Homeಮುಖಪುಟನನ್ನಿಂದ ಯಾರೂ ಅವನನ್ನು ರಕ್ಷಿಸಲು ಸಾಧ್ಯವಿಲ್ಲ: ಅಲಹಾಬಾದಿಯಾಗೆ ಮಹಾಭಾರತ ನಟ ರಣವೀರ್  ವೀಡಿಯೋ ಬೆದರಿಕೆ 

ನನ್ನಿಂದ ಯಾರೂ ಅವನನ್ನು ರಕ್ಷಿಸಲು ಸಾಧ್ಯವಿಲ್ಲ: ಅಲಹಾಬಾದಿಯಾಗೆ ಮಹಾಭಾರತ ನಟ ರಣವೀರ್  ವೀಡಿಯೋ ಬೆದರಿಕೆ 

- Advertisement -
- Advertisement -

ಮಹಾಭಾರತ ನಟ ಸೌರವ್ ಗುರ್ಜರ್ ವೀಡಿಯೊ ಸಂದೇಶವನ್ನು ಹಂಚಿಕೊಂಡಿದ್ದಾರೆ ಮತ್ತು ಪ್ರಧಾನಿ ಮೋದಿಯಿಂದ ಸನ್ಮಾನಿತ ರಣವೀರ್ ಅಲಹಾಬಾದಿಯಾ ಅವರ ಆಶ್ಲೀಲ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸಿದ್ದಾರೆ.

ಇದು ವ್ಯಾಪಕ ಆಕ್ರೋಶವನ್ನು ಹುಟ್ಟುಹಾಕಿದೆ. ಹಾಸ್ಯನಟ ಸಮಯ್ ರೈನಾ ಅವರ ಕಾರ್ಯಕ್ರಮ ಇಂಡಿಯಾಸ್ ಗಾಟ್ ಲ್ಯಾಟೆಂಟ್‌ನಲ್ಲಿ ಅವರ ಅಶ್ಲೀಲ ಹಾಸ್ಯಗಳಿಗಾಗಿ ಗುರ್ಜರ್ ಯೂಟ್ಯೂಬರ್‌ಗೆ ಬಹಿರಂಗವಾಗಿ ಬೆದರಿಕೆ ಹಾಕಿದ್ದಾರೆ.

ಘಟನೆಯ ಬಗ್ಗೆ ತಮ್ಮ ಕೋಪವನ್ನು ವ್ಯಕ್ತಪಡಿಸಿದ ಗುರ್ಜರ್ ಅವರು, ಈ ಹೇಳಿಕೆಗಳನ್ನು ‘ಸ್ವೀಕಾರಾರ್ಹವಲ್ಲ’ ಮತ್ತು ಅವರು ಕಾರ್ಯಕ್ರಮದಲ್ಲಿ ಏನೇ ಮಾಡಿದರೂ ಅವರನ್ನು ಕ್ಷಮಿಸಲು ಸಾಧ್ಯವಿಲ್ಲ. ಅವರ ವರ್ತನೆಗಾಗಿ ನಾವು ಅವರ ವಿರುದ್ಧ ಕ್ರಮಕೈಗೊಳ್ಳದಿದ್ದರೆ, ಬೇರೆಯವರು ಇದೇ ರೀತಿಯ ಅಸಹ್ಯ ಮಾತುಗಳನ್ನು ಹೇಳುತ್ತಾರೆ. ಅವರಂತಹ ಜನರು ಎಲ್ಲಾ ಮಿತಿಗಳನ್ನು ಮೀರಿದ್ದಾರೆ. ಮುಂದಿನ ಪೀಳಿಗೆಯನ್ನು ಉಳಿಸಲು ಸಾಧ್ಯವಾಗುವಂತೆ ನಮ್ಮ ಸಮಾಜ ಮತ್ತು ಧರ್ಮವನ್ನು ಹಾಳು ಮಾಡುತ್ತಿರುವ ಇವರಂತಹ ಜನರ ವಿರುದ್ಧ ನಾವು ಕಾನೂನು ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಈ ರೀತಿಯ ಮಾತುಗಳಿಗಾಗಿ ಸರ್ಕಾರವು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾನು ಒತ್ತಾಯಿಸುತ್ತೇನೆ. ನನಗೆ ಈಗ ತುಂಬಾ ಕೋಪವಿದೆ. ನಾನು ಅಸಭ್ಯ ಭಾಷೆಯನ್ನು ಬಳಸಲು ಬಯಸುವುದಿಲ್ಲ.  ನಾನು ಅವರನ್ನು ಎಲ್ಲಿಯಾದರೂ ಭೇಟಿಯಾದರೆ, ಯಾರೂ ಅವರನ್ನು ನನ್ನಿಂದ ರಕ್ಷಿಸಲು ಸಾಧ್ಯವಿಲ್ಲ,” ಎಂದು ಅವರು ಹೇಳಿದರು.

ಮಾಜಿ WWE ಕುಸ್ತಿಪಟುವಿನ ವೀಡಿಯೊಗೆ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರಿಂದ ಪ್ರತಿಕ್ರಿಯೆಗಳು ಬಂದಿವೆ. ಅವರು ಅಲ್ಲಾಹಬಾದಿಯಾ ಅವರನ್ನು ಟೀಕಿಸಿದ್ದಾರೆ.

ತಮ್ಮ ಯೂಟ್ಯೂಬ್ ಚಾನೆಲ್‌ನ ಹೆಸರಿನಿಂದ ಅನೇಕರಿಗೆ ಪರಿಚಿತರಾಗಿರುವ ಅಲಹಾಬಾದಿಯಾ, ಸಮಯ್ ರೈನಾ ಅವರ ಇಂಡಿಯಾಸ್ ಗಾಟ್ ಲ್ಯಾಟೆಂಟ್‌ನಲ್ಲಿ ವಿಷಯ ರಚನೆಕಾರರಾದ ಆಶಿಶ್ ಚಂಚಲಾನಿ ಮತ್ತು ಅಪೂರ್ವ ಮುಖಿಜಾ ಅಕಾ ದಿ ರೆಬೆಲ್ ಕಿಡ್ ಜೊತೆಗೆ ಪ್ಯಾನೆಲಿಸ್ಟ್ ಆಗಿ ಕಾಣಿಸಿಕೊಂಡಿದ್ದರು.

ವಿವಾದಾತ್ಮಕ ಸಂಚಿಕೆಯ ತುಣುಕುಗಳು ಆನ್‌ಲೈನ್‌ನಲ್ಲಿ ಹೊರಹೊಮ್ಮುತ್ತಿದ್ದಂತೆ, ವೀಕ್ಷಕರು ಕೆಲವು ಜೋಕ್‌ಗಳನ್ನು ಅಶ್ಲೀಲವೆಂದು ಟೀಕಿಸಿದರು. ಒಂದು ನಿರ್ದಿಷ್ಟ ಕ್ಲಿಪ್‌ನಲ್ಲಿ ಅಲಹಾಬಾದಿಯಾ ಒಬ್ಬ ಸ್ಪರ್ಧಿಗೆ ಪ್ರಶ್ನೆಯನ್ನು ಕೇಳುತ್ತಿರುವುದು ಕಂಡುಬರುತ್ತದೆ, ಅದು ಅವನನ್ನು ತಲೆಬಿಸಿಯನ್ನುಂಟು ಮಾಡಿದೆ.

ಸಮಯ್ ರೈನಾ ಅವರ ‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿದ್ದ ಅಲಹಾಬಾದಿಯಾ “ನಿನ್ನ ಪೋಷಕರು ಪ್ರತಿದಿನ ಲೈಂಗಿಕ ಕ್ರಿಯೆ ನಡೆಸುವುದನ್ನು ನೋಡುತ್ತಾ ಇರುತ್ತೀಯಾ? ಇಲ್ಲ ಒಮ್ಮೆ ಅದರಲ್ಲಿ ಭಾಗವಹಿಸಿ ಶಾಶ್ವತವಾಗಿ ನಿಲ್ಲಿಸುತ್ತೀಯಾ?” ಎಂದು ಮಹಿಳಾ ಸ್ಪರ್ಧಿಯೊಬ್ಬರಿಗೆ ಕೇಳಿದ್ದಾರೆ. ಈ ಜೋಕ್ ಪರಿಣಾಮವಾಗಿ ವಿಷಯ ರಚನೆಕಾರರ ವಿರುದ್ಧ ಹಲವಾರು ಪೊಲೀಸ್ ದೂರುಗಳು ದಾಖಲಾಗಿವೆ.

ನಂತರ ಯೂಟ್ಯೂಬರ್ ತಮ್ಮ ಹೇಳಿಕೆಗಳಿಗೆ ಕ್ಷಮೆಯಾಚಿಸಿದರು ಮತ್ತು ಸಂಚಿಕೆಗಳ ಎಲ್ಲಾ ವೀಡಿಯೊಗಳನ್ನು ಯೂಟ್ಯೂಬ್‌ನಿಂದ ತೆಗೆದುಹಾಕಲಾಗಿದೆ. ಈಗ ದೂರಿಗೆ ಸಂಬಂಧಿಸಿದಂತೆ ಎರಡು ನೋಟಿಸ್ ಅನ್ನು ಜಾರಿ ಮಾಡಲಾಗಿದೆ ಮತ್ತು ಅಲಹಾಬಾದಿಯಾ ತಮ್ಮ ಫ್ಲ್ಯಾಟಿಗೆ ಬೀಗ ಜಡಿದು ನಾಪತ್ತೆಯಾಗಿದ್ದಾರೆ.

ಅಶ್ಲೀಲ ಹೇಳಿಕೆ: ರಣವೀರ್ ಅಲಹಾಬಾದಿಯಾ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...