Homeಕರ್ನಾಟಕಅರ್ಹತೆ, ಸಾಮರ್ಥ್ಯಗಳಿಂದ ಬಿಜೆಪಿಯಲ್ಲಿ ಯಾರೂ ಹುದ್ದೆ ಪಡೆಯುವುದಿಲ್ಲ; ಪ್ರತಿಪಕ್ಷ ನಾಯಕರ ಕಾಲೆಳೆದ ಆಡಳಿತ ಪಕ್ಷ

ಅರ್ಹತೆ, ಸಾಮರ್ಥ್ಯಗಳಿಂದ ಬಿಜೆಪಿಯಲ್ಲಿ ಯಾರೂ ಹುದ್ದೆ ಪಡೆಯುವುದಿಲ್ಲ; ಪ್ರತಿಪಕ್ಷ ನಾಯಕರ ಕಾಲೆಳೆದ ಆಡಳಿತ ಪಕ್ಷ

- Advertisement -
- Advertisement -

ಬಿಜೆಪಿಯಲ್ಲಿ ಅರ್ಹತೆ, ಸಾಮರ್ಥ್ಯಗಳಿಂದ ಯಾರೂ ಹುದ್ದೆ ಪಡೆಯುವುದಿಲ್ಲ. ಅಡ್ಡದಾರಿಯಲ್ಲಿ ಹೋಗುವವರಿಗೆ ಮಾತ್ರ ಬಿಜೆಪಿಯಲ್ಲಿ ಮನ್ನಣೆ ಎನ್ನುವುದು ಈ ಮೂಲಕ ಸಾಬೀತಾಗಿದೆ ಎಂದು ವಿಪಕ್ಷ ನಾಯಕರನ್ನು ಆಡಳಿತ ಪಕ್ಷ ಕಾಂಗ್ರೆಸ್ ಲೇವಡಿ ಮಾಡಿದೆ.

ಬಿ.ಎಸ್. ಯಡಿಯೂರಪ್ಪ ಹಾಗೂ ಬಿ.ವೈ. ವಿಜಯೇಂದ್ರ ವಿರುದ್ಧ ಯತ್ನಾಳ್ ಬಹಿರಂಗವಾಗಿಯೇ ವಾಗ್ದಾಳಿ ನಡೆಸುತ್ತಿದ್ದಾರೆ. ಮತ್ತೊಂದೆಡೆ, ಪ್ರತಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಎಸ್. ಆರ್ ವಿಶ್ವನಾಥ್ ಕಿಡಿಕಾರುತ್ತಿದ್ದಾರೆ. ಬಿಜೆಪಿಯಲ್ಲಿ ನಡೆಯುತ್ತಿರುವ ಈ ಬೆಳವಣಿಗೆಗಳ ಕುರಿತು ಕಾಂಗ್ರೆಸ್ ಕಾಲೆಳೆಯುತ್ತಿದೆ.

ಬಿಜೆಪಿ ಅಂತರ್ಯುದ್ಧದ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ‘ಆರ್. ಅಶೋಕ್ ಅವರು ಬಕೆಟ್ ಹಿಡಿದು ವಿರೋಧ ಪಕ್ಷದ ನಾಯಕರಾಗಿದ್ದಾರೆ-ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್. ಬಿ.ವೈ. ವಿಜಯೇಂದ್ರ ಅವರು ಬ್ಲಾಕ್ಮೇಲ್ ಮಾಡಿ ಅಧ್ಯಕ್ಷರಾಗಿದ್ದಾರೆ-ಬಿಜೆಪಿ ಶಾಸಕ ಯತ್ನಾಳ್. ಕರ್ನಾಟಕ ಬಿಜೆಪಿಯಲ್ಲಿ ಅರ್ಹತೆ, ಸಾಮರ್ಥ್ಯಗಳಿಂದ ಯಾರೂ ಹುದ್ದೆ ಪಡೆಯುವುದಿಲ್ಲ. ಅಡ್ಡದಾರಿಯಲ್ಲಿ ಹೋಗುವವರಿಗೆ ಮಾತ್ರ ಬಿಜೆಪಿಯಲ್ಲಿ ಮನ್ನಣೆ ಎನ್ನುವುದು ಈ ಮೂಲಕ ಸಾಬೀತಾಗಿದೆ’ ಎಂದು ಕಾಂಗ್ರೆಸ್ ಹೇಳಿದೆ.

‘ಬೊಮ್ಮಾಯಿಯವರನ್ನು ಸೋಲಿಸಲು ವಿಜಯೇಂದ್ರ ಹಣ ಚೆಲ್ಲಿದ್ದಾರೆ. ವಿ. ಸೊಮ್ಮಣ್ಣನವರ ರಾಜಕೀಯ ಜೀವನ ಅಂತ್ಯಗೊಳಿಸಲು ಷಡ್ಯಂತ್ರ ರೂಪಿಸಿದ್ದು ವಿಜಯೇಂದ್ರ. ಪಂಚಮಸಾಲಿ ಹೋರಾಟ ಹತ್ತಿಕ್ಕಲು ವಿಜಯೇಂದ್ರ ಹಲವು ಷಡ್ಯಂತ್ರ ರೂಪಿಸಿದ್ದರು. ಹೈಕಮಾಂಡ್ ನಾಯಕರಿಗೆ ಬ್ಲಾಕ್ಮೇಲ್ ಮಾಡಿ ರಾಜ್ಯಾಧ್ಯಕ್ಷ ಹುದ್ದೆ ಪಡೆದಿದ್ದಾರೆ. ಇದಿಷ್ಟೂ ಬಿಜೆಪಿ ಶಾಸಕ ಯತ್ನಾಳ್ ಬಹಿರಂಗಪಡಿಸಿದ ಸಂಗತಿಗಳು. ಬಿಜೆಪಿ ರಾಜ್ಯಾಧ್ಯಕ್ಷ ನಿಮ್ಮ ಪಕ್ಷಕ್ಕೆ ಹಾಗೂ ಲಿಂಗಾಯತ ಸಮುದಾಯಕ್ಕೆ ಮುಳುವಾಗಿರುವ ಮುಳ್ಳು!. ಹೀಗಿರುವಾಗ ಬಿಜೆಪಿಯನ್ನು ಉಳಿಸುವುದಕ್ಕೆ ಯಾವ ದೇವರಿಂದಲೂ ಸಾಧ್ಯವಿಲ್ಲ’ ಎಂದು ಕಾಂಗ್ರೆಸ್ ಎಕ್ಸ್‌ನಲ್ಲಿ ವ್ಯಂಗ್ಯವಾಡಿದೆ.

‘ಒಂದೆಡೆ ಆರ್. ಅಶೋಕ್ ಅವರನ್ನು ಬಿಟ್ಟು ಎಸ್ ಆರ್ ವಿಶ್ವನಾಥ್ ನೇತೃತ್ವದಲ್ಲಿ ಬೆಂಗಳೂರು ಶಾಸಕರ ಪ್ರತ್ಯೇಕ ಸಭೆ. ಇನ್ನೊಂದೆಡೆ ವಿಜಯೇಂದ್ರರನ್ನು ಬಿಟ್ಟು ಆರ್ ಅಶೋಕ್ ಪ್ರತ್ಯೇಕ ಸಭೆ. ಮತ್ತೊಂದೆಡೆ ಇವರೆಲ್ಲರನ್ನೂ ಬಿಟ್ಟು ವಿಜಯೇಂದ್ರರ ಕಸರತ್ತು. ಇನ್ನೊಂದೆಡೆ ಹಿರಿಯ ಶಾಸಕರ ಸಲಹಾ ಸಮಿತಿ ಮಾಡಿ ಆರ್ ಅಶೋಕ್ ಅವರು ಅಪಕ್ವ, ಅನನುಭವಿ ಎಂದು ಬಿಂಬಿಸುವ ಪ್ರಯತ್ನ. ಒಟ್ಟಿನಲ್ಲಿ ಬಿಜೆಪಿಯಲ್ಲಿ ಏನಾಗುತ್ತಿದೆ ಎಂದು ಬಿಜೆಪಿ ನಾಯಕರಿಗೇ ತಿಳಿಯುತ್ತಿಲ್ಲ’ ಎಂದು ಹೇಳಿದೆ.

ವಿರೋಧ ಪಕ್ಷದ ನಾಯಕನಿಗೆ ಮತ್ತೊಂದು ವಿರೋಧ ಪಕ್ಷ ಸೃಷ್ಟಿ:

‘ಆ’ಶೋಕ’ ಗೀತೆ!, ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದಕ್ಕೆ ಬಿಜೆಪಿ ಶಾಸಕ ಅಭಿನಂದಿಸಲು ಒಪ್ಪಲಿಲ್ಲ. ಸಭಾತ್ಯಾಗ ಮಾಡಿದರೆ ಬಿಜೆಪಿ ಶಾಸಕರೇ ಕುರ್ಚಿ ಬಿಟ್ಟು ಏಳಲಿಲ್ಲ. ಶಾಸಕಾಂಗ ಸಭೆಗೆ ಬರುವುದಿಲ್ಲ ಎಂದು ಬಿಜೆಪಿ ಶಾಸಕರಿಂದಲೇ ಘೇರಾವ್. ವಿರೋಧ ಪಕ್ಷದ ನಾಯಕನ ಕೊಠಡಿಗೆ ಬರಲು ಒಪ್ಪದ ಬಿಜೆಪಿ ಶಾಸಕ. ಸಭಾತ್ಯಾಗ ಮಾಡಿರುವುದಕ್ಕೆ ಸ್ವಪಕ್ಷದ ಶಾಸಕರಿಂದಲೇ ತರಾಟೆ. ಬಕೆಟ್ ರಾಜಕಾರಿಣಿ ಎಂದು ಬಿಜೆಪಿಗರಿಂದಲೇ ಬಿರುದು. ವಿರೋಧ ಪಕ್ಷದ ನಾಯಕ ಎನ್ನುವುದನ್ನು ಮರೆತು ಸ್ವಪಕ್ಷದ ನಾಯಕರಿಂದಲೇ ಸದನದಲ್ಲಿ ಮಾತನಾಡಲು ಅಡ್ಡಿ. ವಿರೋಧ ಪಕ್ಷದ ನಾಯಕನಿಗೆ ಮತ್ತೊಂದು ವಿರೋಧ ಪಕ್ಷ ಸೃಷ್ಟಿಯಾಗಿರುವಾಗ ಅಶೋಕರ ಶೋಕ ರಾಗವನ್ನು ಕೇಳುವವರು ಯಾರು’ ಎಂದು ಕಾಂಗ್ರೆಸ್ ಪಕ್ಷ ಬಿಜೆಪಿಯನ್ನು ಪ್ರಶ್ನಿಸಿದೆ.

ಇದನ್ನೂ ಓದಿ; ‘ಬೊಮ್ಮಾಯಿ ಸೋಲಿಸಲು ವಿಜಯೇಂದ್ರ ಹಣ ಕಳುಹಿಸಿದ್ದರು; ಬಿಎಸ್‌ವೈಗೆ ಹೈಕಮಾಂಡ್ ಹೆದರಿದೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...