Homeಕರ್ನಾಟಕFCI ನಿಂದ ಅಕ್ಕಿ ಕೊಳ್ಳುವವರಿಲ್ಲ: ಅಕ್ಕಿ ವ್ಯರ್ಥವಾದರೂ ಸರಿ ಜನರ ಹಸಿವು ನೀಗಿಸಬಾರದು ಎನ್ನುವ ಧೋರಣೆ...

FCI ನಿಂದ ಅಕ್ಕಿ ಕೊಳ್ಳುವವರಿಲ್ಲ: ಅಕ್ಕಿ ವ್ಯರ್ಥವಾದರೂ ಸರಿ ಜನರ ಹಸಿವು ನೀಗಿಸಬಾರದು ಎನ್ನುವ ಧೋರಣೆ ಬಿಜೆಪಿಯದ್ದು – ಕಾಂಗ್ರೆಸ್ ಟೀಕೆ

- Advertisement -
- Advertisement -

FCI ನಿಂದ ಅಕ್ಕಿ ಕೊಳ್ಳುವವರಿಲ್ಲ, ಅಕ್ಕಿ ವ್ಯರ್ಥವಾದರೂ ಸರಿ ಜನರ ಹಸಿವು ನೀಗಿಸಬಾರದು ಎನ್ನುವ ಧೋರಣೆ ಬಿಜೆಪಿಯದ್ದು ಎಂದು ಕಾಂಗ್ರೆಸ್ ಟೀಕಿಸಿದೆ.

ಕರ್ನಾಟಕ ಸೇರಿದಂತೆ ರಾಜ್ಯಗಳಿಗೆ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿಯಲ್ಲಿ ಅಕ್ಕಿ ಕೊಳ್ಳಲು ಅವಕಾಶ ನಿರಾಕರಿಸಿದ ನಂತರ FCI ಇ-ಹರಾಜಿನಲ್ಲಿ ಅಕ್ಕಿ ಕೊಳ್ಳುವವರಿಲ್ಲದ ಪತ್ರಿಕಾ ವರದಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಪಕ್ಷ ‘ಬಿಜೆಪಿಯ ರಾಜಕೀಯ ದುರುದ್ದೇಶವು ಜನತೆಯನ್ನು ಬಲಿಪಶು ಮಾಡುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಕರ್ನಾಟಕಕ್ಕೆ ಅಕ್ಕಿ ಪೂರೈಸಲು ನಿರಾಕರಿಸಿದ ಕೇಂದ್ರ ಆಹಾರ ನಿಗಮದ ಹರಾಜು ಪ್ರಕ್ರಿಯೆಯಲ್ಲಿ ಅಕ್ಕಿ ಖರೀದಿಗೆ ಖಾಸಗಿ ಕಂಪೆನಿಗಳು ಆಸಕ್ತಿಯೇ ತೋರುತ್ತಿಲ್ಲ. ನಮ್ಮ ಸರ್ಕಾರ 34 ರೂಪಾಯಿಗಳ ಖರೀದಿ ದರಕ್ಕೆ ಕೇಳಿದರೂ ನಿರಾಕರಿಸಿದ ಕೇಂದ್ರ ಸರ್ಕಾರ ಖಾಸಗಿಯವರಿಗೆ 31 ರೂಪಾಯಿಗಳಿಗೆ ನೀಡಲು ಸಿದ್ಧವಾದರೂ ಖರೀದಿದಾರರು ಮುಂದೆ ಬರುತ್ತಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

“ಪಡಿತರ ವಿತರಣಾ ಯೋಜನೆಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್, ಆಹಾರ ಭದ್ರತಾ ಕಾಯ್ದೆ ಜಾರಿಗೆ ತಂದಿದ್ದು ಕಾಂಗ್ರೆಸ್, ಅನ್ನಭಾಗ್ಯ ಜಾರಿಗೆ ತಂದಿದ್ದು ಕಾಂಗ್ರೆಸ್, ರಾಜ್ಯದಲ್ಲಿ ಅನ್ನಭಾಗ್ಯ ಜಾರಿಗೆ ಬರುವಾಗ ಕೇಂದ್ರದಲ್ಲಿದ್ದಿದ್ದು ಕಾಂಗ್ರೆಸ್‌. ಆದರೆ, ಬಿಜೆಪಿ ನಾಯಕರು “ಮೋದಿ ಅಕ್ಕಿ“ ಎಂದು ಬೊಬ್ಬೆ ಹೊಡೆಯುತ್ತಿರುವುದು ನೋಡಿದರೆ ಮೋದಿಯೇ ತಮ್ಮ ಜಮೀನಿನಲ್ಲಿ ಉತ್ತಿ, ಬಿತ್ತಿ, ಬೆಳೆದು ಅಕ್ಕಿ ತಂದುಕೊಡುತ್ತಿರುವಂತೆ ಭಾಸವಾಗುತ್ತಿದೆ. ಗರೀಬ್ ಕಲ್ಯಾಣ್ ಯೋಜನೆ ಡಿಸೆಂಬರ್ ನಂತರ ಸ್ಥಗಿತಗೊಳ್ಳಲಿದೆ, ಆಗ ಯಾರ ಅಕ್ಕಿ ಎಂದು ಬೊಬ್ಬೆ ಹೊಡೆಯುತ್ತಾರೆ?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

“ಇ-ಹರಾಜು ಮೂಲಕ ಕೇಂದ್ರ ಖಾಸಗಿಯವರಿಗೆ ಅಕ್ಕಿ ಮಾರಾಟ ಮಾಡುತ್ತಿದೆ.‌ ನಾವು ಕೊಡಲು ಒಪ್ಪಿದ ಮೊತ್ತಕ್ಕಿಂತ ಕಡಿಮೆ‌ ಮೊತ್ತದಲ್ಲಿ ಅಕ್ಕಿ ಮಾರಾಟ ಮಾಡಲು ಹರಾಜು ಕರೆದಿದ್ದರೂ ಅಕ್ಕಿಯನ್ನು ಕೇಳುವವರೇ ಗತಿಯಿಲ್ಲ. ಇದರ ಬದಲು ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡಬಹುದಿತ್ತು. ಕನಿಷ್ಠ ಪಕ್ಷ ಇದರಿಂದ ರಾಜ್ಯದ ಬಡವರ ಹೊಟ್ಟೆಯಾದರೂ ತುಂಬುತಿತ್ತು” ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ಕೇಂದ್ರಕ್ಕೆ ಒಂದು ಕೆಜಿ ಅಕ್ಕಿಗೆ ₹34 ಕೊಡಲು ನಾವು ಒಪ್ಪಿದ್ದೆವು. ಆದರೆ, ನಮಗೆ ಅಕ್ಕಿ‌ ನಿರಾಕರಿಸಿದ ಕೇಂದ್ರ ಸರ್ಕಾರ ಎಫ್‌ಸಿಐ ಮೂಲಕ‌ ಕೆಜಿಗೆ ₹31.75ರ ಬೆಲೆ ನಿಗದಿ ಪಡಿಸಿ ಖಾಸಗಿಯವರಿಗೆ ಮಾರಲು ಇ-ಹರಾಜು ಕರೆದಿದೆ. ಇದು ರಾಜ್ಯ ಬಿಜೆಪಿ ನಾಯಕರ ದೃಷ್ಟಿಯಲ್ಲಿ ದ್ರೋಹ ಎನಿಸುವುದಿಲ್ಲವೇ? ಈ ಬಗ್ಗೆ ಮಾತಾಡಲು ರಾಜ್ಯ ಬಿಜೆಪಿ ನಾಯಕರಿಗೆ ಧಮ್ ಇಲ್ಲವೇ” ಎಂದು ಪ್ರಶ್ನಿಸಿದ್ದಾರೆ.

ರಾಜ್ಯಗಳಿಗೆ ಅಕ್ಕಿ ಮಾರಬಾರದೆಂದು ಆದೇಶಿಸಿದ್ದ ಕೇಂದ್ರ ಸರ್ಕಾರವು ಮಾರುಕಟ್ಟೆಯಲ್ಲಿ ಏರುತ್ತಿರುವ ಬೆಲೆಗಳನ್ನು ನಿಯಂತ್ರಿಸಲು ಅಕ್ಕಿ ಮತ್ತು ಗೋಧಿ ಧಾನ್ಯಗಳನ್ನು ಇ-ಹರಾಜು ಮಾಡಲು ಭಾರತೀಯ ಆಹಾರ ನಿಗಮಕ್ಕೆ (ಎಫ್‌ಸಿಐ) ಸೂಚಿಸಿತ್ತು. ಆದರೆ ಕಳೆದ ವಾರ ಎಫ್‌ಸಿಐ 3.86 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಹರಾಜಿಗಿಟ್ಟರೂ ಸಹ ಕೇವಲ 170 ಮೆಟ್ರಿಕ್ ಟನ್‌ಗಳಿಗೆ ಬಿಡ್‌ಗಳನ್ನು ಸ್ವೀಕರಿಸಿದೆ. ಅಂದರೆ ಹೆಚ್ಚಿನ ಖರೀದಿದಾರರು ಮುಂದಾಗಿಲ್ಲ ಎಂಬುದು ಸ್ಪಷ್ಟವಾಗಿದೆ. ರಾಜ್ಯ ಸರ್ಕಾರಗಳು ಈ ಬಿಡ್‌ನಲ್ಲಿ ಭಾಗವಹಿಸುವಂತಿಲ್ಲ ಮತ್ತು ಖಾಸಗಿ ಉದ್ದಿಮೆದಾರರು ಮಾತ್ರ ಭಾಗವಹಿಸಬಹುದಾಗಿದ್ದರಿಂದ ಎಫ್‌ಸಿಐಗೆ ಈ ಸಂಕಷ್ಟ ಎದುರಾಗಿದೆ.

ಒಂದು ತಿಂಗಳ ಹಿಂದೆಯಷ್ಟೆ ಕರ್ನಾಟಕ ಸರ್ಕಾರವು ಅನ್ನ ಭಾಗ್ಯ ಯೋಜನೆಯಡಿ ಎಲ್ಲಾ ಬಿಪಿಎಲ್ ಕುಟುಂಬಗಳಿಗೆ ತಿಂಗಳಿಗೆ ಪ್ರತಿ ವ್ಯಕ್ತಿಗೆ 10 ಕೆಜಿ ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡಲು ಎಫ್‌ಸಿಐನಿಂದ 2.28 ಲಕ್ಷ ಮೆಟ್ರಿಕ್ ಟನ್‌ಗಳನ್ನು ಕೋರಿತ್ತು. ಜೂನ್ 12 ರಂದು ಎರಡು ಪತ್ರಗಳಲ್ಲಿ ಎಫ್‌ಸಿಐ ಸುಮಾರು 2.22 ಲಕ್ಷ ಮೆಟ್ರಿಕ್ ಟನ್ ಪೂರೈಸಲು ಒಪ್ಪಿಕೊಂಡಿತ್ತು. ಆದರೆ ಒಂದು ದಿನದ ನಂತರ, ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯವು ರಾಜ್ಯ ಸರ್ಕಾರಗಳಿಗೆ ಧಾನ್ಯಗಳನ್ನು ಮಾರಾಟ ಮಾಡುವುದರ ವಿರುದ್ಧ FCI ಗೆ ನಿರ್ದೇಶನ ನೀಡಿತು. ಜೂನ್ 14 ರಂದು, ಎಫ್‌ಸಿಐ ಕರ್ನಾಟಕಕ್ಕೆ ಅಕ್ಕಿ ಹಂಚಿಕೆ ಆದೇಶವನ್ನು ರದ್ದುಗೊಳಿಸಿತು.

ಅಲ್ಲದೇ ಕೇಂದ್ರ ಸರ್ಕಾರದ ಸೂಚನೆಗೆ ಅನುಗುಣವಾಗಿ FCI ಇ-ಹರಾಜಿನಲ್ಲಿ ಅಕ್ಕಿ ಮಾರಲು ನಿರ್ಧರಿಸಿತ್ತು. ಆದರೆ 3 ಲಕ್ಷದ 86 ಸಾವಿರ ಟನ್ ಅಕ್ಕಿ ಇದ್ದರೆ ಕೇವಲ 170 ಟನ್‌ಗೆ ಮಾತ್ರ ಬಿಡ್ ಸಲ್ಲಿಸಲಾಗಿದೆ. ಹಾಗಾಗಿ ಈ ಸಮಸ್ಯೆಗೆ ಪರಿಹಾರವೆಂದರೆ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿಯಲ್ಲಿ ಅಕ್ಕಿ ಕೊಳ್ಳದಂತೆ ತಂದಿರುವ ಆದೇಶವನ್ನು ವಾಪಸ್ ಪಡೆದು ಅವಕಾಶ ನೀಡಬೇಕಿದೆ.

ಇದನ್ನೂ ಓದಿ; ‘ಅನ್ನಭಾಗ್ಯ’ ಯೋಜನೆಗೆ 10ವರ್ಷ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...