Homeಮುಖಪುಟ‘ಹಸ್ತಕ್ಷೇಪ ಮಾಡುವ ಹಕ್ಕು ಯಾರಿಗೂ ಇಲ್ಲ’: ಅಂತರ್‌ಧರ್ಮೀಯ ಮದುವೆ ಎತ್ತಿ ಹಿಡಿದ ಅಲಹಾಬಾದ್ ಹೈಕೋರ್ಟ್

‘ಹಸ್ತಕ್ಷೇಪ ಮಾಡುವ ಹಕ್ಕು ಯಾರಿಗೂ ಇಲ್ಲ’: ಅಂತರ್‌ಧರ್ಮೀಯ ಮದುವೆ ಎತ್ತಿ ಹಿಡಿದ ಅಲಹಾಬಾದ್ ಹೈಕೋರ್ಟ್

ಹಿಂದೆಯೂ ಉತ್ತರಪ್ರದೇಶದಲ್ಲಿ ಬಲವಂತದ ಮತಾಂತರ ಕಾನೂನಿನಿಂದ ಕಿರುಕುಳಕ್ಕೆ ಒಳಗಾದ ಅಂತರ್‌ಧರ್ಮೀಯ ದಂಪತಿಗಳ ನೆರವಿಗೆ ಈ ಕೋರ್ಟ್ ಮುಂದಾಗಿತ್ತು

- Advertisement -
- Advertisement -

ಹಲವಾರು ಸಂದರ್ಭಗಳಲ್ಲಿ ಉತ್ತರಪ್ರದೇಶದ ಅಲಹಾಬಾದ್ ಹೈಕೋರ್ಟ್ ಅಂತರ್‌ಜಾತಿ ಮತ್ತು ಅಂತರ್ ಧರ್ಮೀಯ ಮದುವೆಗಳನ್ನು ಎತ್ತಿ ಹಿಡಿದು ದಂಪತಿಗಳಿಗೆ ರಕ್ಷಣೆ ನೀಡಿದೆ. ಮತಾಂತರ ವಿರೋಧಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಜನೆವರಿ 15ರಂದು ಕೈಗೆತ್ತಿಕೊಳ್ಳಲಿದೆ.

ಇದೇನೂ ಮೊದಲ ಸಲವಲ್ಲ, ಹಲವಾರು ಸಲ ಅಂತರ್‌ಧರ್ಮೀಯ ದಂಪತಿಗಳ ಪರ ಅಲಹಾಬಾದ್ ಹೈಕೋರ್ಟ್ ನಿಂತಿದೆ. ಮತಾಂತರ ವಿರೋಧಿ ಕಾನೂನು ಸೃಷ್ಟಿಸುತ್ತಿರುವ ಗೊಂದಲ-ಕಿರಿಕಿರಿಯ ಪ್ರಕರಣಗಳಲ್ಲಿ ಈ ಕೋರ್ಟ್ ಅಂತರ್‌ಧರ್ಮೀಯ ಮದುವೆಗಳ ಪರ ನಿಂತಿದೆ.

ಬುಧವಾರ ಕೂಡ, ಹೊಸ ಕಾನೂನಿನಿಂದ ಅನಗತ್ಯ ಕಿರುಕುಳಕ್ಕೆ ಒಳಗಾದ ಅಂತರ್‌ಧರ್ಮೀಯ ದಂಪತಿಗಳ ಪರ ನಿಂತ ಹೈಕೋರ್ಟ್, ‘ಇವರ ಶಾಂತಿಯುತ ಬದುಕಿನಲ್ಲಿ ಹಸ್ತಕ್ಷೇಪ ಮಾಡುವ ಅರ್ಹತೆ, ಅಧಿಕಾರ ಯಾರಿಗೂ ಇಲ್ಲ’ ಎಂದು ಸ್ಪಷ್ಟವಾಗಿ ಹೇಳಿದೆ ಎಂದು ಲೈವ್‌ಲಾ ವರದಿ ಮಾಡಿದೆ.

ಮುಸ್ಲಿಂ ಪುರುಷ ಮತ್ತು ಅವರ ಹಿಂದೂ ಪತ್ನಿ (ನಂತರದಲ್ಲಿ ಇವರು ಸ್ವ ಇಚ್ಛೆಯಿಂದ ಇಸ್ಲಾಂಗೆ ಮತಾಂತರಗೊಂಡಿದ್ದಾರೆ) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸರಳ್ ಶ್ರೀವಾಸ್ತವ ನೇತೃತ್ವದ ಹೈಕೋರ್ಟ್ ಪೀಠ ಈ ಕೆಳಗಿನಂತೆ ಅಭಿಪ್ರಾಯಪಟ್ಟಿದೆ.

‘ಮೆಜಾರಿಟಿ ವಯಸ್ಸು ತಲುಪಿದ ಇಬ್ಬರು ವ್ಯಕ್ತಿಗಳು ಜೊತೆಯಾಗಿ ಬದುಕುತ್ತಿದ್ದರೆ, ಅವರ ಶಾಂತಿಯುತ ಬದುಕಿನಲ್ಲಿ ಹಸ್ತಕ್ಷೇಪ ಮಾಡುವ ಅರ್ಹತೆ/ಅಧಿಕಾರ ಯಾರಿಗೂ ಇಲ್ಲ ಎಂದು ಈ ಕೋರ್ಟ್ ಮತ್ತೆ ಮತ್ತೆ ಸ್ಪಷ್ಟಪಡಿಸಿದೆ…’

ತಾವು ವಯಸ್ಕರಾಗಿದ್ದೇವೆ (ಮೆಜಾರಿಟಿ ವಯಸ್ಸಿನವರು) ಎಂದು ಹೇಳಿದ್ದ ದಂಪತಿ ತಾವು, 1997 ಮತ್ತು 1998ರಲ್ಲಿ ಜನಿಸಿರುವ ದಾಖಲೆಗಳನ್ನು ಕೋರ್ಟ್‌ಗೆ ಒದಗಿಸಿದ್ದರು.

‘ಅಗತ್ಯ ಬಿದ್ದರೆ ಈ ದಂಪತಿಗೆ ಸೂಕ್ತ ರಕ್ಷಣೆ ನೀಡಿ’ ಎಂದು ಬಿಜ್ನೋರ್ ಎಸ್‌ಪಿಗೆ ಸೂಚಿಸಿದ ನ್ಯಾ. ಶ್ರೀವಾಸ್ತವ್, ಫೆಬ್ರುವರಿ 8ಕ್ಕೆ ವಿಚಾರಣೆ ಮುಂದೂಡಿದರು ಎಂದು ಲೈವ್ ಲಾ ವರದಿ ಮಾಡಿದೆ. ‘ಪತ್ನಿ ಹೆಸರಲ್ಲಿ 3 ಲಕ್ಷ ರೂ. ಡಿಪಾಸಿಟ್ ಮಾಡಲು ಕೋರ್ಟ್ ಪತಿಗೆ ಸೂಚಿಸಿದ್ದು, ಇದು ಯಾವ ಕಾರಣಕ್ಕೆ ಎಂಬುದು ಸ್ಪಷ್ಟವಾಗಿಲ್ಲ.

ಈ ವಿಚಾರಣೆ ಸಂದರ್ಭದಲ್ಲಿ ಹೈಕೋರ್ಟ್ ಸುಪ್ರಿಂಕೋರ್ಟ್‌ನ ಎರಡು ತೀರ್ಪುಗಳನ್ನು ಉಲ್ಲೇಖಿಸಿದೆ. ಅಂತರ್‌ಧರ್ಮೀಯ ಮದುವೆ ವಿರೋಧಿಸಿ ಮಹಿಳೆಯ ಪಾಲಕರು ಸಲ್ಲಿಸಿದ ಅರ್ಜಿ ಪ್ರಕರಣದ ತೀರ್ಪು(2006) ಮತ್ತು ಸಂಬಂಧವೊಂದಕ್ಕಾಗಿ ಮಹಿಳೆಯನ್ನು ಆ ಕುಟುಂಬದವರೇ ಕೊಂದ ಪ್ರಕರಣದ ತೀರ್ಪು (2008)ಗಳನ್ನು ಕೋರ್ಟ್ ಉಲ್ಲೇಖಿಸಿದೆ.

2006ರಲ್ಲಿ ಸುಪ್ರೀಂ ಕೋರ್ಟಿನಲ್ಲಿ ನ್ಯಾ. ಮಾರ್ಖಂಡೇಯ ಖಟ್ಜು ತೀರ್ಪಿನಲ್ಲಿ ಉಲ್ಲೇಖಿಸಿದ ಸಾಲುಗಳನ್ನು ಅಲಹಾಬಾದ್ ಹೈಕೋರ್ಟ್ ಉಲ್ಲೇಖಿಸಿದೆ: ‘ಇದು ಮುಕ್ತ ಮತ್ತು ಪ್ರಜಾಪ್ರಭುತ್ವ ದೇಶವಾಗಿದ್ದು, ಮೇಜರ್ ವಯಸ್ಸು ತಲುಪಿದ ಯಾರೇ ಆಗಲಿ ತಮಗೆ ಇಷ್ಟವಾದವರನ್ನು ಮದುವೆ ಆಗಬಹುದು. ಹುಡುಗ ಅಥವಾ ಹುಡುಗಿಯ ಪೋಷಕರಿಗೆ ಇಂತಹ ಅಂತರ್‌ಜಾತಿ ಅಥವಾ ಅಂತರ್‌ಧರ್ಮೀಯ ಮದುವೆ ಇಷ್ಟವಾಗದಿದ್ದಲ್ಲಿ, ಅವರು ಹೆಚ್ಚೆಂದರೆ ಆ ದಂಪತಿಯ ಜೊತೆ ಸಾಮಾಜಿಕ ಸಂಪರ್ಕ ಕಡಿದುಕೊಳ್ಳಬಹುದು, ಆದರೆ ಆ ದಂಪತಿಗೆ ಬೆದರಿಕೆ ಹಾಕುವುದನ್ನಾಗಲಿ, ಅವರಿಗೆ ಹಿಂಸಿಸುವುದನ್ನಾಗಲಿ, ಹಿಂಸೆಗೆ ಪ್ರಚೋದನೆ ಮಾಡುವುದನ್ನಾಗಲಿ ಮಾಡುವಂತಿಲ್ಲ….’

ಒತ್ತಾಯದ ಮತಾಂತರ ತಡೆಗೆ ಇತ್ತೀಚೆಗೆ ಉತ್ತರಪ್ರದೇಶ ಸರ್ಕಾರ ಜಾರಿಗೆ ತಂದ ಕಾಯ್ದೆಯ ಹಿನ್ನೆಲೆಯಲ್ಲಿ ಅಲಹಾಬಾದ್ ಹೈಕೋರ್ಟಿನ ಈ ಅಭಿಪ್ರಾಯ ಮಹತ್ವದ್ದಾಗಿದೆ. ವಾಸ್ತವದಲ್ಲಿ ಈ ಕಾಯ್ದೆ ಸಂಘ ಪರಿವಾರದ ‘ಲವ್ ಜಿಹಾದ್’ ಕತೆಗೆ ಕಾನೂನಾತ್ಮಕ ಬೆಂಬಲ ಕೊಡಲು ಜಾರಿಗೆ ಬಂದಿದೆ. ‘ಮದುವೆ ಮೂಲಕ ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ಬಲವಂತದ ಮತಾಂತರ ಮಾಡುತ್ತಾರೆ’ ಎಂಬ ಕಪೋಕಲ್ಪಿತ ಸಂಚನ್ನು ಲವ್ ಜಿಹಾದ್ ಸೂಚಿಸುತ್ತದೆ.

ಕಾಯ್ದೆ ಅಂಗೀಕಾರದ ನಂತರ ಹಲವಾರು ಎಫ್‌ಐಆರ್ ದಾಖಲಾಗಿವೆ ಮತ್ತು ಹಲವಾರು ಸಂಶಯಾಸ್ಪದ ಬಂಧನಗಳು ನಡೆದಿವೆ. 2020ರ ನವೆಂಬರ್ ಒಂದರಲ್ಲೇ ಅಲಹಾಬಾದ್ ಹೈಕೋರ್ಟ್, 125 ಅಂತರ್‌ಧರ್ಮಿಯ ದಂಪತಿಗಳಿಗೆ ರಕ್ಷಣೆ ನೀಡಲು ಆದೇಶಿಸಿದೆ. ಆ ತಿಂಗಳಲ್ಲೇ ಏಕ ನ್ಯಾಯಾಧೀಶರ ಪೀಠವೊಂದು, ‘ಅಂತರ್‌ಧರ್ಮೀಯ ಮದುವೆಗಳು ಮತಾಂತರದ ಉದ್ದೇಶಕ್ಕೇ ನಡೆಯುತ್ತವೆ’ ಎಂದು ಪ್ರಕಟಿಸಿದ ನಿರ್ಧಾರವನ್ನು ಖಂಡಿಸಿದ್ದ ಹೈಕೋರ್ಟ್, ಇದು ಅಸಮ್ಮತ ನಿರ್ಧಾರವಾಗಿದ್ದು, ಈ ನಿರ್ಧಾರ ‘bad in law’ ಎಂದು ಟೀಕಿಸಿತ್ತು.

ಡಿಸೆಂಬರ್‌ನಲ್ಲಿ ಇದೇ ಅಲಹಾಬಾದ್ ಹೈಕೋರ್ಟ್, 21 ವರ್ಷದ ಹಿಂದೂ ಯುವತಿ ಶಿಖಾ ತನ್ನ ಮುಸ್ಲಿಂ ಪತಿಯೊಂದಿಗೆ ಮತ್ತೆ ಒಂದಾಗಲು ನೆರವು ನೀಡಿತ್ತು. ‘ಒಬ್ಬ ವಯಸ್ಕ ಮಹಿಳೆ ತನ್ನಿಷ್ಟದಂತೆ ಬದುಕುವ ಆಯ್ಕೆ ಹೊಂದಿದ್ದಾಳೆ. ಆಕೆ ಮೂರನೇ ವ್ಯಕ್ತಿಯ ಅಡೆತಡೆಗಳನ್ನು ಧಿಕ್ಕರಿಸಿ, ತನ್ನ ಆಯ್ಕೆಯಂತೆ ಮುಕ್ತವಾಗಿ ಮುನ್ನಡೆಯುವ ಸ್ವಾತಂತ್ರ್ಯ ಹೊಂದಿದ್ದಾಳೆ’ ಎಂದು ಪೀಠ ಅಭಿಪ್ರಾಯ ಪಟ್ಟಿತ್ತು.

ಡಿಸೆಂಬರ್ 7ರಂದು ಚೀಫ್ ಮ್ಯಾಜಿಸ್ಟ್ರೇಟ್ ಪೀಠವು ಶಿಖಾ ಅವರನ್ನು ಮಕ್ಕಳ ಕಲ್ಯಾಣ ಸಮಿತಿಯ ಆಶ್ರಯದಲ್ಲಿಟ್ಟು, ಆಕೆ ತನ್ನ ಪೋಷಕರ ಮನೆಯಲ್ಲಿ ವಾಸಿಸಲು ವ್ಯವಸ್ಥೆ ಮಾಡಲು ಸೂಚಿಸಿತ್ತು. ಆದರೆ ಅಲಹಾಬಾದ್ ಹೈಕೋರ್ಟ್ ಶಿಖಾ ತನ್ನ ಮುಸ್ಲಿಂ ಪತಿಯೊಂದಿಗೆ ಮತ್ತೆ ಒಂದಾಗುವಂತೆ ಮಾಡಿತ್ತು.

ಮತಾಂತರ ವಿರೋಧಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಅಲಹಾಬಾದ್ ಹೈಕೋರ್ಟ್ ಜನೆವರಿ 15ರಂದು ಕೈಗೆತ್ತಿಕೊಳ್ಳಲಿದೆ.


ಇದನ್ನೂ ಓದಿ: ಲವ್ ಜಿಹಾದ್ ಎಂಬ ಕಪೋಲಕಲ್ಪಿತ: ಮತಾಂತರ ವಿರೋಧ ಕಾಯ್ದೆಯ ಅವಾಂತರ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...