HomeUncategorizedಯಾವ ಪುಂಡನೂ ಅ.5ರಂದು ಮಹಿಷ ದಸರಾ ನಿಲ್ಲಿಸಲಾರನು: ಪ್ರೊ.ಗುರು

ಯಾವ ಪುಂಡನೂ ಅ.5ರಂದು ಮಹಿಷ ದಸರಾ ನಿಲ್ಲಿಸಲಾರನು: ಪ್ರೊ.ಗುರು

‘ಮಹಿಷ ಸತ್ಯ, ಚಾಮುಂಡೇಶ್ವರಿ ಮಿಥ್ಯ’. ಪ್ರತಾಪ ಸಿಂಹನಂತಹ ನೂರು ಪುಂಡಾರು ಬಂದರೂ ಮಹಿಷ ದಸರಾ ಆಚರಣೆ ತಡೆಯಲು ಸಾಧ್ಯವಿಲ್ಲ ಎಂದು ಪ್ರೊ.ಮಹೇಶ್‌ಚಂದ್ರ ಗುರು ಹೇಳಿದ್ದಾರೆ.

- Advertisement -
- Advertisement -

ಮಹಿಷ ದಸರಾ ಯಾರ ವಿರುದ್ಧವೂ ಅಲ್ಲ; ಯಾರಿಂದಲೂ ಮಹಿಷ ದಸರಾ ನಿಲ್ಲಿಸಲು ಸಾಧ್ಯವಿಲ್ಲ ಎಂದು ಪ್ರೊ.ಮಹೇಶ್‌ಚಂದ್ರ ಗುರು ಹೇಳಿದ್ದಾರೆ.

ಮೈಸೂರು ನಗರದ ಮಹಿಷ ದಸರಾ ಅನುಷ್ಠಾನ ಸಮಿತಿ ವತಿಯಿಂದ ಅಕ್ಟೋಬರ್‌ 5ರಂದು ಅಶೋಕಪುರಂ ಉದ್ಯಾನದಲ್ಲಿ ಮಹಿಷ ದಸರಾ ಉತ್ಸವ ಮೂರ್ತಿ ಅನಾವರಣ ಹಾಗೂ ಪುಷ್ಪಾರ್ಚನೆ ಕಾರ್ಯಕ್ರಮ ಆಯೋಜಿಸಿರುವ ಸಂಬಂಧ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ವೈದಿಕರ ಇತಿಹಾಸವೆಂದರೆ ಇಸವಿ ದಿನಾಂಕಗಳಿಲ್ಲದ ಇತಿಹಾಸ ಎಂದು ಡಾ.ಬಿ.ಆರ್.ಅಂಬೇಡ್ಕರ್ ಹೇಳಿದ್ದಾರೆ. ನಮಗೆ ಪುರಾಣ ಗ್ರಂಥಗಳಲ್ಲಿ ನಂಬಿಕೆ ಇಲ್ಲ. ಸಂವಿಧಾನ ಮೇಲೆ ನಂಬಿಕೆ. ಸಮಾನತೆಯ ಮೇಲೆ ನಂಬಿಕೆ. ಸರ್ಕಾರದ ದಸರಾ ಆಚರಣೆ ವಿರುದ್ಧವಾಗಿ ನಾವು ಮಹಿಷಾ ದಸರಾ ಆಚರಣೆ ಮಾಡುತ್ತಿಲ್ಲ. ಅಂತಹ ದುಷ್ಟರು, ದುರಂಹಕಾರಿಗಳು ನಾವಲ್ಲ. ನಮ್ಮ ಮೈಸೂರು ಮಹಿಷ ಕರ್ಮಭೂಮಿ. ಮೂಲನಿವಾಸಿಗಳ ಆದಿ ಪುರುಷಾ. ಇದು ನಮ್ಮ ಧಾರ್ಮಿಕ ಆಚರಣೆ ಎಂದು ಸ್ಪಷ್ಟಪಡಿಸಿದರು.

‘ಮಹಿಷ ಸತ್ಯ, ಚಾಮುಂಡೇಶ್ವರಿ ಮಿಥ್ಯ’. ಪ್ರತಾಪ ಸಿಂಹನಂತಹ ನೂರು ಪುಂಡಾರು ಬಂದರೂ ಮಹಿಷ ದಸರಾ ಆಚರಣೆ ತಡೆಯಲು ಸಾಧ್ಯವಿಲ್ಲ. 2011ರಿಂದಲೂ ಮಹಿಷ ದಸರಾ ಆಚರಣೆ ಮಾಡಲಾಗುತ್ತಿದೆ. ಸಿದ್ದರಾಮಯ್ಯ ಸರ್ಕಾರ ನಮ್ಮ ಧಾರ್ಮಿಕ ಆಚರಣೆ ಅನುಮತಿ ನೀಡಿತ್ತು. ಆದರೆ, 2019ರಲ್ಲಿ ಪ್ರತಾಪ ಸಿಂಹ ಎಂಬ ಪುಂಡ ನಮ್ಮ ಧಾರ್ಮಿಕ ಆಚರಣೆಗೆ ಅಡ್ಡಿ ಪಡಿಸಿದ್ದಾನೆ. ಇವರಿಗೆ ನಮ್ಮ ಆಚರಣೆ ನಿಲ್ಲಿಸುವ ಧಮ್ ಇಲ್ಲ ಎಂದು ತಿಳಿಸಿದರು.

ದೇಶದಲ್ಲಿ ಎರಡು ವಿಚಾರಕ್ಕೆ ಸಂಘರ್ಷ ನಡೆಯುತ್ತಲೆ ಬಂದಿದೆ. ಅವು ಯಾವುದೆಂದರೆ ಒಂದು ಪುರಾಣ ಮತ್ತೊಂದು ಇತಿಹಾಸ. ಪುರಾಣ ನಂಬಿದವರು ಕೆಟ್ಟಿದ್ದರೇ, ಇತಿಹಾಸವನ್ನು ನಂಬಿದವರು ಉದ್ದಾರವಾಗುತ್ತಿದ್ದಾರೆ. ಮಹಿಷ ಈ ನಾಡಿನ ರಾಜ. ಆದರೆ, ವೈದಿಕರು ಸತ್ಯವನ್ನು ಮರೆಮಾಚಿ ಪುರಾಣ ಸೃಷ್ಟಿ ಮಾಡಿದ್ದಾರೆ ಎಂದರು.

ವೈದಿಕರು ಸತ್ಯ, ಸಮಾನತೆ, ಭಾತೃತ್ವ, ಸಾಮಾಜಿಕ ನ್ಯಾಯದ ವಿರೋಧಿಗಳು. ಅವರು ಇತಿಹಾಸವನ್ನು ಒಪ್ಪಿಕೊಳ್ಳಲ್ಲ. ಇತಿಹಾಸವನ್ನು ಮರೆಮಾಚಿ ಪುರಾಣಗಳನ್ನು ಸೃಷ್ಟಿ ಮಾಡಿ ಜನಾಂಗೀಯ ವೈರುತ್ವವನ್ನು ಬೆಳೆಸಿ ಮೌಢ್ಯ ಬಿತ್ತುತ್ತಿದ್ದಾರೆ. ಚಾಮುಂಡಿಯ ಪುರಾಣ ಸೃಷ್ಟಿಯಲ್ಲೂ ಇದನ್ನು ಕಾಣಬಹುದು. ಇಲ್ಲಿ ಮಹಿಷನನ್ನು ರಾಕ್ಷಸನಾಗಿ ಬಿಂಬಿಸಲಾಗಿದೆ. ಮಹಿಷ ರಾಕ್ಷಸನ್ನಲ್ಲ. ಈ ನಾಡಿನ ರಕ್ಷಕ. ಜನ ಇತಿಹಾಸವನ್ನು ತಿಳಿಯಬೇಕು ‘ಮಹಿಷ ಸತ್ಯ, ಚಾಮುಂಡಿ ಮಿಥ್ಯ’ ಎಂಬುದನ್ನು ಅರಿಯಬೇಕು ಎಂದು ಎಚ್ಚರಿಸಿದರು.

ಇದನ್ನೂ ಓದಿ: ಕರ್ನಾಟಕ ಸರ್ಕಾರದ ಈ ಕ್ರಮದಿಂದ ಧರ್ಮನಿರಪೇಕ್ಷತೆಗೆ ಕತ್ತರಿ – ಡಾ.ಬಿ.ಪಿ.ಮಹೇಶ್‌ ಚಂದ್ರ ಗುರು

ಮಹಿಷ ಮೈಸೂರಿನ ಮೂಲ ಪುರುಷ. ಆತ ಪ್ರಾಚೀನ ಮಹಿಷ ಮಂಡಲವನ್ನು ಅಳಿದವ. ಮೈಸೂರು ಎಂಬ ಹೆಸರು ಆತನ ಮಹಿಷ ಕುಲದಿಂದ ಬಂದಿದ್ದು, ಪಾಲಿ ಭಾಷೆಯಲ್ಲಿ ಲಭ್ಯವಿರುವಂತೆ ಐತಿಹಾಸಿಕ ವಿವರಗಳ ಪ್ರಕಾರ ಅಶೋಕ ಚಕ್ರವರ್ತಿ ಕ್ರಿಸ್ತಪೂರ್ವ 3ನೇ ಶತಮಾನದಲ್ಲಿ ಮಾದೇವ (ಮಹಿಷಾ)ಎಂಬುವನನ್ನು ಬೌದ್ಧ ಧರ್ಮ ಪ್ರಚಾರಕ್ಕಾನಾಗಿ ಇಲ್ಲಿಗೆ ಬರುತ್ತಾನೆ. ಮಹಿಷಾ ಈ ಪ್ರಾಂತ್ಯವನ್ನು ದಕ್ಷಿಣ ಭಾರತದಿಂದ ಹಿಡಿದು ವಿಂದ್ಯಾಪರ್ವತದವರೆಗೂ ವಿಸ್ತರಿಸುತ್ತಾನೆ. ಇದು ಜಗತ್ತಿನಲ್ಲಿ ಇತಿಹಾಸದಲ್ಲಿ ದಾಖಲಾಗಿದೆ. ಈ ಚಾರಿತ್ರಿಕ ವ್ಯಕ್ತಿಯನ್ನು ಮನುವಾದಿಗಳು ರಾಕ್ಷಸಸನ್ನಾಗಿ ಬಿಂಬಿಸಿದ್ದಾರೆ ಎಂದು ವಿವರಿಸಿದರು.

ಮಾಜಿ ಮಹಾಪೌರ ಪುರುಷೋತ್ತಮ್ ಮಾತನಾಡಿ, ಆದಿ ಪುರುಷ ಮಹಿಷ ದಸರಾ ಆಚರಣೆ ನಮ್ಮ ಧಾರ್ಮಿಕ ಹಕ್ಕು. ಆದರೆ, ಪ್ರಜ್ಞಾವಂತ ಜಾತ್ಯತೀತ ಜನತೆ ಮಹಿಷಾ ದಸರಾ ಆಚರಣೆ ಮಾಡುತ್ತಿದ್ದಾರೆ. ಆದರೆ, ಇದಕ್ಕೆ ಜಾತಿ ಬಣ್ಣ ಕಟ್ಟಿ ಮೂಲನಿವಾಸಿಗಳ ವಿರುದ್ಧ ಸರ್ವಣೀಯರನ್ನು ಎತ್ತಿಕಟ್ಟುತ್ತಾ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಜಾತಿಗಳೇ ಇಲ್ಲದ ಮಹಿಷನ ಕಾಲದಲ್ಲಿ ಜಾತಿ ಹೇಗೆ ಬಂತೆಂದು ಈ ದುರಳ ರಾಜಕಾರಣಿಗಳು ಹೇಳಬೇಕು. ನಮ್ಮ ಧಾರ್ಮಿಕ ಆಚರಣೆಗೆ ಅನುಮತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುತ್ತೇವೆ. ಮಹಿಷ ದಸರಾವನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ. ಅನುಮತಿ ನೀಡದಿದ್ದರೂ ಮಹಿಷನಿಗೆ ಪುಷ್ಪಾರ್ಚನೆ ಮಾಡುವುದಂತೂ ಕಟ್ಟಿಟ್ಟ ಬುತ್ತಿ ಎಂದು ಹೇಳಿದರು.

ವೈದಿಕರ ಕುತಂತ್ರ ಜನತೆ ಅರಿಯಲಿ

ಚಿಂತಕ ಪ್ರೊ.ಕೆ.ಎಸ್.ಭಗವಾನ್ ಮಾತನಾಡಿ, ರಾಮಾಯಣದಲ್ಲಿಯೂ ಬೌದ್ಧಬಿಕ್ಕುಗಳನ್ನು ಕೊಲ್ಲಿಸಿ, ರಾಕ್ಷಸರಂತೆ ಬಿಂಬಿಸಲಾಗಿದೆ. ಜೊತೆಗೆ ರಾಮನ ಕೈಯಲ್ಲಿ ಬುದ್ಧನನ್ನು ಬೈಯಿಸಿದ್ದಾರೆ. ಬುದ್ಧ ಕಳ್ಳ, ನಾಸ್ತಿಕ ಎಂದು ಬೈಯಿಸಿದ್ದಾರೆ. ಬುದ್ಧನನ್ನೆ ಕಳ್ಳನೆಂದ ವೈದಿಕರ ಕುತಂತ್ರಗಳನ್ನು ಜನರು ಅರಿಯಬೇಕು. ವೈದಿಕರು ಬಿಂಬಿಸಿರುವಾಗೇ ಮಹಿಷ ರಾಕ್ಷಸನಾಗಿದ್ದರೆ ಮೈಸೂರಿಗೆ ಆತನ ಹೆಸರು ಯಾಕೇ ನಾಮಕಾರಣ ಮಾಡುತ್ತಿದ್ದರು. ಮಹಿಷ ಜನಾರೋದ್ಧಾರಕ, ಜನ ರಕ್ಷಕ. ಯುವ ಸಮೂಹ ಇತಿಹಾಸ ಅರಿಬೇಕು. ಪುರಾಣಗಳನ್ನು ತಿರಸ್ಕರಿಸಬೇಕು ಎಂದು ಕಿವಿಮಾತು ಹೇಳಿದರು.

ದೇವಾಲಯ ತೆರವು ಅಕ್ಷಮ್ಯ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮು ಮಾತನಾಡಿ, ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ದೇವಾಲಯಗಳನ್ನು ತೆರವುಗೊಳಿಸುತ್ತಿರುವುದು ಅಕ್ಷಮ್ಯ. ಇದನ್ನು ಸಹಿಸಲು ಆಗದು. ಹಿಂದೂ ಧರ್ಮದ ರಕ್ಷಕರಂತೆ ಬಿಂಬಿಸಿಕೊಂಡು ಅಧಿಕಾರಕ್ಕೇರಿದ ಬಿಜೆಪಿ ಅವರು ದೇವಾಲಯಗಳನ್ನು ಹೊಡೆಯುತ್ತಿದ್ದರು ಯಾಕೇ ಸುಮ್ಮನಿದ್ದಾರೆ. ಸರ್ವೋಚ್ಚ ನ್ಯಾಯಾಲಯದಲ್ಲಿ ತೀರ್ಪಿನ ಮರುಪರಿಶೀಲನೆ ಅರ್ಜಿ ಯಾಕೇ ಸಲ್ಲಿಸಲಿಲ್ಲ. ಇದನ್ನು ಪ್ರಶ್ನಿಸಿ ಸಂಸದ ಪ್ರತಾಪ ಸಿಂಹ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜೀನಾಮೆ ನೀಡುವಂತೆ ಆಗ್ರಹಿಸಬೇಕು. ದೇಶದಾದ್ಯಂತ ತೀರ್ಪು ಬಂದಿದ್ದರೂ ಮೈಸೂರಿನಲ್ಲಿಯೇ ಯಾಕೇ ದೇವಾಸ್ಥಾನಗಳನ್ನು ಹೊಡೆಯುತ್ತಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಕಾರಣ ಎಂದು ದೂರಿದರು.


ಇದನ್ನೂ ಓದಿ: ದೀನ ದಲಿತೋದ್ಧಾರಕ ಮಹಾತ್ಮ ಕುದ್ಮುಲ್ ರಂಗರಾವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...