Homeಕರ್ನಾಟಕಅರ್ಹತೆ, ಸಾಮರ್ಥ್ಯಗಳಿಂದ ಬಿಜೆಪಿಯಲ್ಲಿ ಯಾರೂ ಹುದ್ದೆ ಪಡೆಯುವುದಿಲ್ಲ; ಪ್ರತಿಪಕ್ಷ ನಾಯಕರ ಕಾಲೆಳೆದ ಆಡಳಿತ ಪಕ್ಷ

ಅರ್ಹತೆ, ಸಾಮರ್ಥ್ಯಗಳಿಂದ ಬಿಜೆಪಿಯಲ್ಲಿ ಯಾರೂ ಹುದ್ದೆ ಪಡೆಯುವುದಿಲ್ಲ; ಪ್ರತಿಪಕ್ಷ ನಾಯಕರ ಕಾಲೆಳೆದ ಆಡಳಿತ ಪಕ್ಷ

- Advertisement -
- Advertisement -

ಬಿಜೆಪಿಯಲ್ಲಿ ಅರ್ಹತೆ, ಸಾಮರ್ಥ್ಯಗಳಿಂದ ಯಾರೂ ಹುದ್ದೆ ಪಡೆಯುವುದಿಲ್ಲ. ಅಡ್ಡದಾರಿಯಲ್ಲಿ ಹೋಗುವವರಿಗೆ ಮಾತ್ರ ಬಿಜೆಪಿಯಲ್ಲಿ ಮನ್ನಣೆ ಎನ್ನುವುದು ಈ ಮೂಲಕ ಸಾಬೀತಾಗಿದೆ ಎಂದು ವಿಪಕ್ಷ ನಾಯಕರನ್ನು ಆಡಳಿತ ಪಕ್ಷ ಕಾಂಗ್ರೆಸ್ ಲೇವಡಿ ಮಾಡಿದೆ.

ಬಿ.ಎಸ್. ಯಡಿಯೂರಪ್ಪ ಹಾಗೂ ಬಿ.ವೈ. ವಿಜಯೇಂದ್ರ ವಿರುದ್ಧ ಯತ್ನಾಳ್ ಬಹಿರಂಗವಾಗಿಯೇ ವಾಗ್ದಾಳಿ ನಡೆಸುತ್ತಿದ್ದಾರೆ. ಮತ್ತೊಂದೆಡೆ, ಪ್ರತಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಎಸ್. ಆರ್ ವಿಶ್ವನಾಥ್ ಕಿಡಿಕಾರುತ್ತಿದ್ದಾರೆ. ಬಿಜೆಪಿಯಲ್ಲಿ ನಡೆಯುತ್ತಿರುವ ಈ ಬೆಳವಣಿಗೆಗಳ ಕುರಿತು ಕಾಂಗ್ರೆಸ್ ಕಾಲೆಳೆಯುತ್ತಿದೆ.

ಬಿಜೆಪಿ ಅಂತರ್ಯುದ್ಧದ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ‘ಆರ್. ಅಶೋಕ್ ಅವರು ಬಕೆಟ್ ಹಿಡಿದು ವಿರೋಧ ಪಕ್ಷದ ನಾಯಕರಾಗಿದ್ದಾರೆ-ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್. ಬಿ.ವೈ. ವಿಜಯೇಂದ್ರ ಅವರು ಬ್ಲಾಕ್ಮೇಲ್ ಮಾಡಿ ಅಧ್ಯಕ್ಷರಾಗಿದ್ದಾರೆ-ಬಿಜೆಪಿ ಶಾಸಕ ಯತ್ನಾಳ್. ಕರ್ನಾಟಕ ಬಿಜೆಪಿಯಲ್ಲಿ ಅರ್ಹತೆ, ಸಾಮರ್ಥ್ಯಗಳಿಂದ ಯಾರೂ ಹುದ್ದೆ ಪಡೆಯುವುದಿಲ್ಲ. ಅಡ್ಡದಾರಿಯಲ್ಲಿ ಹೋಗುವವರಿಗೆ ಮಾತ್ರ ಬಿಜೆಪಿಯಲ್ಲಿ ಮನ್ನಣೆ ಎನ್ನುವುದು ಈ ಮೂಲಕ ಸಾಬೀತಾಗಿದೆ’ ಎಂದು ಕಾಂಗ್ರೆಸ್ ಹೇಳಿದೆ.

‘ಬೊಮ್ಮಾಯಿಯವರನ್ನು ಸೋಲಿಸಲು ವಿಜಯೇಂದ್ರ ಹಣ ಚೆಲ್ಲಿದ್ದಾರೆ. ವಿ. ಸೊಮ್ಮಣ್ಣನವರ ರಾಜಕೀಯ ಜೀವನ ಅಂತ್ಯಗೊಳಿಸಲು ಷಡ್ಯಂತ್ರ ರೂಪಿಸಿದ್ದು ವಿಜಯೇಂದ್ರ. ಪಂಚಮಸಾಲಿ ಹೋರಾಟ ಹತ್ತಿಕ್ಕಲು ವಿಜಯೇಂದ್ರ ಹಲವು ಷಡ್ಯಂತ್ರ ರೂಪಿಸಿದ್ದರು. ಹೈಕಮಾಂಡ್ ನಾಯಕರಿಗೆ ಬ್ಲಾಕ್ಮೇಲ್ ಮಾಡಿ ರಾಜ್ಯಾಧ್ಯಕ್ಷ ಹುದ್ದೆ ಪಡೆದಿದ್ದಾರೆ. ಇದಿಷ್ಟೂ ಬಿಜೆಪಿ ಶಾಸಕ ಯತ್ನಾಳ್ ಬಹಿರಂಗಪಡಿಸಿದ ಸಂಗತಿಗಳು. ಬಿಜೆಪಿ ರಾಜ್ಯಾಧ್ಯಕ್ಷ ನಿಮ್ಮ ಪಕ್ಷಕ್ಕೆ ಹಾಗೂ ಲಿಂಗಾಯತ ಸಮುದಾಯಕ್ಕೆ ಮುಳುವಾಗಿರುವ ಮುಳ್ಳು!. ಹೀಗಿರುವಾಗ ಬಿಜೆಪಿಯನ್ನು ಉಳಿಸುವುದಕ್ಕೆ ಯಾವ ದೇವರಿಂದಲೂ ಸಾಧ್ಯವಿಲ್ಲ’ ಎಂದು ಕಾಂಗ್ರೆಸ್ ಎಕ್ಸ್‌ನಲ್ಲಿ ವ್ಯಂಗ್ಯವಾಡಿದೆ.

‘ಒಂದೆಡೆ ಆರ್. ಅಶೋಕ್ ಅವರನ್ನು ಬಿಟ್ಟು ಎಸ್ ಆರ್ ವಿಶ್ವನಾಥ್ ನೇತೃತ್ವದಲ್ಲಿ ಬೆಂಗಳೂರು ಶಾಸಕರ ಪ್ರತ್ಯೇಕ ಸಭೆ. ಇನ್ನೊಂದೆಡೆ ವಿಜಯೇಂದ್ರರನ್ನು ಬಿಟ್ಟು ಆರ್ ಅಶೋಕ್ ಪ್ರತ್ಯೇಕ ಸಭೆ. ಮತ್ತೊಂದೆಡೆ ಇವರೆಲ್ಲರನ್ನೂ ಬಿಟ್ಟು ವಿಜಯೇಂದ್ರರ ಕಸರತ್ತು. ಇನ್ನೊಂದೆಡೆ ಹಿರಿಯ ಶಾಸಕರ ಸಲಹಾ ಸಮಿತಿ ಮಾಡಿ ಆರ್ ಅಶೋಕ್ ಅವರು ಅಪಕ್ವ, ಅನನುಭವಿ ಎಂದು ಬಿಂಬಿಸುವ ಪ್ರಯತ್ನ. ಒಟ್ಟಿನಲ್ಲಿ ಬಿಜೆಪಿಯಲ್ಲಿ ಏನಾಗುತ್ತಿದೆ ಎಂದು ಬಿಜೆಪಿ ನಾಯಕರಿಗೇ ತಿಳಿಯುತ್ತಿಲ್ಲ’ ಎಂದು ಹೇಳಿದೆ.

ವಿರೋಧ ಪಕ್ಷದ ನಾಯಕನಿಗೆ ಮತ್ತೊಂದು ವಿರೋಧ ಪಕ್ಷ ಸೃಷ್ಟಿ:

‘ಆ’ಶೋಕ’ ಗೀತೆ!, ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದಕ್ಕೆ ಬಿಜೆಪಿ ಶಾಸಕ ಅಭಿನಂದಿಸಲು ಒಪ್ಪಲಿಲ್ಲ. ಸಭಾತ್ಯಾಗ ಮಾಡಿದರೆ ಬಿಜೆಪಿ ಶಾಸಕರೇ ಕುರ್ಚಿ ಬಿಟ್ಟು ಏಳಲಿಲ್ಲ. ಶಾಸಕಾಂಗ ಸಭೆಗೆ ಬರುವುದಿಲ್ಲ ಎಂದು ಬಿಜೆಪಿ ಶಾಸಕರಿಂದಲೇ ಘೇರಾವ್. ವಿರೋಧ ಪಕ್ಷದ ನಾಯಕನ ಕೊಠಡಿಗೆ ಬರಲು ಒಪ್ಪದ ಬಿಜೆಪಿ ಶಾಸಕ. ಸಭಾತ್ಯಾಗ ಮಾಡಿರುವುದಕ್ಕೆ ಸ್ವಪಕ್ಷದ ಶಾಸಕರಿಂದಲೇ ತರಾಟೆ. ಬಕೆಟ್ ರಾಜಕಾರಿಣಿ ಎಂದು ಬಿಜೆಪಿಗರಿಂದಲೇ ಬಿರುದು. ವಿರೋಧ ಪಕ್ಷದ ನಾಯಕ ಎನ್ನುವುದನ್ನು ಮರೆತು ಸ್ವಪಕ್ಷದ ನಾಯಕರಿಂದಲೇ ಸದನದಲ್ಲಿ ಮಾತನಾಡಲು ಅಡ್ಡಿ. ವಿರೋಧ ಪಕ್ಷದ ನಾಯಕನಿಗೆ ಮತ್ತೊಂದು ವಿರೋಧ ಪಕ್ಷ ಸೃಷ್ಟಿಯಾಗಿರುವಾಗ ಅಶೋಕರ ಶೋಕ ರಾಗವನ್ನು ಕೇಳುವವರು ಯಾರು’ ಎಂದು ಕಾಂಗ್ರೆಸ್ ಪಕ್ಷ ಬಿಜೆಪಿಯನ್ನು ಪ್ರಶ್ನಿಸಿದೆ.

ಇದನ್ನೂ ಓದಿ; ‘ಬೊಮ್ಮಾಯಿ ಸೋಲಿಸಲು ವಿಜಯೇಂದ್ರ ಹಣ ಕಳುಹಿಸಿದ್ದರು; ಬಿಎಸ್‌ವೈಗೆ ಹೈಕಮಾಂಡ್ ಹೆದರಿದೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...