HomeUncategorizedಯಾವ ಪುಂಡನೂ ಅ.5ರಂದು ಮಹಿಷ ದಸರಾ ನಿಲ್ಲಿಸಲಾರನು: ಪ್ರೊ.ಗುರು

ಯಾವ ಪುಂಡನೂ ಅ.5ರಂದು ಮಹಿಷ ದಸರಾ ನಿಲ್ಲಿಸಲಾರನು: ಪ್ರೊ.ಗುರು

‘ಮಹಿಷ ಸತ್ಯ, ಚಾಮುಂಡೇಶ್ವರಿ ಮಿಥ್ಯ’. ಪ್ರತಾಪ ಸಿಂಹನಂತಹ ನೂರು ಪುಂಡಾರು ಬಂದರೂ ಮಹಿಷ ದಸರಾ ಆಚರಣೆ ತಡೆಯಲು ಸಾಧ್ಯವಿಲ್ಲ ಎಂದು ಪ್ರೊ.ಮಹೇಶ್‌ಚಂದ್ರ ಗುರು ಹೇಳಿದ್ದಾರೆ.

- Advertisement -
- Advertisement -

ಮಹಿಷ ದಸರಾ ಯಾರ ವಿರುದ್ಧವೂ ಅಲ್ಲ; ಯಾರಿಂದಲೂ ಮಹಿಷ ದಸರಾ ನಿಲ್ಲಿಸಲು ಸಾಧ್ಯವಿಲ್ಲ ಎಂದು ಪ್ರೊ.ಮಹೇಶ್‌ಚಂದ್ರ ಗುರು ಹೇಳಿದ್ದಾರೆ.

ಮೈಸೂರು ನಗರದ ಮಹಿಷ ದಸರಾ ಅನುಷ್ಠಾನ ಸಮಿತಿ ವತಿಯಿಂದ ಅಕ್ಟೋಬರ್‌ 5ರಂದು ಅಶೋಕಪುರಂ ಉದ್ಯಾನದಲ್ಲಿ ಮಹಿಷ ದಸರಾ ಉತ್ಸವ ಮೂರ್ತಿ ಅನಾವರಣ ಹಾಗೂ ಪುಷ್ಪಾರ್ಚನೆ ಕಾರ್ಯಕ್ರಮ ಆಯೋಜಿಸಿರುವ ಸಂಬಂಧ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ವೈದಿಕರ ಇತಿಹಾಸವೆಂದರೆ ಇಸವಿ ದಿನಾಂಕಗಳಿಲ್ಲದ ಇತಿಹಾಸ ಎಂದು ಡಾ.ಬಿ.ಆರ್.ಅಂಬೇಡ್ಕರ್ ಹೇಳಿದ್ದಾರೆ. ನಮಗೆ ಪುರಾಣ ಗ್ರಂಥಗಳಲ್ಲಿ ನಂಬಿಕೆ ಇಲ್ಲ. ಸಂವಿಧಾನ ಮೇಲೆ ನಂಬಿಕೆ. ಸಮಾನತೆಯ ಮೇಲೆ ನಂಬಿಕೆ. ಸರ್ಕಾರದ ದಸರಾ ಆಚರಣೆ ವಿರುದ್ಧವಾಗಿ ನಾವು ಮಹಿಷಾ ದಸರಾ ಆಚರಣೆ ಮಾಡುತ್ತಿಲ್ಲ. ಅಂತಹ ದುಷ್ಟರು, ದುರಂಹಕಾರಿಗಳು ನಾವಲ್ಲ. ನಮ್ಮ ಮೈಸೂರು ಮಹಿಷ ಕರ್ಮಭೂಮಿ. ಮೂಲನಿವಾಸಿಗಳ ಆದಿ ಪುರುಷಾ. ಇದು ನಮ್ಮ ಧಾರ್ಮಿಕ ಆಚರಣೆ ಎಂದು ಸ್ಪಷ್ಟಪಡಿಸಿದರು.

‘ಮಹಿಷ ಸತ್ಯ, ಚಾಮುಂಡೇಶ್ವರಿ ಮಿಥ್ಯ’. ಪ್ರತಾಪ ಸಿಂಹನಂತಹ ನೂರು ಪುಂಡಾರು ಬಂದರೂ ಮಹಿಷ ದಸರಾ ಆಚರಣೆ ತಡೆಯಲು ಸಾಧ್ಯವಿಲ್ಲ. 2011ರಿಂದಲೂ ಮಹಿಷ ದಸರಾ ಆಚರಣೆ ಮಾಡಲಾಗುತ್ತಿದೆ. ಸಿದ್ದರಾಮಯ್ಯ ಸರ್ಕಾರ ನಮ್ಮ ಧಾರ್ಮಿಕ ಆಚರಣೆ ಅನುಮತಿ ನೀಡಿತ್ತು. ಆದರೆ, 2019ರಲ್ಲಿ ಪ್ರತಾಪ ಸಿಂಹ ಎಂಬ ಪುಂಡ ನಮ್ಮ ಧಾರ್ಮಿಕ ಆಚರಣೆಗೆ ಅಡ್ಡಿ ಪಡಿಸಿದ್ದಾನೆ. ಇವರಿಗೆ ನಮ್ಮ ಆಚರಣೆ ನಿಲ್ಲಿಸುವ ಧಮ್ ಇಲ್ಲ ಎಂದು ತಿಳಿಸಿದರು.

ದೇಶದಲ್ಲಿ ಎರಡು ವಿಚಾರಕ್ಕೆ ಸಂಘರ್ಷ ನಡೆಯುತ್ತಲೆ ಬಂದಿದೆ. ಅವು ಯಾವುದೆಂದರೆ ಒಂದು ಪುರಾಣ ಮತ್ತೊಂದು ಇತಿಹಾಸ. ಪುರಾಣ ನಂಬಿದವರು ಕೆಟ್ಟಿದ್ದರೇ, ಇತಿಹಾಸವನ್ನು ನಂಬಿದವರು ಉದ್ದಾರವಾಗುತ್ತಿದ್ದಾರೆ. ಮಹಿಷ ಈ ನಾಡಿನ ರಾಜ. ಆದರೆ, ವೈದಿಕರು ಸತ್ಯವನ್ನು ಮರೆಮಾಚಿ ಪುರಾಣ ಸೃಷ್ಟಿ ಮಾಡಿದ್ದಾರೆ ಎಂದರು.

ವೈದಿಕರು ಸತ್ಯ, ಸಮಾನತೆ, ಭಾತೃತ್ವ, ಸಾಮಾಜಿಕ ನ್ಯಾಯದ ವಿರೋಧಿಗಳು. ಅವರು ಇತಿಹಾಸವನ್ನು ಒಪ್ಪಿಕೊಳ್ಳಲ್ಲ. ಇತಿಹಾಸವನ್ನು ಮರೆಮಾಚಿ ಪುರಾಣಗಳನ್ನು ಸೃಷ್ಟಿ ಮಾಡಿ ಜನಾಂಗೀಯ ವೈರುತ್ವವನ್ನು ಬೆಳೆಸಿ ಮೌಢ್ಯ ಬಿತ್ತುತ್ತಿದ್ದಾರೆ. ಚಾಮುಂಡಿಯ ಪುರಾಣ ಸೃಷ್ಟಿಯಲ್ಲೂ ಇದನ್ನು ಕಾಣಬಹುದು. ಇಲ್ಲಿ ಮಹಿಷನನ್ನು ರಾಕ್ಷಸನಾಗಿ ಬಿಂಬಿಸಲಾಗಿದೆ. ಮಹಿಷ ರಾಕ್ಷಸನ್ನಲ್ಲ. ಈ ನಾಡಿನ ರಕ್ಷಕ. ಜನ ಇತಿಹಾಸವನ್ನು ತಿಳಿಯಬೇಕು ‘ಮಹಿಷ ಸತ್ಯ, ಚಾಮುಂಡಿ ಮಿಥ್ಯ’ ಎಂಬುದನ್ನು ಅರಿಯಬೇಕು ಎಂದು ಎಚ್ಚರಿಸಿದರು.

ಇದನ್ನೂ ಓದಿ: ಕರ್ನಾಟಕ ಸರ್ಕಾರದ ಈ ಕ್ರಮದಿಂದ ಧರ್ಮನಿರಪೇಕ್ಷತೆಗೆ ಕತ್ತರಿ – ಡಾ.ಬಿ.ಪಿ.ಮಹೇಶ್‌ ಚಂದ್ರ ಗುರು

ಮಹಿಷ ಮೈಸೂರಿನ ಮೂಲ ಪುರುಷ. ಆತ ಪ್ರಾಚೀನ ಮಹಿಷ ಮಂಡಲವನ್ನು ಅಳಿದವ. ಮೈಸೂರು ಎಂಬ ಹೆಸರು ಆತನ ಮಹಿಷ ಕುಲದಿಂದ ಬಂದಿದ್ದು, ಪಾಲಿ ಭಾಷೆಯಲ್ಲಿ ಲಭ್ಯವಿರುವಂತೆ ಐತಿಹಾಸಿಕ ವಿವರಗಳ ಪ್ರಕಾರ ಅಶೋಕ ಚಕ್ರವರ್ತಿ ಕ್ರಿಸ್ತಪೂರ್ವ 3ನೇ ಶತಮಾನದಲ್ಲಿ ಮಾದೇವ (ಮಹಿಷಾ)ಎಂಬುವನನ್ನು ಬೌದ್ಧ ಧರ್ಮ ಪ್ರಚಾರಕ್ಕಾನಾಗಿ ಇಲ್ಲಿಗೆ ಬರುತ್ತಾನೆ. ಮಹಿಷಾ ಈ ಪ್ರಾಂತ್ಯವನ್ನು ದಕ್ಷಿಣ ಭಾರತದಿಂದ ಹಿಡಿದು ವಿಂದ್ಯಾಪರ್ವತದವರೆಗೂ ವಿಸ್ತರಿಸುತ್ತಾನೆ. ಇದು ಜಗತ್ತಿನಲ್ಲಿ ಇತಿಹಾಸದಲ್ಲಿ ದಾಖಲಾಗಿದೆ. ಈ ಚಾರಿತ್ರಿಕ ವ್ಯಕ್ತಿಯನ್ನು ಮನುವಾದಿಗಳು ರಾಕ್ಷಸಸನ್ನಾಗಿ ಬಿಂಬಿಸಿದ್ದಾರೆ ಎಂದು ವಿವರಿಸಿದರು.

ಮಾಜಿ ಮಹಾಪೌರ ಪುರುಷೋತ್ತಮ್ ಮಾತನಾಡಿ, ಆದಿ ಪುರುಷ ಮಹಿಷ ದಸರಾ ಆಚರಣೆ ನಮ್ಮ ಧಾರ್ಮಿಕ ಹಕ್ಕು. ಆದರೆ, ಪ್ರಜ್ಞಾವಂತ ಜಾತ್ಯತೀತ ಜನತೆ ಮಹಿಷಾ ದಸರಾ ಆಚರಣೆ ಮಾಡುತ್ತಿದ್ದಾರೆ. ಆದರೆ, ಇದಕ್ಕೆ ಜಾತಿ ಬಣ್ಣ ಕಟ್ಟಿ ಮೂಲನಿವಾಸಿಗಳ ವಿರುದ್ಧ ಸರ್ವಣೀಯರನ್ನು ಎತ್ತಿಕಟ್ಟುತ್ತಾ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಜಾತಿಗಳೇ ಇಲ್ಲದ ಮಹಿಷನ ಕಾಲದಲ್ಲಿ ಜಾತಿ ಹೇಗೆ ಬಂತೆಂದು ಈ ದುರಳ ರಾಜಕಾರಣಿಗಳು ಹೇಳಬೇಕು. ನಮ್ಮ ಧಾರ್ಮಿಕ ಆಚರಣೆಗೆ ಅನುಮತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುತ್ತೇವೆ. ಮಹಿಷ ದಸರಾವನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ. ಅನುಮತಿ ನೀಡದಿದ್ದರೂ ಮಹಿಷನಿಗೆ ಪುಷ್ಪಾರ್ಚನೆ ಮಾಡುವುದಂತೂ ಕಟ್ಟಿಟ್ಟ ಬುತ್ತಿ ಎಂದು ಹೇಳಿದರು.

ವೈದಿಕರ ಕುತಂತ್ರ ಜನತೆ ಅರಿಯಲಿ

ಚಿಂತಕ ಪ್ರೊ.ಕೆ.ಎಸ್.ಭಗವಾನ್ ಮಾತನಾಡಿ, ರಾಮಾಯಣದಲ್ಲಿಯೂ ಬೌದ್ಧಬಿಕ್ಕುಗಳನ್ನು ಕೊಲ್ಲಿಸಿ, ರಾಕ್ಷಸರಂತೆ ಬಿಂಬಿಸಲಾಗಿದೆ. ಜೊತೆಗೆ ರಾಮನ ಕೈಯಲ್ಲಿ ಬುದ್ಧನನ್ನು ಬೈಯಿಸಿದ್ದಾರೆ. ಬುದ್ಧ ಕಳ್ಳ, ನಾಸ್ತಿಕ ಎಂದು ಬೈಯಿಸಿದ್ದಾರೆ. ಬುದ್ಧನನ್ನೆ ಕಳ್ಳನೆಂದ ವೈದಿಕರ ಕುತಂತ್ರಗಳನ್ನು ಜನರು ಅರಿಯಬೇಕು. ವೈದಿಕರು ಬಿಂಬಿಸಿರುವಾಗೇ ಮಹಿಷ ರಾಕ್ಷಸನಾಗಿದ್ದರೆ ಮೈಸೂರಿಗೆ ಆತನ ಹೆಸರು ಯಾಕೇ ನಾಮಕಾರಣ ಮಾಡುತ್ತಿದ್ದರು. ಮಹಿಷ ಜನಾರೋದ್ಧಾರಕ, ಜನ ರಕ್ಷಕ. ಯುವ ಸಮೂಹ ಇತಿಹಾಸ ಅರಿಬೇಕು. ಪುರಾಣಗಳನ್ನು ತಿರಸ್ಕರಿಸಬೇಕು ಎಂದು ಕಿವಿಮಾತು ಹೇಳಿದರು.

ದೇವಾಲಯ ತೆರವು ಅಕ್ಷಮ್ಯ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮು ಮಾತನಾಡಿ, ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ದೇವಾಲಯಗಳನ್ನು ತೆರವುಗೊಳಿಸುತ್ತಿರುವುದು ಅಕ್ಷಮ್ಯ. ಇದನ್ನು ಸಹಿಸಲು ಆಗದು. ಹಿಂದೂ ಧರ್ಮದ ರಕ್ಷಕರಂತೆ ಬಿಂಬಿಸಿಕೊಂಡು ಅಧಿಕಾರಕ್ಕೇರಿದ ಬಿಜೆಪಿ ಅವರು ದೇವಾಲಯಗಳನ್ನು ಹೊಡೆಯುತ್ತಿದ್ದರು ಯಾಕೇ ಸುಮ್ಮನಿದ್ದಾರೆ. ಸರ್ವೋಚ್ಚ ನ್ಯಾಯಾಲಯದಲ್ಲಿ ತೀರ್ಪಿನ ಮರುಪರಿಶೀಲನೆ ಅರ್ಜಿ ಯಾಕೇ ಸಲ್ಲಿಸಲಿಲ್ಲ. ಇದನ್ನು ಪ್ರಶ್ನಿಸಿ ಸಂಸದ ಪ್ರತಾಪ ಸಿಂಹ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜೀನಾಮೆ ನೀಡುವಂತೆ ಆಗ್ರಹಿಸಬೇಕು. ದೇಶದಾದ್ಯಂತ ತೀರ್ಪು ಬಂದಿದ್ದರೂ ಮೈಸೂರಿನಲ್ಲಿಯೇ ಯಾಕೇ ದೇವಾಸ್ಥಾನಗಳನ್ನು ಹೊಡೆಯುತ್ತಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಕಾರಣ ಎಂದು ದೂರಿದರು.


ಇದನ್ನೂ ಓದಿ: ದೀನ ದಲಿತೋದ್ಧಾರಕ ಮಹಾತ್ಮ ಕುದ್ಮುಲ್ ರಂಗರಾವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...