Homeಮುಖಪುಟಇಲ್ಲಿ ಯಾರೂ ಕಾಳಜಿ ವಹಿಸುತ್ತಿಲ್ಲ; ಕೊರೊನಾದಿಂದ ಮೃತಪಟ್ಟ ಪತ್ರಕರ್ತನ ಕೊನೆಯ ಸಂದೇಶ

ಇಲ್ಲಿ ಯಾರೂ ಕಾಳಜಿ ವಹಿಸುತ್ತಿಲ್ಲ; ಕೊರೊನಾದಿಂದ ಮೃತಪಟ್ಟ ಪತ್ರಕರ್ತನ ಕೊನೆಯ ಸಂದೇಶ

- Advertisement -
- Advertisement -

“ಇಲ್ಲಿ ಐಸಿಯು ಉತ್ತಮವಾಗಿಲ್ಲ. ದಯವಿಟ್ಟು, ನಾವು ಖಾಸಗಿ ಆಸ್ಪತ್ರೆಗೆ ಹೋಗೋಣ. ಇಲ್ಲಿ ಯಾರೂ ಕಾಳಜಿ ವಹಿಸುತ್ತಿಲ್ಲ.”

ಇದು ಕಳೆದ ವಾರ ಕೊರೊನಾ ವೈರಸ್‌ಗೆ ಬಲಿಯಾದ ಹೈದರಾಬಾದ್‌ನ ಪತ್ರಕರ್ತ ಮನೋಜ್ ಕುಮಾರ್(33) ಕಳುಹಿಸಿದ ಕೊನೆಯ ಸಂದೇಶಗಳಲ್ಲಿ ಒಂದು. ಅವರು ಸರ್ಕಾರಿ ಗಾಂಧಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಜೂನ್ 6 ರಂದು ಮಧ್ಯಾಹ್ನ 3.46 ಕ್ಕೆ ಈ ಸಂದೇಶವನ್ನು ಅವರ ಸಹೋದರ ಸಾಯಿನಾಥ್ ಅವರಿಗೆ ಕಳುಹಿಸಿದ 24 ಗಂಟೆಯ ಒಳಗಾಗಿ ಅವರು ಮೃತಪಟ್ಟಿದ್ದಾರೆ.

ಈ ಒಂದು ಸಂದೇಶ, ಮನೋಜ್ ಅನುಭವಿಸುತ್ತಿದ್ದ ಹತಾಶೆಯನ್ನು ತೋರಿಸುತ್ತದೆ. ಅವರು ಆಮ್ಲಜನಕ ಬೇಕೆಂದು ಕೇಳಿದಾಗ ಆಸ್ಪತ್ರೆಯ ಕಡೆಯಿಂದ ಸರಿಯಾದ ಪ್ರತಿಕ್ರಿಯೆ ಬರದೇ ಇರುವ ಕಾರಣ, ತನ್ನ ಸಹೋದರನಿಗೆ “ದಯವಿಟ್ಟು, ನಾವು ಇಲ್ಲಿಂದ ಹೋಗೋಣ” ಎಂದು ಸಂದೇಶ ಕಳುಹಿಸಿದ್ದರು.

ಕೊರೊನಾ ವೈರಸ್ ಪರೀಕ್ಷೆಗಳನ್ನು ನಡೆಸುವ ರಾಜ್ಯ ಸರ್ಕಾರದ ನೋಡಲ್ ಕೇಂದ್ರವಾಗಿರುವ ಗಾಂಧಿ ಆಸ್ಪತ್ರೆಯ ಕೊರೊನಾ ವಾರ್ಡ್‌ನ ಅವ್ಯವಸ್ಥೆಯನ್ನು ಎತ್ತಿ ತೋರಿಸುವ ವೀಡಿಯೊವನ್ನು ಸಾಯಿನಾಥ್ ಬಿಡುಗಡೆ ಮಾಡಿದಂತೆಯೇ ಈ ಚಾಟ್‌ಗಳನ್ನೂ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ.

ಸಾಯಿನಾಥ್ ಕೂಡಾ ಮನೋಜ್ ಜೊತೆ ಕೊರೊನಾ ವೈರಸ್‌ಗೆ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಪ್ರಸ್ತುತ ಹೋಂ ಕ್ವಾರಂಟೈನ್‌ನಲ್ಲಿರುವ ಸಾಯಿನಾಥ್ ಸೋಮವಾರ ರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.

ಸಾಯಿನಾಥ್ ವೀಡಿಯೊಗಳಲ್ಲಿ ದಾಖಲಾಗಿರುವಂತೆ ಘಟನೆಗಳ ಅನುಕ್ರಮವನ್ನು ಎತ್ತಿ ತೋರಿಸುತ್ತಾ, “ಜೂನ್ 3 ರಂದು ಬೆಳಿಗ್ಗೆ 11 ಗಂಟೆಗೆ ಮನೋಜ್‌ನಲ್ಲಿ ಸೋಂಕಿನ ಲಕ್ಷಣ ಗೋಚರಿಸಿದರಿಂದ ನಾವು ಜ್ವರ ಆಸ್ಪತ್ರೆಗೆ ಹೋದೆವು. ಮಧ್ಯಾಹ್ನ 3 ಗಂಟೆ ಸುಮಾರಿಗೆ ನಮ್ಮಿಬ್ಬರನ್ನು ಪರೀಕ್ಷೆ ನಡೆಸಲಾಯಿತು. ನಂತರ ನಾವು ಮನೆಗೆ ಹೋದೆವು. ಅದೇ ದಿನ ರಾತ್ರಿ 10 ಗಂಟೆಯ ನಂತರ ನಾವಿಬ್ಬರೂ ಕೊರೊನಾ ಪಾಸಿಟಿವ್ ಎಂದು ಕರೆ ಬಂದು, ನಾವು ತಕ್ಷಣ ಜ್ವರ ಆಸ್ಪತ್ರೆಗೆ ಹೋದೆವು. ಮುಂಜಾನೆ 1 ರ ಹೊತ್ತಿಗೆ ನಮ್ಮನ್ನು ಏಳನೇ ಮಹಡಿಯಲ್ಲಿರುವ ವಾರ್ಡ್‌ಗೆ ಸ್ಥಳಾಂತರಿಸಲಾಯಿತು.” ಎಂದು ಹೇಳಿದ್ದಾರೆ.


ಓದಿ: ದುಡ್ಡು ಕಟ್ಟಲಾಗದಿದ್ದರೆ ಸತ್ತೋಗಿ; ಕೊರೊನಾ ಸಮಯದಲ್ಲೂ ರಕ್ತ ಹೀರುತ್ತಿರುವ ಫೈನಾನ್ಸ್‌ಗಳು


ಪ್ರವೇಶ ಪಡೆದ ನಂತರ ಅವರಿಗೆ ಬೆಡ್‌ಶೀಟ್, ಸೋಪ್ ಬಾರ್ ಮತ್ತು ಮಲ್ಟಿ-ವಿಟಮಿನ್ ಟ್ಯಾಬ್ಲೆಟ್‌ಗಳ ಜೊತೆಗೆ ಕೆಲವು ಟೂತ್‌ಪೇಸ್ಟ್ ನೀಡಲಾಗಿದೆ ಎಂದು ಹೇಳಿದ ಸಾಯಿನಾಥ್, “ನಾವು ವಾರ್ಡ್‌ಗೆ ಕಾಲಿಟ್ಟ ಸಮಯದಿಂದ ಸರಿಯಾದ ಸೌಲಭ್ಯಗಳಿಲ್ಲ. ರೋಗಿಗಳಿಗೆ ಮಾಹಿತಿ ನೀಡುವ ಜವಾಬ್ದಾರಿಯನ್ನು ಯಾರೂ ತೆಗೆದುಕೊಳ್ಳಲಿಲ್ಲ” ಎಂದು ಆರೋಪಿಸಿದ್ದಾರೆ.

“ಅದೇ ರಾತ್ರಿ ಮನೋಜ್‌ಗೆ ಉಸಿರಾಟದ ತೊಂದರೆಯಾಗಿ, ಅಲ್ಲಿ ಯಾರಿಗಾದರೂ ತಿಳಿಸುತ್ತೇನೆ ಎಂದರೂ ವಾರ್ಡ್‌ನಲ್ಲಿ ಅಥವಾ ಲಾಬಿಯಲ್ಲಿ ಯಾರೂ ಇರಲಿಲ್ಲ. ನಾನು ಹೊರಗೆ ಹೋಗಿ ನೋಡಿದಾಗ ಕೂಡ ಸ್ವಚ್ಚತಾ ಸಿಬ್ಬಂದಿ ಮಾತ್ರ ಇದ್ದರು. ನಾವು ಹೊರಗೆ ಹೋಗುವಂತಿಲ್ಲ ಮತ್ತು ವೈದ್ಯರು ಮರುದಿನ ಬರುತ್ತಾರೆ ಎಂದು ಅವರು ಹೇಳಿದರು” ಎಂದು ಸಾಯಿನಾಥ್ ಹೇಳಿದ್ದಾರೆ.

ಜೂನ್ 4 ರ ಮುಂಜಾನೆ ತನ್ನ ಸಹೋದರನ ಪರಿಸ್ಥಿತಿ ಹದಗೆಟ್ಟಿದ್ದನ್ನು ನೋಡಿ ಸಹಿಸಿಕೊಳ್ಳಲಾರದೆ ವೈದ್ಯರಿಗೆ ತಿಳಿಸಲು ಪ್ರಯತ್ನಿಸಿದೆ. ನನ್ನ ಸಹೋದರ ಪತ್ರಕರ್ತನಾಗಿರುವುದರಿಂದ ಅವರ ಕೆಲವು ಸಹೋದ್ಯೋಗಿಗಳನ್ನು ಸಂಪರ್ಕಿಸಿ, ಆಸ್ಪತ್ರೆಯ ಅಧೀಕ್ಷಕರ ಮೇಲೆ ಒತ್ತಡ ಹೇರಿದೆ. ಬೆಳಿಗ್ಗೆ 11 ಗಂಟೆ ಸುಮಾರಿಗೆ ಆಸ್ಪತ್ರೆಯು ಅವರನ್ನು ಐಸಿಯುಗೆ ಸ್ಥಳಾಂತರಿಸುವುದಾಗಿ ತಿಳಿಸಿದರು. ಆದರೆ ಸುಮಾರು 4 ಗಂಟೆಗಳು ಕಳೆದರೂ ಅದು ನಡೆಯದಿದ್ದಾಗ ಕಾರಣ ಕೇಳಿದೆ. ಆಸ್ಪತ್ರೆಯ ಐಸಿಯುವಿನಲ್ಲಿ ಸಾಕಷ್ಟು ಹಾಸಿಗೆಗಳಿಲ್ಲ ಎಂದು ಅವರು ಹೇಳಿದರು. ಆಮ್ಲಜನಕದ ಸಿಲಿಂಡರ್ ಅನ್ನು ವಾರ್ಡ್‌ನಲ್ಲಿಯೇ ಇಡಬಹುದೇ ಎಂದು ಕೇಳಿದರೆ ಅಲ್ಲಿ ಅದು ಕೂಡ ಲಭ್ಯವಿಲ್ಲ ಎಂದು ಹೇಳಿದರು. ಇದು ಇಲ್ಲಿಯ ಪರಿಸ್ಥಿತಿ, ” ಎಂದು ಸಾಯಿನಾಥ್ ಹೇಳಿದ್ದಾರೆ.

“ಜೂನ್ 4 ರಂದು ಸಂಜೆ 4 ಗಂಟೆ ಸುಮಾರಿಗೆ ಅವರು ಅವನನ್ನು ವಾರ್ಡ್‌ನಿಂದ ಹೊರಗೆ ಕರೆದೊಯ್ದು ಸುಮಾರು 1.5 ಗಂಟೆಗಳ ಕಾಲ, ಗಾಲಿಕುರ್ಚಿಯಲ್ಲಿ ಕೂರಿಸಿದ್ದಾರೆ ಹಾಗೂ ಅವನಿಗೆ ಚಿಕಿತ್ಸೆ ನೀಡಲಿಲ್ಲ” ಎಂದು ಸಾಯಿನಾಥ್  ಆರೋಪಿಸಿದ್ದಾರೆ.

ಈ ಸಮಯದಲ್ಲಿಯೇ ಮನೋಜ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕೆಂದು ತನ್ನ ಸಹೋದರನಿಗೆ ಸಂದೇಶ ಕಳುಹಿಸಿದ್ದಾನೆಂದು ಹೇಳಲಾಗಿದೆ. ಮಾಧ್ಯಮಗಳಲ್ಲಿ ಮನೋಜ್ ಅವರ ಸ್ನೇಹಿತರು ಆರೋಗ್ಯ ಸಚಿವರಿಗೆ ಕರೆ ಮಾಡಿದ ನಂತರವೇ ಅವರು ಮನೋಜ್ ನನ್ನು ಸರಿಯಾಗಿ ನೋಡಿಕೊಳ್ಳಲು ಪ್ರಾರಂಭಿಸಿದರು ಹಾಗೂ ಅವರನ್ನು ಪ್ರತ್ಯೇಕ ವಾರ್ಡ್‌ಗೆ ಸ್ಥಳಾಂತರಿಸಿದರು ಎಂದು ಸಾಯಿನಾಥ್ ಹೇಳಿದ್ದಾರೆ.

ಜೂನ್ 7 ರ ಬೆಳಿಗ್ಗೆ 9.30 ರ ಸುಮಾರಿಗೆ ನಿಮ್ಮ ಸೋದರ ವೆಂಟಿಲೇಟರ್‌ಗೆ ಸ್ಥಳಾಂತರವಾಗಿದ್ದಾರೆ ಎಂದು ಆಸ್ಪತ್ರೆಯಿಂದ ಸಾಯಿನಾಥ್‌‌ಗೆ ಕರೆ ಬಂದಿದ್ದು, ಅದಾಗಿ ಸ್ವಲ್ಪ ಹೊತ್ತಿಗೆ ಸಹೋದರ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಇಲಾಖೆ ಕರೆ ಮಾಡಿದೆ. ಆದರೆ ಯಾವುದೇ ವೈದ್ಯರು ತನಗೆ ಮಾಹಿತಿ ನೀಡಿರಲಿಲ್ಲ ಎಂದು ಸಾಯಿನಾಥ್ ಹೇಳುತ್ತಾರೆ. “ಆಸ್ಪತ್ರೆಯ ಪರಿಸ್ಥಿತಿ ಹೀಗಿದೆ. ನಮ್ಮಂತವರೇ ಚಿಕಿತ್ಸೆಗೆ ಒತ್ತಡ ಹೇರಬೇಕಾಗುವ ಪರಿಸ್ಥಿತಿ ಇದೆ. ಇನ್ನು ಸಾಮಾನ್ಯ ಜನರಿಗೆ ಇದು ತುಂಬಾ ಕಷ್ಟ” ಎಂದು ಅವರು ಹೇಳಿದ್ದಾರೆ.

 

ಇಷ್ಟೇ ಅಲ್ಲದೆ ಸ್ಥಳೀಯ ಮಾಧ್ಯಮಗಳ ಮತ್ತೊಂದು ವೀಡಿಯೊದಲ್ಲಿ ಗಾಂಧಿ ಆಸ್ಪತ್ರೆಯ ವಾರ್ಡ್‌ನ ಒಂದು ಮೂಲೆಯಲ್ಲಿ ಸಿರಿಂಜಿನ ಪಕ್ಕದಲ್ಲೇ ನೀರಿನ ಬಾಟಲಿಗಳು ಇರುವುದನ್ನು ತೋರಿಸಲಾಗಿದೆ. ಹಲವಾರು ವಸ್ತುಗಳು ನೆಲದ ಮೇಲೆ ಹರಡಿಕೊಂಡಿವೆ.

ಆದರೆ ಇದನ್ನು ತೆಲಗಾಂಣ ಸರ್ಕಾರ ಈ ಎಲ್ಲಾ ಆರೋಪಗಳನ್ನು ನಿರಾಕರಿಸಿದೆ.

ರಾಜ್ಯ ಸರ್ಕಾರ ಯಾರನ್ನೂ ನೇರವಾಗಿ ಹೆಸರಿಸದೆ ಸೋಮವಾರ ಮುಖ್ಯಮಂತ್ರಿ ಕಚೇರಿಯಿಂದ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು “ಗಾಂಧಿ ಆಸ್ಪತ್ರೆ ಕೊರೊನಾ ವೈರಸ್ ರೋಗಿಗಳಿಂದ ತುಂಬಿಹೋಗಿದೆ ಎಂದು ಕೆಲವರು ಸುಳ್ಳು ಹರಡುತ್ತಿದ್ದಾರೆ. ಕೆಲವು ಪತ್ರಿಕೆಗಳು ಮತ್ತು ಟಿವಿ ಚಾನೆಲ್‌ಗಳು ಈ ನಕಲಿ ಸುದ್ದಿಯನ್ನು ವರದಿ ಮಾಡುತ್ತಿವೆ. ಆದರೆ ಇದೊಂದು ಸುಳ್ಳು ಸುದ್ದಿಯಾಗಿದೆ. ಗಾಂಧಿ ಆಸ್ಪತ್ರೆಯಲ್ಲಿ, 2,150 ರೋಗಿಗಳಿಗೆ ಚಿಕಿತ್ಸೆ ನೀಡಲು ಸೌಲಭ್ಯವಿದ್ದು, ಆಮ್ಲಜನಕ ಪೂರೈಕೆ ಸೌಲಭ್ಯದೊಂದಿಗೆ 1,000 ಹಾಸಿಗೆಗಳನ್ನು ಹೊಂದಿದೆ. ಅದಲ್ಲದೆ ಆಸ್ಪತ್ರೆಯಲ್ಲಿ ಕೇವಲ 247 ಕೊರೊನ ರೋಗಿಗಳಿದ್ದಾರೆ” ಎಂದಿದೆ.

ಇದಕ್ಕೂ ಮುಂಚೆ ಹೇಳಿಕೆ ಕೊಟ್ಟಿದ್ದ ಗಾಂಧಿ ಆಸ್ಪತ್ರೆಯ ಅಧೀಕ್ಷಕ ರಾಜ ರಾವ್, “ಮನೋಜ್ ಅವರಿಗೆ ವೈದ್ಯರು, ಅರಿವಳಿಕೆ ತಜ್ಞರು ಮತ್ತು ಶ್ವಾಸಕೋಶ ತಜ್ಞರು ಸೇರಿದಂತೆ ವೈದ್ಯರ ತಂಡವು ಚಿಕಿತ್ಸೆ ನೀಡಿದೆ. ಆದರೆ ಅವರಿಗೆ ಜೂನ್ 7 ರಂದು ಹೃದಯಾಘಾತವಾಗಿ ಮೃತಪಟ್ಟರು” ಎಂದಿದ್ದರು.


ಓದಿ: ಮುಂಬೈಯಲ್ಲಿ ಕೊರೊನಾ ಸೋಂಕಿತ ಶವ ಆಸ್ಪತ್ರೆಯಿಂದ ನಾಪತ್ತೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...