HomeUncategorizedಯಾವ ಪುಂಡನೂ ಅ.5ರಂದು ಮಹಿಷ ದಸರಾ ನಿಲ್ಲಿಸಲಾರನು: ಪ್ರೊ.ಗುರು

ಯಾವ ಪುಂಡನೂ ಅ.5ರಂದು ಮಹಿಷ ದಸರಾ ನಿಲ್ಲಿಸಲಾರನು: ಪ್ರೊ.ಗುರು

‘ಮಹಿಷ ಸತ್ಯ, ಚಾಮುಂಡೇಶ್ವರಿ ಮಿಥ್ಯ’. ಪ್ರತಾಪ ಸಿಂಹನಂತಹ ನೂರು ಪುಂಡಾರು ಬಂದರೂ ಮಹಿಷ ದಸರಾ ಆಚರಣೆ ತಡೆಯಲು ಸಾಧ್ಯವಿಲ್ಲ ಎಂದು ಪ್ರೊ.ಮಹೇಶ್‌ಚಂದ್ರ ಗುರು ಹೇಳಿದ್ದಾರೆ.

- Advertisement -
- Advertisement -

ಮಹಿಷ ದಸರಾ ಯಾರ ವಿರುದ್ಧವೂ ಅಲ್ಲ; ಯಾರಿಂದಲೂ ಮಹಿಷ ದಸರಾ ನಿಲ್ಲಿಸಲು ಸಾಧ್ಯವಿಲ್ಲ ಎಂದು ಪ್ರೊ.ಮಹೇಶ್‌ಚಂದ್ರ ಗುರು ಹೇಳಿದ್ದಾರೆ.

ಮೈಸೂರು ನಗರದ ಮಹಿಷ ದಸರಾ ಅನುಷ್ಠಾನ ಸಮಿತಿ ವತಿಯಿಂದ ಅಕ್ಟೋಬರ್‌ 5ರಂದು ಅಶೋಕಪುರಂ ಉದ್ಯಾನದಲ್ಲಿ ಮಹಿಷ ದಸರಾ ಉತ್ಸವ ಮೂರ್ತಿ ಅನಾವರಣ ಹಾಗೂ ಪುಷ್ಪಾರ್ಚನೆ ಕಾರ್ಯಕ್ರಮ ಆಯೋಜಿಸಿರುವ ಸಂಬಂಧ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ವೈದಿಕರ ಇತಿಹಾಸವೆಂದರೆ ಇಸವಿ ದಿನಾಂಕಗಳಿಲ್ಲದ ಇತಿಹಾಸ ಎಂದು ಡಾ.ಬಿ.ಆರ್.ಅಂಬೇಡ್ಕರ್ ಹೇಳಿದ್ದಾರೆ. ನಮಗೆ ಪುರಾಣ ಗ್ರಂಥಗಳಲ್ಲಿ ನಂಬಿಕೆ ಇಲ್ಲ. ಸಂವಿಧಾನ ಮೇಲೆ ನಂಬಿಕೆ. ಸಮಾನತೆಯ ಮೇಲೆ ನಂಬಿಕೆ. ಸರ್ಕಾರದ ದಸರಾ ಆಚರಣೆ ವಿರುದ್ಧವಾಗಿ ನಾವು ಮಹಿಷಾ ದಸರಾ ಆಚರಣೆ ಮಾಡುತ್ತಿಲ್ಲ. ಅಂತಹ ದುಷ್ಟರು, ದುರಂಹಕಾರಿಗಳು ನಾವಲ್ಲ. ನಮ್ಮ ಮೈಸೂರು ಮಹಿಷ ಕರ್ಮಭೂಮಿ. ಮೂಲನಿವಾಸಿಗಳ ಆದಿ ಪುರುಷಾ. ಇದು ನಮ್ಮ ಧಾರ್ಮಿಕ ಆಚರಣೆ ಎಂದು ಸ್ಪಷ್ಟಪಡಿಸಿದರು.

‘ಮಹಿಷ ಸತ್ಯ, ಚಾಮುಂಡೇಶ್ವರಿ ಮಿಥ್ಯ’. ಪ್ರತಾಪ ಸಿಂಹನಂತಹ ನೂರು ಪುಂಡಾರು ಬಂದರೂ ಮಹಿಷ ದಸರಾ ಆಚರಣೆ ತಡೆಯಲು ಸಾಧ್ಯವಿಲ್ಲ. 2011ರಿಂದಲೂ ಮಹಿಷ ದಸರಾ ಆಚರಣೆ ಮಾಡಲಾಗುತ್ತಿದೆ. ಸಿದ್ದರಾಮಯ್ಯ ಸರ್ಕಾರ ನಮ್ಮ ಧಾರ್ಮಿಕ ಆಚರಣೆ ಅನುಮತಿ ನೀಡಿತ್ತು. ಆದರೆ, 2019ರಲ್ಲಿ ಪ್ರತಾಪ ಸಿಂಹ ಎಂಬ ಪುಂಡ ನಮ್ಮ ಧಾರ್ಮಿಕ ಆಚರಣೆಗೆ ಅಡ್ಡಿ ಪಡಿಸಿದ್ದಾನೆ. ಇವರಿಗೆ ನಮ್ಮ ಆಚರಣೆ ನಿಲ್ಲಿಸುವ ಧಮ್ ಇಲ್ಲ ಎಂದು ತಿಳಿಸಿದರು.

ದೇಶದಲ್ಲಿ ಎರಡು ವಿಚಾರಕ್ಕೆ ಸಂಘರ್ಷ ನಡೆಯುತ್ತಲೆ ಬಂದಿದೆ. ಅವು ಯಾವುದೆಂದರೆ ಒಂದು ಪುರಾಣ ಮತ್ತೊಂದು ಇತಿಹಾಸ. ಪುರಾಣ ನಂಬಿದವರು ಕೆಟ್ಟಿದ್ದರೇ, ಇತಿಹಾಸವನ್ನು ನಂಬಿದವರು ಉದ್ದಾರವಾಗುತ್ತಿದ್ದಾರೆ. ಮಹಿಷ ಈ ನಾಡಿನ ರಾಜ. ಆದರೆ, ವೈದಿಕರು ಸತ್ಯವನ್ನು ಮರೆಮಾಚಿ ಪುರಾಣ ಸೃಷ್ಟಿ ಮಾಡಿದ್ದಾರೆ ಎಂದರು.

ವೈದಿಕರು ಸತ್ಯ, ಸಮಾನತೆ, ಭಾತೃತ್ವ, ಸಾಮಾಜಿಕ ನ್ಯಾಯದ ವಿರೋಧಿಗಳು. ಅವರು ಇತಿಹಾಸವನ್ನು ಒಪ್ಪಿಕೊಳ್ಳಲ್ಲ. ಇತಿಹಾಸವನ್ನು ಮರೆಮಾಚಿ ಪುರಾಣಗಳನ್ನು ಸೃಷ್ಟಿ ಮಾಡಿ ಜನಾಂಗೀಯ ವೈರುತ್ವವನ್ನು ಬೆಳೆಸಿ ಮೌಢ್ಯ ಬಿತ್ತುತ್ತಿದ್ದಾರೆ. ಚಾಮುಂಡಿಯ ಪುರಾಣ ಸೃಷ್ಟಿಯಲ್ಲೂ ಇದನ್ನು ಕಾಣಬಹುದು. ಇಲ್ಲಿ ಮಹಿಷನನ್ನು ರಾಕ್ಷಸನಾಗಿ ಬಿಂಬಿಸಲಾಗಿದೆ. ಮಹಿಷ ರಾಕ್ಷಸನ್ನಲ್ಲ. ಈ ನಾಡಿನ ರಕ್ಷಕ. ಜನ ಇತಿಹಾಸವನ್ನು ತಿಳಿಯಬೇಕು ‘ಮಹಿಷ ಸತ್ಯ, ಚಾಮುಂಡಿ ಮಿಥ್ಯ’ ಎಂಬುದನ್ನು ಅರಿಯಬೇಕು ಎಂದು ಎಚ್ಚರಿಸಿದರು.

ಇದನ್ನೂ ಓದಿ: ಕರ್ನಾಟಕ ಸರ್ಕಾರದ ಈ ಕ್ರಮದಿಂದ ಧರ್ಮನಿರಪೇಕ್ಷತೆಗೆ ಕತ್ತರಿ – ಡಾ.ಬಿ.ಪಿ.ಮಹೇಶ್‌ ಚಂದ್ರ ಗುರು

ಮಹಿಷ ಮೈಸೂರಿನ ಮೂಲ ಪುರುಷ. ಆತ ಪ್ರಾಚೀನ ಮಹಿಷ ಮಂಡಲವನ್ನು ಅಳಿದವ. ಮೈಸೂರು ಎಂಬ ಹೆಸರು ಆತನ ಮಹಿಷ ಕುಲದಿಂದ ಬಂದಿದ್ದು, ಪಾಲಿ ಭಾಷೆಯಲ್ಲಿ ಲಭ್ಯವಿರುವಂತೆ ಐತಿಹಾಸಿಕ ವಿವರಗಳ ಪ್ರಕಾರ ಅಶೋಕ ಚಕ್ರವರ್ತಿ ಕ್ರಿಸ್ತಪೂರ್ವ 3ನೇ ಶತಮಾನದಲ್ಲಿ ಮಾದೇವ (ಮಹಿಷಾ)ಎಂಬುವನನ್ನು ಬೌದ್ಧ ಧರ್ಮ ಪ್ರಚಾರಕ್ಕಾನಾಗಿ ಇಲ್ಲಿಗೆ ಬರುತ್ತಾನೆ. ಮಹಿಷಾ ಈ ಪ್ರಾಂತ್ಯವನ್ನು ದಕ್ಷಿಣ ಭಾರತದಿಂದ ಹಿಡಿದು ವಿಂದ್ಯಾಪರ್ವತದವರೆಗೂ ವಿಸ್ತರಿಸುತ್ತಾನೆ. ಇದು ಜಗತ್ತಿನಲ್ಲಿ ಇತಿಹಾಸದಲ್ಲಿ ದಾಖಲಾಗಿದೆ. ಈ ಚಾರಿತ್ರಿಕ ವ್ಯಕ್ತಿಯನ್ನು ಮನುವಾದಿಗಳು ರಾಕ್ಷಸಸನ್ನಾಗಿ ಬಿಂಬಿಸಿದ್ದಾರೆ ಎಂದು ವಿವರಿಸಿದರು.

ಮಾಜಿ ಮಹಾಪೌರ ಪುರುಷೋತ್ತಮ್ ಮಾತನಾಡಿ, ಆದಿ ಪುರುಷ ಮಹಿಷ ದಸರಾ ಆಚರಣೆ ನಮ್ಮ ಧಾರ್ಮಿಕ ಹಕ್ಕು. ಆದರೆ, ಪ್ರಜ್ಞಾವಂತ ಜಾತ್ಯತೀತ ಜನತೆ ಮಹಿಷಾ ದಸರಾ ಆಚರಣೆ ಮಾಡುತ್ತಿದ್ದಾರೆ. ಆದರೆ, ಇದಕ್ಕೆ ಜಾತಿ ಬಣ್ಣ ಕಟ್ಟಿ ಮೂಲನಿವಾಸಿಗಳ ವಿರುದ್ಧ ಸರ್ವಣೀಯರನ್ನು ಎತ್ತಿಕಟ್ಟುತ್ತಾ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಜಾತಿಗಳೇ ಇಲ್ಲದ ಮಹಿಷನ ಕಾಲದಲ್ಲಿ ಜಾತಿ ಹೇಗೆ ಬಂತೆಂದು ಈ ದುರಳ ರಾಜಕಾರಣಿಗಳು ಹೇಳಬೇಕು. ನಮ್ಮ ಧಾರ್ಮಿಕ ಆಚರಣೆಗೆ ಅನುಮತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುತ್ತೇವೆ. ಮಹಿಷ ದಸರಾವನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ. ಅನುಮತಿ ನೀಡದಿದ್ದರೂ ಮಹಿಷನಿಗೆ ಪುಷ್ಪಾರ್ಚನೆ ಮಾಡುವುದಂತೂ ಕಟ್ಟಿಟ್ಟ ಬುತ್ತಿ ಎಂದು ಹೇಳಿದರು.

ವೈದಿಕರ ಕುತಂತ್ರ ಜನತೆ ಅರಿಯಲಿ

ಚಿಂತಕ ಪ್ರೊ.ಕೆ.ಎಸ್.ಭಗವಾನ್ ಮಾತನಾಡಿ, ರಾಮಾಯಣದಲ್ಲಿಯೂ ಬೌದ್ಧಬಿಕ್ಕುಗಳನ್ನು ಕೊಲ್ಲಿಸಿ, ರಾಕ್ಷಸರಂತೆ ಬಿಂಬಿಸಲಾಗಿದೆ. ಜೊತೆಗೆ ರಾಮನ ಕೈಯಲ್ಲಿ ಬುದ್ಧನನ್ನು ಬೈಯಿಸಿದ್ದಾರೆ. ಬುದ್ಧ ಕಳ್ಳ, ನಾಸ್ತಿಕ ಎಂದು ಬೈಯಿಸಿದ್ದಾರೆ. ಬುದ್ಧನನ್ನೆ ಕಳ್ಳನೆಂದ ವೈದಿಕರ ಕುತಂತ್ರಗಳನ್ನು ಜನರು ಅರಿಯಬೇಕು. ವೈದಿಕರು ಬಿಂಬಿಸಿರುವಾಗೇ ಮಹಿಷ ರಾಕ್ಷಸನಾಗಿದ್ದರೆ ಮೈಸೂರಿಗೆ ಆತನ ಹೆಸರು ಯಾಕೇ ನಾಮಕಾರಣ ಮಾಡುತ್ತಿದ್ದರು. ಮಹಿಷ ಜನಾರೋದ್ಧಾರಕ, ಜನ ರಕ್ಷಕ. ಯುವ ಸಮೂಹ ಇತಿಹಾಸ ಅರಿಬೇಕು. ಪುರಾಣಗಳನ್ನು ತಿರಸ್ಕರಿಸಬೇಕು ಎಂದು ಕಿವಿಮಾತು ಹೇಳಿದರು.

ದೇವಾಲಯ ತೆರವು ಅಕ್ಷಮ್ಯ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮು ಮಾತನಾಡಿ, ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ದೇವಾಲಯಗಳನ್ನು ತೆರವುಗೊಳಿಸುತ್ತಿರುವುದು ಅಕ್ಷಮ್ಯ. ಇದನ್ನು ಸಹಿಸಲು ಆಗದು. ಹಿಂದೂ ಧರ್ಮದ ರಕ್ಷಕರಂತೆ ಬಿಂಬಿಸಿಕೊಂಡು ಅಧಿಕಾರಕ್ಕೇರಿದ ಬಿಜೆಪಿ ಅವರು ದೇವಾಲಯಗಳನ್ನು ಹೊಡೆಯುತ್ತಿದ್ದರು ಯಾಕೇ ಸುಮ್ಮನಿದ್ದಾರೆ. ಸರ್ವೋಚ್ಚ ನ್ಯಾಯಾಲಯದಲ್ಲಿ ತೀರ್ಪಿನ ಮರುಪರಿಶೀಲನೆ ಅರ್ಜಿ ಯಾಕೇ ಸಲ್ಲಿಸಲಿಲ್ಲ. ಇದನ್ನು ಪ್ರಶ್ನಿಸಿ ಸಂಸದ ಪ್ರತಾಪ ಸಿಂಹ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜೀನಾಮೆ ನೀಡುವಂತೆ ಆಗ್ರಹಿಸಬೇಕು. ದೇಶದಾದ್ಯಂತ ತೀರ್ಪು ಬಂದಿದ್ದರೂ ಮೈಸೂರಿನಲ್ಲಿಯೇ ಯಾಕೇ ದೇವಾಸ್ಥಾನಗಳನ್ನು ಹೊಡೆಯುತ್ತಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಕಾರಣ ಎಂದು ದೂರಿದರು.


ಇದನ್ನೂ ಓದಿ: ದೀನ ದಲಿತೋದ್ಧಾರಕ ಮಹಾತ್ಮ ಕುದ್ಮುಲ್ ರಂಗರಾವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....