Homeಮುಖಪುಟಲಸಿಕೆ ಪಡೆಯುವಂತೆ ಯಾರಿಗೂ ಒತ್ತಾಯಿಸುವಂತಿಲ್ಲ: ಸುಪ್ರೀಂ ಕೋರ್ಟ್

ಲಸಿಕೆ ಪಡೆಯುವಂತೆ ಯಾರಿಗೂ ಒತ್ತಾಯಿಸುವಂತಿಲ್ಲ: ಸುಪ್ರೀಂ ಕೋರ್ಟ್

- Advertisement -
- Advertisement -

ಲಸಿಕೆ ಪಡೆಯುವಂತೆ ಯಾರಿಗೂ ಒತ್ತಾಯಿಸುವಂತಿಲ್ಲ ಎಂದು ಆದೇಶಿಸಿರುವ ಸುಪ್ರೀಂ ಕೋರ್ಟ್ ಲಸಿಕೆಯಿಂದಾಗಿ ಉಂಟಾಗಿರುವ ಅಡ್ಡಪರಿಣಾಮಗಳ ವರದಿಯನ್ನು ಪ್ರಕಟಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಪ್ರತಿಯೊಬ್ಬರೂ ತಮ್ಮ ದೈಹಿಕ ಸಮಗ್ರತೆಯ ಹಕ್ಕನ್ನು ಹೊಂದಿದ್ದಾರೆ. ಹಾಗಾಗಿ ಲಸಿಕೆ ತೆಗೆದುಕೊಳ್ಳುವಂತೆ ಒತ್ತಾಯ ಮಾಡಬಾರದು. ಆದರೆ ಸಮುದಾಯದ ಹಿತದೃಷ್ಟಿಯಿಂದ ವಯಕ್ತಿಕ ಹಕ್ಕುಗಳ ಮೇಲೆ ಕೆಲ ಮಿತಿಗಳನ್ನು ಹೇರಬಹುದು ಎಂದಿದೆ.

ಕೋವಿಡ್ ನಿಯಮಾವಳಿಗಳನ್ನು ಹೊರತುಪಡಿಸಿ ಸಾರ್ವಜನಿಕ ಸ್ಥಳಗಳು, ಸೇವೆಗಳು ಮತ್ತು ಇತರ ಪ್ರವೇಶಗಳಲ್ಲಿ ಲಸಿಕೆ ಹಾಕದ ವ್ಯಕ್ತಿಗಳ ಮೇಲೆ ಯಾವುದೇ ನಿರ್ಬಂಧಗಳಿಲ್ಲ ಎಂದು ಸುಪ್ರೀಂ ಸ್ಪಷ್ಟಪಡಿಸಿದೆ. ಈಗ ಆ ನಿರ್ಬಂಧ ಜಾರಿಯಲ್ಲಿದ್ದರೆ ಅದನ್ನು ರದ್ದುಗೊಳಿಸಬೇಕೆಂದು ಆದೇಶಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೋವಿಡ್ ಲಸಿಕೆಯಿಂದಾದ ಅಡ್ಡಪರಿಣಾಮಗಳ ಕುರಿತು ಎಲ್ಲರಿಗೂ ಮಾಹಿತಿ ಸಿಗುವಂತೆ ವರದಿ ಮಾಡಬೇಕು. ಯಾವುದೇ ರಾಜಿಯಿಲ್ಲದೆ ವಯಕ್ತಿಕ ದೂರುಗಳನ್ನು ಸಹ ಅದು ಒಳಗೊಂಡಿರಬೇಕು ಎಂದು ಕೋರ್ಟ್ ನಿರ್ದೇಶನ ನೀಡಿದೆ.

ವ್ಯಕ್ತಿಗಳ ಗೌಪ್ಯತೆಗೆ ಒಳಪಟ್ಟಿರುವ ಲಸಿಕೆ ಪ್ರಯೋಗದ ದತ್ತಾಂಶವನ್ನು ಪ್ರತ್ಯೇಕಿಸುವ ಬಗ್ಗೆ, ಈಗಾಗಲೇ ನಡೆಸಲಾದ ಮತ್ತು ನಂತರ ನಡೆಸಲಿರುವ ಎಲ್ಲಾ ಪ್ರಯೋಗಗಳು, ಎಲ್ಲಾ ಡೇಟಾವನ್ನು ಮತ್ತಷ್ಟು ವಿಳಂಬವಿಲ್ಲದೆ ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಬೇಕು ಎಂದು ಕೋರ್ಟ್ ಹೇಳಿದೆ.

ನ್ಯಾಶನಲ್ ಟೆಕ್ನಿಕಲ್ ಅಡ್ವೈಸರಿ ಗ್ರೂಪ್ ಆನ್ ಇಮ್ಯುನೈಸೇಶನ್ (ಎನ್‌ಟಿಜಿಐ) ನ ಮಾಜಿ ಸದಸ್ಯ ಜಾಕೋಬ್ ಪುಲಿಯೆಲ್ ಅವರು, ಸರ್ಕಾರಿ ಯೋಜನೆಗಳು ಅಥವಾ ಸೇವೆಗಳನ್ನು ಪ್ರವೇಶಿಸಲು ರಾಜ್ಯಗಳು ಲಸಿಕೆಯನ್ನು ಕಡ್ಡಾಯಗೊಳಿಸುವುದು ಅಸಂವಿಧಾನಿಕ ಮತ್ತು ನಾಗರಿಕರ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಅರ್ಜಿ ಸಲ್ಲಿಸಿದ್ದರು. ಅನೇಕ ರಾಜ್ಯಗಳು, ರಾಜ್ಯ ಸರ್ಕಾರಿ ನೌಕರರಿಗೆ, ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸಲು ಮತ್ತು ಸಬ್ಸಿಡಿ ಆಹಾರ ಧಾನ್ಯಗಳನ್ನು ವಿತರಿಸಲು ಲಸಿಕೆ ಕಡ್ಡಾಯಗೊಳಿಸಿ ತಾರತಮ್ಯ ಮಾಡುತ್ತಿವೆ ಎಂದು ವಾದಿಸಿದ್ದರು.

ಇದನ್ನೂ ಓದಿ; ವಿಶೇಷ ವರದಿ: ಪಿಎಸ್‌ಐ ಪರೀಕ್ಷೆ ಅಕ್ರಮ ಒಂದೇ ಅಲ್ಲ, ಶಿಕ್ಷಣದ ಅವ್ಯವಸ್ಥೆಗೆ ಕೊನೆಯೇ ಇಲ್ಲ!

ಅರ್ಜಿಯು ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿದೆ ಮತ್ತು ಜನರಲ್ಲಿ ಲಸಿಕೆ ಹಿಂಜರಿಕೆಯನ್ನು ಸೃಷ್ಟಿಸುತ್ತದೆ ಎಂದು ಕೇಂದ್ರವು ನ್ಯಾಯಾಲಯದಲ್ಲಿ ವಾದಿಸಿತ್ತು. ಲಸಿಕೆ ಸ್ವಯಂಪ್ರೇರಿತವಾಗಿದ್ದು, ಸಂಭಾವ್ಯ ಅಪಾಯಗಳ ಆಧಾರದ ಮೇಲೆ ಕೆಲ ರಾಜ್ಯಗಳು ಕಡ್ಡಾಯ ಮಾಡಿವೆ ಎಂದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಲಸಿಕೆ ಕಡ್ಡಾಯ ಅಲ್ಲ,
    ನಾಳೆ ಕೊರೋಣಾ ಬಂದ್ರೆ ಮಾತ್ರ ಸರಕಾರವೇ ಜವಾಬ್ದಾರಿ.

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...