HomeUncategorizedಯಾವ ಪುಂಡನೂ ಅ.5ರಂದು ಮಹಿಷ ದಸರಾ ನಿಲ್ಲಿಸಲಾರನು: ಪ್ರೊ.ಗುರು

ಯಾವ ಪುಂಡನೂ ಅ.5ರಂದು ಮಹಿಷ ದಸರಾ ನಿಲ್ಲಿಸಲಾರನು: ಪ್ರೊ.ಗುರು

‘ಮಹಿಷ ಸತ್ಯ, ಚಾಮುಂಡೇಶ್ವರಿ ಮಿಥ್ಯ’. ಪ್ರತಾಪ ಸಿಂಹನಂತಹ ನೂರು ಪುಂಡಾರು ಬಂದರೂ ಮಹಿಷ ದಸರಾ ಆಚರಣೆ ತಡೆಯಲು ಸಾಧ್ಯವಿಲ್ಲ ಎಂದು ಪ್ರೊ.ಮಹೇಶ್‌ಚಂದ್ರ ಗುರು ಹೇಳಿದ್ದಾರೆ.

- Advertisement -
- Advertisement -

ಮಹಿಷ ದಸರಾ ಯಾರ ವಿರುದ್ಧವೂ ಅಲ್ಲ; ಯಾರಿಂದಲೂ ಮಹಿಷ ದಸರಾ ನಿಲ್ಲಿಸಲು ಸಾಧ್ಯವಿಲ್ಲ ಎಂದು ಪ್ರೊ.ಮಹೇಶ್‌ಚಂದ್ರ ಗುರು ಹೇಳಿದ್ದಾರೆ.

ಮೈಸೂರು ನಗರದ ಮಹಿಷ ದಸರಾ ಅನುಷ್ಠಾನ ಸಮಿತಿ ವತಿಯಿಂದ ಅಕ್ಟೋಬರ್‌ 5ರಂದು ಅಶೋಕಪುರಂ ಉದ್ಯಾನದಲ್ಲಿ ಮಹಿಷ ದಸರಾ ಉತ್ಸವ ಮೂರ್ತಿ ಅನಾವರಣ ಹಾಗೂ ಪುಷ್ಪಾರ್ಚನೆ ಕಾರ್ಯಕ್ರಮ ಆಯೋಜಿಸಿರುವ ಸಂಬಂಧ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ವೈದಿಕರ ಇತಿಹಾಸವೆಂದರೆ ಇಸವಿ ದಿನಾಂಕಗಳಿಲ್ಲದ ಇತಿಹಾಸ ಎಂದು ಡಾ.ಬಿ.ಆರ್.ಅಂಬೇಡ್ಕರ್ ಹೇಳಿದ್ದಾರೆ. ನಮಗೆ ಪುರಾಣ ಗ್ರಂಥಗಳಲ್ಲಿ ನಂಬಿಕೆ ಇಲ್ಲ. ಸಂವಿಧಾನ ಮೇಲೆ ನಂಬಿಕೆ. ಸಮಾನತೆಯ ಮೇಲೆ ನಂಬಿಕೆ. ಸರ್ಕಾರದ ದಸರಾ ಆಚರಣೆ ವಿರುದ್ಧವಾಗಿ ನಾವು ಮಹಿಷಾ ದಸರಾ ಆಚರಣೆ ಮಾಡುತ್ತಿಲ್ಲ. ಅಂತಹ ದುಷ್ಟರು, ದುರಂಹಕಾರಿಗಳು ನಾವಲ್ಲ. ನಮ್ಮ ಮೈಸೂರು ಮಹಿಷ ಕರ್ಮಭೂಮಿ. ಮೂಲನಿವಾಸಿಗಳ ಆದಿ ಪುರುಷಾ. ಇದು ನಮ್ಮ ಧಾರ್ಮಿಕ ಆಚರಣೆ ಎಂದು ಸ್ಪಷ್ಟಪಡಿಸಿದರು.

‘ಮಹಿಷ ಸತ್ಯ, ಚಾಮುಂಡೇಶ್ವರಿ ಮಿಥ್ಯ’. ಪ್ರತಾಪ ಸಿಂಹನಂತಹ ನೂರು ಪುಂಡಾರು ಬಂದರೂ ಮಹಿಷ ದಸರಾ ಆಚರಣೆ ತಡೆಯಲು ಸಾಧ್ಯವಿಲ್ಲ. 2011ರಿಂದಲೂ ಮಹಿಷ ದಸರಾ ಆಚರಣೆ ಮಾಡಲಾಗುತ್ತಿದೆ. ಸಿದ್ದರಾಮಯ್ಯ ಸರ್ಕಾರ ನಮ್ಮ ಧಾರ್ಮಿಕ ಆಚರಣೆ ಅನುಮತಿ ನೀಡಿತ್ತು. ಆದರೆ, 2019ರಲ್ಲಿ ಪ್ರತಾಪ ಸಿಂಹ ಎಂಬ ಪುಂಡ ನಮ್ಮ ಧಾರ್ಮಿಕ ಆಚರಣೆಗೆ ಅಡ್ಡಿ ಪಡಿಸಿದ್ದಾನೆ. ಇವರಿಗೆ ನಮ್ಮ ಆಚರಣೆ ನಿಲ್ಲಿಸುವ ಧಮ್ ಇಲ್ಲ ಎಂದು ತಿಳಿಸಿದರು.

ದೇಶದಲ್ಲಿ ಎರಡು ವಿಚಾರಕ್ಕೆ ಸಂಘರ್ಷ ನಡೆಯುತ್ತಲೆ ಬಂದಿದೆ. ಅವು ಯಾವುದೆಂದರೆ ಒಂದು ಪುರಾಣ ಮತ್ತೊಂದು ಇತಿಹಾಸ. ಪುರಾಣ ನಂಬಿದವರು ಕೆಟ್ಟಿದ್ದರೇ, ಇತಿಹಾಸವನ್ನು ನಂಬಿದವರು ಉದ್ದಾರವಾಗುತ್ತಿದ್ದಾರೆ. ಮಹಿಷ ಈ ನಾಡಿನ ರಾಜ. ಆದರೆ, ವೈದಿಕರು ಸತ್ಯವನ್ನು ಮರೆಮಾಚಿ ಪುರಾಣ ಸೃಷ್ಟಿ ಮಾಡಿದ್ದಾರೆ ಎಂದರು.

ವೈದಿಕರು ಸತ್ಯ, ಸಮಾನತೆ, ಭಾತೃತ್ವ, ಸಾಮಾಜಿಕ ನ್ಯಾಯದ ವಿರೋಧಿಗಳು. ಅವರು ಇತಿಹಾಸವನ್ನು ಒಪ್ಪಿಕೊಳ್ಳಲ್ಲ. ಇತಿಹಾಸವನ್ನು ಮರೆಮಾಚಿ ಪುರಾಣಗಳನ್ನು ಸೃಷ್ಟಿ ಮಾಡಿ ಜನಾಂಗೀಯ ವೈರುತ್ವವನ್ನು ಬೆಳೆಸಿ ಮೌಢ್ಯ ಬಿತ್ತುತ್ತಿದ್ದಾರೆ. ಚಾಮುಂಡಿಯ ಪುರಾಣ ಸೃಷ್ಟಿಯಲ್ಲೂ ಇದನ್ನು ಕಾಣಬಹುದು. ಇಲ್ಲಿ ಮಹಿಷನನ್ನು ರಾಕ್ಷಸನಾಗಿ ಬಿಂಬಿಸಲಾಗಿದೆ. ಮಹಿಷ ರಾಕ್ಷಸನ್ನಲ್ಲ. ಈ ನಾಡಿನ ರಕ್ಷಕ. ಜನ ಇತಿಹಾಸವನ್ನು ತಿಳಿಯಬೇಕು ‘ಮಹಿಷ ಸತ್ಯ, ಚಾಮುಂಡಿ ಮಿಥ್ಯ’ ಎಂಬುದನ್ನು ಅರಿಯಬೇಕು ಎಂದು ಎಚ್ಚರಿಸಿದರು.

ಇದನ್ನೂ ಓದಿ: ಕರ್ನಾಟಕ ಸರ್ಕಾರದ ಈ ಕ್ರಮದಿಂದ ಧರ್ಮನಿರಪೇಕ್ಷತೆಗೆ ಕತ್ತರಿ – ಡಾ.ಬಿ.ಪಿ.ಮಹೇಶ್‌ ಚಂದ್ರ ಗುರು

ಮಹಿಷ ಮೈಸೂರಿನ ಮೂಲ ಪುರುಷ. ಆತ ಪ್ರಾಚೀನ ಮಹಿಷ ಮಂಡಲವನ್ನು ಅಳಿದವ. ಮೈಸೂರು ಎಂಬ ಹೆಸರು ಆತನ ಮಹಿಷ ಕುಲದಿಂದ ಬಂದಿದ್ದು, ಪಾಲಿ ಭಾಷೆಯಲ್ಲಿ ಲಭ್ಯವಿರುವಂತೆ ಐತಿಹಾಸಿಕ ವಿವರಗಳ ಪ್ರಕಾರ ಅಶೋಕ ಚಕ್ರವರ್ತಿ ಕ್ರಿಸ್ತಪೂರ್ವ 3ನೇ ಶತಮಾನದಲ್ಲಿ ಮಾದೇವ (ಮಹಿಷಾ)ಎಂಬುವನನ್ನು ಬೌದ್ಧ ಧರ್ಮ ಪ್ರಚಾರಕ್ಕಾನಾಗಿ ಇಲ್ಲಿಗೆ ಬರುತ್ತಾನೆ. ಮಹಿಷಾ ಈ ಪ್ರಾಂತ್ಯವನ್ನು ದಕ್ಷಿಣ ಭಾರತದಿಂದ ಹಿಡಿದು ವಿಂದ್ಯಾಪರ್ವತದವರೆಗೂ ವಿಸ್ತರಿಸುತ್ತಾನೆ. ಇದು ಜಗತ್ತಿನಲ್ಲಿ ಇತಿಹಾಸದಲ್ಲಿ ದಾಖಲಾಗಿದೆ. ಈ ಚಾರಿತ್ರಿಕ ವ್ಯಕ್ತಿಯನ್ನು ಮನುವಾದಿಗಳು ರಾಕ್ಷಸಸನ್ನಾಗಿ ಬಿಂಬಿಸಿದ್ದಾರೆ ಎಂದು ವಿವರಿಸಿದರು.

ಮಾಜಿ ಮಹಾಪೌರ ಪುರುಷೋತ್ತಮ್ ಮಾತನಾಡಿ, ಆದಿ ಪುರುಷ ಮಹಿಷ ದಸರಾ ಆಚರಣೆ ನಮ್ಮ ಧಾರ್ಮಿಕ ಹಕ್ಕು. ಆದರೆ, ಪ್ರಜ್ಞಾವಂತ ಜಾತ್ಯತೀತ ಜನತೆ ಮಹಿಷಾ ದಸರಾ ಆಚರಣೆ ಮಾಡುತ್ತಿದ್ದಾರೆ. ಆದರೆ, ಇದಕ್ಕೆ ಜಾತಿ ಬಣ್ಣ ಕಟ್ಟಿ ಮೂಲನಿವಾಸಿಗಳ ವಿರುದ್ಧ ಸರ್ವಣೀಯರನ್ನು ಎತ್ತಿಕಟ್ಟುತ್ತಾ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಜಾತಿಗಳೇ ಇಲ್ಲದ ಮಹಿಷನ ಕಾಲದಲ್ಲಿ ಜಾತಿ ಹೇಗೆ ಬಂತೆಂದು ಈ ದುರಳ ರಾಜಕಾರಣಿಗಳು ಹೇಳಬೇಕು. ನಮ್ಮ ಧಾರ್ಮಿಕ ಆಚರಣೆಗೆ ಅನುಮತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುತ್ತೇವೆ. ಮಹಿಷ ದಸರಾವನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ. ಅನುಮತಿ ನೀಡದಿದ್ದರೂ ಮಹಿಷನಿಗೆ ಪುಷ್ಪಾರ್ಚನೆ ಮಾಡುವುದಂತೂ ಕಟ್ಟಿಟ್ಟ ಬುತ್ತಿ ಎಂದು ಹೇಳಿದರು.

ವೈದಿಕರ ಕುತಂತ್ರ ಜನತೆ ಅರಿಯಲಿ

ಚಿಂತಕ ಪ್ರೊ.ಕೆ.ಎಸ್.ಭಗವಾನ್ ಮಾತನಾಡಿ, ರಾಮಾಯಣದಲ್ಲಿಯೂ ಬೌದ್ಧಬಿಕ್ಕುಗಳನ್ನು ಕೊಲ್ಲಿಸಿ, ರಾಕ್ಷಸರಂತೆ ಬಿಂಬಿಸಲಾಗಿದೆ. ಜೊತೆಗೆ ರಾಮನ ಕೈಯಲ್ಲಿ ಬುದ್ಧನನ್ನು ಬೈಯಿಸಿದ್ದಾರೆ. ಬುದ್ಧ ಕಳ್ಳ, ನಾಸ್ತಿಕ ಎಂದು ಬೈಯಿಸಿದ್ದಾರೆ. ಬುದ್ಧನನ್ನೆ ಕಳ್ಳನೆಂದ ವೈದಿಕರ ಕುತಂತ್ರಗಳನ್ನು ಜನರು ಅರಿಯಬೇಕು. ವೈದಿಕರು ಬಿಂಬಿಸಿರುವಾಗೇ ಮಹಿಷ ರಾಕ್ಷಸನಾಗಿದ್ದರೆ ಮೈಸೂರಿಗೆ ಆತನ ಹೆಸರು ಯಾಕೇ ನಾಮಕಾರಣ ಮಾಡುತ್ತಿದ್ದರು. ಮಹಿಷ ಜನಾರೋದ್ಧಾರಕ, ಜನ ರಕ್ಷಕ. ಯುವ ಸಮೂಹ ಇತಿಹಾಸ ಅರಿಬೇಕು. ಪುರಾಣಗಳನ್ನು ತಿರಸ್ಕರಿಸಬೇಕು ಎಂದು ಕಿವಿಮಾತು ಹೇಳಿದರು.

ದೇವಾಲಯ ತೆರವು ಅಕ್ಷಮ್ಯ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮು ಮಾತನಾಡಿ, ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ದೇವಾಲಯಗಳನ್ನು ತೆರವುಗೊಳಿಸುತ್ತಿರುವುದು ಅಕ್ಷಮ್ಯ. ಇದನ್ನು ಸಹಿಸಲು ಆಗದು. ಹಿಂದೂ ಧರ್ಮದ ರಕ್ಷಕರಂತೆ ಬಿಂಬಿಸಿಕೊಂಡು ಅಧಿಕಾರಕ್ಕೇರಿದ ಬಿಜೆಪಿ ಅವರು ದೇವಾಲಯಗಳನ್ನು ಹೊಡೆಯುತ್ತಿದ್ದರು ಯಾಕೇ ಸುಮ್ಮನಿದ್ದಾರೆ. ಸರ್ವೋಚ್ಚ ನ್ಯಾಯಾಲಯದಲ್ಲಿ ತೀರ್ಪಿನ ಮರುಪರಿಶೀಲನೆ ಅರ್ಜಿ ಯಾಕೇ ಸಲ್ಲಿಸಲಿಲ್ಲ. ಇದನ್ನು ಪ್ರಶ್ನಿಸಿ ಸಂಸದ ಪ್ರತಾಪ ಸಿಂಹ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜೀನಾಮೆ ನೀಡುವಂತೆ ಆಗ್ರಹಿಸಬೇಕು. ದೇಶದಾದ್ಯಂತ ತೀರ್ಪು ಬಂದಿದ್ದರೂ ಮೈಸೂರಿನಲ್ಲಿಯೇ ಯಾಕೇ ದೇವಾಸ್ಥಾನಗಳನ್ನು ಹೊಡೆಯುತ್ತಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಕಾರಣ ಎಂದು ದೂರಿದರು.


ಇದನ್ನೂ ಓದಿ: ದೀನ ದಲಿತೋದ್ಧಾರಕ ಮಹಾತ್ಮ ಕುದ್ಮುಲ್ ರಂಗರಾವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...