Homeಮುಖಪುಟ೪೮ ಸಾವಿರ ಸಾರಿಗೆ ನೌಕರರ ನೋವನ್ನು ಅಪಹಾಸ್ಯ ಮಾಡಿದ ತೆಲಂಗಾಣ ಸಿಎಂ ಕೆಸಿಆರ್‌

೪೮ ಸಾವಿರ ಸಾರಿಗೆ ನೌಕರರ ನೋವನ್ನು ಅಪಹಾಸ್ಯ ಮಾಡಿದ ತೆಲಂಗಾಣ ಸಿಎಂ ಕೆಸಿಆರ್‌

- Advertisement -
- Advertisement -

ತೆಲಂಗಾಣದಲ್ಲಿ ಟಿಎಸ್‌ಆರ್‌ಟಿಸಿ ( ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ) ಮತ್ತು ಸರ್ಕಾರದ ನಡುವಿನ ತಿಕ್ಕಾಟ ತಾರಕಕ್ಕೇರಿದೆ. ಆರ್‌ಟಿಸಿ ಯನ್ನು ಸರ್ಕಾರದೊಳಗೆ ವಿಲೀನಗೊಳಿಸಬೇಕು ಮತ್ತು ಚಾಲಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ೪೮ ಸಾವಿರ ಮಂದಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ.

ಸತತ ೨೦ ದಿನಗಳಿಂದ ಅಂದರೆ ಅಕ್ಟೋಬರ್‌ ೫ರಿಂದ ಎಲ್ಲಾ ಆರ್‌ಟಿಸಿ ಚಾಲಕರು ಬೀದಿಗಿಳಿದು ಧರಣಿ ನಡೆಸುತ್ತಿದ್ದಾರೆ. ಕಾಂಗ್ರೆಸ್‌ ಸೇರಿದಂತೆ ವಿವಿಧ ಪಕ್ಷಗಳು ಆರ್‌ಟಿಸಿ ನಡೆಸುತ್ತಿರುವ ಹೋರಾಟಕ್ಕೆ ಸಾಥ್‌ ನೀಡಿವೆ. ಆದರೆ ಸಮಸ್ಯೆ ಆಲಿಸಿ, ಸೂಕ್ಷ್ಮವಾಗಿ ವಿಷಯವನ್ನು ಇತ್ಯರ್ಥಗೊಳಿಸಬೇಕಿದ್ದ ತೆಲಂಗಾಣ ಸಿಎಂ ಕೆ.ಸಿ.ಚಂದ್ರಶೇಖರ್‌ ರಾವ್‌ ದುರ್ವರ್ತನೆ, ಅಹಂಕಾರದ ಮಾತುಗಳನ್ನಾಡಿದ್ದಾರೆ.

ಹುಜುರ್‌ನಗರ ಉಪಚುನಾವಣೆ ಗೆಲುವಿನ ಬಗ್ಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರು ಟಿಎಸ್‌ಆರ್‌ಟಿಸಿ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ‘ಆರ್‌ಟಿಸಿ ದಿವಾಳಿಯಾಗಿದ್ದು, ಇನ್ನೇನು ಕೆಲ ದಿನಗಳಲ್ಲಿ ಮುಚ್ಚಿ ಹೋಗಲಿದೆ. ಆರ್‌ಟಿಸಿಯನ್ನು ಬಂದ್‌ ಮಾಡುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಪ್ರತಿಭಟನಾಕಾರರೇ ಇದಕ್ಕೆ ಉತ್ತಮ ಅವಕಾಶ ಒದಗಿಸಿದ್ದಾರೆ. ಇದೇ ಕೊನೆಯ ಪ್ರತಿಭಟನೆಯೊಂದಿಗೆ ಆರ್‌ಟಿಸಿ ಮುಕ್ತಿ ಹೊಂದಲಿದೆ’ ಎಂದು ಅಪಹಾಸ್ಯದ ಮಾತುಗಳನ್ನಾಡಿದ್ದಾರೆ.

ಆರ್‌ಟಿಸಿ ಮತ್ತು ವಿಪಕ್ಷಗಳ ವಿರುದ್ಧ ಕೆಸಿಆರ್‌ ವಾಗ್ದಾಳಿ ನಡೆಸಿದರು. ’ಸದ್ಯದ ಪರಿಸ್ಥಿತಿಯ ಲಾಭ ಪಡೆದು ಚಾಲಕರಿಗೆ ಪ್ರಚೋದನೆ ನೀಡಲಾಗುತ್ತಿದೆ. ವೋಟ್‌ ಬ್ಯಾಂಕ್‌ಗಾಗಿ ಇಷ್ಟೆಲ್ಲಾ ಮಾಡಲಾಗುತ್ತಿದೆ. ಟ್ರೇಡ್‌ ಯೂನಿಯನ್‌ ನಾಯಕರು, ಮುಗ್ಧ ನೌಕರರು ಮತ್ತು ಅವರ ಕುಟುಂಬದ ಜತೆ ಚೆಲ್ಲಾಟವಾಡುತ್ತಿದ್ದಾರ’ ಎಂದರು.

’ಈಗಾಗಲೇ ಆರ್ಥಿಕ ಕುಸಿತ ಉಂಟಾಗಿದೆ. ನೌಕರರಿಗೆ ನೀಡಲು ಹಣವಿಲ್ಲ. ಧರಣಿ ನಿರತರ ಸಂಬಳವನ್ನು ಕತ್ತರಿಸಲಾಗುವುದು. ಅಲ್ಲದೇ ಮುಂದೆ ಅವರನ್ನು ಬಿಡಿಸಿಕೊಂಡು ಬರಲೂ ಸಹ ಹಣವಿಲ್ಲದಂತಾಗಬಹುದು. ಹಬ್ಬದ ದಿನಗಳಲ್ಲಿ ಈ ರೀತಿ ಪ್ರತಿಭಟನೆ ನಡೆಸುತ್ತಿರುವುದರಿಂದ ಆರ್‌ಟಿಸಿ ಗೆ ೧೨೫ ರಿಂದ ೧೫೦ ಕೋಟಿ ರೂಪಾಯಿ ನಷ್ಟವಾಗಲಿದೆ’ ಎಂದು ಹೇಳಿದರು.

ಇತ್ತ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಹೋರಾಟ ನಡೆಸುತ್ತಿರುವವರಲ್ಲಿ ಇಬ್ಬರು ನೌಕರರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಸಿಆರ್‌ ಪ್ರತಿಕ್ರಿಯೆಗೆ ಟಿಎಸ್‌ಆರ್‌ಟಿಸಿ ಮತ್ತು ಜೆಎಸಿ (ಜಂಟಿ ಕ್ರಿಯಾ ಸಮಿತಿ)ಯ ಸಂಚಾಲಕ ಅಶ್ವತ್ಥಾಮ್‌ ರೆಡ್ಡಿ ತೀವ್ರ ವಿರೋಧ ವ್ಯಕ್ತಪಡಿಸಿ್ದ್ದಾರೆ. ’ಕೆಸಿಆರ್‌ ದುರ್ವರ್ತನೆ ಮಿತಿ ಮೀರಿದೆ. ಆರ್‌ಟಿಸಿ ಯಾರಪ್ಪನ ಸೊತ್ತಲ್ಲ. ಕೆಸಿಆರ್‌ ಮಾತು ಖಂಡನಾರ್ಹ ಮತ್ತು ಪ್ರತಿಭಟನಾನಿರತರಿಗೆ ನೋವುಂಟು ಮಾಡಿದೆ. ೧೯೩೨ರಿಂದ ಆರ್‌ಟಿಸಿ ಜಾರಿಯಲ್ಲಿದೆ. ಯಾರು ಕೊನೆಯಾಗುತ್ತಾರೆ ಎಂಬುದನ್ನು ಜನ ನಿರ್ಧರಿಸುತ್ತಾರೆ’  ಎಂದು ಅಶ್ವತ್ಥಾಮ್‌ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...