌ಗಳಿಗೆ ಬಿಡ್‌ಗಳನ್ನು ಸ್ವೀಕರಿಸಿದೆ. ಅಂದರೆ ಹೆಚ್ಚಿನ ಖರೀದಿದಾರರು ಮುಂದಾಗಿಲ್ಲ ಎಂಬುದು ಸ್ಪಷ್ಟವಾಗಿದೆ. ರಾಜ್ಯ ಸರ್ಕಾರಗಳು ಈ ಬಿಡ್‌ನಲ್ಲಿ ಭಾಗವಹಿಸುವಂತಿಲ್ಲ ಮತ್ತು ಖಾಸಗಿ ಉದ್ದಿಮೆದಾರರು ಮಾತ್ರ ಭಾಗವಹಿಸಬಹುದಾಗಿದ್ದರಿಂದ ಎಫ್‌ಸಿಐಗೆ ಈ ಸಂಕಷ್ಟ ಎದುರಾಗಿದೆ.

ಒಂದು ತಿಂಗಳ ಹಿಂದೆಯಷ್ಟೆ ಕರ್ನಾಟಕ ಸರ್ಕಾರವು ಅನ್ನ ಭಾಗ್ಯ ಯೋಜನೆಯಡಿ ಎಲ್ಲಾ ಬಿಪಿಎಲ್ ಕುಟುಂಬಗಳಿಗೆ ತಿಂಗಳಿಗೆ ಪ್ರತಿ ವ್ಯಕ್ತಿಗೆ 10 ಕೆಜಿ ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡಲು ಎಫ್‌ಸಿಐನಿಂದ 2.28 ಲಕ್ಷ ಮೆಟ್ರಿಕ್ ಟನ್‌ಗಳನ್ನು ಕೋರಿತ್ತು. ಜೂನ್ 12 ರಂದು ಎರಡು ಪತ್ರಗಳಲ್ಲಿ ಎಫ್‌ಸಿಐ ಸುಮಾರು 2.22 ಲಕ್ಷ ಮೆಟ್ರಿಕ್ ಟನ್ ಪೂರೈಸಲು ಒಪ್ಪಿಕೊಂಡಿತ್ತು. ಆದರೆ ಒಂದು ದಿನದ ನಂತರ, ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯವು ರಾಜ್ಯ ಸರ್ಕಾರಗಳಿಗೆ ಧಾನ್ಯಗಳನ್ನು ಮಾರಾಟ ಮಾಡುವುದರ ವಿರುದ್ಧ FCI ಗೆ ನಿರ್ದೇಶನ ನೀಡಿತು. ಜೂನ್ 14 ರಂದು, ಎಫ್‌ಸಿಐ ಕರ್ನಾಟಕಕ್ಕೆ ಅಕ್ಕಿ ಹಂಚಿಕೆ ಆದೇಶವನ್ನು ರದ್ದುಗೊಳಿಸಿತು.

ಅಲ್ಲದೇ ಕೇಂದ್ರ ಸರ್ಕಾರದ ಸೂಚನೆಗೆ ಅನುಗುಣವಾಗಿ FCI ಇ-ಹರಾಜಿನಲ್ಲಿ ಅಕ್ಕಿ ಮಾರಲು ನಿರ್ಧರಿಸಿತ್ತು. ಆದರೆ 3 ಲಕ್ಷದ 86 ಸಾವಿರ ಟನ್ ಅಕ್ಕಿ ಇದ್ದರೆ ಕೇವಲ 170 ಟನ್‌ಗೆ ಮಾತ್ರ ಬಿಡ್ ಸಲ್ಲಿಸಲಾಗಿದೆ. ಹಾಗಾಗಿ ಈ ಸಮಸ್ಯೆಗೆ ಪರಿಹಾರವೆಂದರೆ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿಯಲ್ಲಿ ಅಕ್ಕಿ ಕೊಳ್ಳದಂತೆ ತಂದಿರುವ ಆದೇಶವನ್ನು ವಾಪಸ್ ಪಡೆದು ಅವಕಾಶ ನೀಡಬೇಕಿದೆ.

ಇದನ್ನೂ ಓದಿ; ‘ಅನ್ನಭಾಗ್ಯ’ ಯೋಜನೆಗೆ 10ವರ್ಷ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...