Homeಕರ್ನಾಟಕಅರ್ಹತೆ, ಸಾಮರ್ಥ್ಯಗಳಿಂದ ಬಿಜೆಪಿಯಲ್ಲಿ ಯಾರೂ ಹುದ್ದೆ ಪಡೆಯುವುದಿಲ್ಲ; ಪ್ರತಿಪಕ್ಷ ನಾಯಕರ ಕಾಲೆಳೆದ ಆಡಳಿತ ಪಕ್ಷ

ಅರ್ಹತೆ, ಸಾಮರ್ಥ್ಯಗಳಿಂದ ಬಿಜೆಪಿಯಲ್ಲಿ ಯಾರೂ ಹುದ್ದೆ ಪಡೆಯುವುದಿಲ್ಲ; ಪ್ರತಿಪಕ್ಷ ನಾಯಕರ ಕಾಲೆಳೆದ ಆಡಳಿತ ಪಕ್ಷ

- Advertisement -
- Advertisement -

ಬಿಜೆಪಿಯಲ್ಲಿ ಅರ್ಹತೆ, ಸಾಮರ್ಥ್ಯಗಳಿಂದ ಯಾರೂ ಹುದ್ದೆ ಪಡೆಯುವುದಿಲ್ಲ. ಅಡ್ಡದಾರಿಯಲ್ಲಿ ಹೋಗುವವರಿಗೆ ಮಾತ್ರ ಬಿಜೆಪಿಯಲ್ಲಿ ಮನ್ನಣೆ ಎನ್ನುವುದು ಈ ಮೂಲಕ ಸಾಬೀತಾಗಿದೆ ಎಂದು ವಿಪಕ್ಷ ನಾಯಕರನ್ನು ಆಡಳಿತ ಪಕ್ಷ ಕಾಂಗ್ರೆಸ್ ಲೇವಡಿ ಮಾಡಿದೆ.

ಬಿ.ಎಸ್. ಯಡಿಯೂರಪ್ಪ ಹಾಗೂ ಬಿ.ವೈ. ವಿಜಯೇಂದ್ರ ವಿರುದ್ಧ ಯತ್ನಾಳ್ ಬಹಿರಂಗವಾಗಿಯೇ ವಾಗ್ದಾಳಿ ನಡೆಸುತ್ತಿದ್ದಾರೆ. ಮತ್ತೊಂದೆಡೆ, ಪ್ರತಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಎಸ್. ಆರ್ ವಿಶ್ವನಾಥ್ ಕಿಡಿಕಾರುತ್ತಿದ್ದಾರೆ. ಬಿಜೆಪಿಯಲ್ಲಿ ನಡೆಯುತ್ತಿರುವ ಈ ಬೆಳವಣಿಗೆಗಳ ಕುರಿತು ಕಾಂಗ್ರೆಸ್ ಕಾಲೆಳೆಯುತ್ತಿದೆ.

ಬಿಜೆಪಿ ಅಂತರ್ಯುದ್ಧದ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ‘ಆರ್. ಅಶೋಕ್ ಅವರು ಬಕೆಟ್ ಹಿಡಿದು ವಿರೋಧ ಪಕ್ಷದ ನಾಯಕರಾಗಿದ್ದಾರೆ-ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್. ಬಿ.ವೈ. ವಿಜಯೇಂದ್ರ ಅವರು ಬ್ಲಾಕ್ಮೇಲ್ ಮಾಡಿ ಅಧ್ಯಕ್ಷರಾಗಿದ್ದಾರೆ-ಬಿಜೆಪಿ ಶಾಸಕ ಯತ್ನಾಳ್. ಕರ್ನಾಟಕ ಬಿಜೆಪಿಯಲ್ಲಿ ಅರ್ಹತೆ, ಸಾಮರ್ಥ್ಯಗಳಿಂದ ಯಾರೂ ಹುದ್ದೆ ಪಡೆಯುವುದಿಲ್ಲ. ಅಡ್ಡದಾರಿಯಲ್ಲಿ ಹೋಗುವವರಿಗೆ ಮಾತ್ರ ಬಿಜೆಪಿಯಲ್ಲಿ ಮನ್ನಣೆ ಎನ್ನುವುದು ಈ ಮೂಲಕ ಸಾಬೀತಾಗಿದೆ’ ಎಂದು ಕಾಂಗ್ರೆಸ್ ಹೇಳಿದೆ.

‘ಬೊಮ್ಮಾಯಿಯವರನ್ನು ಸೋಲಿಸಲು ವಿಜಯೇಂದ್ರ ಹಣ ಚೆಲ್ಲಿದ್ದಾರೆ. ವಿ. ಸೊಮ್ಮಣ್ಣನವರ ರಾಜಕೀಯ ಜೀವನ ಅಂತ್ಯಗೊಳಿಸಲು ಷಡ್ಯಂತ್ರ ರೂಪಿಸಿದ್ದು ವಿಜಯೇಂದ್ರ. ಪಂಚಮಸಾಲಿ ಹೋರಾಟ ಹತ್ತಿಕ್ಕಲು ವಿಜಯೇಂದ್ರ ಹಲವು ಷಡ್ಯಂತ್ರ ರೂಪಿಸಿದ್ದರು. ಹೈಕಮಾಂಡ್ ನಾಯಕರಿಗೆ ಬ್ಲಾಕ್ಮೇಲ್ ಮಾಡಿ ರಾಜ್ಯಾಧ್ಯಕ್ಷ ಹುದ್ದೆ ಪಡೆದಿದ್ದಾರೆ. ಇದಿಷ್ಟೂ ಬಿಜೆಪಿ ಶಾಸಕ ಯತ್ನಾಳ್ ಬಹಿರಂಗಪಡಿಸಿದ ಸಂಗತಿಗಳು. ಬಿಜೆಪಿ ರಾಜ್ಯಾಧ್ಯಕ್ಷ ನಿಮ್ಮ ಪಕ್ಷಕ್ಕೆ ಹಾಗೂ ಲಿಂಗಾಯತ ಸಮುದಾಯಕ್ಕೆ ಮುಳುವಾಗಿರುವ ಮುಳ್ಳು!. ಹೀಗಿರುವಾಗ ಬಿಜೆಪಿಯನ್ನು ಉಳಿಸುವುದಕ್ಕೆ ಯಾವ ದೇವರಿಂದಲೂ ಸಾಧ್ಯವಿಲ್ಲ’ ಎಂದು ಕಾಂಗ್ರೆಸ್ ಎಕ್ಸ್‌ನಲ್ಲಿ ವ್ಯಂಗ್ಯವಾಡಿದೆ.

‘ಒಂದೆಡೆ ಆರ್. ಅಶೋಕ್ ಅವರನ್ನು ಬಿಟ್ಟು ಎಸ್ ಆರ್ ವಿಶ್ವನಾಥ್ ನೇತೃತ್ವದಲ್ಲಿ ಬೆಂಗಳೂರು ಶಾಸಕರ ಪ್ರತ್ಯೇಕ ಸಭೆ. ಇನ್ನೊಂದೆಡೆ ವಿಜಯೇಂದ್ರರನ್ನು ಬಿಟ್ಟು ಆರ್ ಅಶೋಕ್ ಪ್ರತ್ಯೇಕ ಸಭೆ. ಮತ್ತೊಂದೆಡೆ ಇವರೆಲ್ಲರನ್ನೂ ಬಿಟ್ಟು ವಿಜಯೇಂದ್ರರ ಕಸರತ್ತು. ಇನ್ನೊಂದೆಡೆ ಹಿರಿಯ ಶಾಸಕರ ಸಲಹಾ ಸಮಿತಿ ಮಾಡಿ ಆರ್ ಅಶೋಕ್ ಅವರು ಅಪಕ್ವ, ಅನನುಭವಿ ಎಂದು ಬಿಂಬಿಸುವ ಪ್ರಯತ್ನ. ಒಟ್ಟಿನಲ್ಲಿ ಬಿಜೆಪಿಯಲ್ಲಿ ಏನಾಗುತ್ತಿದೆ ಎಂದು ಬಿಜೆಪಿ ನಾಯಕರಿಗೇ ತಿಳಿಯುತ್ತಿಲ್ಲ’ ಎಂದು ಹೇಳಿದೆ.

ವಿರೋಧ ಪಕ್ಷದ ನಾಯಕನಿಗೆ ಮತ್ತೊಂದು ವಿರೋಧ ಪಕ್ಷ ಸೃಷ್ಟಿ:

‘ಆ’ಶೋಕ’ ಗೀತೆ!, ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದಕ್ಕೆ ಬಿಜೆಪಿ ಶಾಸಕ ಅಭಿನಂದಿಸಲು ಒಪ್ಪಲಿಲ್ಲ. ಸಭಾತ್ಯಾಗ ಮಾಡಿದರೆ ಬಿಜೆಪಿ ಶಾಸಕರೇ ಕುರ್ಚಿ ಬಿಟ್ಟು ಏಳಲಿಲ್ಲ. ಶಾಸಕಾಂಗ ಸಭೆಗೆ ಬರುವುದಿಲ್ಲ ಎಂದು ಬಿಜೆಪಿ ಶಾಸಕರಿಂದಲೇ ಘೇರಾವ್. ವಿರೋಧ ಪಕ್ಷದ ನಾಯಕನ ಕೊಠಡಿಗೆ ಬರಲು ಒಪ್ಪದ ಬಿಜೆಪಿ ಶಾಸಕ. ಸಭಾತ್ಯಾಗ ಮಾಡಿರುವುದಕ್ಕೆ ಸ್ವಪಕ್ಷದ ಶಾಸಕರಿಂದಲೇ ತರಾಟೆ. ಬಕೆಟ್ ರಾಜಕಾರಿಣಿ ಎಂದು ಬಿಜೆಪಿಗರಿಂದಲೇ ಬಿರುದು. ವಿರೋಧ ಪಕ್ಷದ ನಾಯಕ ಎನ್ನುವುದನ್ನು ಮರೆತು ಸ್ವಪಕ್ಷದ ನಾಯಕರಿಂದಲೇ ಸದನದಲ್ಲಿ ಮಾತನಾಡಲು ಅಡ್ಡಿ. ವಿರೋಧ ಪಕ್ಷದ ನಾಯಕನಿಗೆ ಮತ್ತೊಂದು ವಿರೋಧ ಪಕ್ಷ ಸೃಷ್ಟಿಯಾಗಿರುವಾಗ ಅಶೋಕರ ಶೋಕ ರಾಗವನ್ನು ಕೇಳುವವರು ಯಾರು’ ಎಂದು ಕಾಂಗ್ರೆಸ್ ಪಕ್ಷ ಬಿಜೆಪಿಯನ್ನು ಪ್ರಶ್ನಿಸಿದೆ.

ಇದನ್ನೂ ಓದಿ; ‘ಬೊಮ್ಮಾಯಿ ಸೋಲಿಸಲು ವಿಜಯೇಂದ್ರ ಹಣ ಕಳುಹಿಸಿದ್ದರು; ಬಿಎಸ್‌ವೈಗೆ ಹೈಕಮಾಂಡ್ ಹೆದರಿದೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...