HomeUncategorizedಯಾವ ಪುಂಡನೂ ಅ.5ರಂದು ಮಹಿಷ ದಸರಾ ನಿಲ್ಲಿಸಲಾರನು: ಪ್ರೊ.ಗುರು

ಯಾವ ಪುಂಡನೂ ಅ.5ರಂದು ಮಹಿಷ ದಸರಾ ನಿಲ್ಲಿಸಲಾರನು: ಪ್ರೊ.ಗುರು

‘ಮಹಿಷ ಸತ್ಯ, ಚಾಮುಂಡೇಶ್ವರಿ ಮಿಥ್ಯ’. ಪ್ರತಾಪ ಸಿಂಹನಂತಹ ನೂರು ಪುಂಡಾರು ಬಂದರೂ ಮಹಿಷ ದಸರಾ ಆಚರಣೆ ತಡೆಯಲು ಸಾಧ್ಯವಿಲ್ಲ ಎಂದು ಪ್ರೊ.ಮಹೇಶ್‌ಚಂದ್ರ ಗುರು ಹೇಳಿದ್ದಾರೆ.

- Advertisement -
- Advertisement -

ಮಹಿಷ ದಸರಾ ಯಾರ ವಿರುದ್ಧವೂ ಅಲ್ಲ; ಯಾರಿಂದಲೂ ಮಹಿಷ ದಸರಾ ನಿಲ್ಲಿಸಲು ಸಾಧ್ಯವಿಲ್ಲ ಎಂದು ಪ್ರೊ.ಮಹೇಶ್‌ಚಂದ್ರ ಗುರು ಹೇಳಿದ್ದಾರೆ.

ಮೈಸೂರು ನಗರದ ಮಹಿಷ ದಸರಾ ಅನುಷ್ಠಾನ ಸಮಿತಿ ವತಿಯಿಂದ ಅಕ್ಟೋಬರ್‌ 5ರಂದು ಅಶೋಕಪುರಂ ಉದ್ಯಾನದಲ್ಲಿ ಮಹಿಷ ದಸರಾ ಉತ್ಸವ ಮೂರ್ತಿ ಅನಾವರಣ ಹಾಗೂ ಪುಷ್ಪಾರ್ಚನೆ ಕಾರ್ಯಕ್ರಮ ಆಯೋಜಿಸಿರುವ ಸಂಬಂಧ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ವೈದಿಕರ ಇತಿಹಾಸವೆಂದರೆ ಇಸವಿ ದಿನಾಂಕಗಳಿಲ್ಲದ ಇತಿಹಾಸ ಎಂದು ಡಾ.ಬಿ.ಆರ್.ಅಂಬೇಡ್ಕರ್ ಹೇಳಿದ್ದಾರೆ. ನಮಗೆ ಪುರಾಣ ಗ್ರಂಥಗಳಲ್ಲಿ ನಂಬಿಕೆ ಇಲ್ಲ. ಸಂವಿಧಾನ ಮೇಲೆ ನಂಬಿಕೆ. ಸಮಾನತೆಯ ಮೇಲೆ ನಂಬಿಕೆ. ಸರ್ಕಾರದ ದಸರಾ ಆಚರಣೆ ವಿರುದ್ಧವಾಗಿ ನಾವು ಮಹಿಷಾ ದಸರಾ ಆಚರಣೆ ಮಾಡುತ್ತಿಲ್ಲ. ಅಂತಹ ದುಷ್ಟರು, ದುರಂಹಕಾರಿಗಳು ನಾವಲ್ಲ. ನಮ್ಮ ಮೈಸೂರು ಮಹಿಷ ಕರ್ಮಭೂಮಿ. ಮೂಲನಿವಾಸಿಗಳ ಆದಿ ಪುರುಷಾ. ಇದು ನಮ್ಮ ಧಾರ್ಮಿಕ ಆಚರಣೆ ಎಂದು ಸ್ಪಷ್ಟಪಡಿಸಿದರು.

‘ಮಹಿಷ ಸತ್ಯ, ಚಾಮುಂಡೇಶ್ವರಿ ಮಿಥ್ಯ’. ಪ್ರತಾಪ ಸಿಂಹನಂತಹ ನೂರು ಪುಂಡಾರು ಬಂದರೂ ಮಹಿಷ ದಸರಾ ಆಚರಣೆ ತಡೆಯಲು ಸಾಧ್ಯವಿಲ್ಲ. 2011ರಿಂದಲೂ ಮಹಿಷ ದಸರಾ ಆಚರಣೆ ಮಾಡಲಾಗುತ್ತಿದೆ. ಸಿದ್ದರಾಮಯ್ಯ ಸರ್ಕಾರ ನಮ್ಮ ಧಾರ್ಮಿಕ ಆಚರಣೆ ಅನುಮತಿ ನೀಡಿತ್ತು. ಆದರೆ, 2019ರಲ್ಲಿ ಪ್ರತಾಪ ಸಿಂಹ ಎಂಬ ಪುಂಡ ನಮ್ಮ ಧಾರ್ಮಿಕ ಆಚರಣೆಗೆ ಅಡ್ಡಿ ಪಡಿಸಿದ್ದಾನೆ. ಇವರಿಗೆ ನಮ್ಮ ಆಚರಣೆ ನಿಲ್ಲಿಸುವ ಧಮ್ ಇಲ್ಲ ಎಂದು ತಿಳಿಸಿದರು.

ದೇಶದಲ್ಲಿ ಎರಡು ವಿಚಾರಕ್ಕೆ ಸಂಘರ್ಷ ನಡೆಯುತ್ತಲೆ ಬಂದಿದೆ. ಅವು ಯಾವುದೆಂದರೆ ಒಂದು ಪುರಾಣ ಮತ್ತೊಂದು ಇತಿಹಾಸ. ಪುರಾಣ ನಂಬಿದವರು ಕೆಟ್ಟಿದ್ದರೇ, ಇತಿಹಾಸವನ್ನು ನಂಬಿದವರು ಉದ್ದಾರವಾಗುತ್ತಿದ್ದಾರೆ. ಮಹಿಷ ಈ ನಾಡಿನ ರಾಜ. ಆದರೆ, ವೈದಿಕರು ಸತ್ಯವನ್ನು ಮರೆಮಾಚಿ ಪುರಾಣ ಸೃಷ್ಟಿ ಮಾಡಿದ್ದಾರೆ ಎಂದರು.

ವೈದಿಕರು ಸತ್ಯ, ಸಮಾನತೆ, ಭಾತೃತ್ವ, ಸಾಮಾಜಿಕ ನ್ಯಾಯದ ವಿರೋಧಿಗಳು. ಅವರು ಇತಿಹಾಸವನ್ನು ಒಪ್ಪಿಕೊಳ್ಳಲ್ಲ. ಇತಿಹಾಸವನ್ನು ಮರೆಮಾಚಿ ಪುರಾಣಗಳನ್ನು ಸೃಷ್ಟಿ ಮಾಡಿ ಜನಾಂಗೀಯ ವೈರುತ್ವವನ್ನು ಬೆಳೆಸಿ ಮೌಢ್ಯ ಬಿತ್ತುತ್ತಿದ್ದಾರೆ. ಚಾಮುಂಡಿಯ ಪುರಾಣ ಸೃಷ್ಟಿಯಲ್ಲೂ ಇದನ್ನು ಕಾಣಬಹುದು. ಇಲ್ಲಿ ಮಹಿಷನನ್ನು ರಾಕ್ಷಸನಾಗಿ ಬಿಂಬಿಸಲಾಗಿದೆ. ಮಹಿಷ ರಾಕ್ಷಸನ್ನಲ್ಲ. ಈ ನಾಡಿನ ರಕ್ಷಕ. ಜನ ಇತಿಹಾಸವನ್ನು ತಿಳಿಯಬೇಕು ‘ಮಹಿಷ ಸತ್ಯ, ಚಾಮುಂಡಿ ಮಿಥ್ಯ’ ಎಂಬುದನ್ನು ಅರಿಯಬೇಕು ಎಂದು ಎಚ್ಚರಿಸಿದರು.

ಇದನ್ನೂ ಓದಿ: ಕರ್ನಾಟಕ ಸರ್ಕಾರದ ಈ ಕ್ರಮದಿಂದ ಧರ್ಮನಿರಪೇಕ್ಷತೆಗೆ ಕತ್ತರಿ – ಡಾ.ಬಿ.ಪಿ.ಮಹೇಶ್‌ ಚಂದ್ರ ಗುರು

ಮಹಿಷ ಮೈಸೂರಿನ ಮೂಲ ಪುರುಷ. ಆತ ಪ್ರಾಚೀನ ಮಹಿಷ ಮಂಡಲವನ್ನು ಅಳಿದವ. ಮೈಸೂರು ಎಂಬ ಹೆಸರು ಆತನ ಮಹಿಷ ಕುಲದಿಂದ ಬಂದಿದ್ದು, ಪಾಲಿ ಭಾಷೆಯಲ್ಲಿ ಲಭ್ಯವಿರುವಂತೆ ಐತಿಹಾಸಿಕ ವಿವರಗಳ ಪ್ರಕಾರ ಅಶೋಕ ಚಕ್ರವರ್ತಿ ಕ್ರಿಸ್ತಪೂರ್ವ 3ನೇ ಶತಮಾನದಲ್ಲಿ ಮಾದೇವ (ಮಹಿಷಾ)ಎಂಬುವನನ್ನು ಬೌದ್ಧ ಧರ್ಮ ಪ್ರಚಾರಕ್ಕಾನಾಗಿ ಇಲ್ಲಿಗೆ ಬರುತ್ತಾನೆ. ಮಹಿಷಾ ಈ ಪ್ರಾಂತ್ಯವನ್ನು ದಕ್ಷಿಣ ಭಾರತದಿಂದ ಹಿಡಿದು ವಿಂದ್ಯಾಪರ್ವತದವರೆಗೂ ವಿಸ್ತರಿಸುತ್ತಾನೆ. ಇದು ಜಗತ್ತಿನಲ್ಲಿ ಇತಿಹಾಸದಲ್ಲಿ ದಾಖಲಾಗಿದೆ. ಈ ಚಾರಿತ್ರಿಕ ವ್ಯಕ್ತಿಯನ್ನು ಮನುವಾದಿಗಳು ರಾಕ್ಷಸಸನ್ನಾಗಿ ಬಿಂಬಿಸಿದ್ದಾರೆ ಎಂದು ವಿವರಿಸಿದರು.

ಮಾಜಿ ಮಹಾಪೌರ ಪುರುಷೋತ್ತಮ್ ಮಾತನಾಡಿ, ಆದಿ ಪುರುಷ ಮಹಿಷ ದಸರಾ ಆಚರಣೆ ನಮ್ಮ ಧಾರ್ಮಿಕ ಹಕ್ಕು. ಆದರೆ, ಪ್ರಜ್ಞಾವಂತ ಜಾತ್ಯತೀತ ಜನತೆ ಮಹಿಷಾ ದಸರಾ ಆಚರಣೆ ಮಾಡುತ್ತಿದ್ದಾರೆ. ಆದರೆ, ಇದಕ್ಕೆ ಜಾತಿ ಬಣ್ಣ ಕಟ್ಟಿ ಮೂಲನಿವಾಸಿಗಳ ವಿರುದ್ಧ ಸರ್ವಣೀಯರನ್ನು ಎತ್ತಿಕಟ್ಟುತ್ತಾ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಜಾತಿಗಳೇ ಇಲ್ಲದ ಮಹಿಷನ ಕಾಲದಲ್ಲಿ ಜಾತಿ ಹೇಗೆ ಬಂತೆಂದು ಈ ದುರಳ ರಾಜಕಾರಣಿಗಳು ಹೇಳಬೇಕು. ನಮ್ಮ ಧಾರ್ಮಿಕ ಆಚರಣೆಗೆ ಅನುಮತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುತ್ತೇವೆ. ಮಹಿಷ ದಸರಾವನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ. ಅನುಮತಿ ನೀಡದಿದ್ದರೂ ಮಹಿಷನಿಗೆ ಪುಷ್ಪಾರ್ಚನೆ ಮಾಡುವುದಂತೂ ಕಟ್ಟಿಟ್ಟ ಬುತ್ತಿ ಎಂದು ಹೇಳಿದರು.

ವೈದಿಕರ ಕುತಂತ್ರ ಜನತೆ ಅರಿಯಲಿ

ಚಿಂತಕ ಪ್ರೊ.ಕೆ.ಎಸ್.ಭಗವಾನ್ ಮಾತನಾಡಿ, ರಾಮಾಯಣದಲ್ಲಿಯೂ ಬೌದ್ಧಬಿಕ್ಕುಗಳನ್ನು ಕೊಲ್ಲಿಸಿ, ರಾಕ್ಷಸರಂತೆ ಬಿಂಬಿಸಲಾಗಿದೆ. ಜೊತೆಗೆ ರಾಮನ ಕೈಯಲ್ಲಿ ಬುದ್ಧನನ್ನು ಬೈಯಿಸಿದ್ದಾರೆ. ಬುದ್ಧ ಕಳ್ಳ, ನಾಸ್ತಿಕ ಎಂದು ಬೈಯಿಸಿದ್ದಾರೆ. ಬುದ್ಧನನ್ನೆ ಕಳ್ಳನೆಂದ ವೈದಿಕರ ಕುತಂತ್ರಗಳನ್ನು ಜನರು ಅರಿಯಬೇಕು. ವೈದಿಕರು ಬಿಂಬಿಸಿರುವಾಗೇ ಮಹಿಷ ರಾಕ್ಷಸನಾಗಿದ್ದರೆ ಮೈಸೂರಿಗೆ ಆತನ ಹೆಸರು ಯಾಕೇ ನಾಮಕಾರಣ ಮಾಡುತ್ತಿದ್ದರು. ಮಹಿಷ ಜನಾರೋದ್ಧಾರಕ, ಜನ ರಕ್ಷಕ. ಯುವ ಸಮೂಹ ಇತಿಹಾಸ ಅರಿಬೇಕು. ಪುರಾಣಗಳನ್ನು ತಿರಸ್ಕರಿಸಬೇಕು ಎಂದು ಕಿವಿಮಾತು ಹೇಳಿದರು.

ದೇವಾಲಯ ತೆರವು ಅಕ್ಷಮ್ಯ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮು ಮಾತನಾಡಿ, ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ದೇವಾಲಯಗಳನ್ನು ತೆರವುಗೊಳಿಸುತ್ತಿರುವುದು ಅಕ್ಷಮ್ಯ. ಇದನ್ನು ಸಹಿಸಲು ಆಗದು. ಹಿಂದೂ ಧರ್ಮದ ರಕ್ಷಕರಂತೆ ಬಿಂಬಿಸಿಕೊಂಡು ಅಧಿಕಾರಕ್ಕೇರಿದ ಬಿಜೆಪಿ ಅವರು ದೇವಾಲಯಗಳನ್ನು ಹೊಡೆಯುತ್ತಿದ್ದರು ಯಾಕೇ ಸುಮ್ಮನಿದ್ದಾರೆ. ಸರ್ವೋಚ್ಚ ನ್ಯಾಯಾಲಯದಲ್ಲಿ ತೀರ್ಪಿನ ಮರುಪರಿಶೀಲನೆ ಅರ್ಜಿ ಯಾಕೇ ಸಲ್ಲಿಸಲಿಲ್ಲ. ಇದನ್ನು ಪ್ರಶ್ನಿಸಿ ಸಂಸದ ಪ್ರತಾಪ ಸಿಂಹ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜೀನಾಮೆ ನೀಡುವಂತೆ ಆಗ್ರಹಿಸಬೇಕು. ದೇಶದಾದ್ಯಂತ ತೀರ್ಪು ಬಂದಿದ್ದರೂ ಮೈಸೂರಿನಲ್ಲಿಯೇ ಯಾಕೇ ದೇವಾಸ್ಥಾನಗಳನ್ನು ಹೊಡೆಯುತ್ತಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಕಾರಣ ಎಂದು ದೂರಿದರು.


ಇದನ್ನೂ ಓದಿ: ದೀನ ದಲಿತೋದ್ಧಾರಕ ಮಹಾತ್ಮ ಕುದ್ಮುಲ್ ರಂಗರಾವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...