Homeಮುಖಪುಟಇಲ್ಲಿ ಯಾರೂ ಕಾಳಜಿ ವಹಿಸುತ್ತಿಲ್ಲ; ಕೊರೊನಾದಿಂದ ಮೃತಪಟ್ಟ ಪತ್ರಕರ್ತನ ಕೊನೆಯ ಸಂದೇಶ

ಇಲ್ಲಿ ಯಾರೂ ಕಾಳಜಿ ವಹಿಸುತ್ತಿಲ್ಲ; ಕೊರೊನಾದಿಂದ ಮೃತಪಟ್ಟ ಪತ್ರಕರ್ತನ ಕೊನೆಯ ಸಂದೇಶ

- Advertisement -
- Advertisement -

“ಇಲ್ಲಿ ಐಸಿಯು ಉತ್ತಮವಾಗಿಲ್ಲ. ದಯವಿಟ್ಟು, ನಾವು ಖಾಸಗಿ ಆಸ್ಪತ್ರೆಗೆ ಹೋಗೋಣ. ಇಲ್ಲಿ ಯಾರೂ ಕಾಳಜಿ ವಹಿಸುತ್ತಿಲ್ಲ.”

ಇದು ಕಳೆದ ವಾರ ಕೊರೊನಾ ವೈರಸ್‌ಗೆ ಬಲಿಯಾದ ಹೈದರಾಬಾದ್‌ನ ಪತ್ರಕರ್ತ ಮನೋಜ್ ಕುಮಾರ್(33) ಕಳುಹಿಸಿದ ಕೊನೆಯ ಸಂದೇಶಗಳಲ್ಲಿ ಒಂದು. ಅವರು ಸರ್ಕಾರಿ ಗಾಂಧಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಜೂನ್ 6 ರಂದು ಮಧ್ಯಾಹ್ನ 3.46 ಕ್ಕೆ ಈ ಸಂದೇಶವನ್ನು ಅವರ ಸಹೋದರ ಸಾಯಿನಾಥ್ ಅವರಿಗೆ ಕಳುಹಿಸಿದ 24 ಗಂಟೆಯ ಒಳಗಾಗಿ ಅವರು ಮೃತಪಟ್ಟಿದ್ದಾರೆ.

ಈ ಒಂದು ಸಂದೇಶ, ಮನೋಜ್ ಅನುಭವಿಸುತ್ತಿದ್ದ ಹತಾಶೆಯನ್ನು ತೋರಿಸುತ್ತದೆ. ಅವರು ಆಮ್ಲಜನಕ ಬೇಕೆಂದು ಕೇಳಿದಾಗ ಆಸ್ಪತ್ರೆಯ ಕಡೆಯಿಂದ ಸರಿಯಾದ ಪ್ರತಿಕ್ರಿಯೆ ಬರದೇ ಇರುವ ಕಾರಣ, ತನ್ನ ಸಹೋದರನಿಗೆ “ದಯವಿಟ್ಟು, ನಾವು ಇಲ್ಲಿಂದ ಹೋಗೋಣ” ಎಂದು ಸಂದೇಶ ಕಳುಹಿಸಿದ್ದರು.

ಕೊರೊನಾ ವೈರಸ್ ಪರೀಕ್ಷೆಗಳನ್ನು ನಡೆಸುವ ರಾಜ್ಯ ಸರ್ಕಾರದ ನೋಡಲ್ ಕೇಂದ್ರವಾಗಿರುವ ಗಾಂಧಿ ಆಸ್ಪತ್ರೆಯ ಕೊರೊನಾ ವಾರ್ಡ್‌ನ ಅವ್ಯವಸ್ಥೆಯನ್ನು ಎತ್ತಿ ತೋರಿಸುವ ವೀಡಿಯೊವನ್ನು ಸಾಯಿನಾಥ್ ಬಿಡುಗಡೆ ಮಾಡಿದಂತೆಯೇ ಈ ಚಾಟ್‌ಗಳನ್ನೂ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ.

ಸಾಯಿನಾಥ್ ಕೂಡಾ ಮನೋಜ್ ಜೊತೆ ಕೊರೊನಾ ವೈರಸ್‌ಗೆ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಪ್ರಸ್ತುತ ಹೋಂ ಕ್ವಾರಂಟೈನ್‌ನಲ್ಲಿರುವ ಸಾಯಿನಾಥ್ ಸೋಮವಾರ ರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.

ಸಾಯಿನಾಥ್ ವೀಡಿಯೊಗಳಲ್ಲಿ ದಾಖಲಾಗಿರುವಂತೆ ಘಟನೆಗಳ ಅನುಕ್ರಮವನ್ನು ಎತ್ತಿ ತೋರಿಸುತ್ತಾ, “ಜೂನ್ 3 ರಂದು ಬೆಳಿಗ್ಗೆ 11 ಗಂಟೆಗೆ ಮನೋಜ್‌ನಲ್ಲಿ ಸೋಂಕಿನ ಲಕ್ಷಣ ಗೋಚರಿಸಿದರಿಂದ ನಾವು ಜ್ವರ ಆಸ್ಪತ್ರೆಗೆ ಹೋದೆವು. ಮಧ್ಯಾಹ್ನ 3 ಗಂಟೆ ಸುಮಾರಿಗೆ ನಮ್ಮಿಬ್ಬರನ್ನು ಪರೀಕ್ಷೆ ನಡೆಸಲಾಯಿತು. ನಂತರ ನಾವು ಮನೆಗೆ ಹೋದೆವು. ಅದೇ ದಿನ ರಾತ್ರಿ 10 ಗಂಟೆಯ ನಂತರ ನಾವಿಬ್ಬರೂ ಕೊರೊನಾ ಪಾಸಿಟಿವ್ ಎಂದು ಕರೆ ಬಂದು, ನಾವು ತಕ್ಷಣ ಜ್ವರ ಆಸ್ಪತ್ರೆಗೆ ಹೋದೆವು. ಮುಂಜಾನೆ 1 ರ ಹೊತ್ತಿಗೆ ನಮ್ಮನ್ನು ಏಳನೇ ಮಹಡಿಯಲ್ಲಿರುವ ವಾರ್ಡ್‌ಗೆ ಸ್ಥಳಾಂತರಿಸಲಾಯಿತು.” ಎಂದು ಹೇಳಿದ್ದಾರೆ.


ಓದಿ: ದುಡ್ಡು ಕಟ್ಟಲಾಗದಿದ್ದರೆ ಸತ್ತೋಗಿ; ಕೊರೊನಾ ಸಮಯದಲ್ಲೂ ರಕ್ತ ಹೀರುತ್ತಿರುವ ಫೈನಾನ್ಸ್‌ಗಳು


ಪ್ರವೇಶ ಪಡೆದ ನಂತರ ಅವರಿಗೆ ಬೆಡ್‌ಶೀಟ್, ಸೋಪ್ ಬಾರ್ ಮತ್ತು ಮಲ್ಟಿ-ವಿಟಮಿನ್ ಟ್ಯಾಬ್ಲೆಟ್‌ಗಳ ಜೊತೆಗೆ ಕೆಲವು ಟೂತ್‌ಪೇಸ್ಟ್ ನೀಡಲಾಗಿದೆ ಎಂದು ಹೇಳಿದ ಸಾಯಿನಾಥ್, “ನಾವು ವಾರ್ಡ್‌ಗೆ ಕಾಲಿಟ್ಟ ಸಮಯದಿಂದ ಸರಿಯಾದ ಸೌಲಭ್ಯಗಳಿಲ್ಲ. ರೋಗಿಗಳಿಗೆ ಮಾಹಿತಿ ನೀಡುವ ಜವಾಬ್ದಾರಿಯನ್ನು ಯಾರೂ ತೆಗೆದುಕೊಳ್ಳಲಿಲ್ಲ” ಎಂದು ಆರೋಪಿಸಿದ್ದಾರೆ.

“ಅದೇ ರಾತ್ರಿ ಮನೋಜ್‌ಗೆ ಉಸಿರಾಟದ ತೊಂದರೆಯಾಗಿ, ಅಲ್ಲಿ ಯಾರಿಗಾದರೂ ತಿಳಿಸುತ್ತೇನೆ ಎಂದರೂ ವಾರ್ಡ್‌ನಲ್ಲಿ ಅಥವಾ ಲಾಬಿಯಲ್ಲಿ ಯಾರೂ ಇರಲಿಲ್ಲ. ನಾನು ಹೊರಗೆ ಹೋಗಿ ನೋಡಿದಾಗ ಕೂಡ ಸ್ವಚ್ಚತಾ ಸಿಬ್ಬಂದಿ ಮಾತ್ರ ಇದ್ದರು. ನಾವು ಹೊರಗೆ ಹೋಗುವಂತಿಲ್ಲ ಮತ್ತು ವೈದ್ಯರು ಮರುದಿನ ಬರುತ್ತಾರೆ ಎಂದು ಅವರು ಹೇಳಿದರು” ಎಂದು ಸಾಯಿನಾಥ್ ಹೇಳಿದ್ದಾರೆ.

ಜೂನ್ 4 ರ ಮುಂಜಾನೆ ತನ್ನ ಸಹೋದರನ ಪರಿಸ್ಥಿತಿ ಹದಗೆಟ್ಟಿದ್ದನ್ನು ನೋಡಿ ಸಹಿಸಿಕೊಳ್ಳಲಾರದೆ ವೈದ್ಯರಿಗೆ ತಿಳಿಸಲು ಪ್ರಯತ್ನಿಸಿದೆ. ನನ್ನ ಸಹೋದರ ಪತ್ರಕರ್ತನಾಗಿರುವುದರಿಂದ ಅವರ ಕೆಲವು ಸಹೋದ್ಯೋಗಿಗಳನ್ನು ಸಂಪರ್ಕಿಸಿ, ಆಸ್ಪತ್ರೆಯ ಅಧೀಕ್ಷಕರ ಮೇಲೆ ಒತ್ತಡ ಹೇರಿದೆ. ಬೆಳಿಗ್ಗೆ 11 ಗಂಟೆ ಸುಮಾರಿಗೆ ಆಸ್ಪತ್ರೆಯು ಅವರನ್ನು ಐಸಿಯುಗೆ ಸ್ಥಳಾಂತರಿಸುವುದಾಗಿ ತಿಳಿಸಿದರು. ಆದರೆ ಸುಮಾರು 4 ಗಂಟೆಗಳು ಕಳೆದರೂ ಅದು ನಡೆಯದಿದ್ದಾಗ ಕಾರಣ ಕೇಳಿದೆ. ಆಸ್ಪತ್ರೆಯ ಐಸಿಯುವಿನಲ್ಲಿ ಸಾಕಷ್ಟು ಹಾಸಿಗೆಗಳಿಲ್ಲ ಎಂದು ಅವರು ಹೇಳಿದರು. ಆಮ್ಲಜನಕದ ಸಿಲಿಂಡರ್ ಅನ್ನು ವಾರ್ಡ್‌ನಲ್ಲಿಯೇ ಇಡಬಹುದೇ ಎಂದು ಕೇಳಿದರೆ ಅಲ್ಲಿ ಅದು ಕೂಡ ಲಭ್ಯವಿಲ್ಲ ಎಂದು ಹೇಳಿದರು. ಇದು ಇಲ್ಲಿಯ ಪರಿಸ್ಥಿತಿ, ” ಎಂದು ಸಾಯಿನಾಥ್ ಹೇಳಿದ್ದಾರೆ.

“ಜೂನ್ 4 ರಂದು ಸಂಜೆ 4 ಗಂಟೆ ಸುಮಾರಿಗೆ ಅವರು ಅವನನ್ನು ವಾರ್ಡ್‌ನಿಂದ ಹೊರಗೆ ಕರೆದೊಯ್ದು ಸುಮಾರು 1.5 ಗಂಟೆಗಳ ಕಾಲ, ಗಾಲಿಕುರ್ಚಿಯಲ್ಲಿ ಕೂರಿಸಿದ್ದಾರೆ ಹಾಗೂ ಅವನಿಗೆ ಚಿಕಿತ್ಸೆ ನೀಡಲಿಲ್ಲ” ಎಂದು ಸಾಯಿನಾಥ್  ಆರೋಪಿಸಿದ್ದಾರೆ.

ಈ ಸಮಯದಲ್ಲಿಯೇ ಮನೋಜ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕೆಂದು ತನ್ನ ಸಹೋದರನಿಗೆ ಸಂದೇಶ ಕಳುಹಿಸಿದ್ದಾನೆಂದು ಹೇಳಲಾಗಿದೆ. ಮಾಧ್ಯಮಗಳಲ್ಲಿ ಮನೋಜ್ ಅವರ ಸ್ನೇಹಿತರು ಆರೋಗ್ಯ ಸಚಿವರಿಗೆ ಕರೆ ಮಾಡಿದ ನಂತರವೇ ಅವರು ಮನೋಜ್ ನನ್ನು ಸರಿಯಾಗಿ ನೋಡಿಕೊಳ್ಳಲು ಪ್ರಾರಂಭಿಸಿದರು ಹಾಗೂ ಅವರನ್ನು ಪ್ರತ್ಯೇಕ ವಾರ್ಡ್‌ಗೆ ಸ್ಥಳಾಂತರಿಸಿದರು ಎಂದು ಸಾಯಿನಾಥ್ ಹೇಳಿದ್ದಾರೆ.

ಜೂನ್ 7 ರ ಬೆಳಿಗ್ಗೆ 9.30 ರ ಸುಮಾರಿಗೆ ನಿಮ್ಮ ಸೋದರ ವೆಂಟಿಲೇಟರ್‌ಗೆ ಸ್ಥಳಾಂತರವಾಗಿದ್ದಾರೆ ಎಂದು ಆಸ್ಪತ್ರೆಯಿಂದ ಸಾಯಿನಾಥ್‌‌ಗೆ ಕರೆ ಬಂದಿದ್ದು, ಅದಾಗಿ ಸ್ವಲ್ಪ ಹೊತ್ತಿಗೆ ಸಹೋದರ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಇಲಾಖೆ ಕರೆ ಮಾಡಿದೆ. ಆದರೆ ಯಾವುದೇ ವೈದ್ಯರು ತನಗೆ ಮಾಹಿತಿ ನೀಡಿರಲಿಲ್ಲ ಎಂದು ಸಾಯಿನಾಥ್ ಹೇಳುತ್ತಾರೆ. “ಆಸ್ಪತ್ರೆಯ ಪರಿಸ್ಥಿತಿ ಹೀಗಿದೆ. ನಮ್ಮಂತವರೇ ಚಿಕಿತ್ಸೆಗೆ ಒತ್ತಡ ಹೇರಬೇಕಾಗುವ ಪರಿಸ್ಥಿತಿ ಇದೆ. ಇನ್ನು ಸಾಮಾನ್ಯ ಜನರಿಗೆ ಇದು ತುಂಬಾ ಕಷ್ಟ” ಎಂದು ಅವರು ಹೇಳಿದ್ದಾರೆ.

 

ಇಷ್ಟೇ ಅಲ್ಲದೆ ಸ್ಥಳೀಯ ಮಾಧ್ಯಮಗಳ ಮತ್ತೊಂದು ವೀಡಿಯೊದಲ್ಲಿ ಗಾಂಧಿ ಆಸ್ಪತ್ರೆಯ ವಾರ್ಡ್‌ನ ಒಂದು ಮೂಲೆಯಲ್ಲಿ ಸಿರಿಂಜಿನ ಪಕ್ಕದಲ್ಲೇ ನೀರಿನ ಬಾಟಲಿಗಳು ಇರುವುದನ್ನು ತೋರಿಸಲಾಗಿದೆ. ಹಲವಾರು ವಸ್ತುಗಳು ನೆಲದ ಮೇಲೆ ಹರಡಿಕೊಂಡಿವೆ.

ಆದರೆ ಇದನ್ನು ತೆಲಗಾಂಣ ಸರ್ಕಾರ ಈ ಎಲ್ಲಾ ಆರೋಪಗಳನ್ನು ನಿರಾಕರಿಸಿದೆ.

ರಾಜ್ಯ ಸರ್ಕಾರ ಯಾರನ್ನೂ ನೇರವಾಗಿ ಹೆಸರಿಸದೆ ಸೋಮವಾರ ಮುಖ್ಯಮಂತ್ರಿ ಕಚೇರಿಯಿಂದ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು “ಗಾಂಧಿ ಆಸ್ಪತ್ರೆ ಕೊರೊನಾ ವೈರಸ್ ರೋಗಿಗಳಿಂದ ತುಂಬಿಹೋಗಿದೆ ಎಂದು ಕೆಲವರು ಸುಳ್ಳು ಹರಡುತ್ತಿದ್ದಾರೆ. ಕೆಲವು ಪತ್ರಿಕೆಗಳು ಮತ್ತು ಟಿವಿ ಚಾನೆಲ್‌ಗಳು ಈ ನಕಲಿ ಸುದ್ದಿಯನ್ನು ವರದಿ ಮಾಡುತ್ತಿವೆ. ಆದರೆ ಇದೊಂದು ಸುಳ್ಳು ಸುದ್ದಿಯಾಗಿದೆ. ಗಾಂಧಿ ಆಸ್ಪತ್ರೆಯಲ್ಲಿ, 2,150 ರೋಗಿಗಳಿಗೆ ಚಿಕಿತ್ಸೆ ನೀಡಲು ಸೌಲಭ್ಯವಿದ್ದು, ಆಮ್ಲಜನಕ ಪೂರೈಕೆ ಸೌಲಭ್ಯದೊಂದಿಗೆ 1,000 ಹಾಸಿಗೆಗಳನ್ನು ಹೊಂದಿದೆ. ಅದಲ್ಲದೆ ಆಸ್ಪತ್ರೆಯಲ್ಲಿ ಕೇವಲ 247 ಕೊರೊನ ರೋಗಿಗಳಿದ್ದಾರೆ” ಎಂದಿದೆ.

ಇದಕ್ಕೂ ಮುಂಚೆ ಹೇಳಿಕೆ ಕೊಟ್ಟಿದ್ದ ಗಾಂಧಿ ಆಸ್ಪತ್ರೆಯ ಅಧೀಕ್ಷಕ ರಾಜ ರಾವ್, “ಮನೋಜ್ ಅವರಿಗೆ ವೈದ್ಯರು, ಅರಿವಳಿಕೆ ತಜ್ಞರು ಮತ್ತು ಶ್ವಾಸಕೋಶ ತಜ್ಞರು ಸೇರಿದಂತೆ ವೈದ್ಯರ ತಂಡವು ಚಿಕಿತ್ಸೆ ನೀಡಿದೆ. ಆದರೆ ಅವರಿಗೆ ಜೂನ್ 7 ರಂದು ಹೃದಯಾಘಾತವಾಗಿ ಮೃತಪಟ್ಟರು” ಎಂದಿದ್ದರು.


ಓದಿ: ಮುಂಬೈಯಲ್ಲಿ ಕೊರೊನಾ ಸೋಂಕಿತ ಶವ ಆಸ್ಪತ್ರೆಯಿಂದ ನಾಪತ್ತೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...