Homeಕರ್ನಾಟಕಅರ್ಹತೆ, ಸಾಮರ್ಥ್ಯಗಳಿಂದ ಬಿಜೆಪಿಯಲ್ಲಿ ಯಾರೂ ಹುದ್ದೆ ಪಡೆಯುವುದಿಲ್ಲ; ಪ್ರತಿಪಕ್ಷ ನಾಯಕರ ಕಾಲೆಳೆದ ಆಡಳಿತ ಪಕ್ಷ

ಅರ್ಹತೆ, ಸಾಮರ್ಥ್ಯಗಳಿಂದ ಬಿಜೆಪಿಯಲ್ಲಿ ಯಾರೂ ಹುದ್ದೆ ಪಡೆಯುವುದಿಲ್ಲ; ಪ್ರತಿಪಕ್ಷ ನಾಯಕರ ಕಾಲೆಳೆದ ಆಡಳಿತ ಪಕ್ಷ

- Advertisement -
- Advertisement -

ಬಿಜೆಪಿಯಲ್ಲಿ ಅರ್ಹತೆ, ಸಾಮರ್ಥ್ಯಗಳಿಂದ ಯಾರೂ ಹುದ್ದೆ ಪಡೆಯುವುದಿಲ್ಲ. ಅಡ್ಡದಾರಿಯಲ್ಲಿ ಹೋಗುವವರಿಗೆ ಮಾತ್ರ ಬಿಜೆಪಿಯಲ್ಲಿ ಮನ್ನಣೆ ಎನ್ನುವುದು ಈ ಮೂಲಕ ಸಾಬೀತಾಗಿದೆ ಎಂದು ವಿಪಕ್ಷ ನಾಯಕರನ್ನು ಆಡಳಿತ ಪಕ್ಷ ಕಾಂಗ್ರೆಸ್ ಲೇವಡಿ ಮಾಡಿದೆ.

ಬಿ.ಎಸ್. ಯಡಿಯೂರಪ್ಪ ಹಾಗೂ ಬಿ.ವೈ. ವಿಜಯೇಂದ್ರ ವಿರುದ್ಧ ಯತ್ನಾಳ್ ಬಹಿರಂಗವಾಗಿಯೇ ವಾಗ್ದಾಳಿ ನಡೆಸುತ್ತಿದ್ದಾರೆ. ಮತ್ತೊಂದೆಡೆ, ಪ್ರತಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಎಸ್. ಆರ್ ವಿಶ್ವನಾಥ್ ಕಿಡಿಕಾರುತ್ತಿದ್ದಾರೆ. ಬಿಜೆಪಿಯಲ್ಲಿ ನಡೆಯುತ್ತಿರುವ ಈ ಬೆಳವಣಿಗೆಗಳ ಕುರಿತು ಕಾಂಗ್ರೆಸ್ ಕಾಲೆಳೆಯುತ್ತಿದೆ.

ಬಿಜೆಪಿ ಅಂತರ್ಯುದ್ಧದ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ‘ಆರ್. ಅಶೋಕ್ ಅವರು ಬಕೆಟ್ ಹಿಡಿದು ವಿರೋಧ ಪಕ್ಷದ ನಾಯಕರಾಗಿದ್ದಾರೆ-ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್. ಬಿ.ವೈ. ವಿಜಯೇಂದ್ರ ಅವರು ಬ್ಲಾಕ್ಮೇಲ್ ಮಾಡಿ ಅಧ್ಯಕ್ಷರಾಗಿದ್ದಾರೆ-ಬಿಜೆಪಿ ಶಾಸಕ ಯತ್ನಾಳ್. ಕರ್ನಾಟಕ ಬಿಜೆಪಿಯಲ್ಲಿ ಅರ್ಹತೆ, ಸಾಮರ್ಥ್ಯಗಳಿಂದ ಯಾರೂ ಹುದ್ದೆ ಪಡೆಯುವುದಿಲ್ಲ. ಅಡ್ಡದಾರಿಯಲ್ಲಿ ಹೋಗುವವರಿಗೆ ಮಾತ್ರ ಬಿಜೆಪಿಯಲ್ಲಿ ಮನ್ನಣೆ ಎನ್ನುವುದು ಈ ಮೂಲಕ ಸಾಬೀತಾಗಿದೆ’ ಎಂದು ಕಾಂಗ್ರೆಸ್ ಹೇಳಿದೆ.

‘ಬೊಮ್ಮಾಯಿಯವರನ್ನು ಸೋಲಿಸಲು ವಿಜಯೇಂದ್ರ ಹಣ ಚೆಲ್ಲಿದ್ದಾರೆ. ವಿ. ಸೊಮ್ಮಣ್ಣನವರ ರಾಜಕೀಯ ಜೀವನ ಅಂತ್ಯಗೊಳಿಸಲು ಷಡ್ಯಂತ್ರ ರೂಪಿಸಿದ್ದು ವಿಜಯೇಂದ್ರ. ಪಂಚಮಸಾಲಿ ಹೋರಾಟ ಹತ್ತಿಕ್ಕಲು ವಿಜಯೇಂದ್ರ ಹಲವು ಷಡ್ಯಂತ್ರ ರೂಪಿಸಿದ್ದರು. ಹೈಕಮಾಂಡ್ ನಾಯಕರಿಗೆ ಬ್ಲಾಕ್ಮೇಲ್ ಮಾಡಿ ರಾಜ್ಯಾಧ್ಯಕ್ಷ ಹುದ್ದೆ ಪಡೆದಿದ್ದಾರೆ. ಇದಿಷ್ಟೂ ಬಿಜೆಪಿ ಶಾಸಕ ಯತ್ನಾಳ್ ಬಹಿರಂಗಪಡಿಸಿದ ಸಂಗತಿಗಳು. ಬಿಜೆಪಿ ರಾಜ್ಯಾಧ್ಯಕ್ಷ ನಿಮ್ಮ ಪಕ್ಷಕ್ಕೆ ಹಾಗೂ ಲಿಂಗಾಯತ ಸಮುದಾಯಕ್ಕೆ ಮುಳುವಾಗಿರುವ ಮುಳ್ಳು!. ಹೀಗಿರುವಾಗ ಬಿಜೆಪಿಯನ್ನು ಉಳಿಸುವುದಕ್ಕೆ ಯಾವ ದೇವರಿಂದಲೂ ಸಾಧ್ಯವಿಲ್ಲ’ ಎಂದು ಕಾಂಗ್ರೆಸ್ ಎಕ್ಸ್‌ನಲ್ಲಿ ವ್ಯಂಗ್ಯವಾಡಿದೆ.

‘ಒಂದೆಡೆ ಆರ್. ಅಶೋಕ್ ಅವರನ್ನು ಬಿಟ್ಟು ಎಸ್ ಆರ್ ವಿಶ್ವನಾಥ್ ನೇತೃತ್ವದಲ್ಲಿ ಬೆಂಗಳೂರು ಶಾಸಕರ ಪ್ರತ್ಯೇಕ ಸಭೆ. ಇನ್ನೊಂದೆಡೆ ವಿಜಯೇಂದ್ರರನ್ನು ಬಿಟ್ಟು ಆರ್ ಅಶೋಕ್ ಪ್ರತ್ಯೇಕ ಸಭೆ. ಮತ್ತೊಂದೆಡೆ ಇವರೆಲ್ಲರನ್ನೂ ಬಿಟ್ಟು ವಿಜಯೇಂದ್ರರ ಕಸರತ್ತು. ಇನ್ನೊಂದೆಡೆ ಹಿರಿಯ ಶಾಸಕರ ಸಲಹಾ ಸಮಿತಿ ಮಾಡಿ ಆರ್ ಅಶೋಕ್ ಅವರು ಅಪಕ್ವ, ಅನನುಭವಿ ಎಂದು ಬಿಂಬಿಸುವ ಪ್ರಯತ್ನ. ಒಟ್ಟಿನಲ್ಲಿ ಬಿಜೆಪಿಯಲ್ಲಿ ಏನಾಗುತ್ತಿದೆ ಎಂದು ಬಿಜೆಪಿ ನಾಯಕರಿಗೇ ತಿಳಿಯುತ್ತಿಲ್ಲ’ ಎಂದು ಹೇಳಿದೆ.

ವಿರೋಧ ಪಕ್ಷದ ನಾಯಕನಿಗೆ ಮತ್ತೊಂದು ವಿರೋಧ ಪಕ್ಷ ಸೃಷ್ಟಿ:

‘ಆ’ಶೋಕ’ ಗೀತೆ!, ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದಕ್ಕೆ ಬಿಜೆಪಿ ಶಾಸಕ ಅಭಿನಂದಿಸಲು ಒಪ್ಪಲಿಲ್ಲ. ಸಭಾತ್ಯಾಗ ಮಾಡಿದರೆ ಬಿಜೆಪಿ ಶಾಸಕರೇ ಕುರ್ಚಿ ಬಿಟ್ಟು ಏಳಲಿಲ್ಲ. ಶಾಸಕಾಂಗ ಸಭೆಗೆ ಬರುವುದಿಲ್ಲ ಎಂದು ಬಿಜೆಪಿ ಶಾಸಕರಿಂದಲೇ ಘೇರಾವ್. ವಿರೋಧ ಪಕ್ಷದ ನಾಯಕನ ಕೊಠಡಿಗೆ ಬರಲು ಒಪ್ಪದ ಬಿಜೆಪಿ ಶಾಸಕ. ಸಭಾತ್ಯಾಗ ಮಾಡಿರುವುದಕ್ಕೆ ಸ್ವಪಕ್ಷದ ಶಾಸಕರಿಂದಲೇ ತರಾಟೆ. ಬಕೆಟ್ ರಾಜಕಾರಿಣಿ ಎಂದು ಬಿಜೆಪಿಗರಿಂದಲೇ ಬಿರುದು. ವಿರೋಧ ಪಕ್ಷದ ನಾಯಕ ಎನ್ನುವುದನ್ನು ಮರೆತು ಸ್ವಪಕ್ಷದ ನಾಯಕರಿಂದಲೇ ಸದನದಲ್ಲಿ ಮಾತನಾಡಲು ಅಡ್ಡಿ. ವಿರೋಧ ಪಕ್ಷದ ನಾಯಕನಿಗೆ ಮತ್ತೊಂದು ವಿರೋಧ ಪಕ್ಷ ಸೃಷ್ಟಿಯಾಗಿರುವಾಗ ಅಶೋಕರ ಶೋಕ ರಾಗವನ್ನು ಕೇಳುವವರು ಯಾರು’ ಎಂದು ಕಾಂಗ್ರೆಸ್ ಪಕ್ಷ ಬಿಜೆಪಿಯನ್ನು ಪ್ರಶ್ನಿಸಿದೆ.

ಇದನ್ನೂ ಓದಿ; ‘ಬೊಮ್ಮಾಯಿ ಸೋಲಿಸಲು ವಿಜಯೇಂದ್ರ ಹಣ ಕಳುಹಿಸಿದ್ದರು; ಬಿಎಸ್‌ವೈಗೆ ಹೈಕಮಾಂಡ್ ಹೆದರಿದೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...