Homeಮುಖಪುಟಲಸಿಕೆ ಪಡೆಯುವಂತೆ ಯಾರಿಗೂ ಒತ್ತಾಯಿಸುವಂತಿಲ್ಲ: ಸುಪ್ರೀಂ ಕೋರ್ಟ್

ಲಸಿಕೆ ಪಡೆಯುವಂತೆ ಯಾರಿಗೂ ಒತ್ತಾಯಿಸುವಂತಿಲ್ಲ: ಸುಪ್ರೀಂ ಕೋರ್ಟ್

- Advertisement -
- Advertisement -

ಲಸಿಕೆ ಪಡೆಯುವಂತೆ ಯಾರಿಗೂ ಒತ್ತಾಯಿಸುವಂತಿಲ್ಲ ಎಂದು ಆದೇಶಿಸಿರುವ ಸುಪ್ರೀಂ ಕೋರ್ಟ್ ಲಸಿಕೆಯಿಂದಾಗಿ ಉಂಟಾಗಿರುವ ಅಡ್ಡಪರಿಣಾಮಗಳ ವರದಿಯನ್ನು ಪ್ರಕಟಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಪ್ರತಿಯೊಬ್ಬರೂ ತಮ್ಮ ದೈಹಿಕ ಸಮಗ್ರತೆಯ ಹಕ್ಕನ್ನು ಹೊಂದಿದ್ದಾರೆ. ಹಾಗಾಗಿ ಲಸಿಕೆ ತೆಗೆದುಕೊಳ್ಳುವಂತೆ ಒತ್ತಾಯ ಮಾಡಬಾರದು. ಆದರೆ ಸಮುದಾಯದ ಹಿತದೃಷ್ಟಿಯಿಂದ ವಯಕ್ತಿಕ ಹಕ್ಕುಗಳ ಮೇಲೆ ಕೆಲ ಮಿತಿಗಳನ್ನು ಹೇರಬಹುದು ಎಂದಿದೆ.

ಕೋವಿಡ್ ನಿಯಮಾವಳಿಗಳನ್ನು ಹೊರತುಪಡಿಸಿ ಸಾರ್ವಜನಿಕ ಸ್ಥಳಗಳು, ಸೇವೆಗಳು ಮತ್ತು ಇತರ ಪ್ರವೇಶಗಳಲ್ಲಿ ಲಸಿಕೆ ಹಾಕದ ವ್ಯಕ್ತಿಗಳ ಮೇಲೆ ಯಾವುದೇ ನಿರ್ಬಂಧಗಳಿಲ್ಲ ಎಂದು ಸುಪ್ರೀಂ ಸ್ಪಷ್ಟಪಡಿಸಿದೆ. ಈಗ ಆ ನಿರ್ಬಂಧ ಜಾರಿಯಲ್ಲಿದ್ದರೆ ಅದನ್ನು ರದ್ದುಗೊಳಿಸಬೇಕೆಂದು ಆದೇಶಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೋವಿಡ್ ಲಸಿಕೆಯಿಂದಾದ ಅಡ್ಡಪರಿಣಾಮಗಳ ಕುರಿತು ಎಲ್ಲರಿಗೂ ಮಾಹಿತಿ ಸಿಗುವಂತೆ ವರದಿ ಮಾಡಬೇಕು. ಯಾವುದೇ ರಾಜಿಯಿಲ್ಲದೆ ವಯಕ್ತಿಕ ದೂರುಗಳನ್ನು ಸಹ ಅದು ಒಳಗೊಂಡಿರಬೇಕು ಎಂದು ಕೋರ್ಟ್ ನಿರ್ದೇಶನ ನೀಡಿದೆ.

ವ್ಯಕ್ತಿಗಳ ಗೌಪ್ಯತೆಗೆ ಒಳಪಟ್ಟಿರುವ ಲಸಿಕೆ ಪ್ರಯೋಗದ ದತ್ತಾಂಶವನ್ನು ಪ್ರತ್ಯೇಕಿಸುವ ಬಗ್ಗೆ, ಈಗಾಗಲೇ ನಡೆಸಲಾದ ಮತ್ತು ನಂತರ ನಡೆಸಲಿರುವ ಎಲ್ಲಾ ಪ್ರಯೋಗಗಳು, ಎಲ್ಲಾ ಡೇಟಾವನ್ನು ಮತ್ತಷ್ಟು ವಿಳಂಬವಿಲ್ಲದೆ ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಬೇಕು ಎಂದು ಕೋರ್ಟ್ ಹೇಳಿದೆ.

ನ್ಯಾಶನಲ್ ಟೆಕ್ನಿಕಲ್ ಅಡ್ವೈಸರಿ ಗ್ರೂಪ್ ಆನ್ ಇಮ್ಯುನೈಸೇಶನ್ (ಎನ್‌ಟಿಜಿಐ) ನ ಮಾಜಿ ಸದಸ್ಯ ಜಾಕೋಬ್ ಪುಲಿಯೆಲ್ ಅವರು, ಸರ್ಕಾರಿ ಯೋಜನೆಗಳು ಅಥವಾ ಸೇವೆಗಳನ್ನು ಪ್ರವೇಶಿಸಲು ರಾಜ್ಯಗಳು ಲಸಿಕೆಯನ್ನು ಕಡ್ಡಾಯಗೊಳಿಸುವುದು ಅಸಂವಿಧಾನಿಕ ಮತ್ತು ನಾಗರಿಕರ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಅರ್ಜಿ ಸಲ್ಲಿಸಿದ್ದರು. ಅನೇಕ ರಾಜ್ಯಗಳು, ರಾಜ್ಯ ಸರ್ಕಾರಿ ನೌಕರರಿಗೆ, ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸಲು ಮತ್ತು ಸಬ್ಸಿಡಿ ಆಹಾರ ಧಾನ್ಯಗಳನ್ನು ವಿತರಿಸಲು ಲಸಿಕೆ ಕಡ್ಡಾಯಗೊಳಿಸಿ ತಾರತಮ್ಯ ಮಾಡುತ್ತಿವೆ ಎಂದು ವಾದಿಸಿದ್ದರು.

ಇದನ್ನೂ ಓದಿ; ವಿಶೇಷ ವರದಿ: ಪಿಎಸ್‌ಐ ಪರೀಕ್ಷೆ ಅಕ್ರಮ ಒಂದೇ ಅಲ್ಲ, ಶಿಕ್ಷಣದ ಅವ್ಯವಸ್ಥೆಗೆ ಕೊನೆಯೇ ಇಲ್ಲ!

ಅರ್ಜಿಯು ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿದೆ ಮತ್ತು ಜನರಲ್ಲಿ ಲಸಿಕೆ ಹಿಂಜರಿಕೆಯನ್ನು ಸೃಷ್ಟಿಸುತ್ತದೆ ಎಂದು ಕೇಂದ್ರವು ನ್ಯಾಯಾಲಯದಲ್ಲಿ ವಾದಿಸಿತ್ತು. ಲಸಿಕೆ ಸ್ವಯಂಪ್ರೇರಿತವಾಗಿದ್ದು, ಸಂಭಾವ್ಯ ಅಪಾಯಗಳ ಆಧಾರದ ಮೇಲೆ ಕೆಲ ರಾಜ್ಯಗಳು ಕಡ್ಡಾಯ ಮಾಡಿವೆ ಎಂದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಲಸಿಕೆ ಕಡ್ಡಾಯ ಅಲ್ಲ,
    ನಾಳೆ ಕೊರೋಣಾ ಬಂದ್ರೆ ಮಾತ್ರ ಸರಕಾರವೇ ಜವಾಬ್ದಾರಿ.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...