Homeಕರ್ನಾಟಕಅರ್ಹತೆ, ಸಾಮರ್ಥ್ಯಗಳಿಂದ ಬಿಜೆಪಿಯಲ್ಲಿ ಯಾರೂ ಹುದ್ದೆ ಪಡೆಯುವುದಿಲ್ಲ; ಪ್ರತಿಪಕ್ಷ ನಾಯಕರ ಕಾಲೆಳೆದ ಆಡಳಿತ ಪಕ್ಷ

ಅರ್ಹತೆ, ಸಾಮರ್ಥ್ಯಗಳಿಂದ ಬಿಜೆಪಿಯಲ್ಲಿ ಯಾರೂ ಹುದ್ದೆ ಪಡೆಯುವುದಿಲ್ಲ; ಪ್ರತಿಪಕ್ಷ ನಾಯಕರ ಕಾಲೆಳೆದ ಆಡಳಿತ ಪಕ್ಷ

- Advertisement -
- Advertisement -

ಬಿಜೆಪಿಯಲ್ಲಿ ಅರ್ಹತೆ, ಸಾಮರ್ಥ್ಯಗಳಿಂದ ಯಾರೂ ಹುದ್ದೆ ಪಡೆಯುವುದಿಲ್ಲ. ಅಡ್ಡದಾರಿಯಲ್ಲಿ ಹೋಗುವವರಿಗೆ ಮಾತ್ರ ಬಿಜೆಪಿಯಲ್ಲಿ ಮನ್ನಣೆ ಎನ್ನುವುದು ಈ ಮೂಲಕ ಸಾಬೀತಾಗಿದೆ ಎಂದು ವಿಪಕ್ಷ ನಾಯಕರನ್ನು ಆಡಳಿತ ಪಕ್ಷ ಕಾಂಗ್ರೆಸ್ ಲೇವಡಿ ಮಾಡಿದೆ.

ಬಿ.ಎಸ್. ಯಡಿಯೂರಪ್ಪ ಹಾಗೂ ಬಿ.ವೈ. ವಿಜಯೇಂದ್ರ ವಿರುದ್ಧ ಯತ್ನಾಳ್ ಬಹಿರಂಗವಾಗಿಯೇ ವಾಗ್ದಾಳಿ ನಡೆಸುತ್ತಿದ್ದಾರೆ. ಮತ್ತೊಂದೆಡೆ, ಪ್ರತಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಎಸ್. ಆರ್ ವಿಶ್ವನಾಥ್ ಕಿಡಿಕಾರುತ್ತಿದ್ದಾರೆ. ಬಿಜೆಪಿಯಲ್ಲಿ ನಡೆಯುತ್ತಿರುವ ಈ ಬೆಳವಣಿಗೆಗಳ ಕುರಿತು ಕಾಂಗ್ರೆಸ್ ಕಾಲೆಳೆಯುತ್ತಿದೆ.

ಬಿಜೆಪಿ ಅಂತರ್ಯುದ್ಧದ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ‘ಆರ್. ಅಶೋಕ್ ಅವರು ಬಕೆಟ್ ಹಿಡಿದು ವಿರೋಧ ಪಕ್ಷದ ನಾಯಕರಾಗಿದ್ದಾರೆ-ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್. ಬಿ.ವೈ. ವಿಜಯೇಂದ್ರ ಅವರು ಬ್ಲಾಕ್ಮೇಲ್ ಮಾಡಿ ಅಧ್ಯಕ್ಷರಾಗಿದ್ದಾರೆ-ಬಿಜೆಪಿ ಶಾಸಕ ಯತ್ನಾಳ್. ಕರ್ನಾಟಕ ಬಿಜೆಪಿಯಲ್ಲಿ ಅರ್ಹತೆ, ಸಾಮರ್ಥ್ಯಗಳಿಂದ ಯಾರೂ ಹುದ್ದೆ ಪಡೆಯುವುದಿಲ್ಲ. ಅಡ್ಡದಾರಿಯಲ್ಲಿ ಹೋಗುವವರಿಗೆ ಮಾತ್ರ ಬಿಜೆಪಿಯಲ್ಲಿ ಮನ್ನಣೆ ಎನ್ನುವುದು ಈ ಮೂಲಕ ಸಾಬೀತಾಗಿದೆ’ ಎಂದು ಕಾಂಗ್ರೆಸ್ ಹೇಳಿದೆ.

‘ಬೊಮ್ಮಾಯಿಯವರನ್ನು ಸೋಲಿಸಲು ವಿಜಯೇಂದ್ರ ಹಣ ಚೆಲ್ಲಿದ್ದಾರೆ. ವಿ. ಸೊಮ್ಮಣ್ಣನವರ ರಾಜಕೀಯ ಜೀವನ ಅಂತ್ಯಗೊಳಿಸಲು ಷಡ್ಯಂತ್ರ ರೂಪಿಸಿದ್ದು ವಿಜಯೇಂದ್ರ. ಪಂಚಮಸಾಲಿ ಹೋರಾಟ ಹತ್ತಿಕ್ಕಲು ವಿಜಯೇಂದ್ರ ಹಲವು ಷಡ್ಯಂತ್ರ ರೂಪಿಸಿದ್ದರು. ಹೈಕಮಾಂಡ್ ನಾಯಕರಿಗೆ ಬ್ಲಾಕ್ಮೇಲ್ ಮಾಡಿ ರಾಜ್ಯಾಧ್ಯಕ್ಷ ಹುದ್ದೆ ಪಡೆದಿದ್ದಾರೆ. ಇದಿಷ್ಟೂ ಬಿಜೆಪಿ ಶಾಸಕ ಯತ್ನಾಳ್ ಬಹಿರಂಗಪಡಿಸಿದ ಸಂಗತಿಗಳು. ಬಿಜೆಪಿ ರಾಜ್ಯಾಧ್ಯಕ್ಷ ನಿಮ್ಮ ಪಕ್ಷಕ್ಕೆ ಹಾಗೂ ಲಿಂಗಾಯತ ಸಮುದಾಯಕ್ಕೆ ಮುಳುವಾಗಿರುವ ಮುಳ್ಳು!. ಹೀಗಿರುವಾಗ ಬಿಜೆಪಿಯನ್ನು ಉಳಿಸುವುದಕ್ಕೆ ಯಾವ ದೇವರಿಂದಲೂ ಸಾಧ್ಯವಿಲ್ಲ’ ಎಂದು ಕಾಂಗ್ರೆಸ್ ಎಕ್ಸ್‌ನಲ್ಲಿ ವ್ಯಂಗ್ಯವಾಡಿದೆ.

‘ಒಂದೆಡೆ ಆರ್. ಅಶೋಕ್ ಅವರನ್ನು ಬಿಟ್ಟು ಎಸ್ ಆರ್ ವಿಶ್ವನಾಥ್ ನೇತೃತ್ವದಲ್ಲಿ ಬೆಂಗಳೂರು ಶಾಸಕರ ಪ್ರತ್ಯೇಕ ಸಭೆ. ಇನ್ನೊಂದೆಡೆ ವಿಜಯೇಂದ್ರರನ್ನು ಬಿಟ್ಟು ಆರ್ ಅಶೋಕ್ ಪ್ರತ್ಯೇಕ ಸಭೆ. ಮತ್ತೊಂದೆಡೆ ಇವರೆಲ್ಲರನ್ನೂ ಬಿಟ್ಟು ವಿಜಯೇಂದ್ರರ ಕಸರತ್ತು. ಇನ್ನೊಂದೆಡೆ ಹಿರಿಯ ಶಾಸಕರ ಸಲಹಾ ಸಮಿತಿ ಮಾಡಿ ಆರ್ ಅಶೋಕ್ ಅವರು ಅಪಕ್ವ, ಅನನುಭವಿ ಎಂದು ಬಿಂಬಿಸುವ ಪ್ರಯತ್ನ. ಒಟ್ಟಿನಲ್ಲಿ ಬಿಜೆಪಿಯಲ್ಲಿ ಏನಾಗುತ್ತಿದೆ ಎಂದು ಬಿಜೆಪಿ ನಾಯಕರಿಗೇ ತಿಳಿಯುತ್ತಿಲ್ಲ’ ಎಂದು ಹೇಳಿದೆ.

ವಿರೋಧ ಪಕ್ಷದ ನಾಯಕನಿಗೆ ಮತ್ತೊಂದು ವಿರೋಧ ಪಕ್ಷ ಸೃಷ್ಟಿ:

‘ಆ’ಶೋಕ’ ಗೀತೆ!, ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದಕ್ಕೆ ಬಿಜೆಪಿ ಶಾಸಕ ಅಭಿನಂದಿಸಲು ಒಪ್ಪಲಿಲ್ಲ. ಸಭಾತ್ಯಾಗ ಮಾಡಿದರೆ ಬಿಜೆಪಿ ಶಾಸಕರೇ ಕುರ್ಚಿ ಬಿಟ್ಟು ಏಳಲಿಲ್ಲ. ಶಾಸಕಾಂಗ ಸಭೆಗೆ ಬರುವುದಿಲ್ಲ ಎಂದು ಬಿಜೆಪಿ ಶಾಸಕರಿಂದಲೇ ಘೇರಾವ್. ವಿರೋಧ ಪಕ್ಷದ ನಾಯಕನ ಕೊಠಡಿಗೆ ಬರಲು ಒಪ್ಪದ ಬಿಜೆಪಿ ಶಾಸಕ. ಸಭಾತ್ಯಾಗ ಮಾಡಿರುವುದಕ್ಕೆ ಸ್ವಪಕ್ಷದ ಶಾಸಕರಿಂದಲೇ ತರಾಟೆ. ಬಕೆಟ್ ರಾಜಕಾರಿಣಿ ಎಂದು ಬಿಜೆಪಿಗರಿಂದಲೇ ಬಿರುದು. ವಿರೋಧ ಪಕ್ಷದ ನಾಯಕ ಎನ್ನುವುದನ್ನು ಮರೆತು ಸ್ವಪಕ್ಷದ ನಾಯಕರಿಂದಲೇ ಸದನದಲ್ಲಿ ಮಾತನಾಡಲು ಅಡ್ಡಿ. ವಿರೋಧ ಪಕ್ಷದ ನಾಯಕನಿಗೆ ಮತ್ತೊಂದು ವಿರೋಧ ಪಕ್ಷ ಸೃಷ್ಟಿಯಾಗಿರುವಾಗ ಅಶೋಕರ ಶೋಕ ರಾಗವನ್ನು ಕೇಳುವವರು ಯಾರು’ ಎಂದು ಕಾಂಗ್ರೆಸ್ ಪಕ್ಷ ಬಿಜೆಪಿಯನ್ನು ಪ್ರಶ್ನಿಸಿದೆ.

ಇದನ್ನೂ ಓದಿ; ‘ಬೊಮ್ಮಾಯಿ ಸೋಲಿಸಲು ವಿಜಯೇಂದ್ರ ಹಣ ಕಳುಹಿಸಿದ್ದರು; ಬಿಎಸ್‌ವೈಗೆ ಹೈಕಮಾಂಡ್ ಹೆದರಿದೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...