Homeಮುಖಪುಟ‘ಹಸ್ತಕ್ಷೇಪ ಮಾಡುವ ಹಕ್ಕು ಯಾರಿಗೂ ಇಲ್ಲ’: ಅಂತರ್‌ಧರ್ಮೀಯ ಮದುವೆ ಎತ್ತಿ ಹಿಡಿದ ಅಲಹಾಬಾದ್ ಹೈಕೋರ್ಟ್

‘ಹಸ್ತಕ್ಷೇಪ ಮಾಡುವ ಹಕ್ಕು ಯಾರಿಗೂ ಇಲ್ಲ’: ಅಂತರ್‌ಧರ್ಮೀಯ ಮದುವೆ ಎತ್ತಿ ಹಿಡಿದ ಅಲಹಾಬಾದ್ ಹೈಕೋರ್ಟ್

ಹಿಂದೆಯೂ ಉತ್ತರಪ್ರದೇಶದಲ್ಲಿ ಬಲವಂತದ ಮತಾಂತರ ಕಾನೂನಿನಿಂದ ಕಿರುಕುಳಕ್ಕೆ ಒಳಗಾದ ಅಂತರ್‌ಧರ್ಮೀಯ ದಂಪತಿಗಳ ನೆರವಿಗೆ ಈ ಕೋರ್ಟ್ ಮುಂದಾಗಿತ್ತು

- Advertisement -
- Advertisement -

ಹಲವಾರು ಸಂದರ್ಭಗಳಲ್ಲಿ ಉತ್ತರಪ್ರದೇಶದ ಅಲಹಾಬಾದ್ ಹೈಕೋರ್ಟ್ ಅಂತರ್‌ಜಾತಿ ಮತ್ತು ಅಂತರ್ ಧರ್ಮೀಯ ಮದುವೆಗಳನ್ನು ಎತ್ತಿ ಹಿಡಿದು ದಂಪತಿಗಳಿಗೆ ರಕ್ಷಣೆ ನೀಡಿದೆ. ಮತಾಂತರ ವಿರೋಧಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಜನೆವರಿ 15ರಂದು ಕೈಗೆತ್ತಿಕೊಳ್ಳಲಿದೆ.

ಇದೇನೂ ಮೊದಲ ಸಲವಲ್ಲ, ಹಲವಾರು ಸಲ ಅಂತರ್‌ಧರ್ಮೀಯ ದಂಪತಿಗಳ ಪರ ಅಲಹಾಬಾದ್ ಹೈಕೋರ್ಟ್ ನಿಂತಿದೆ. ಮತಾಂತರ ವಿರೋಧಿ ಕಾನೂನು ಸೃಷ್ಟಿಸುತ್ತಿರುವ ಗೊಂದಲ-ಕಿರಿಕಿರಿಯ ಪ್ರಕರಣಗಳಲ್ಲಿ ಈ ಕೋರ್ಟ್ ಅಂತರ್‌ಧರ್ಮೀಯ ಮದುವೆಗಳ ಪರ ನಿಂತಿದೆ.

ಬುಧವಾರ ಕೂಡ, ಹೊಸ ಕಾನೂನಿನಿಂದ ಅನಗತ್ಯ ಕಿರುಕುಳಕ್ಕೆ ಒಳಗಾದ ಅಂತರ್‌ಧರ್ಮೀಯ ದಂಪತಿಗಳ ಪರ ನಿಂತ ಹೈಕೋರ್ಟ್, ‘ಇವರ ಶಾಂತಿಯುತ ಬದುಕಿನಲ್ಲಿ ಹಸ್ತಕ್ಷೇಪ ಮಾಡುವ ಅರ್ಹತೆ, ಅಧಿಕಾರ ಯಾರಿಗೂ ಇಲ್ಲ’ ಎಂದು ಸ್ಪಷ್ಟವಾಗಿ ಹೇಳಿದೆ ಎಂದು ಲೈವ್‌ಲಾ ವರದಿ ಮಾಡಿದೆ.

ಮುಸ್ಲಿಂ ಪುರುಷ ಮತ್ತು ಅವರ ಹಿಂದೂ ಪತ್ನಿ (ನಂತರದಲ್ಲಿ ಇವರು ಸ್ವ ಇಚ್ಛೆಯಿಂದ ಇಸ್ಲಾಂಗೆ ಮತಾಂತರಗೊಂಡಿದ್ದಾರೆ) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸರಳ್ ಶ್ರೀವಾಸ್ತವ ನೇತೃತ್ವದ ಹೈಕೋರ್ಟ್ ಪೀಠ ಈ ಕೆಳಗಿನಂತೆ ಅಭಿಪ್ರಾಯಪಟ್ಟಿದೆ.

‘ಮೆಜಾರಿಟಿ ವಯಸ್ಸು ತಲುಪಿದ ಇಬ್ಬರು ವ್ಯಕ್ತಿಗಳು ಜೊತೆಯಾಗಿ ಬದುಕುತ್ತಿದ್ದರೆ, ಅವರ ಶಾಂತಿಯುತ ಬದುಕಿನಲ್ಲಿ ಹಸ್ತಕ್ಷೇಪ ಮಾಡುವ ಅರ್ಹತೆ/ಅಧಿಕಾರ ಯಾರಿಗೂ ಇಲ್ಲ ಎಂದು ಈ ಕೋರ್ಟ್ ಮತ್ತೆ ಮತ್ತೆ ಸ್ಪಷ್ಟಪಡಿಸಿದೆ…’

ತಾವು ವಯಸ್ಕರಾಗಿದ್ದೇವೆ (ಮೆಜಾರಿಟಿ ವಯಸ್ಸಿನವರು) ಎಂದು ಹೇಳಿದ್ದ ದಂಪತಿ ತಾವು, 1997 ಮತ್ತು 1998ರಲ್ಲಿ ಜನಿಸಿರುವ ದಾಖಲೆಗಳನ್ನು ಕೋರ್ಟ್‌ಗೆ ಒದಗಿಸಿದ್ದರು.

‘ಅಗತ್ಯ ಬಿದ್ದರೆ ಈ ದಂಪತಿಗೆ ಸೂಕ್ತ ರಕ್ಷಣೆ ನೀಡಿ’ ಎಂದು ಬಿಜ್ನೋರ್ ಎಸ್‌ಪಿಗೆ ಸೂಚಿಸಿದ ನ್ಯಾ. ಶ್ರೀವಾಸ್ತವ್, ಫೆಬ್ರುವರಿ 8ಕ್ಕೆ ವಿಚಾರಣೆ ಮುಂದೂಡಿದರು ಎಂದು ಲೈವ್ ಲಾ ವರದಿ ಮಾಡಿದೆ. ‘ಪತ್ನಿ ಹೆಸರಲ್ಲಿ 3 ಲಕ್ಷ ರೂ. ಡಿಪಾಸಿಟ್ ಮಾಡಲು ಕೋರ್ಟ್ ಪತಿಗೆ ಸೂಚಿಸಿದ್ದು, ಇದು ಯಾವ ಕಾರಣಕ್ಕೆ ಎಂಬುದು ಸ್ಪಷ್ಟವಾಗಿಲ್ಲ.

ಈ ವಿಚಾರಣೆ ಸಂದರ್ಭದಲ್ಲಿ ಹೈಕೋರ್ಟ್ ಸುಪ್ರಿಂಕೋರ್ಟ್‌ನ ಎರಡು ತೀರ್ಪುಗಳನ್ನು ಉಲ್ಲೇಖಿಸಿದೆ. ಅಂತರ್‌ಧರ್ಮೀಯ ಮದುವೆ ವಿರೋಧಿಸಿ ಮಹಿಳೆಯ ಪಾಲಕರು ಸಲ್ಲಿಸಿದ ಅರ್ಜಿ ಪ್ರಕರಣದ ತೀರ್ಪು(2006) ಮತ್ತು ಸಂಬಂಧವೊಂದಕ್ಕಾಗಿ ಮಹಿಳೆಯನ್ನು ಆ ಕುಟುಂಬದವರೇ ಕೊಂದ ಪ್ರಕರಣದ ತೀರ್ಪು (2008)ಗಳನ್ನು ಕೋರ್ಟ್ ಉಲ್ಲೇಖಿಸಿದೆ.

2006ರಲ್ಲಿ ಸುಪ್ರೀಂ ಕೋರ್ಟಿನಲ್ಲಿ ನ್ಯಾ. ಮಾರ್ಖಂಡೇಯ ಖಟ್ಜು ತೀರ್ಪಿನಲ್ಲಿ ಉಲ್ಲೇಖಿಸಿದ ಸಾಲುಗಳನ್ನು ಅಲಹಾಬಾದ್ ಹೈಕೋರ್ಟ್ ಉಲ್ಲೇಖಿಸಿದೆ: ‘ಇದು ಮುಕ್ತ ಮತ್ತು ಪ್ರಜಾಪ್ರಭುತ್ವ ದೇಶವಾಗಿದ್ದು, ಮೇಜರ್ ವಯಸ್ಸು ತಲುಪಿದ ಯಾರೇ ಆಗಲಿ ತಮಗೆ ಇಷ್ಟವಾದವರನ್ನು ಮದುವೆ ಆಗಬಹುದು. ಹುಡುಗ ಅಥವಾ ಹುಡುಗಿಯ ಪೋಷಕರಿಗೆ ಇಂತಹ ಅಂತರ್‌ಜಾತಿ ಅಥವಾ ಅಂತರ್‌ಧರ್ಮೀಯ ಮದುವೆ ಇಷ್ಟವಾಗದಿದ್ದಲ್ಲಿ, ಅವರು ಹೆಚ್ಚೆಂದರೆ ಆ ದಂಪತಿಯ ಜೊತೆ ಸಾಮಾಜಿಕ ಸಂಪರ್ಕ ಕಡಿದುಕೊಳ್ಳಬಹುದು, ಆದರೆ ಆ ದಂಪತಿಗೆ ಬೆದರಿಕೆ ಹಾಕುವುದನ್ನಾಗಲಿ, ಅವರಿಗೆ ಹಿಂಸಿಸುವುದನ್ನಾಗಲಿ, ಹಿಂಸೆಗೆ ಪ್ರಚೋದನೆ ಮಾಡುವುದನ್ನಾಗಲಿ ಮಾಡುವಂತಿಲ್ಲ….’

ಒತ್ತಾಯದ ಮತಾಂತರ ತಡೆಗೆ ಇತ್ತೀಚೆಗೆ ಉತ್ತರಪ್ರದೇಶ ಸರ್ಕಾರ ಜಾರಿಗೆ ತಂದ ಕಾಯ್ದೆಯ ಹಿನ್ನೆಲೆಯಲ್ಲಿ ಅಲಹಾಬಾದ್ ಹೈಕೋರ್ಟಿನ ಈ ಅಭಿಪ್ರಾಯ ಮಹತ್ವದ್ದಾಗಿದೆ. ವಾಸ್ತವದಲ್ಲಿ ಈ ಕಾಯ್ದೆ ಸಂಘ ಪರಿವಾರದ ‘ಲವ್ ಜಿಹಾದ್’ ಕತೆಗೆ ಕಾನೂನಾತ್ಮಕ ಬೆಂಬಲ ಕೊಡಲು ಜಾರಿಗೆ ಬಂದಿದೆ. ‘ಮದುವೆ ಮೂಲಕ ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ಬಲವಂತದ ಮತಾಂತರ ಮಾಡುತ್ತಾರೆ’ ಎಂಬ ಕಪೋಕಲ್ಪಿತ ಸಂಚನ್ನು ಲವ್ ಜಿಹಾದ್ ಸೂಚಿಸುತ್ತದೆ.

ಕಾಯ್ದೆ ಅಂಗೀಕಾರದ ನಂತರ ಹಲವಾರು ಎಫ್‌ಐಆರ್ ದಾಖಲಾಗಿವೆ ಮತ್ತು ಹಲವಾರು ಸಂಶಯಾಸ್ಪದ ಬಂಧನಗಳು ನಡೆದಿವೆ. 2020ರ ನವೆಂಬರ್ ಒಂದರಲ್ಲೇ ಅಲಹಾಬಾದ್ ಹೈಕೋರ್ಟ್, 125 ಅಂತರ್‌ಧರ್ಮಿಯ ದಂಪತಿಗಳಿಗೆ ರಕ್ಷಣೆ ನೀಡಲು ಆದೇಶಿಸಿದೆ. ಆ ತಿಂಗಳಲ್ಲೇ ಏಕ ನ್ಯಾಯಾಧೀಶರ ಪೀಠವೊಂದು, ‘ಅಂತರ್‌ಧರ್ಮೀಯ ಮದುವೆಗಳು ಮತಾಂತರದ ಉದ್ದೇಶಕ್ಕೇ ನಡೆಯುತ್ತವೆ’ ಎಂದು ಪ್ರಕಟಿಸಿದ ನಿರ್ಧಾರವನ್ನು ಖಂಡಿಸಿದ್ದ ಹೈಕೋರ್ಟ್, ಇದು ಅಸಮ್ಮತ ನಿರ್ಧಾರವಾಗಿದ್ದು, ಈ ನಿರ್ಧಾರ ‘bad in law’ ಎಂದು ಟೀಕಿಸಿತ್ತು.

ಡಿಸೆಂಬರ್‌ನಲ್ಲಿ ಇದೇ ಅಲಹಾಬಾದ್ ಹೈಕೋರ್ಟ್, 21 ವರ್ಷದ ಹಿಂದೂ ಯುವತಿ ಶಿಖಾ ತನ್ನ ಮುಸ್ಲಿಂ ಪತಿಯೊಂದಿಗೆ ಮತ್ತೆ ಒಂದಾಗಲು ನೆರವು ನೀಡಿತ್ತು. ‘ಒಬ್ಬ ವಯಸ್ಕ ಮಹಿಳೆ ತನ್ನಿಷ್ಟದಂತೆ ಬದುಕುವ ಆಯ್ಕೆ ಹೊಂದಿದ್ದಾಳೆ. ಆಕೆ ಮೂರನೇ ವ್ಯಕ್ತಿಯ ಅಡೆತಡೆಗಳನ್ನು ಧಿಕ್ಕರಿಸಿ, ತನ್ನ ಆಯ್ಕೆಯಂತೆ ಮುಕ್ತವಾಗಿ ಮುನ್ನಡೆಯುವ ಸ್ವಾತಂತ್ರ್ಯ ಹೊಂದಿದ್ದಾಳೆ’ ಎಂದು ಪೀಠ ಅಭಿಪ್ರಾಯ ಪಟ್ಟಿತ್ತು.

ಡಿಸೆಂಬರ್ 7ರಂದು ಚೀಫ್ ಮ್ಯಾಜಿಸ್ಟ್ರೇಟ್ ಪೀಠವು ಶಿಖಾ ಅವರನ್ನು ಮಕ್ಕಳ ಕಲ್ಯಾಣ ಸಮಿತಿಯ ಆಶ್ರಯದಲ್ಲಿಟ್ಟು, ಆಕೆ ತನ್ನ ಪೋಷಕರ ಮನೆಯಲ್ಲಿ ವಾಸಿಸಲು ವ್ಯವಸ್ಥೆ ಮಾಡಲು ಸೂಚಿಸಿತ್ತು. ಆದರೆ ಅಲಹಾಬಾದ್ ಹೈಕೋರ್ಟ್ ಶಿಖಾ ತನ್ನ ಮುಸ್ಲಿಂ ಪತಿಯೊಂದಿಗೆ ಮತ್ತೆ ಒಂದಾಗುವಂತೆ ಮಾಡಿತ್ತು.

ಮತಾಂತರ ವಿರೋಧಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಅಲಹಾಬಾದ್ ಹೈಕೋರ್ಟ್ ಜನೆವರಿ 15ರಂದು ಕೈಗೆತ್ತಿಕೊಳ್ಳಲಿದೆ.


ಇದನ್ನೂ ಓದಿ: ಲವ್ ಜಿಹಾದ್ ಎಂಬ ಕಪೋಲಕಲ್ಪಿತ: ಮತಾಂತರ ವಿರೋಧ ಕಾಯ್ದೆಯ ಅವಾಂತರ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...