Homeಮುಖಪುಟಇಲ್ಲಿ ಯಾರೂ ಕಾಳಜಿ ವಹಿಸುತ್ತಿಲ್ಲ; ಕೊರೊನಾದಿಂದ ಮೃತಪಟ್ಟ ಪತ್ರಕರ್ತನ ಕೊನೆಯ ಸಂದೇಶ

ಇಲ್ಲಿ ಯಾರೂ ಕಾಳಜಿ ವಹಿಸುತ್ತಿಲ್ಲ; ಕೊರೊನಾದಿಂದ ಮೃತಪಟ್ಟ ಪತ್ರಕರ್ತನ ಕೊನೆಯ ಸಂದೇಶ

- Advertisement -
- Advertisement -

“ಇಲ್ಲಿ ಐಸಿಯು ಉತ್ತಮವಾಗಿಲ್ಲ. ದಯವಿಟ್ಟು, ನಾವು ಖಾಸಗಿ ಆಸ್ಪತ್ರೆಗೆ ಹೋಗೋಣ. ಇಲ್ಲಿ ಯಾರೂ ಕಾಳಜಿ ವಹಿಸುತ್ತಿಲ್ಲ.”

ಇದು ಕಳೆದ ವಾರ ಕೊರೊನಾ ವೈರಸ್‌ಗೆ ಬಲಿಯಾದ ಹೈದರಾಬಾದ್‌ನ ಪತ್ರಕರ್ತ ಮನೋಜ್ ಕುಮಾರ್(33) ಕಳುಹಿಸಿದ ಕೊನೆಯ ಸಂದೇಶಗಳಲ್ಲಿ ಒಂದು. ಅವರು ಸರ್ಕಾರಿ ಗಾಂಧಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಜೂನ್ 6 ರಂದು ಮಧ್ಯಾಹ್ನ 3.46 ಕ್ಕೆ ಈ ಸಂದೇಶವನ್ನು ಅವರ ಸಹೋದರ ಸಾಯಿನಾಥ್ ಅವರಿಗೆ ಕಳುಹಿಸಿದ 24 ಗಂಟೆಯ ಒಳಗಾಗಿ ಅವರು ಮೃತಪಟ್ಟಿದ್ದಾರೆ.

ಈ ಒಂದು ಸಂದೇಶ, ಮನೋಜ್ ಅನುಭವಿಸುತ್ತಿದ್ದ ಹತಾಶೆಯನ್ನು ತೋರಿಸುತ್ತದೆ. ಅವರು ಆಮ್ಲಜನಕ ಬೇಕೆಂದು ಕೇಳಿದಾಗ ಆಸ್ಪತ್ರೆಯ ಕಡೆಯಿಂದ ಸರಿಯಾದ ಪ್ರತಿಕ್ರಿಯೆ ಬರದೇ ಇರುವ ಕಾರಣ, ತನ್ನ ಸಹೋದರನಿಗೆ “ದಯವಿಟ್ಟು, ನಾವು ಇಲ್ಲಿಂದ ಹೋಗೋಣ” ಎಂದು ಸಂದೇಶ ಕಳುಹಿಸಿದ್ದರು.

ಕೊರೊನಾ ವೈರಸ್ ಪರೀಕ್ಷೆಗಳನ್ನು ನಡೆಸುವ ರಾಜ್ಯ ಸರ್ಕಾರದ ನೋಡಲ್ ಕೇಂದ್ರವಾಗಿರುವ ಗಾಂಧಿ ಆಸ್ಪತ್ರೆಯ ಕೊರೊನಾ ವಾರ್ಡ್‌ನ ಅವ್ಯವಸ್ಥೆಯನ್ನು ಎತ್ತಿ ತೋರಿಸುವ ವೀಡಿಯೊವನ್ನು ಸಾಯಿನಾಥ್ ಬಿಡುಗಡೆ ಮಾಡಿದಂತೆಯೇ ಈ ಚಾಟ್‌ಗಳನ್ನೂ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ.

ಸಾಯಿನಾಥ್ ಕೂಡಾ ಮನೋಜ್ ಜೊತೆ ಕೊರೊನಾ ವೈರಸ್‌ಗೆ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಪ್ರಸ್ತುತ ಹೋಂ ಕ್ವಾರಂಟೈನ್‌ನಲ್ಲಿರುವ ಸಾಯಿನಾಥ್ ಸೋಮವಾರ ರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.

ಸಾಯಿನಾಥ್ ವೀಡಿಯೊಗಳಲ್ಲಿ ದಾಖಲಾಗಿರುವಂತೆ ಘಟನೆಗಳ ಅನುಕ್ರಮವನ್ನು ಎತ್ತಿ ತೋರಿಸುತ್ತಾ, “ಜೂನ್ 3 ರಂದು ಬೆಳಿಗ್ಗೆ 11 ಗಂಟೆಗೆ ಮನೋಜ್‌ನಲ್ಲಿ ಸೋಂಕಿನ ಲಕ್ಷಣ ಗೋಚರಿಸಿದರಿಂದ ನಾವು ಜ್ವರ ಆಸ್ಪತ್ರೆಗೆ ಹೋದೆವು. ಮಧ್ಯಾಹ್ನ 3 ಗಂಟೆ ಸುಮಾರಿಗೆ ನಮ್ಮಿಬ್ಬರನ್ನು ಪರೀಕ್ಷೆ ನಡೆಸಲಾಯಿತು. ನಂತರ ನಾವು ಮನೆಗೆ ಹೋದೆವು. ಅದೇ ದಿನ ರಾತ್ರಿ 10 ಗಂಟೆಯ ನಂತರ ನಾವಿಬ್ಬರೂ ಕೊರೊನಾ ಪಾಸಿಟಿವ್ ಎಂದು ಕರೆ ಬಂದು, ನಾವು ತಕ್ಷಣ ಜ್ವರ ಆಸ್ಪತ್ರೆಗೆ ಹೋದೆವು. ಮುಂಜಾನೆ 1 ರ ಹೊತ್ತಿಗೆ ನಮ್ಮನ್ನು ಏಳನೇ ಮಹಡಿಯಲ್ಲಿರುವ ವಾರ್ಡ್‌ಗೆ ಸ್ಥಳಾಂತರಿಸಲಾಯಿತು.” ಎಂದು ಹೇಳಿದ್ದಾರೆ.


ಓದಿ: ದುಡ್ಡು ಕಟ್ಟಲಾಗದಿದ್ದರೆ ಸತ್ತೋಗಿ; ಕೊರೊನಾ ಸಮಯದಲ್ಲೂ ರಕ್ತ ಹೀರುತ್ತಿರುವ ಫೈನಾನ್ಸ್‌ಗಳು


ಪ್ರವೇಶ ಪಡೆದ ನಂತರ ಅವರಿಗೆ ಬೆಡ್‌ಶೀಟ್, ಸೋಪ್ ಬಾರ್ ಮತ್ತು ಮಲ್ಟಿ-ವಿಟಮಿನ್ ಟ್ಯಾಬ್ಲೆಟ್‌ಗಳ ಜೊತೆಗೆ ಕೆಲವು ಟೂತ್‌ಪೇಸ್ಟ್ ನೀಡಲಾಗಿದೆ ಎಂದು ಹೇಳಿದ ಸಾಯಿನಾಥ್, “ನಾವು ವಾರ್ಡ್‌ಗೆ ಕಾಲಿಟ್ಟ ಸಮಯದಿಂದ ಸರಿಯಾದ ಸೌಲಭ್ಯಗಳಿಲ್ಲ. ರೋಗಿಗಳಿಗೆ ಮಾಹಿತಿ ನೀಡುವ ಜವಾಬ್ದಾರಿಯನ್ನು ಯಾರೂ ತೆಗೆದುಕೊಳ್ಳಲಿಲ್ಲ” ಎಂದು ಆರೋಪಿಸಿದ್ದಾರೆ.

“ಅದೇ ರಾತ್ರಿ ಮನೋಜ್‌ಗೆ ಉಸಿರಾಟದ ತೊಂದರೆಯಾಗಿ, ಅಲ್ಲಿ ಯಾರಿಗಾದರೂ ತಿಳಿಸುತ್ತೇನೆ ಎಂದರೂ ವಾರ್ಡ್‌ನಲ್ಲಿ ಅಥವಾ ಲಾಬಿಯಲ್ಲಿ ಯಾರೂ ಇರಲಿಲ್ಲ. ನಾನು ಹೊರಗೆ ಹೋಗಿ ನೋಡಿದಾಗ ಕೂಡ ಸ್ವಚ್ಚತಾ ಸಿಬ್ಬಂದಿ ಮಾತ್ರ ಇದ್ದರು. ನಾವು ಹೊರಗೆ ಹೋಗುವಂತಿಲ್ಲ ಮತ್ತು ವೈದ್ಯರು ಮರುದಿನ ಬರುತ್ತಾರೆ ಎಂದು ಅವರು ಹೇಳಿದರು” ಎಂದು ಸಾಯಿನಾಥ್ ಹೇಳಿದ್ದಾರೆ.

ಜೂನ್ 4 ರ ಮುಂಜಾನೆ ತನ್ನ ಸಹೋದರನ ಪರಿಸ್ಥಿತಿ ಹದಗೆಟ್ಟಿದ್ದನ್ನು ನೋಡಿ ಸಹಿಸಿಕೊಳ್ಳಲಾರದೆ ವೈದ್ಯರಿಗೆ ತಿಳಿಸಲು ಪ್ರಯತ್ನಿಸಿದೆ. ನನ್ನ ಸಹೋದರ ಪತ್ರಕರ್ತನಾಗಿರುವುದರಿಂದ ಅವರ ಕೆಲವು ಸಹೋದ್ಯೋಗಿಗಳನ್ನು ಸಂಪರ್ಕಿಸಿ, ಆಸ್ಪತ್ರೆಯ ಅಧೀಕ್ಷಕರ ಮೇಲೆ ಒತ್ತಡ ಹೇರಿದೆ. ಬೆಳಿಗ್ಗೆ 11 ಗಂಟೆ ಸುಮಾರಿಗೆ ಆಸ್ಪತ್ರೆಯು ಅವರನ್ನು ಐಸಿಯುಗೆ ಸ್ಥಳಾಂತರಿಸುವುದಾಗಿ ತಿಳಿಸಿದರು. ಆದರೆ ಸುಮಾರು 4 ಗಂಟೆಗಳು ಕಳೆದರೂ ಅದು ನಡೆಯದಿದ್ದಾಗ ಕಾರಣ ಕೇಳಿದೆ. ಆಸ್ಪತ್ರೆಯ ಐಸಿಯುವಿನಲ್ಲಿ ಸಾಕಷ್ಟು ಹಾಸಿಗೆಗಳಿಲ್ಲ ಎಂದು ಅವರು ಹೇಳಿದರು. ಆಮ್ಲಜನಕದ ಸಿಲಿಂಡರ್ ಅನ್ನು ವಾರ್ಡ್‌ನಲ್ಲಿಯೇ ಇಡಬಹುದೇ ಎಂದು ಕೇಳಿದರೆ ಅಲ್ಲಿ ಅದು ಕೂಡ ಲಭ್ಯವಿಲ್ಲ ಎಂದು ಹೇಳಿದರು. ಇದು ಇಲ್ಲಿಯ ಪರಿಸ್ಥಿತಿ, ” ಎಂದು ಸಾಯಿನಾಥ್ ಹೇಳಿದ್ದಾರೆ.

“ಜೂನ್ 4 ರಂದು ಸಂಜೆ 4 ಗಂಟೆ ಸುಮಾರಿಗೆ ಅವರು ಅವನನ್ನು ವಾರ್ಡ್‌ನಿಂದ ಹೊರಗೆ ಕರೆದೊಯ್ದು ಸುಮಾರು 1.5 ಗಂಟೆಗಳ ಕಾಲ, ಗಾಲಿಕುರ್ಚಿಯಲ್ಲಿ ಕೂರಿಸಿದ್ದಾರೆ ಹಾಗೂ ಅವನಿಗೆ ಚಿಕಿತ್ಸೆ ನೀಡಲಿಲ್ಲ” ಎಂದು ಸಾಯಿನಾಥ್  ಆರೋಪಿಸಿದ್ದಾರೆ.

ಈ ಸಮಯದಲ್ಲಿಯೇ ಮನೋಜ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕೆಂದು ತನ್ನ ಸಹೋದರನಿಗೆ ಸಂದೇಶ ಕಳುಹಿಸಿದ್ದಾನೆಂದು ಹೇಳಲಾಗಿದೆ. ಮಾಧ್ಯಮಗಳಲ್ಲಿ ಮನೋಜ್ ಅವರ ಸ್ನೇಹಿತರು ಆರೋಗ್ಯ ಸಚಿವರಿಗೆ ಕರೆ ಮಾಡಿದ ನಂತರವೇ ಅವರು ಮನೋಜ್ ನನ್ನು ಸರಿಯಾಗಿ ನೋಡಿಕೊಳ್ಳಲು ಪ್ರಾರಂಭಿಸಿದರು ಹಾಗೂ ಅವರನ್ನು ಪ್ರತ್ಯೇಕ ವಾರ್ಡ್‌ಗೆ ಸ್ಥಳಾಂತರಿಸಿದರು ಎಂದು ಸಾಯಿನಾಥ್ ಹೇಳಿದ್ದಾರೆ.

ಜೂನ್ 7 ರ ಬೆಳಿಗ್ಗೆ 9.30 ರ ಸುಮಾರಿಗೆ ನಿಮ್ಮ ಸೋದರ ವೆಂಟಿಲೇಟರ್‌ಗೆ ಸ್ಥಳಾಂತರವಾಗಿದ್ದಾರೆ ಎಂದು ಆಸ್ಪತ್ರೆಯಿಂದ ಸಾಯಿನಾಥ್‌‌ಗೆ ಕರೆ ಬಂದಿದ್ದು, ಅದಾಗಿ ಸ್ವಲ್ಪ ಹೊತ್ತಿಗೆ ಸಹೋದರ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಇಲಾಖೆ ಕರೆ ಮಾಡಿದೆ. ಆದರೆ ಯಾವುದೇ ವೈದ್ಯರು ತನಗೆ ಮಾಹಿತಿ ನೀಡಿರಲಿಲ್ಲ ಎಂದು ಸಾಯಿನಾಥ್ ಹೇಳುತ್ತಾರೆ. “ಆಸ್ಪತ್ರೆಯ ಪರಿಸ್ಥಿತಿ ಹೀಗಿದೆ. ನಮ್ಮಂತವರೇ ಚಿಕಿತ್ಸೆಗೆ ಒತ್ತಡ ಹೇರಬೇಕಾಗುವ ಪರಿಸ್ಥಿತಿ ಇದೆ. ಇನ್ನು ಸಾಮಾನ್ಯ ಜನರಿಗೆ ಇದು ತುಂಬಾ ಕಷ್ಟ” ಎಂದು ಅವರು ಹೇಳಿದ್ದಾರೆ.

 

ಇಷ್ಟೇ ಅಲ್ಲದೆ ಸ್ಥಳೀಯ ಮಾಧ್ಯಮಗಳ ಮತ್ತೊಂದು ವೀಡಿಯೊದಲ್ಲಿ ಗಾಂಧಿ ಆಸ್ಪತ್ರೆಯ ವಾರ್ಡ್‌ನ ಒಂದು ಮೂಲೆಯಲ್ಲಿ ಸಿರಿಂಜಿನ ಪಕ್ಕದಲ್ಲೇ ನೀರಿನ ಬಾಟಲಿಗಳು ಇರುವುದನ್ನು ತೋರಿಸಲಾಗಿದೆ. ಹಲವಾರು ವಸ್ತುಗಳು ನೆಲದ ಮೇಲೆ ಹರಡಿಕೊಂಡಿವೆ.

ಆದರೆ ಇದನ್ನು ತೆಲಗಾಂಣ ಸರ್ಕಾರ ಈ ಎಲ್ಲಾ ಆರೋಪಗಳನ್ನು ನಿರಾಕರಿಸಿದೆ.

ರಾಜ್ಯ ಸರ್ಕಾರ ಯಾರನ್ನೂ ನೇರವಾಗಿ ಹೆಸರಿಸದೆ ಸೋಮವಾರ ಮುಖ್ಯಮಂತ್ರಿ ಕಚೇರಿಯಿಂದ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು “ಗಾಂಧಿ ಆಸ್ಪತ್ರೆ ಕೊರೊನಾ ವೈರಸ್ ರೋಗಿಗಳಿಂದ ತುಂಬಿಹೋಗಿದೆ ಎಂದು ಕೆಲವರು ಸುಳ್ಳು ಹರಡುತ್ತಿದ್ದಾರೆ. ಕೆಲವು ಪತ್ರಿಕೆಗಳು ಮತ್ತು ಟಿವಿ ಚಾನೆಲ್‌ಗಳು ಈ ನಕಲಿ ಸುದ್ದಿಯನ್ನು ವರದಿ ಮಾಡುತ್ತಿವೆ. ಆದರೆ ಇದೊಂದು ಸುಳ್ಳು ಸುದ್ದಿಯಾಗಿದೆ. ಗಾಂಧಿ ಆಸ್ಪತ್ರೆಯಲ್ಲಿ, 2,150 ರೋಗಿಗಳಿಗೆ ಚಿಕಿತ್ಸೆ ನೀಡಲು ಸೌಲಭ್ಯವಿದ್ದು, ಆಮ್ಲಜನಕ ಪೂರೈಕೆ ಸೌಲಭ್ಯದೊಂದಿಗೆ 1,000 ಹಾಸಿಗೆಗಳನ್ನು ಹೊಂದಿದೆ. ಅದಲ್ಲದೆ ಆಸ್ಪತ್ರೆಯಲ್ಲಿ ಕೇವಲ 247 ಕೊರೊನ ರೋಗಿಗಳಿದ್ದಾರೆ” ಎಂದಿದೆ.

ಇದಕ್ಕೂ ಮುಂಚೆ ಹೇಳಿಕೆ ಕೊಟ್ಟಿದ್ದ ಗಾಂಧಿ ಆಸ್ಪತ್ರೆಯ ಅಧೀಕ್ಷಕ ರಾಜ ರಾವ್, “ಮನೋಜ್ ಅವರಿಗೆ ವೈದ್ಯರು, ಅರಿವಳಿಕೆ ತಜ್ಞರು ಮತ್ತು ಶ್ವಾಸಕೋಶ ತಜ್ಞರು ಸೇರಿದಂತೆ ವೈದ್ಯರ ತಂಡವು ಚಿಕಿತ್ಸೆ ನೀಡಿದೆ. ಆದರೆ ಅವರಿಗೆ ಜೂನ್ 7 ರಂದು ಹೃದಯಾಘಾತವಾಗಿ ಮೃತಪಟ್ಟರು” ಎಂದಿದ್ದರು.


ಓದಿ: ಮುಂಬೈಯಲ್ಲಿ ಕೊರೊನಾ ಸೋಂಕಿತ ಶವ ಆಸ್ಪತ್ರೆಯಿಂದ ನಾಪತ್ತೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...