Homeಮುಖಪುಟಇಲ್ಲಿ ಯಾರೂ ಕಾಳಜಿ ವಹಿಸುತ್ತಿಲ್ಲ; ಕೊರೊನಾದಿಂದ ಮೃತಪಟ್ಟ ಪತ್ರಕರ್ತನ ಕೊನೆಯ ಸಂದೇಶ

ಇಲ್ಲಿ ಯಾರೂ ಕಾಳಜಿ ವಹಿಸುತ್ತಿಲ್ಲ; ಕೊರೊನಾದಿಂದ ಮೃತಪಟ್ಟ ಪತ್ರಕರ್ತನ ಕೊನೆಯ ಸಂದೇಶ

- Advertisement -
- Advertisement -

“ಇಲ್ಲಿ ಐಸಿಯು ಉತ್ತಮವಾಗಿಲ್ಲ. ದಯವಿಟ್ಟು, ನಾವು ಖಾಸಗಿ ಆಸ್ಪತ್ರೆಗೆ ಹೋಗೋಣ. ಇಲ್ಲಿ ಯಾರೂ ಕಾಳಜಿ ವಹಿಸುತ್ತಿಲ್ಲ.”

ಇದು ಕಳೆದ ವಾರ ಕೊರೊನಾ ವೈರಸ್‌ಗೆ ಬಲಿಯಾದ ಹೈದರಾಬಾದ್‌ನ ಪತ್ರಕರ್ತ ಮನೋಜ್ ಕುಮಾರ್(33) ಕಳುಹಿಸಿದ ಕೊನೆಯ ಸಂದೇಶಗಳಲ್ಲಿ ಒಂದು. ಅವರು ಸರ್ಕಾರಿ ಗಾಂಧಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಜೂನ್ 6 ರಂದು ಮಧ್ಯಾಹ್ನ 3.46 ಕ್ಕೆ ಈ ಸಂದೇಶವನ್ನು ಅವರ ಸಹೋದರ ಸಾಯಿನಾಥ್ ಅವರಿಗೆ ಕಳುಹಿಸಿದ 24 ಗಂಟೆಯ ಒಳಗಾಗಿ ಅವರು ಮೃತಪಟ್ಟಿದ್ದಾರೆ.

ಈ ಒಂದು ಸಂದೇಶ, ಮನೋಜ್ ಅನುಭವಿಸುತ್ತಿದ್ದ ಹತಾಶೆಯನ್ನು ತೋರಿಸುತ್ತದೆ. ಅವರು ಆಮ್ಲಜನಕ ಬೇಕೆಂದು ಕೇಳಿದಾಗ ಆಸ್ಪತ್ರೆಯ ಕಡೆಯಿಂದ ಸರಿಯಾದ ಪ್ರತಿಕ್ರಿಯೆ ಬರದೇ ಇರುವ ಕಾರಣ, ತನ್ನ ಸಹೋದರನಿಗೆ “ದಯವಿಟ್ಟು, ನಾವು ಇಲ್ಲಿಂದ ಹೋಗೋಣ” ಎಂದು ಸಂದೇಶ ಕಳುಹಿಸಿದ್ದರು.

ಕೊರೊನಾ ವೈರಸ್ ಪರೀಕ್ಷೆಗಳನ್ನು ನಡೆಸುವ ರಾಜ್ಯ ಸರ್ಕಾರದ ನೋಡಲ್ ಕೇಂದ್ರವಾಗಿರುವ ಗಾಂಧಿ ಆಸ್ಪತ್ರೆಯ ಕೊರೊನಾ ವಾರ್ಡ್‌ನ ಅವ್ಯವಸ್ಥೆಯನ್ನು ಎತ್ತಿ ತೋರಿಸುವ ವೀಡಿಯೊವನ್ನು ಸಾಯಿನಾಥ್ ಬಿಡುಗಡೆ ಮಾಡಿದಂತೆಯೇ ಈ ಚಾಟ್‌ಗಳನ್ನೂ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ.

ಸಾಯಿನಾಥ್ ಕೂಡಾ ಮನೋಜ್ ಜೊತೆ ಕೊರೊನಾ ವೈರಸ್‌ಗೆ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಪ್ರಸ್ತುತ ಹೋಂ ಕ್ವಾರಂಟೈನ್‌ನಲ್ಲಿರುವ ಸಾಯಿನಾಥ್ ಸೋಮವಾರ ರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.

ಸಾಯಿನಾಥ್ ವೀಡಿಯೊಗಳಲ್ಲಿ ದಾಖಲಾಗಿರುವಂತೆ ಘಟನೆಗಳ ಅನುಕ್ರಮವನ್ನು ಎತ್ತಿ ತೋರಿಸುತ್ತಾ, “ಜೂನ್ 3 ರಂದು ಬೆಳಿಗ್ಗೆ 11 ಗಂಟೆಗೆ ಮನೋಜ್‌ನಲ್ಲಿ ಸೋಂಕಿನ ಲಕ್ಷಣ ಗೋಚರಿಸಿದರಿಂದ ನಾವು ಜ್ವರ ಆಸ್ಪತ್ರೆಗೆ ಹೋದೆವು. ಮಧ್ಯಾಹ್ನ 3 ಗಂಟೆ ಸುಮಾರಿಗೆ ನಮ್ಮಿಬ್ಬರನ್ನು ಪರೀಕ್ಷೆ ನಡೆಸಲಾಯಿತು. ನಂತರ ನಾವು ಮನೆಗೆ ಹೋದೆವು. ಅದೇ ದಿನ ರಾತ್ರಿ 10 ಗಂಟೆಯ ನಂತರ ನಾವಿಬ್ಬರೂ ಕೊರೊನಾ ಪಾಸಿಟಿವ್ ಎಂದು ಕರೆ ಬಂದು, ನಾವು ತಕ್ಷಣ ಜ್ವರ ಆಸ್ಪತ್ರೆಗೆ ಹೋದೆವು. ಮುಂಜಾನೆ 1 ರ ಹೊತ್ತಿಗೆ ನಮ್ಮನ್ನು ಏಳನೇ ಮಹಡಿಯಲ್ಲಿರುವ ವಾರ್ಡ್‌ಗೆ ಸ್ಥಳಾಂತರಿಸಲಾಯಿತು.” ಎಂದು ಹೇಳಿದ್ದಾರೆ.


ಓದಿ: ದುಡ್ಡು ಕಟ್ಟಲಾಗದಿದ್ದರೆ ಸತ್ತೋಗಿ; ಕೊರೊನಾ ಸಮಯದಲ್ಲೂ ರಕ್ತ ಹೀರುತ್ತಿರುವ ಫೈನಾನ್ಸ್‌ಗಳು


ಪ್ರವೇಶ ಪಡೆದ ನಂತರ ಅವರಿಗೆ ಬೆಡ್‌ಶೀಟ್, ಸೋಪ್ ಬಾರ್ ಮತ್ತು ಮಲ್ಟಿ-ವಿಟಮಿನ್ ಟ್ಯಾಬ್ಲೆಟ್‌ಗಳ ಜೊತೆಗೆ ಕೆಲವು ಟೂತ್‌ಪೇಸ್ಟ್ ನೀಡಲಾಗಿದೆ ಎಂದು ಹೇಳಿದ ಸಾಯಿನಾಥ್, “ನಾವು ವಾರ್ಡ್‌ಗೆ ಕಾಲಿಟ್ಟ ಸಮಯದಿಂದ ಸರಿಯಾದ ಸೌಲಭ್ಯಗಳಿಲ್ಲ. ರೋಗಿಗಳಿಗೆ ಮಾಹಿತಿ ನೀಡುವ ಜವಾಬ್ದಾರಿಯನ್ನು ಯಾರೂ ತೆಗೆದುಕೊಳ್ಳಲಿಲ್ಲ” ಎಂದು ಆರೋಪಿಸಿದ್ದಾರೆ.

“ಅದೇ ರಾತ್ರಿ ಮನೋಜ್‌ಗೆ ಉಸಿರಾಟದ ತೊಂದರೆಯಾಗಿ, ಅಲ್ಲಿ ಯಾರಿಗಾದರೂ ತಿಳಿಸುತ್ತೇನೆ ಎಂದರೂ ವಾರ್ಡ್‌ನಲ್ಲಿ ಅಥವಾ ಲಾಬಿಯಲ್ಲಿ ಯಾರೂ ಇರಲಿಲ್ಲ. ನಾನು ಹೊರಗೆ ಹೋಗಿ ನೋಡಿದಾಗ ಕೂಡ ಸ್ವಚ್ಚತಾ ಸಿಬ್ಬಂದಿ ಮಾತ್ರ ಇದ್ದರು. ನಾವು ಹೊರಗೆ ಹೋಗುವಂತಿಲ್ಲ ಮತ್ತು ವೈದ್ಯರು ಮರುದಿನ ಬರುತ್ತಾರೆ ಎಂದು ಅವರು ಹೇಳಿದರು” ಎಂದು ಸಾಯಿನಾಥ್ ಹೇಳಿದ್ದಾರೆ.

ಜೂನ್ 4 ರ ಮುಂಜಾನೆ ತನ್ನ ಸಹೋದರನ ಪರಿಸ್ಥಿತಿ ಹದಗೆಟ್ಟಿದ್ದನ್ನು ನೋಡಿ ಸಹಿಸಿಕೊಳ್ಳಲಾರದೆ ವೈದ್ಯರಿಗೆ ತಿಳಿಸಲು ಪ್ರಯತ್ನಿಸಿದೆ. ನನ್ನ ಸಹೋದರ ಪತ್ರಕರ್ತನಾಗಿರುವುದರಿಂದ ಅವರ ಕೆಲವು ಸಹೋದ್ಯೋಗಿಗಳನ್ನು ಸಂಪರ್ಕಿಸಿ, ಆಸ್ಪತ್ರೆಯ ಅಧೀಕ್ಷಕರ ಮೇಲೆ ಒತ್ತಡ ಹೇರಿದೆ. ಬೆಳಿಗ್ಗೆ 11 ಗಂಟೆ ಸುಮಾರಿಗೆ ಆಸ್ಪತ್ರೆಯು ಅವರನ್ನು ಐಸಿಯುಗೆ ಸ್ಥಳಾಂತರಿಸುವುದಾಗಿ ತಿಳಿಸಿದರು. ಆದರೆ ಸುಮಾರು 4 ಗಂಟೆಗಳು ಕಳೆದರೂ ಅದು ನಡೆಯದಿದ್ದಾಗ ಕಾರಣ ಕೇಳಿದೆ. ಆಸ್ಪತ್ರೆಯ ಐಸಿಯುವಿನಲ್ಲಿ ಸಾಕಷ್ಟು ಹಾಸಿಗೆಗಳಿಲ್ಲ ಎಂದು ಅವರು ಹೇಳಿದರು. ಆಮ್ಲಜನಕದ ಸಿಲಿಂಡರ್ ಅನ್ನು ವಾರ್ಡ್‌ನಲ್ಲಿಯೇ ಇಡಬಹುದೇ ಎಂದು ಕೇಳಿದರೆ ಅಲ್ಲಿ ಅದು ಕೂಡ ಲಭ್ಯವಿಲ್ಲ ಎಂದು ಹೇಳಿದರು. ಇದು ಇಲ್ಲಿಯ ಪರಿಸ್ಥಿತಿ, ” ಎಂದು ಸಾಯಿನಾಥ್ ಹೇಳಿದ್ದಾರೆ.

“ಜೂನ್ 4 ರಂದು ಸಂಜೆ 4 ಗಂಟೆ ಸುಮಾರಿಗೆ ಅವರು ಅವನನ್ನು ವಾರ್ಡ್‌ನಿಂದ ಹೊರಗೆ ಕರೆದೊಯ್ದು ಸುಮಾರು 1.5 ಗಂಟೆಗಳ ಕಾಲ, ಗಾಲಿಕುರ್ಚಿಯಲ್ಲಿ ಕೂರಿಸಿದ್ದಾರೆ ಹಾಗೂ ಅವನಿಗೆ ಚಿಕಿತ್ಸೆ ನೀಡಲಿಲ್ಲ” ಎಂದು ಸಾಯಿನಾಥ್  ಆರೋಪಿಸಿದ್ದಾರೆ.

ಈ ಸಮಯದಲ್ಲಿಯೇ ಮನೋಜ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕೆಂದು ತನ್ನ ಸಹೋದರನಿಗೆ ಸಂದೇಶ ಕಳುಹಿಸಿದ್ದಾನೆಂದು ಹೇಳಲಾಗಿದೆ. ಮಾಧ್ಯಮಗಳಲ್ಲಿ ಮನೋಜ್ ಅವರ ಸ್ನೇಹಿತರು ಆರೋಗ್ಯ ಸಚಿವರಿಗೆ ಕರೆ ಮಾಡಿದ ನಂತರವೇ ಅವರು ಮನೋಜ್ ನನ್ನು ಸರಿಯಾಗಿ ನೋಡಿಕೊಳ್ಳಲು ಪ್ರಾರಂಭಿಸಿದರು ಹಾಗೂ ಅವರನ್ನು ಪ್ರತ್ಯೇಕ ವಾರ್ಡ್‌ಗೆ ಸ್ಥಳಾಂತರಿಸಿದರು ಎಂದು ಸಾಯಿನಾಥ್ ಹೇಳಿದ್ದಾರೆ.

ಜೂನ್ 7 ರ ಬೆಳಿಗ್ಗೆ 9.30 ರ ಸುಮಾರಿಗೆ ನಿಮ್ಮ ಸೋದರ ವೆಂಟಿಲೇಟರ್‌ಗೆ ಸ್ಥಳಾಂತರವಾಗಿದ್ದಾರೆ ಎಂದು ಆಸ್ಪತ್ರೆಯಿಂದ ಸಾಯಿನಾಥ್‌‌ಗೆ ಕರೆ ಬಂದಿದ್ದು, ಅದಾಗಿ ಸ್ವಲ್ಪ ಹೊತ್ತಿಗೆ ಸಹೋದರ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಇಲಾಖೆ ಕರೆ ಮಾಡಿದೆ. ಆದರೆ ಯಾವುದೇ ವೈದ್ಯರು ತನಗೆ ಮಾಹಿತಿ ನೀಡಿರಲಿಲ್ಲ ಎಂದು ಸಾಯಿನಾಥ್ ಹೇಳುತ್ತಾರೆ. “ಆಸ್ಪತ್ರೆಯ ಪರಿಸ್ಥಿತಿ ಹೀಗಿದೆ. ನಮ್ಮಂತವರೇ ಚಿಕಿತ್ಸೆಗೆ ಒತ್ತಡ ಹೇರಬೇಕಾಗುವ ಪರಿಸ್ಥಿತಿ ಇದೆ. ಇನ್ನು ಸಾಮಾನ್ಯ ಜನರಿಗೆ ಇದು ತುಂಬಾ ಕಷ್ಟ” ಎಂದು ಅವರು ಹೇಳಿದ್ದಾರೆ.

 

ಇಷ್ಟೇ ಅಲ್ಲದೆ ಸ್ಥಳೀಯ ಮಾಧ್ಯಮಗಳ ಮತ್ತೊಂದು ವೀಡಿಯೊದಲ್ಲಿ ಗಾಂಧಿ ಆಸ್ಪತ್ರೆಯ ವಾರ್ಡ್‌ನ ಒಂದು ಮೂಲೆಯಲ್ಲಿ ಸಿರಿಂಜಿನ ಪಕ್ಕದಲ್ಲೇ ನೀರಿನ ಬಾಟಲಿಗಳು ಇರುವುದನ್ನು ತೋರಿಸಲಾಗಿದೆ. ಹಲವಾರು ವಸ್ತುಗಳು ನೆಲದ ಮೇಲೆ ಹರಡಿಕೊಂಡಿವೆ.

ಆದರೆ ಇದನ್ನು ತೆಲಗಾಂಣ ಸರ್ಕಾರ ಈ ಎಲ್ಲಾ ಆರೋಪಗಳನ್ನು ನಿರಾಕರಿಸಿದೆ.

ರಾಜ್ಯ ಸರ್ಕಾರ ಯಾರನ್ನೂ ನೇರವಾಗಿ ಹೆಸರಿಸದೆ ಸೋಮವಾರ ಮುಖ್ಯಮಂತ್ರಿ ಕಚೇರಿಯಿಂದ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು “ಗಾಂಧಿ ಆಸ್ಪತ್ರೆ ಕೊರೊನಾ ವೈರಸ್ ರೋಗಿಗಳಿಂದ ತುಂಬಿಹೋಗಿದೆ ಎಂದು ಕೆಲವರು ಸುಳ್ಳು ಹರಡುತ್ತಿದ್ದಾರೆ. ಕೆಲವು ಪತ್ರಿಕೆಗಳು ಮತ್ತು ಟಿವಿ ಚಾನೆಲ್‌ಗಳು ಈ ನಕಲಿ ಸುದ್ದಿಯನ್ನು ವರದಿ ಮಾಡುತ್ತಿವೆ. ಆದರೆ ಇದೊಂದು ಸುಳ್ಳು ಸುದ್ದಿಯಾಗಿದೆ. ಗಾಂಧಿ ಆಸ್ಪತ್ರೆಯಲ್ಲಿ, 2,150 ರೋಗಿಗಳಿಗೆ ಚಿಕಿತ್ಸೆ ನೀಡಲು ಸೌಲಭ್ಯವಿದ್ದು, ಆಮ್ಲಜನಕ ಪೂರೈಕೆ ಸೌಲಭ್ಯದೊಂದಿಗೆ 1,000 ಹಾಸಿಗೆಗಳನ್ನು ಹೊಂದಿದೆ. ಅದಲ್ಲದೆ ಆಸ್ಪತ್ರೆಯಲ್ಲಿ ಕೇವಲ 247 ಕೊರೊನ ರೋಗಿಗಳಿದ್ದಾರೆ” ಎಂದಿದೆ.

ಇದಕ್ಕೂ ಮುಂಚೆ ಹೇಳಿಕೆ ಕೊಟ್ಟಿದ್ದ ಗಾಂಧಿ ಆಸ್ಪತ್ರೆಯ ಅಧೀಕ್ಷಕ ರಾಜ ರಾವ್, “ಮನೋಜ್ ಅವರಿಗೆ ವೈದ್ಯರು, ಅರಿವಳಿಕೆ ತಜ್ಞರು ಮತ್ತು ಶ್ವಾಸಕೋಶ ತಜ್ಞರು ಸೇರಿದಂತೆ ವೈದ್ಯರ ತಂಡವು ಚಿಕಿತ್ಸೆ ನೀಡಿದೆ. ಆದರೆ ಅವರಿಗೆ ಜೂನ್ 7 ರಂದು ಹೃದಯಾಘಾತವಾಗಿ ಮೃತಪಟ್ಟರು” ಎಂದಿದ್ದರು.


ಓದಿ: ಮುಂಬೈಯಲ್ಲಿ ಕೊರೊನಾ ಸೋಂಕಿತ ಶವ ಆಸ್ಪತ್ರೆಯಿಂದ ನಾಪತ್ತೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...