Homeಮುಖಪುಟ೪೮ ಸಾವಿರ ಸಾರಿಗೆ ನೌಕರರ ನೋವನ್ನು ಅಪಹಾಸ್ಯ ಮಾಡಿದ ತೆಲಂಗಾಣ ಸಿಎಂ ಕೆಸಿಆರ್‌

೪೮ ಸಾವಿರ ಸಾರಿಗೆ ನೌಕರರ ನೋವನ್ನು ಅಪಹಾಸ್ಯ ಮಾಡಿದ ತೆಲಂಗಾಣ ಸಿಎಂ ಕೆಸಿಆರ್‌

- Advertisement -
- Advertisement -

ತೆಲಂಗಾಣದಲ್ಲಿ ಟಿಎಸ್‌ಆರ್‌ಟಿಸಿ ( ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ) ಮತ್ತು ಸರ್ಕಾರದ ನಡುವಿನ ತಿಕ್ಕಾಟ ತಾರಕಕ್ಕೇರಿದೆ. ಆರ್‌ಟಿಸಿ ಯನ್ನು ಸರ್ಕಾರದೊಳಗೆ ವಿಲೀನಗೊಳಿಸಬೇಕು ಮತ್ತು ಚಾಲಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ೪೮ ಸಾವಿರ ಮಂದಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ.

ಸತತ ೨೦ ದಿನಗಳಿಂದ ಅಂದರೆ ಅಕ್ಟೋಬರ್‌ ೫ರಿಂದ ಎಲ್ಲಾ ಆರ್‌ಟಿಸಿ ಚಾಲಕರು ಬೀದಿಗಿಳಿದು ಧರಣಿ ನಡೆಸುತ್ತಿದ್ದಾರೆ. ಕಾಂಗ್ರೆಸ್‌ ಸೇರಿದಂತೆ ವಿವಿಧ ಪಕ್ಷಗಳು ಆರ್‌ಟಿಸಿ ನಡೆಸುತ್ತಿರುವ ಹೋರಾಟಕ್ಕೆ ಸಾಥ್‌ ನೀಡಿವೆ. ಆದರೆ ಸಮಸ್ಯೆ ಆಲಿಸಿ, ಸೂಕ್ಷ್ಮವಾಗಿ ವಿಷಯವನ್ನು ಇತ್ಯರ್ಥಗೊಳಿಸಬೇಕಿದ್ದ ತೆಲಂಗಾಣ ಸಿಎಂ ಕೆ.ಸಿ.ಚಂದ್ರಶೇಖರ್‌ ರಾವ್‌ ದುರ್ವರ್ತನೆ, ಅಹಂಕಾರದ ಮಾತುಗಳನ್ನಾಡಿದ್ದಾರೆ.

ಹುಜುರ್‌ನಗರ ಉಪಚುನಾವಣೆ ಗೆಲುವಿನ ಬಗ್ಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರು ಟಿಎಸ್‌ಆರ್‌ಟಿಸಿ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ‘ಆರ್‌ಟಿಸಿ ದಿವಾಳಿಯಾಗಿದ್ದು, ಇನ್ನೇನು ಕೆಲ ದಿನಗಳಲ್ಲಿ ಮುಚ್ಚಿ ಹೋಗಲಿದೆ. ಆರ್‌ಟಿಸಿಯನ್ನು ಬಂದ್‌ ಮಾಡುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಪ್ರತಿಭಟನಾಕಾರರೇ ಇದಕ್ಕೆ ಉತ್ತಮ ಅವಕಾಶ ಒದಗಿಸಿದ್ದಾರೆ. ಇದೇ ಕೊನೆಯ ಪ್ರತಿಭಟನೆಯೊಂದಿಗೆ ಆರ್‌ಟಿಸಿ ಮುಕ್ತಿ ಹೊಂದಲಿದೆ’ ಎಂದು ಅಪಹಾಸ್ಯದ ಮಾತುಗಳನ್ನಾಡಿದ್ದಾರೆ.

ಆರ್‌ಟಿಸಿ ಮತ್ತು ವಿಪಕ್ಷಗಳ ವಿರುದ್ಧ ಕೆಸಿಆರ್‌ ವಾಗ್ದಾಳಿ ನಡೆಸಿದರು. ’ಸದ್ಯದ ಪರಿಸ್ಥಿತಿಯ ಲಾಭ ಪಡೆದು ಚಾಲಕರಿಗೆ ಪ್ರಚೋದನೆ ನೀಡಲಾಗುತ್ತಿದೆ. ವೋಟ್‌ ಬ್ಯಾಂಕ್‌ಗಾಗಿ ಇಷ್ಟೆಲ್ಲಾ ಮಾಡಲಾಗುತ್ತಿದೆ. ಟ್ರೇಡ್‌ ಯೂನಿಯನ್‌ ನಾಯಕರು, ಮುಗ್ಧ ನೌಕರರು ಮತ್ತು ಅವರ ಕುಟುಂಬದ ಜತೆ ಚೆಲ್ಲಾಟವಾಡುತ್ತಿದ್ದಾರ’ ಎಂದರು.

’ಈಗಾಗಲೇ ಆರ್ಥಿಕ ಕುಸಿತ ಉಂಟಾಗಿದೆ. ನೌಕರರಿಗೆ ನೀಡಲು ಹಣವಿಲ್ಲ. ಧರಣಿ ನಿರತರ ಸಂಬಳವನ್ನು ಕತ್ತರಿಸಲಾಗುವುದು. ಅಲ್ಲದೇ ಮುಂದೆ ಅವರನ್ನು ಬಿಡಿಸಿಕೊಂಡು ಬರಲೂ ಸಹ ಹಣವಿಲ್ಲದಂತಾಗಬಹುದು. ಹಬ್ಬದ ದಿನಗಳಲ್ಲಿ ಈ ರೀತಿ ಪ್ರತಿಭಟನೆ ನಡೆಸುತ್ತಿರುವುದರಿಂದ ಆರ್‌ಟಿಸಿ ಗೆ ೧೨೫ ರಿಂದ ೧೫೦ ಕೋಟಿ ರೂಪಾಯಿ ನಷ್ಟವಾಗಲಿದೆ’ ಎಂದು ಹೇಳಿದರು.

ಇತ್ತ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಹೋರಾಟ ನಡೆಸುತ್ತಿರುವವರಲ್ಲಿ ಇಬ್ಬರು ನೌಕರರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಸಿಆರ್‌ ಪ್ರತಿಕ್ರಿಯೆಗೆ ಟಿಎಸ್‌ಆರ್‌ಟಿಸಿ ಮತ್ತು ಜೆಎಸಿ (ಜಂಟಿ ಕ್ರಿಯಾ ಸಮಿತಿ)ಯ ಸಂಚಾಲಕ ಅಶ್ವತ್ಥಾಮ್‌ ರೆಡ್ಡಿ ತೀವ್ರ ವಿರೋಧ ವ್ಯಕ್ತಪಡಿಸಿ್ದ್ದಾರೆ. ’ಕೆಸಿಆರ್‌ ದುರ್ವರ್ತನೆ ಮಿತಿ ಮೀರಿದೆ. ಆರ್‌ಟಿಸಿ ಯಾರಪ್ಪನ ಸೊತ್ತಲ್ಲ. ಕೆಸಿಆರ್‌ ಮಾತು ಖಂಡನಾರ್ಹ ಮತ್ತು ಪ್ರತಿಭಟನಾನಿರತರಿಗೆ ನೋವುಂಟು ಮಾಡಿದೆ. ೧೯೩೨ರಿಂದ ಆರ್‌ಟಿಸಿ ಜಾರಿಯಲ್ಲಿದೆ. ಯಾರು ಕೊನೆಯಾಗುತ್ತಾರೆ ಎಂಬುದನ್ನು ಜನ ನಿರ್ಧರಿಸುತ್ತಾರೆ’  ಎಂದು ಅಶ್ವತ್ಥಾಮ್‌ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...