Homeಮುಖಪುಟಇಲ್ಲಿ ಯಾರೂ ಕಾಳಜಿ ವಹಿಸುತ್ತಿಲ್ಲ; ಕೊರೊನಾದಿಂದ ಮೃತಪಟ್ಟ ಪತ್ರಕರ್ತನ ಕೊನೆಯ ಸಂದೇಶ

ಇಲ್ಲಿ ಯಾರೂ ಕಾಳಜಿ ವಹಿಸುತ್ತಿಲ್ಲ; ಕೊರೊನಾದಿಂದ ಮೃತಪಟ್ಟ ಪತ್ರಕರ್ತನ ಕೊನೆಯ ಸಂದೇಶ

- Advertisement -
- Advertisement -

“ಇಲ್ಲಿ ಐಸಿಯು ಉತ್ತಮವಾಗಿಲ್ಲ. ದಯವಿಟ್ಟು, ನಾವು ಖಾಸಗಿ ಆಸ್ಪತ್ರೆಗೆ ಹೋಗೋಣ. ಇಲ್ಲಿ ಯಾರೂ ಕಾಳಜಿ ವಹಿಸುತ್ತಿಲ್ಲ.”

ಇದು ಕಳೆದ ವಾರ ಕೊರೊನಾ ವೈರಸ್‌ಗೆ ಬಲಿಯಾದ ಹೈದರಾಬಾದ್‌ನ ಪತ್ರಕರ್ತ ಮನೋಜ್ ಕುಮಾರ್(33) ಕಳುಹಿಸಿದ ಕೊನೆಯ ಸಂದೇಶಗಳಲ್ಲಿ ಒಂದು. ಅವರು ಸರ್ಕಾರಿ ಗಾಂಧಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಜೂನ್ 6 ರಂದು ಮಧ್ಯಾಹ್ನ 3.46 ಕ್ಕೆ ಈ ಸಂದೇಶವನ್ನು ಅವರ ಸಹೋದರ ಸಾಯಿನಾಥ್ ಅವರಿಗೆ ಕಳುಹಿಸಿದ 24 ಗಂಟೆಯ ಒಳಗಾಗಿ ಅವರು ಮೃತಪಟ್ಟಿದ್ದಾರೆ.

ಈ ಒಂದು ಸಂದೇಶ, ಮನೋಜ್ ಅನುಭವಿಸುತ್ತಿದ್ದ ಹತಾಶೆಯನ್ನು ತೋರಿಸುತ್ತದೆ. ಅವರು ಆಮ್ಲಜನಕ ಬೇಕೆಂದು ಕೇಳಿದಾಗ ಆಸ್ಪತ್ರೆಯ ಕಡೆಯಿಂದ ಸರಿಯಾದ ಪ್ರತಿಕ್ರಿಯೆ ಬರದೇ ಇರುವ ಕಾರಣ, ತನ್ನ ಸಹೋದರನಿಗೆ “ದಯವಿಟ್ಟು, ನಾವು ಇಲ್ಲಿಂದ ಹೋಗೋಣ” ಎಂದು ಸಂದೇಶ ಕಳುಹಿಸಿದ್ದರು.

ಕೊರೊನಾ ವೈರಸ್ ಪರೀಕ್ಷೆಗಳನ್ನು ನಡೆಸುವ ರಾಜ್ಯ ಸರ್ಕಾರದ ನೋಡಲ್ ಕೇಂದ್ರವಾಗಿರುವ ಗಾಂಧಿ ಆಸ್ಪತ್ರೆಯ ಕೊರೊನಾ ವಾರ್ಡ್‌ನ ಅವ್ಯವಸ್ಥೆಯನ್ನು ಎತ್ತಿ ತೋರಿಸುವ ವೀಡಿಯೊವನ್ನು ಸಾಯಿನಾಥ್ ಬಿಡುಗಡೆ ಮಾಡಿದಂತೆಯೇ ಈ ಚಾಟ್‌ಗಳನ್ನೂ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ.

ಸಾಯಿನಾಥ್ ಕೂಡಾ ಮನೋಜ್ ಜೊತೆ ಕೊರೊನಾ ವೈರಸ್‌ಗೆ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಪ್ರಸ್ತುತ ಹೋಂ ಕ್ವಾರಂಟೈನ್‌ನಲ್ಲಿರುವ ಸಾಯಿನಾಥ್ ಸೋಮವಾರ ರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.

ಸಾಯಿನಾಥ್ ವೀಡಿಯೊಗಳಲ್ಲಿ ದಾಖಲಾಗಿರುವಂತೆ ಘಟನೆಗಳ ಅನುಕ್ರಮವನ್ನು ಎತ್ತಿ ತೋರಿಸುತ್ತಾ, “ಜೂನ್ 3 ರಂದು ಬೆಳಿಗ್ಗೆ 11 ಗಂಟೆಗೆ ಮನೋಜ್‌ನಲ್ಲಿ ಸೋಂಕಿನ ಲಕ್ಷಣ ಗೋಚರಿಸಿದರಿಂದ ನಾವು ಜ್ವರ ಆಸ್ಪತ್ರೆಗೆ ಹೋದೆವು. ಮಧ್ಯಾಹ್ನ 3 ಗಂಟೆ ಸುಮಾರಿಗೆ ನಮ್ಮಿಬ್ಬರನ್ನು ಪರೀಕ್ಷೆ ನಡೆಸಲಾಯಿತು. ನಂತರ ನಾವು ಮನೆಗೆ ಹೋದೆವು. ಅದೇ ದಿನ ರಾತ್ರಿ 10 ಗಂಟೆಯ ನಂತರ ನಾವಿಬ್ಬರೂ ಕೊರೊನಾ ಪಾಸಿಟಿವ್ ಎಂದು ಕರೆ ಬಂದು, ನಾವು ತಕ್ಷಣ ಜ್ವರ ಆಸ್ಪತ್ರೆಗೆ ಹೋದೆವು. ಮುಂಜಾನೆ 1 ರ ಹೊತ್ತಿಗೆ ನಮ್ಮನ್ನು ಏಳನೇ ಮಹಡಿಯಲ್ಲಿರುವ ವಾರ್ಡ್‌ಗೆ ಸ್ಥಳಾಂತರಿಸಲಾಯಿತು.” ಎಂದು ಹೇಳಿದ್ದಾರೆ.


ಓದಿ: ದುಡ್ಡು ಕಟ್ಟಲಾಗದಿದ್ದರೆ ಸತ್ತೋಗಿ; ಕೊರೊನಾ ಸಮಯದಲ್ಲೂ ರಕ್ತ ಹೀರುತ್ತಿರುವ ಫೈನಾನ್ಸ್‌ಗಳು


ಪ್ರವೇಶ ಪಡೆದ ನಂತರ ಅವರಿಗೆ ಬೆಡ್‌ಶೀಟ್, ಸೋಪ್ ಬಾರ್ ಮತ್ತು ಮಲ್ಟಿ-ವಿಟಮಿನ್ ಟ್ಯಾಬ್ಲೆಟ್‌ಗಳ ಜೊತೆಗೆ ಕೆಲವು ಟೂತ್‌ಪೇಸ್ಟ್ ನೀಡಲಾಗಿದೆ ಎಂದು ಹೇಳಿದ ಸಾಯಿನಾಥ್, “ನಾವು ವಾರ್ಡ್‌ಗೆ ಕಾಲಿಟ್ಟ ಸಮಯದಿಂದ ಸರಿಯಾದ ಸೌಲಭ್ಯಗಳಿಲ್ಲ. ರೋಗಿಗಳಿಗೆ ಮಾಹಿತಿ ನೀಡುವ ಜವಾಬ್ದಾರಿಯನ್ನು ಯಾರೂ ತೆಗೆದುಕೊಳ್ಳಲಿಲ್ಲ” ಎಂದು ಆರೋಪಿಸಿದ್ದಾರೆ.

“ಅದೇ ರಾತ್ರಿ ಮನೋಜ್‌ಗೆ ಉಸಿರಾಟದ ತೊಂದರೆಯಾಗಿ, ಅಲ್ಲಿ ಯಾರಿಗಾದರೂ ತಿಳಿಸುತ್ತೇನೆ ಎಂದರೂ ವಾರ್ಡ್‌ನಲ್ಲಿ ಅಥವಾ ಲಾಬಿಯಲ್ಲಿ ಯಾರೂ ಇರಲಿಲ್ಲ. ನಾನು ಹೊರಗೆ ಹೋಗಿ ನೋಡಿದಾಗ ಕೂಡ ಸ್ವಚ್ಚತಾ ಸಿಬ್ಬಂದಿ ಮಾತ್ರ ಇದ್ದರು. ನಾವು ಹೊರಗೆ ಹೋಗುವಂತಿಲ್ಲ ಮತ್ತು ವೈದ್ಯರು ಮರುದಿನ ಬರುತ್ತಾರೆ ಎಂದು ಅವರು ಹೇಳಿದರು” ಎಂದು ಸಾಯಿನಾಥ್ ಹೇಳಿದ್ದಾರೆ.

ಜೂನ್ 4 ರ ಮುಂಜಾನೆ ತನ್ನ ಸಹೋದರನ ಪರಿಸ್ಥಿತಿ ಹದಗೆಟ್ಟಿದ್ದನ್ನು ನೋಡಿ ಸಹಿಸಿಕೊಳ್ಳಲಾರದೆ ವೈದ್ಯರಿಗೆ ತಿಳಿಸಲು ಪ್ರಯತ್ನಿಸಿದೆ. ನನ್ನ ಸಹೋದರ ಪತ್ರಕರ್ತನಾಗಿರುವುದರಿಂದ ಅವರ ಕೆಲವು ಸಹೋದ್ಯೋಗಿಗಳನ್ನು ಸಂಪರ್ಕಿಸಿ, ಆಸ್ಪತ್ರೆಯ ಅಧೀಕ್ಷಕರ ಮೇಲೆ ಒತ್ತಡ ಹೇರಿದೆ. ಬೆಳಿಗ್ಗೆ 11 ಗಂಟೆ ಸುಮಾರಿಗೆ ಆಸ್ಪತ್ರೆಯು ಅವರನ್ನು ಐಸಿಯುಗೆ ಸ್ಥಳಾಂತರಿಸುವುದಾಗಿ ತಿಳಿಸಿದರು. ಆದರೆ ಸುಮಾರು 4 ಗಂಟೆಗಳು ಕಳೆದರೂ ಅದು ನಡೆಯದಿದ್ದಾಗ ಕಾರಣ ಕೇಳಿದೆ. ಆಸ್ಪತ್ರೆಯ ಐಸಿಯುವಿನಲ್ಲಿ ಸಾಕಷ್ಟು ಹಾಸಿಗೆಗಳಿಲ್ಲ ಎಂದು ಅವರು ಹೇಳಿದರು. ಆಮ್ಲಜನಕದ ಸಿಲಿಂಡರ್ ಅನ್ನು ವಾರ್ಡ್‌ನಲ್ಲಿಯೇ ಇಡಬಹುದೇ ಎಂದು ಕೇಳಿದರೆ ಅಲ್ಲಿ ಅದು ಕೂಡ ಲಭ್ಯವಿಲ್ಲ ಎಂದು ಹೇಳಿದರು. ಇದು ಇಲ್ಲಿಯ ಪರಿಸ್ಥಿತಿ, ” ಎಂದು ಸಾಯಿನಾಥ್ ಹೇಳಿದ್ದಾರೆ.

“ಜೂನ್ 4 ರಂದು ಸಂಜೆ 4 ಗಂಟೆ ಸುಮಾರಿಗೆ ಅವರು ಅವನನ್ನು ವಾರ್ಡ್‌ನಿಂದ ಹೊರಗೆ ಕರೆದೊಯ್ದು ಸುಮಾರು 1.5 ಗಂಟೆಗಳ ಕಾಲ, ಗಾಲಿಕುರ್ಚಿಯಲ್ಲಿ ಕೂರಿಸಿದ್ದಾರೆ ಹಾಗೂ ಅವನಿಗೆ ಚಿಕಿತ್ಸೆ ನೀಡಲಿಲ್ಲ” ಎಂದು ಸಾಯಿನಾಥ್  ಆರೋಪಿಸಿದ್ದಾರೆ.

ಈ ಸಮಯದಲ್ಲಿಯೇ ಮನೋಜ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕೆಂದು ತನ್ನ ಸಹೋದರನಿಗೆ ಸಂದೇಶ ಕಳುಹಿಸಿದ್ದಾನೆಂದು ಹೇಳಲಾಗಿದೆ. ಮಾಧ್ಯಮಗಳಲ್ಲಿ ಮನೋಜ್ ಅವರ ಸ್ನೇಹಿತರು ಆರೋಗ್ಯ ಸಚಿವರಿಗೆ ಕರೆ ಮಾಡಿದ ನಂತರವೇ ಅವರು ಮನೋಜ್ ನನ್ನು ಸರಿಯಾಗಿ ನೋಡಿಕೊಳ್ಳಲು ಪ್ರಾರಂಭಿಸಿದರು ಹಾಗೂ ಅವರನ್ನು ಪ್ರತ್ಯೇಕ ವಾರ್ಡ್‌ಗೆ ಸ್ಥಳಾಂತರಿಸಿದರು ಎಂದು ಸಾಯಿನಾಥ್ ಹೇಳಿದ್ದಾರೆ.

ಜೂನ್ 7 ರ ಬೆಳಿಗ್ಗೆ 9.30 ರ ಸುಮಾರಿಗೆ ನಿಮ್ಮ ಸೋದರ ವೆಂಟಿಲೇಟರ್‌ಗೆ ಸ್ಥಳಾಂತರವಾಗಿದ್ದಾರೆ ಎಂದು ಆಸ್ಪತ್ರೆಯಿಂದ ಸಾಯಿನಾಥ್‌‌ಗೆ ಕರೆ ಬಂದಿದ್ದು, ಅದಾಗಿ ಸ್ವಲ್ಪ ಹೊತ್ತಿಗೆ ಸಹೋದರ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಇಲಾಖೆ ಕರೆ ಮಾಡಿದೆ. ಆದರೆ ಯಾವುದೇ ವೈದ್ಯರು ತನಗೆ ಮಾಹಿತಿ ನೀಡಿರಲಿಲ್ಲ ಎಂದು ಸಾಯಿನಾಥ್ ಹೇಳುತ್ತಾರೆ. “ಆಸ್ಪತ್ರೆಯ ಪರಿಸ್ಥಿತಿ ಹೀಗಿದೆ. ನಮ್ಮಂತವರೇ ಚಿಕಿತ್ಸೆಗೆ ಒತ್ತಡ ಹೇರಬೇಕಾಗುವ ಪರಿಸ್ಥಿತಿ ಇದೆ. ಇನ್ನು ಸಾಮಾನ್ಯ ಜನರಿಗೆ ಇದು ತುಂಬಾ ಕಷ್ಟ” ಎಂದು ಅವರು ಹೇಳಿದ್ದಾರೆ.

 

ಇಷ್ಟೇ ಅಲ್ಲದೆ ಸ್ಥಳೀಯ ಮಾಧ್ಯಮಗಳ ಮತ್ತೊಂದು ವೀಡಿಯೊದಲ್ಲಿ ಗಾಂಧಿ ಆಸ್ಪತ್ರೆಯ ವಾರ್ಡ್‌ನ ಒಂದು ಮೂಲೆಯಲ್ಲಿ ಸಿರಿಂಜಿನ ಪಕ್ಕದಲ್ಲೇ ನೀರಿನ ಬಾಟಲಿಗಳು ಇರುವುದನ್ನು ತೋರಿಸಲಾಗಿದೆ. ಹಲವಾರು ವಸ್ತುಗಳು ನೆಲದ ಮೇಲೆ ಹರಡಿಕೊಂಡಿವೆ.

ಆದರೆ ಇದನ್ನು ತೆಲಗಾಂಣ ಸರ್ಕಾರ ಈ ಎಲ್ಲಾ ಆರೋಪಗಳನ್ನು ನಿರಾಕರಿಸಿದೆ.

ರಾಜ್ಯ ಸರ್ಕಾರ ಯಾರನ್ನೂ ನೇರವಾಗಿ ಹೆಸರಿಸದೆ ಸೋಮವಾರ ಮುಖ್ಯಮಂತ್ರಿ ಕಚೇರಿಯಿಂದ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು “ಗಾಂಧಿ ಆಸ್ಪತ್ರೆ ಕೊರೊನಾ ವೈರಸ್ ರೋಗಿಗಳಿಂದ ತುಂಬಿಹೋಗಿದೆ ಎಂದು ಕೆಲವರು ಸುಳ್ಳು ಹರಡುತ್ತಿದ್ದಾರೆ. ಕೆಲವು ಪತ್ರಿಕೆಗಳು ಮತ್ತು ಟಿವಿ ಚಾನೆಲ್‌ಗಳು ಈ ನಕಲಿ ಸುದ್ದಿಯನ್ನು ವರದಿ ಮಾಡುತ್ತಿವೆ. ಆದರೆ ಇದೊಂದು ಸುಳ್ಳು ಸುದ್ದಿಯಾಗಿದೆ. ಗಾಂಧಿ ಆಸ್ಪತ್ರೆಯಲ್ಲಿ, 2,150 ರೋಗಿಗಳಿಗೆ ಚಿಕಿತ್ಸೆ ನೀಡಲು ಸೌಲಭ್ಯವಿದ್ದು, ಆಮ್ಲಜನಕ ಪೂರೈಕೆ ಸೌಲಭ್ಯದೊಂದಿಗೆ 1,000 ಹಾಸಿಗೆಗಳನ್ನು ಹೊಂದಿದೆ. ಅದಲ್ಲದೆ ಆಸ್ಪತ್ರೆಯಲ್ಲಿ ಕೇವಲ 247 ಕೊರೊನ ರೋಗಿಗಳಿದ್ದಾರೆ” ಎಂದಿದೆ.

ಇದಕ್ಕೂ ಮುಂಚೆ ಹೇಳಿಕೆ ಕೊಟ್ಟಿದ್ದ ಗಾಂಧಿ ಆಸ್ಪತ್ರೆಯ ಅಧೀಕ್ಷಕ ರಾಜ ರಾವ್, “ಮನೋಜ್ ಅವರಿಗೆ ವೈದ್ಯರು, ಅರಿವಳಿಕೆ ತಜ್ಞರು ಮತ್ತು ಶ್ವಾಸಕೋಶ ತಜ್ಞರು ಸೇರಿದಂತೆ ವೈದ್ಯರ ತಂಡವು ಚಿಕಿತ್ಸೆ ನೀಡಿದೆ. ಆದರೆ ಅವರಿಗೆ ಜೂನ್ 7 ರಂದು ಹೃದಯಾಘಾತವಾಗಿ ಮೃತಪಟ್ಟರು” ಎಂದಿದ್ದರು.


ಓದಿ: ಮುಂಬೈಯಲ್ಲಿ ಕೊರೊನಾ ಸೋಂಕಿತ ಶವ ಆಸ್ಪತ್ರೆಯಿಂದ ನಾಪತ್ತೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...