Homeಮುಖಪುಟಇಲ್ಲಿ ಯಾರೂ ಕಾಳಜಿ ವಹಿಸುತ್ತಿಲ್ಲ; ಕೊರೊನಾದಿಂದ ಮೃತಪಟ್ಟ ಪತ್ರಕರ್ತನ ಕೊನೆಯ ಸಂದೇಶ

ಇಲ್ಲಿ ಯಾರೂ ಕಾಳಜಿ ವಹಿಸುತ್ತಿಲ್ಲ; ಕೊರೊನಾದಿಂದ ಮೃತಪಟ್ಟ ಪತ್ರಕರ್ತನ ಕೊನೆಯ ಸಂದೇಶ

- Advertisement -
- Advertisement -

“ಇಲ್ಲಿ ಐಸಿಯು ಉತ್ತಮವಾಗಿಲ್ಲ. ದಯವಿಟ್ಟು, ನಾವು ಖಾಸಗಿ ಆಸ್ಪತ್ರೆಗೆ ಹೋಗೋಣ. ಇಲ್ಲಿ ಯಾರೂ ಕಾಳಜಿ ವಹಿಸುತ್ತಿಲ್ಲ.”

ಇದು ಕಳೆದ ವಾರ ಕೊರೊನಾ ವೈರಸ್‌ಗೆ ಬಲಿಯಾದ ಹೈದರಾಬಾದ್‌ನ ಪತ್ರಕರ್ತ ಮನೋಜ್ ಕುಮಾರ್(33) ಕಳುಹಿಸಿದ ಕೊನೆಯ ಸಂದೇಶಗಳಲ್ಲಿ ಒಂದು. ಅವರು ಸರ್ಕಾರಿ ಗಾಂಧಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಜೂನ್ 6 ರಂದು ಮಧ್ಯಾಹ್ನ 3.46 ಕ್ಕೆ ಈ ಸಂದೇಶವನ್ನು ಅವರ ಸಹೋದರ ಸಾಯಿನಾಥ್ ಅವರಿಗೆ ಕಳುಹಿಸಿದ 24 ಗಂಟೆಯ ಒಳಗಾಗಿ ಅವರು ಮೃತಪಟ್ಟಿದ್ದಾರೆ.

ಈ ಒಂದು ಸಂದೇಶ, ಮನೋಜ್ ಅನುಭವಿಸುತ್ತಿದ್ದ ಹತಾಶೆಯನ್ನು ತೋರಿಸುತ್ತದೆ. ಅವರು ಆಮ್ಲಜನಕ ಬೇಕೆಂದು ಕೇಳಿದಾಗ ಆಸ್ಪತ್ರೆಯ ಕಡೆಯಿಂದ ಸರಿಯಾದ ಪ್ರತಿಕ್ರಿಯೆ ಬರದೇ ಇರುವ ಕಾರಣ, ತನ್ನ ಸಹೋದರನಿಗೆ “ದಯವಿಟ್ಟು, ನಾವು ಇಲ್ಲಿಂದ ಹೋಗೋಣ” ಎಂದು ಸಂದೇಶ ಕಳುಹಿಸಿದ್ದರು.

ಕೊರೊನಾ ವೈರಸ್ ಪರೀಕ್ಷೆಗಳನ್ನು ನಡೆಸುವ ರಾಜ್ಯ ಸರ್ಕಾರದ ನೋಡಲ್ ಕೇಂದ್ರವಾಗಿರುವ ಗಾಂಧಿ ಆಸ್ಪತ್ರೆಯ ಕೊರೊನಾ ವಾರ್ಡ್‌ನ ಅವ್ಯವಸ್ಥೆಯನ್ನು ಎತ್ತಿ ತೋರಿಸುವ ವೀಡಿಯೊವನ್ನು ಸಾಯಿನಾಥ್ ಬಿಡುಗಡೆ ಮಾಡಿದಂತೆಯೇ ಈ ಚಾಟ್‌ಗಳನ್ನೂ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ.

ಸಾಯಿನಾಥ್ ಕೂಡಾ ಮನೋಜ್ ಜೊತೆ ಕೊರೊನಾ ವೈರಸ್‌ಗೆ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಪ್ರಸ್ತುತ ಹೋಂ ಕ್ವಾರಂಟೈನ್‌ನಲ್ಲಿರುವ ಸಾಯಿನಾಥ್ ಸೋಮವಾರ ರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.

ಸಾಯಿನಾಥ್ ವೀಡಿಯೊಗಳಲ್ಲಿ ದಾಖಲಾಗಿರುವಂತೆ ಘಟನೆಗಳ ಅನುಕ್ರಮವನ್ನು ಎತ್ತಿ ತೋರಿಸುತ್ತಾ, “ಜೂನ್ 3 ರಂದು ಬೆಳಿಗ್ಗೆ 11 ಗಂಟೆಗೆ ಮನೋಜ್‌ನಲ್ಲಿ ಸೋಂಕಿನ ಲಕ್ಷಣ ಗೋಚರಿಸಿದರಿಂದ ನಾವು ಜ್ವರ ಆಸ್ಪತ್ರೆಗೆ ಹೋದೆವು. ಮಧ್ಯಾಹ್ನ 3 ಗಂಟೆ ಸುಮಾರಿಗೆ ನಮ್ಮಿಬ್ಬರನ್ನು ಪರೀಕ್ಷೆ ನಡೆಸಲಾಯಿತು. ನಂತರ ನಾವು ಮನೆಗೆ ಹೋದೆವು. ಅದೇ ದಿನ ರಾತ್ರಿ 10 ಗಂಟೆಯ ನಂತರ ನಾವಿಬ್ಬರೂ ಕೊರೊನಾ ಪಾಸಿಟಿವ್ ಎಂದು ಕರೆ ಬಂದು, ನಾವು ತಕ್ಷಣ ಜ್ವರ ಆಸ್ಪತ್ರೆಗೆ ಹೋದೆವು. ಮುಂಜಾನೆ 1 ರ ಹೊತ್ತಿಗೆ ನಮ್ಮನ್ನು ಏಳನೇ ಮಹಡಿಯಲ್ಲಿರುವ ವಾರ್ಡ್‌ಗೆ ಸ್ಥಳಾಂತರಿಸಲಾಯಿತು.” ಎಂದು ಹೇಳಿದ್ದಾರೆ.


ಓದಿ: ದುಡ್ಡು ಕಟ್ಟಲಾಗದಿದ್ದರೆ ಸತ್ತೋಗಿ; ಕೊರೊನಾ ಸಮಯದಲ್ಲೂ ರಕ್ತ ಹೀರುತ್ತಿರುವ ಫೈನಾನ್ಸ್‌ಗಳು


ಪ್ರವೇಶ ಪಡೆದ ನಂತರ ಅವರಿಗೆ ಬೆಡ್‌ಶೀಟ್, ಸೋಪ್ ಬಾರ್ ಮತ್ತು ಮಲ್ಟಿ-ವಿಟಮಿನ್ ಟ್ಯಾಬ್ಲೆಟ್‌ಗಳ ಜೊತೆಗೆ ಕೆಲವು ಟೂತ್‌ಪೇಸ್ಟ್ ನೀಡಲಾಗಿದೆ ಎಂದು ಹೇಳಿದ ಸಾಯಿನಾಥ್, “ನಾವು ವಾರ್ಡ್‌ಗೆ ಕಾಲಿಟ್ಟ ಸಮಯದಿಂದ ಸರಿಯಾದ ಸೌಲಭ್ಯಗಳಿಲ್ಲ. ರೋಗಿಗಳಿಗೆ ಮಾಹಿತಿ ನೀಡುವ ಜವಾಬ್ದಾರಿಯನ್ನು ಯಾರೂ ತೆಗೆದುಕೊಳ್ಳಲಿಲ್ಲ” ಎಂದು ಆರೋಪಿಸಿದ್ದಾರೆ.

“ಅದೇ ರಾತ್ರಿ ಮನೋಜ್‌ಗೆ ಉಸಿರಾಟದ ತೊಂದರೆಯಾಗಿ, ಅಲ್ಲಿ ಯಾರಿಗಾದರೂ ತಿಳಿಸುತ್ತೇನೆ ಎಂದರೂ ವಾರ್ಡ್‌ನಲ್ಲಿ ಅಥವಾ ಲಾಬಿಯಲ್ಲಿ ಯಾರೂ ಇರಲಿಲ್ಲ. ನಾನು ಹೊರಗೆ ಹೋಗಿ ನೋಡಿದಾಗ ಕೂಡ ಸ್ವಚ್ಚತಾ ಸಿಬ್ಬಂದಿ ಮಾತ್ರ ಇದ್ದರು. ನಾವು ಹೊರಗೆ ಹೋಗುವಂತಿಲ್ಲ ಮತ್ತು ವೈದ್ಯರು ಮರುದಿನ ಬರುತ್ತಾರೆ ಎಂದು ಅವರು ಹೇಳಿದರು” ಎಂದು ಸಾಯಿನಾಥ್ ಹೇಳಿದ್ದಾರೆ.

ಜೂನ್ 4 ರ ಮುಂಜಾನೆ ತನ್ನ ಸಹೋದರನ ಪರಿಸ್ಥಿತಿ ಹದಗೆಟ್ಟಿದ್ದನ್ನು ನೋಡಿ ಸಹಿಸಿಕೊಳ್ಳಲಾರದೆ ವೈದ್ಯರಿಗೆ ತಿಳಿಸಲು ಪ್ರಯತ್ನಿಸಿದೆ. ನನ್ನ ಸಹೋದರ ಪತ್ರಕರ್ತನಾಗಿರುವುದರಿಂದ ಅವರ ಕೆಲವು ಸಹೋದ್ಯೋಗಿಗಳನ್ನು ಸಂಪರ್ಕಿಸಿ, ಆಸ್ಪತ್ರೆಯ ಅಧೀಕ್ಷಕರ ಮೇಲೆ ಒತ್ತಡ ಹೇರಿದೆ. ಬೆಳಿಗ್ಗೆ 11 ಗಂಟೆ ಸುಮಾರಿಗೆ ಆಸ್ಪತ್ರೆಯು ಅವರನ್ನು ಐಸಿಯುಗೆ ಸ್ಥಳಾಂತರಿಸುವುದಾಗಿ ತಿಳಿಸಿದರು. ಆದರೆ ಸುಮಾರು 4 ಗಂಟೆಗಳು ಕಳೆದರೂ ಅದು ನಡೆಯದಿದ್ದಾಗ ಕಾರಣ ಕೇಳಿದೆ. ಆಸ್ಪತ್ರೆಯ ಐಸಿಯುವಿನಲ್ಲಿ ಸಾಕಷ್ಟು ಹಾಸಿಗೆಗಳಿಲ್ಲ ಎಂದು ಅವರು ಹೇಳಿದರು. ಆಮ್ಲಜನಕದ ಸಿಲಿಂಡರ್ ಅನ್ನು ವಾರ್ಡ್‌ನಲ್ಲಿಯೇ ಇಡಬಹುದೇ ಎಂದು ಕೇಳಿದರೆ ಅಲ್ಲಿ ಅದು ಕೂಡ ಲಭ್ಯವಿಲ್ಲ ಎಂದು ಹೇಳಿದರು. ಇದು ಇಲ್ಲಿಯ ಪರಿಸ್ಥಿತಿ, ” ಎಂದು ಸಾಯಿನಾಥ್ ಹೇಳಿದ್ದಾರೆ.

“ಜೂನ್ 4 ರಂದು ಸಂಜೆ 4 ಗಂಟೆ ಸುಮಾರಿಗೆ ಅವರು ಅವನನ್ನು ವಾರ್ಡ್‌ನಿಂದ ಹೊರಗೆ ಕರೆದೊಯ್ದು ಸುಮಾರು 1.5 ಗಂಟೆಗಳ ಕಾಲ, ಗಾಲಿಕುರ್ಚಿಯಲ್ಲಿ ಕೂರಿಸಿದ್ದಾರೆ ಹಾಗೂ ಅವನಿಗೆ ಚಿಕಿತ್ಸೆ ನೀಡಲಿಲ್ಲ” ಎಂದು ಸಾಯಿನಾಥ್  ಆರೋಪಿಸಿದ್ದಾರೆ.

ಈ ಸಮಯದಲ್ಲಿಯೇ ಮನೋಜ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕೆಂದು ತನ್ನ ಸಹೋದರನಿಗೆ ಸಂದೇಶ ಕಳುಹಿಸಿದ್ದಾನೆಂದು ಹೇಳಲಾಗಿದೆ. ಮಾಧ್ಯಮಗಳಲ್ಲಿ ಮನೋಜ್ ಅವರ ಸ್ನೇಹಿತರು ಆರೋಗ್ಯ ಸಚಿವರಿಗೆ ಕರೆ ಮಾಡಿದ ನಂತರವೇ ಅವರು ಮನೋಜ್ ನನ್ನು ಸರಿಯಾಗಿ ನೋಡಿಕೊಳ್ಳಲು ಪ್ರಾರಂಭಿಸಿದರು ಹಾಗೂ ಅವರನ್ನು ಪ್ರತ್ಯೇಕ ವಾರ್ಡ್‌ಗೆ ಸ್ಥಳಾಂತರಿಸಿದರು ಎಂದು ಸಾಯಿನಾಥ್ ಹೇಳಿದ್ದಾರೆ.

ಜೂನ್ 7 ರ ಬೆಳಿಗ್ಗೆ 9.30 ರ ಸುಮಾರಿಗೆ ನಿಮ್ಮ ಸೋದರ ವೆಂಟಿಲೇಟರ್‌ಗೆ ಸ್ಥಳಾಂತರವಾಗಿದ್ದಾರೆ ಎಂದು ಆಸ್ಪತ್ರೆಯಿಂದ ಸಾಯಿನಾಥ್‌‌ಗೆ ಕರೆ ಬಂದಿದ್ದು, ಅದಾಗಿ ಸ್ವಲ್ಪ ಹೊತ್ತಿಗೆ ಸಹೋದರ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಇಲಾಖೆ ಕರೆ ಮಾಡಿದೆ. ಆದರೆ ಯಾವುದೇ ವೈದ್ಯರು ತನಗೆ ಮಾಹಿತಿ ನೀಡಿರಲಿಲ್ಲ ಎಂದು ಸಾಯಿನಾಥ್ ಹೇಳುತ್ತಾರೆ. “ಆಸ್ಪತ್ರೆಯ ಪರಿಸ್ಥಿತಿ ಹೀಗಿದೆ. ನಮ್ಮಂತವರೇ ಚಿಕಿತ್ಸೆಗೆ ಒತ್ತಡ ಹೇರಬೇಕಾಗುವ ಪರಿಸ್ಥಿತಿ ಇದೆ. ಇನ್ನು ಸಾಮಾನ್ಯ ಜನರಿಗೆ ಇದು ತುಂಬಾ ಕಷ್ಟ” ಎಂದು ಅವರು ಹೇಳಿದ್ದಾರೆ.

 

ಇಷ್ಟೇ ಅಲ್ಲದೆ ಸ್ಥಳೀಯ ಮಾಧ್ಯಮಗಳ ಮತ್ತೊಂದು ವೀಡಿಯೊದಲ್ಲಿ ಗಾಂಧಿ ಆಸ್ಪತ್ರೆಯ ವಾರ್ಡ್‌ನ ಒಂದು ಮೂಲೆಯಲ್ಲಿ ಸಿರಿಂಜಿನ ಪಕ್ಕದಲ್ಲೇ ನೀರಿನ ಬಾಟಲಿಗಳು ಇರುವುದನ್ನು ತೋರಿಸಲಾಗಿದೆ. ಹಲವಾರು ವಸ್ತುಗಳು ನೆಲದ ಮೇಲೆ ಹರಡಿಕೊಂಡಿವೆ.

ಆದರೆ ಇದನ್ನು ತೆಲಗಾಂಣ ಸರ್ಕಾರ ಈ ಎಲ್ಲಾ ಆರೋಪಗಳನ್ನು ನಿರಾಕರಿಸಿದೆ.

ರಾಜ್ಯ ಸರ್ಕಾರ ಯಾರನ್ನೂ ನೇರವಾಗಿ ಹೆಸರಿಸದೆ ಸೋಮವಾರ ಮುಖ್ಯಮಂತ್ರಿ ಕಚೇರಿಯಿಂದ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು “ಗಾಂಧಿ ಆಸ್ಪತ್ರೆ ಕೊರೊನಾ ವೈರಸ್ ರೋಗಿಗಳಿಂದ ತುಂಬಿಹೋಗಿದೆ ಎಂದು ಕೆಲವರು ಸುಳ್ಳು ಹರಡುತ್ತಿದ್ದಾರೆ. ಕೆಲವು ಪತ್ರಿಕೆಗಳು ಮತ್ತು ಟಿವಿ ಚಾನೆಲ್‌ಗಳು ಈ ನಕಲಿ ಸುದ್ದಿಯನ್ನು ವರದಿ ಮಾಡುತ್ತಿವೆ. ಆದರೆ ಇದೊಂದು ಸುಳ್ಳು ಸುದ್ದಿಯಾಗಿದೆ. ಗಾಂಧಿ ಆಸ್ಪತ್ರೆಯಲ್ಲಿ, 2,150 ರೋಗಿಗಳಿಗೆ ಚಿಕಿತ್ಸೆ ನೀಡಲು ಸೌಲಭ್ಯವಿದ್ದು, ಆಮ್ಲಜನಕ ಪೂರೈಕೆ ಸೌಲಭ್ಯದೊಂದಿಗೆ 1,000 ಹಾಸಿಗೆಗಳನ್ನು ಹೊಂದಿದೆ. ಅದಲ್ಲದೆ ಆಸ್ಪತ್ರೆಯಲ್ಲಿ ಕೇವಲ 247 ಕೊರೊನ ರೋಗಿಗಳಿದ್ದಾರೆ” ಎಂದಿದೆ.

ಇದಕ್ಕೂ ಮುಂಚೆ ಹೇಳಿಕೆ ಕೊಟ್ಟಿದ್ದ ಗಾಂಧಿ ಆಸ್ಪತ್ರೆಯ ಅಧೀಕ್ಷಕ ರಾಜ ರಾವ್, “ಮನೋಜ್ ಅವರಿಗೆ ವೈದ್ಯರು, ಅರಿವಳಿಕೆ ತಜ್ಞರು ಮತ್ತು ಶ್ವಾಸಕೋಶ ತಜ್ಞರು ಸೇರಿದಂತೆ ವೈದ್ಯರ ತಂಡವು ಚಿಕಿತ್ಸೆ ನೀಡಿದೆ. ಆದರೆ ಅವರಿಗೆ ಜೂನ್ 7 ರಂದು ಹೃದಯಾಘಾತವಾಗಿ ಮೃತಪಟ್ಟರು” ಎಂದಿದ್ದರು.


ಓದಿ: ಮುಂಬೈಯಲ್ಲಿ ಕೊರೊನಾ ಸೋಂಕಿತ ಶವ ಆಸ್ಪತ್ರೆಯಿಂದ ನಾಪತ್ತೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...