HomeUncategorizedಯಾವ ಪುಂಡನೂ ಅ.5ರಂದು ಮಹಿಷ ದಸರಾ ನಿಲ್ಲಿಸಲಾರನು: ಪ್ರೊ.ಗುರು

ಯಾವ ಪುಂಡನೂ ಅ.5ರಂದು ಮಹಿಷ ದಸರಾ ನಿಲ್ಲಿಸಲಾರನು: ಪ್ರೊ.ಗುರು

‘ಮಹಿಷ ಸತ್ಯ, ಚಾಮುಂಡೇಶ್ವರಿ ಮಿಥ್ಯ’. ಪ್ರತಾಪ ಸಿಂಹನಂತಹ ನೂರು ಪುಂಡಾರು ಬಂದರೂ ಮಹಿಷ ದಸರಾ ಆಚರಣೆ ತಡೆಯಲು ಸಾಧ್ಯವಿಲ್ಲ ಎಂದು ಪ್ರೊ.ಮಹೇಶ್‌ಚಂದ್ರ ಗುರು ಹೇಳಿದ್ದಾರೆ.

- Advertisement -
- Advertisement -

ಮಹಿಷ ದಸರಾ ಯಾರ ವಿರುದ್ಧವೂ ಅಲ್ಲ; ಯಾರಿಂದಲೂ ಮಹಿಷ ದಸರಾ ನಿಲ್ಲಿಸಲು ಸಾಧ್ಯವಿಲ್ಲ ಎಂದು ಪ್ರೊ.ಮಹೇಶ್‌ಚಂದ್ರ ಗುರು ಹೇಳಿದ್ದಾರೆ.

ಮೈಸೂರು ನಗರದ ಮಹಿಷ ದಸರಾ ಅನುಷ್ಠಾನ ಸಮಿತಿ ವತಿಯಿಂದ ಅಕ್ಟೋಬರ್‌ 5ರಂದು ಅಶೋಕಪುರಂ ಉದ್ಯಾನದಲ್ಲಿ ಮಹಿಷ ದಸರಾ ಉತ್ಸವ ಮೂರ್ತಿ ಅನಾವರಣ ಹಾಗೂ ಪುಷ್ಪಾರ್ಚನೆ ಕಾರ್ಯಕ್ರಮ ಆಯೋಜಿಸಿರುವ ಸಂಬಂಧ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ವೈದಿಕರ ಇತಿಹಾಸವೆಂದರೆ ಇಸವಿ ದಿನಾಂಕಗಳಿಲ್ಲದ ಇತಿಹಾಸ ಎಂದು ಡಾ.ಬಿ.ಆರ್.ಅಂಬೇಡ್ಕರ್ ಹೇಳಿದ್ದಾರೆ. ನಮಗೆ ಪುರಾಣ ಗ್ರಂಥಗಳಲ್ಲಿ ನಂಬಿಕೆ ಇಲ್ಲ. ಸಂವಿಧಾನ ಮೇಲೆ ನಂಬಿಕೆ. ಸಮಾನತೆಯ ಮೇಲೆ ನಂಬಿಕೆ. ಸರ್ಕಾರದ ದಸರಾ ಆಚರಣೆ ವಿರುದ್ಧವಾಗಿ ನಾವು ಮಹಿಷಾ ದಸರಾ ಆಚರಣೆ ಮಾಡುತ್ತಿಲ್ಲ. ಅಂತಹ ದುಷ್ಟರು, ದುರಂಹಕಾರಿಗಳು ನಾವಲ್ಲ. ನಮ್ಮ ಮೈಸೂರು ಮಹಿಷ ಕರ್ಮಭೂಮಿ. ಮೂಲನಿವಾಸಿಗಳ ಆದಿ ಪುರುಷಾ. ಇದು ನಮ್ಮ ಧಾರ್ಮಿಕ ಆಚರಣೆ ಎಂದು ಸ್ಪಷ್ಟಪಡಿಸಿದರು.

‘ಮಹಿಷ ಸತ್ಯ, ಚಾಮುಂಡೇಶ್ವರಿ ಮಿಥ್ಯ’. ಪ್ರತಾಪ ಸಿಂಹನಂತಹ ನೂರು ಪುಂಡಾರು ಬಂದರೂ ಮಹಿಷ ದಸರಾ ಆಚರಣೆ ತಡೆಯಲು ಸಾಧ್ಯವಿಲ್ಲ. 2011ರಿಂದಲೂ ಮಹಿಷ ದಸರಾ ಆಚರಣೆ ಮಾಡಲಾಗುತ್ತಿದೆ. ಸಿದ್ದರಾಮಯ್ಯ ಸರ್ಕಾರ ನಮ್ಮ ಧಾರ್ಮಿಕ ಆಚರಣೆ ಅನುಮತಿ ನೀಡಿತ್ತು. ಆದರೆ, 2019ರಲ್ಲಿ ಪ್ರತಾಪ ಸಿಂಹ ಎಂಬ ಪುಂಡ ನಮ್ಮ ಧಾರ್ಮಿಕ ಆಚರಣೆಗೆ ಅಡ್ಡಿ ಪಡಿಸಿದ್ದಾನೆ. ಇವರಿಗೆ ನಮ್ಮ ಆಚರಣೆ ನಿಲ್ಲಿಸುವ ಧಮ್ ಇಲ್ಲ ಎಂದು ತಿಳಿಸಿದರು.

ದೇಶದಲ್ಲಿ ಎರಡು ವಿಚಾರಕ್ಕೆ ಸಂಘರ್ಷ ನಡೆಯುತ್ತಲೆ ಬಂದಿದೆ. ಅವು ಯಾವುದೆಂದರೆ ಒಂದು ಪುರಾಣ ಮತ್ತೊಂದು ಇತಿಹಾಸ. ಪುರಾಣ ನಂಬಿದವರು ಕೆಟ್ಟಿದ್ದರೇ, ಇತಿಹಾಸವನ್ನು ನಂಬಿದವರು ಉದ್ದಾರವಾಗುತ್ತಿದ್ದಾರೆ. ಮಹಿಷ ಈ ನಾಡಿನ ರಾಜ. ಆದರೆ, ವೈದಿಕರು ಸತ್ಯವನ್ನು ಮರೆಮಾಚಿ ಪುರಾಣ ಸೃಷ್ಟಿ ಮಾಡಿದ್ದಾರೆ ಎಂದರು.

ವೈದಿಕರು ಸತ್ಯ, ಸಮಾನತೆ, ಭಾತೃತ್ವ, ಸಾಮಾಜಿಕ ನ್ಯಾಯದ ವಿರೋಧಿಗಳು. ಅವರು ಇತಿಹಾಸವನ್ನು ಒಪ್ಪಿಕೊಳ್ಳಲ್ಲ. ಇತಿಹಾಸವನ್ನು ಮರೆಮಾಚಿ ಪುರಾಣಗಳನ್ನು ಸೃಷ್ಟಿ ಮಾಡಿ ಜನಾಂಗೀಯ ವೈರುತ್ವವನ್ನು ಬೆಳೆಸಿ ಮೌಢ್ಯ ಬಿತ್ತುತ್ತಿದ್ದಾರೆ. ಚಾಮುಂಡಿಯ ಪುರಾಣ ಸೃಷ್ಟಿಯಲ್ಲೂ ಇದನ್ನು ಕಾಣಬಹುದು. ಇಲ್ಲಿ ಮಹಿಷನನ್ನು ರಾಕ್ಷಸನಾಗಿ ಬಿಂಬಿಸಲಾಗಿದೆ. ಮಹಿಷ ರಾಕ್ಷಸನ್ನಲ್ಲ. ಈ ನಾಡಿನ ರಕ್ಷಕ. ಜನ ಇತಿಹಾಸವನ್ನು ತಿಳಿಯಬೇಕು ‘ಮಹಿಷ ಸತ್ಯ, ಚಾಮುಂಡಿ ಮಿಥ್ಯ’ ಎಂಬುದನ್ನು ಅರಿಯಬೇಕು ಎಂದು ಎಚ್ಚರಿಸಿದರು.

ಇದನ್ನೂ ಓದಿ: ಕರ್ನಾಟಕ ಸರ್ಕಾರದ ಈ ಕ್ರಮದಿಂದ ಧರ್ಮನಿರಪೇಕ್ಷತೆಗೆ ಕತ್ತರಿ – ಡಾ.ಬಿ.ಪಿ.ಮಹೇಶ್‌ ಚಂದ್ರ ಗುರು

ಮಹಿಷ ಮೈಸೂರಿನ ಮೂಲ ಪುರುಷ. ಆತ ಪ್ರಾಚೀನ ಮಹಿಷ ಮಂಡಲವನ್ನು ಅಳಿದವ. ಮೈಸೂರು ಎಂಬ ಹೆಸರು ಆತನ ಮಹಿಷ ಕುಲದಿಂದ ಬಂದಿದ್ದು, ಪಾಲಿ ಭಾಷೆಯಲ್ಲಿ ಲಭ್ಯವಿರುವಂತೆ ಐತಿಹಾಸಿಕ ವಿವರಗಳ ಪ್ರಕಾರ ಅಶೋಕ ಚಕ್ರವರ್ತಿ ಕ್ರಿಸ್ತಪೂರ್ವ 3ನೇ ಶತಮಾನದಲ್ಲಿ ಮಾದೇವ (ಮಹಿಷಾ)ಎಂಬುವನನ್ನು ಬೌದ್ಧ ಧರ್ಮ ಪ್ರಚಾರಕ್ಕಾನಾಗಿ ಇಲ್ಲಿಗೆ ಬರುತ್ತಾನೆ. ಮಹಿಷಾ ಈ ಪ್ರಾಂತ್ಯವನ್ನು ದಕ್ಷಿಣ ಭಾರತದಿಂದ ಹಿಡಿದು ವಿಂದ್ಯಾಪರ್ವತದವರೆಗೂ ವಿಸ್ತರಿಸುತ್ತಾನೆ. ಇದು ಜಗತ್ತಿನಲ್ಲಿ ಇತಿಹಾಸದಲ್ಲಿ ದಾಖಲಾಗಿದೆ. ಈ ಚಾರಿತ್ರಿಕ ವ್ಯಕ್ತಿಯನ್ನು ಮನುವಾದಿಗಳು ರಾಕ್ಷಸಸನ್ನಾಗಿ ಬಿಂಬಿಸಿದ್ದಾರೆ ಎಂದು ವಿವರಿಸಿದರು.

ಮಾಜಿ ಮಹಾಪೌರ ಪುರುಷೋತ್ತಮ್ ಮಾತನಾಡಿ, ಆದಿ ಪುರುಷ ಮಹಿಷ ದಸರಾ ಆಚರಣೆ ನಮ್ಮ ಧಾರ್ಮಿಕ ಹಕ್ಕು. ಆದರೆ, ಪ್ರಜ್ಞಾವಂತ ಜಾತ್ಯತೀತ ಜನತೆ ಮಹಿಷಾ ದಸರಾ ಆಚರಣೆ ಮಾಡುತ್ತಿದ್ದಾರೆ. ಆದರೆ, ಇದಕ್ಕೆ ಜಾತಿ ಬಣ್ಣ ಕಟ್ಟಿ ಮೂಲನಿವಾಸಿಗಳ ವಿರುದ್ಧ ಸರ್ವಣೀಯರನ್ನು ಎತ್ತಿಕಟ್ಟುತ್ತಾ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಜಾತಿಗಳೇ ಇಲ್ಲದ ಮಹಿಷನ ಕಾಲದಲ್ಲಿ ಜಾತಿ ಹೇಗೆ ಬಂತೆಂದು ಈ ದುರಳ ರಾಜಕಾರಣಿಗಳು ಹೇಳಬೇಕು. ನಮ್ಮ ಧಾರ್ಮಿಕ ಆಚರಣೆಗೆ ಅನುಮತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುತ್ತೇವೆ. ಮಹಿಷ ದಸರಾವನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ. ಅನುಮತಿ ನೀಡದಿದ್ದರೂ ಮಹಿಷನಿಗೆ ಪುಷ್ಪಾರ್ಚನೆ ಮಾಡುವುದಂತೂ ಕಟ್ಟಿಟ್ಟ ಬುತ್ತಿ ಎಂದು ಹೇಳಿದರು.

ವೈದಿಕರ ಕುತಂತ್ರ ಜನತೆ ಅರಿಯಲಿ

ಚಿಂತಕ ಪ್ರೊ.ಕೆ.ಎಸ್.ಭಗವಾನ್ ಮಾತನಾಡಿ, ರಾಮಾಯಣದಲ್ಲಿಯೂ ಬೌದ್ಧಬಿಕ್ಕುಗಳನ್ನು ಕೊಲ್ಲಿಸಿ, ರಾಕ್ಷಸರಂತೆ ಬಿಂಬಿಸಲಾಗಿದೆ. ಜೊತೆಗೆ ರಾಮನ ಕೈಯಲ್ಲಿ ಬುದ್ಧನನ್ನು ಬೈಯಿಸಿದ್ದಾರೆ. ಬುದ್ಧ ಕಳ್ಳ, ನಾಸ್ತಿಕ ಎಂದು ಬೈಯಿಸಿದ್ದಾರೆ. ಬುದ್ಧನನ್ನೆ ಕಳ್ಳನೆಂದ ವೈದಿಕರ ಕುತಂತ್ರಗಳನ್ನು ಜನರು ಅರಿಯಬೇಕು. ವೈದಿಕರು ಬಿಂಬಿಸಿರುವಾಗೇ ಮಹಿಷ ರಾಕ್ಷಸನಾಗಿದ್ದರೆ ಮೈಸೂರಿಗೆ ಆತನ ಹೆಸರು ಯಾಕೇ ನಾಮಕಾರಣ ಮಾಡುತ್ತಿದ್ದರು. ಮಹಿಷ ಜನಾರೋದ್ಧಾರಕ, ಜನ ರಕ್ಷಕ. ಯುವ ಸಮೂಹ ಇತಿಹಾಸ ಅರಿಬೇಕು. ಪುರಾಣಗಳನ್ನು ತಿರಸ್ಕರಿಸಬೇಕು ಎಂದು ಕಿವಿಮಾತು ಹೇಳಿದರು.

ದೇವಾಲಯ ತೆರವು ಅಕ್ಷಮ್ಯ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮು ಮಾತನಾಡಿ, ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ದೇವಾಲಯಗಳನ್ನು ತೆರವುಗೊಳಿಸುತ್ತಿರುವುದು ಅಕ್ಷಮ್ಯ. ಇದನ್ನು ಸಹಿಸಲು ಆಗದು. ಹಿಂದೂ ಧರ್ಮದ ರಕ್ಷಕರಂತೆ ಬಿಂಬಿಸಿಕೊಂಡು ಅಧಿಕಾರಕ್ಕೇರಿದ ಬಿಜೆಪಿ ಅವರು ದೇವಾಲಯಗಳನ್ನು ಹೊಡೆಯುತ್ತಿದ್ದರು ಯಾಕೇ ಸುಮ್ಮನಿದ್ದಾರೆ. ಸರ್ವೋಚ್ಚ ನ್ಯಾಯಾಲಯದಲ್ಲಿ ತೀರ್ಪಿನ ಮರುಪರಿಶೀಲನೆ ಅರ್ಜಿ ಯಾಕೇ ಸಲ್ಲಿಸಲಿಲ್ಲ. ಇದನ್ನು ಪ್ರಶ್ನಿಸಿ ಸಂಸದ ಪ್ರತಾಪ ಸಿಂಹ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜೀನಾಮೆ ನೀಡುವಂತೆ ಆಗ್ರಹಿಸಬೇಕು. ದೇಶದಾದ್ಯಂತ ತೀರ್ಪು ಬಂದಿದ್ದರೂ ಮೈಸೂರಿನಲ್ಲಿಯೇ ಯಾಕೇ ದೇವಾಸ್ಥಾನಗಳನ್ನು ಹೊಡೆಯುತ್ತಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಕಾರಣ ಎಂದು ದೂರಿದರು.


ಇದನ್ನೂ ಓದಿ: ದೀನ ದಲಿತೋದ್ಧಾರಕ ಮಹಾತ್ಮ ಕುದ್ಮುಲ್ ರಂಗರಾವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...