Homeಕರ್ನಾಟಕಅರ್ಹತೆ, ಸಾಮರ್ಥ್ಯಗಳಿಂದ ಬಿಜೆಪಿಯಲ್ಲಿ ಯಾರೂ ಹುದ್ದೆ ಪಡೆಯುವುದಿಲ್ಲ; ಪ್ರತಿಪಕ್ಷ ನಾಯಕರ ಕಾಲೆಳೆದ ಆಡಳಿತ ಪಕ್ಷ

ಅರ್ಹತೆ, ಸಾಮರ್ಥ್ಯಗಳಿಂದ ಬಿಜೆಪಿಯಲ್ಲಿ ಯಾರೂ ಹುದ್ದೆ ಪಡೆಯುವುದಿಲ್ಲ; ಪ್ರತಿಪಕ್ಷ ನಾಯಕರ ಕಾಲೆಳೆದ ಆಡಳಿತ ಪಕ್ಷ

- Advertisement -
- Advertisement -

ಬಿಜೆಪಿಯಲ್ಲಿ ಅರ್ಹತೆ, ಸಾಮರ್ಥ್ಯಗಳಿಂದ ಯಾರೂ ಹುದ್ದೆ ಪಡೆಯುವುದಿಲ್ಲ. ಅಡ್ಡದಾರಿಯಲ್ಲಿ ಹೋಗುವವರಿಗೆ ಮಾತ್ರ ಬಿಜೆಪಿಯಲ್ಲಿ ಮನ್ನಣೆ ಎನ್ನುವುದು ಈ ಮೂಲಕ ಸಾಬೀತಾಗಿದೆ ಎಂದು ವಿಪಕ್ಷ ನಾಯಕರನ್ನು ಆಡಳಿತ ಪಕ್ಷ ಕಾಂಗ್ರೆಸ್ ಲೇವಡಿ ಮಾಡಿದೆ.

ಬಿ.ಎಸ್. ಯಡಿಯೂರಪ್ಪ ಹಾಗೂ ಬಿ.ವೈ. ವಿಜಯೇಂದ್ರ ವಿರುದ್ಧ ಯತ್ನಾಳ್ ಬಹಿರಂಗವಾಗಿಯೇ ವಾಗ್ದಾಳಿ ನಡೆಸುತ್ತಿದ್ದಾರೆ. ಮತ್ತೊಂದೆಡೆ, ಪ್ರತಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಎಸ್. ಆರ್ ವಿಶ್ವನಾಥ್ ಕಿಡಿಕಾರುತ್ತಿದ್ದಾರೆ. ಬಿಜೆಪಿಯಲ್ಲಿ ನಡೆಯುತ್ತಿರುವ ಈ ಬೆಳವಣಿಗೆಗಳ ಕುರಿತು ಕಾಂಗ್ರೆಸ್ ಕಾಲೆಳೆಯುತ್ತಿದೆ.

ಬಿಜೆಪಿ ಅಂತರ್ಯುದ್ಧದ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ‘ಆರ್. ಅಶೋಕ್ ಅವರು ಬಕೆಟ್ ಹಿಡಿದು ವಿರೋಧ ಪಕ್ಷದ ನಾಯಕರಾಗಿದ್ದಾರೆ-ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್. ಬಿ.ವೈ. ವಿಜಯೇಂದ್ರ ಅವರು ಬ್ಲಾಕ್ಮೇಲ್ ಮಾಡಿ ಅಧ್ಯಕ್ಷರಾಗಿದ್ದಾರೆ-ಬಿಜೆಪಿ ಶಾಸಕ ಯತ್ನಾಳ್. ಕರ್ನಾಟಕ ಬಿಜೆಪಿಯಲ್ಲಿ ಅರ್ಹತೆ, ಸಾಮರ್ಥ್ಯಗಳಿಂದ ಯಾರೂ ಹುದ್ದೆ ಪಡೆಯುವುದಿಲ್ಲ. ಅಡ್ಡದಾರಿಯಲ್ಲಿ ಹೋಗುವವರಿಗೆ ಮಾತ್ರ ಬಿಜೆಪಿಯಲ್ಲಿ ಮನ್ನಣೆ ಎನ್ನುವುದು ಈ ಮೂಲಕ ಸಾಬೀತಾಗಿದೆ’ ಎಂದು ಕಾಂಗ್ರೆಸ್ ಹೇಳಿದೆ.

‘ಬೊಮ್ಮಾಯಿಯವರನ್ನು ಸೋಲಿಸಲು ವಿಜಯೇಂದ್ರ ಹಣ ಚೆಲ್ಲಿದ್ದಾರೆ. ವಿ. ಸೊಮ್ಮಣ್ಣನವರ ರಾಜಕೀಯ ಜೀವನ ಅಂತ್ಯಗೊಳಿಸಲು ಷಡ್ಯಂತ್ರ ರೂಪಿಸಿದ್ದು ವಿಜಯೇಂದ್ರ. ಪಂಚಮಸಾಲಿ ಹೋರಾಟ ಹತ್ತಿಕ್ಕಲು ವಿಜಯೇಂದ್ರ ಹಲವು ಷಡ್ಯಂತ್ರ ರೂಪಿಸಿದ್ದರು. ಹೈಕಮಾಂಡ್ ನಾಯಕರಿಗೆ ಬ್ಲಾಕ್ಮೇಲ್ ಮಾಡಿ ರಾಜ್ಯಾಧ್ಯಕ್ಷ ಹುದ್ದೆ ಪಡೆದಿದ್ದಾರೆ. ಇದಿಷ್ಟೂ ಬಿಜೆಪಿ ಶಾಸಕ ಯತ್ನಾಳ್ ಬಹಿರಂಗಪಡಿಸಿದ ಸಂಗತಿಗಳು. ಬಿಜೆಪಿ ರಾಜ್ಯಾಧ್ಯಕ್ಷ ನಿಮ್ಮ ಪಕ್ಷಕ್ಕೆ ಹಾಗೂ ಲಿಂಗಾಯತ ಸಮುದಾಯಕ್ಕೆ ಮುಳುವಾಗಿರುವ ಮುಳ್ಳು!. ಹೀಗಿರುವಾಗ ಬಿಜೆಪಿಯನ್ನು ಉಳಿಸುವುದಕ್ಕೆ ಯಾವ ದೇವರಿಂದಲೂ ಸಾಧ್ಯವಿಲ್ಲ’ ಎಂದು ಕಾಂಗ್ರೆಸ್ ಎಕ್ಸ್‌ನಲ್ಲಿ ವ್ಯಂಗ್ಯವಾಡಿದೆ.

‘ಒಂದೆಡೆ ಆರ್. ಅಶೋಕ್ ಅವರನ್ನು ಬಿಟ್ಟು ಎಸ್ ಆರ್ ವಿಶ್ವನಾಥ್ ನೇತೃತ್ವದಲ್ಲಿ ಬೆಂಗಳೂರು ಶಾಸಕರ ಪ್ರತ್ಯೇಕ ಸಭೆ. ಇನ್ನೊಂದೆಡೆ ವಿಜಯೇಂದ್ರರನ್ನು ಬಿಟ್ಟು ಆರ್ ಅಶೋಕ್ ಪ್ರತ್ಯೇಕ ಸಭೆ. ಮತ್ತೊಂದೆಡೆ ಇವರೆಲ್ಲರನ್ನೂ ಬಿಟ್ಟು ವಿಜಯೇಂದ್ರರ ಕಸರತ್ತು. ಇನ್ನೊಂದೆಡೆ ಹಿರಿಯ ಶಾಸಕರ ಸಲಹಾ ಸಮಿತಿ ಮಾಡಿ ಆರ್ ಅಶೋಕ್ ಅವರು ಅಪಕ್ವ, ಅನನುಭವಿ ಎಂದು ಬಿಂಬಿಸುವ ಪ್ರಯತ್ನ. ಒಟ್ಟಿನಲ್ಲಿ ಬಿಜೆಪಿಯಲ್ಲಿ ಏನಾಗುತ್ತಿದೆ ಎಂದು ಬಿಜೆಪಿ ನಾಯಕರಿಗೇ ತಿಳಿಯುತ್ತಿಲ್ಲ’ ಎಂದು ಹೇಳಿದೆ.

ವಿರೋಧ ಪಕ್ಷದ ನಾಯಕನಿಗೆ ಮತ್ತೊಂದು ವಿರೋಧ ಪಕ್ಷ ಸೃಷ್ಟಿ:

‘ಆ’ಶೋಕ’ ಗೀತೆ!, ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದಕ್ಕೆ ಬಿಜೆಪಿ ಶಾಸಕ ಅಭಿನಂದಿಸಲು ಒಪ್ಪಲಿಲ್ಲ. ಸಭಾತ್ಯಾಗ ಮಾಡಿದರೆ ಬಿಜೆಪಿ ಶಾಸಕರೇ ಕುರ್ಚಿ ಬಿಟ್ಟು ಏಳಲಿಲ್ಲ. ಶಾಸಕಾಂಗ ಸಭೆಗೆ ಬರುವುದಿಲ್ಲ ಎಂದು ಬಿಜೆಪಿ ಶಾಸಕರಿಂದಲೇ ಘೇರಾವ್. ವಿರೋಧ ಪಕ್ಷದ ನಾಯಕನ ಕೊಠಡಿಗೆ ಬರಲು ಒಪ್ಪದ ಬಿಜೆಪಿ ಶಾಸಕ. ಸಭಾತ್ಯಾಗ ಮಾಡಿರುವುದಕ್ಕೆ ಸ್ವಪಕ್ಷದ ಶಾಸಕರಿಂದಲೇ ತರಾಟೆ. ಬಕೆಟ್ ರಾಜಕಾರಿಣಿ ಎಂದು ಬಿಜೆಪಿಗರಿಂದಲೇ ಬಿರುದು. ವಿರೋಧ ಪಕ್ಷದ ನಾಯಕ ಎನ್ನುವುದನ್ನು ಮರೆತು ಸ್ವಪಕ್ಷದ ನಾಯಕರಿಂದಲೇ ಸದನದಲ್ಲಿ ಮಾತನಾಡಲು ಅಡ್ಡಿ. ವಿರೋಧ ಪಕ್ಷದ ನಾಯಕನಿಗೆ ಮತ್ತೊಂದು ವಿರೋಧ ಪಕ್ಷ ಸೃಷ್ಟಿಯಾಗಿರುವಾಗ ಅಶೋಕರ ಶೋಕ ರಾಗವನ್ನು ಕೇಳುವವರು ಯಾರು’ ಎಂದು ಕಾಂಗ್ರೆಸ್ ಪಕ್ಷ ಬಿಜೆಪಿಯನ್ನು ಪ್ರಶ್ನಿಸಿದೆ.

ಇದನ್ನೂ ಓದಿ; ‘ಬೊಮ್ಮಾಯಿ ಸೋಲಿಸಲು ವಿಜಯೇಂದ್ರ ಹಣ ಕಳುಹಿಸಿದ್ದರು; ಬಿಎಸ್‌ವೈಗೆ ಹೈಕಮಾಂಡ್ ಹೆದರಿದೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...