Homeಮುಖಪುಟ‘ಹಸ್ತಕ್ಷೇಪ ಮಾಡುವ ಹಕ್ಕು ಯಾರಿಗೂ ಇಲ್ಲ’: ಅಂತರ್‌ಧರ್ಮೀಯ ಮದುವೆ ಎತ್ತಿ ಹಿಡಿದ ಅಲಹಾಬಾದ್ ಹೈಕೋರ್ಟ್

‘ಹಸ್ತಕ್ಷೇಪ ಮಾಡುವ ಹಕ್ಕು ಯಾರಿಗೂ ಇಲ್ಲ’: ಅಂತರ್‌ಧರ್ಮೀಯ ಮದುವೆ ಎತ್ತಿ ಹಿಡಿದ ಅಲಹಾಬಾದ್ ಹೈಕೋರ್ಟ್

ಹಿಂದೆಯೂ ಉತ್ತರಪ್ರದೇಶದಲ್ಲಿ ಬಲವಂತದ ಮತಾಂತರ ಕಾನೂನಿನಿಂದ ಕಿರುಕುಳಕ್ಕೆ ಒಳಗಾದ ಅಂತರ್‌ಧರ್ಮೀಯ ದಂಪತಿಗಳ ನೆರವಿಗೆ ಈ ಕೋರ್ಟ್ ಮುಂದಾಗಿತ್ತು

- Advertisement -
- Advertisement -

ಹಲವಾರು ಸಂದರ್ಭಗಳಲ್ಲಿ ಉತ್ತರಪ್ರದೇಶದ ಅಲಹಾಬಾದ್ ಹೈಕೋರ್ಟ್ ಅಂತರ್‌ಜಾತಿ ಮತ್ತು ಅಂತರ್ ಧರ್ಮೀಯ ಮದುವೆಗಳನ್ನು ಎತ್ತಿ ಹಿಡಿದು ದಂಪತಿಗಳಿಗೆ ರಕ್ಷಣೆ ನೀಡಿದೆ. ಮತಾಂತರ ವಿರೋಧಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಜನೆವರಿ 15ರಂದು ಕೈಗೆತ್ತಿಕೊಳ್ಳಲಿದೆ.

ಇದೇನೂ ಮೊದಲ ಸಲವಲ್ಲ, ಹಲವಾರು ಸಲ ಅಂತರ್‌ಧರ್ಮೀಯ ದಂಪತಿಗಳ ಪರ ಅಲಹಾಬಾದ್ ಹೈಕೋರ್ಟ್ ನಿಂತಿದೆ. ಮತಾಂತರ ವಿರೋಧಿ ಕಾನೂನು ಸೃಷ್ಟಿಸುತ್ತಿರುವ ಗೊಂದಲ-ಕಿರಿಕಿರಿಯ ಪ್ರಕರಣಗಳಲ್ಲಿ ಈ ಕೋರ್ಟ್ ಅಂತರ್‌ಧರ್ಮೀಯ ಮದುವೆಗಳ ಪರ ನಿಂತಿದೆ.

ಬುಧವಾರ ಕೂಡ, ಹೊಸ ಕಾನೂನಿನಿಂದ ಅನಗತ್ಯ ಕಿರುಕುಳಕ್ಕೆ ಒಳಗಾದ ಅಂತರ್‌ಧರ್ಮೀಯ ದಂಪತಿಗಳ ಪರ ನಿಂತ ಹೈಕೋರ್ಟ್, ‘ಇವರ ಶಾಂತಿಯುತ ಬದುಕಿನಲ್ಲಿ ಹಸ್ತಕ್ಷೇಪ ಮಾಡುವ ಅರ್ಹತೆ, ಅಧಿಕಾರ ಯಾರಿಗೂ ಇಲ್ಲ’ ಎಂದು ಸ್ಪಷ್ಟವಾಗಿ ಹೇಳಿದೆ ಎಂದು ಲೈವ್‌ಲಾ ವರದಿ ಮಾಡಿದೆ.

ಮುಸ್ಲಿಂ ಪುರುಷ ಮತ್ತು ಅವರ ಹಿಂದೂ ಪತ್ನಿ (ನಂತರದಲ್ಲಿ ಇವರು ಸ್ವ ಇಚ್ಛೆಯಿಂದ ಇಸ್ಲಾಂಗೆ ಮತಾಂತರಗೊಂಡಿದ್ದಾರೆ) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸರಳ್ ಶ್ರೀವಾಸ್ತವ ನೇತೃತ್ವದ ಹೈಕೋರ್ಟ್ ಪೀಠ ಈ ಕೆಳಗಿನಂತೆ ಅಭಿಪ್ರಾಯಪಟ್ಟಿದೆ.

‘ಮೆಜಾರಿಟಿ ವಯಸ್ಸು ತಲುಪಿದ ಇಬ್ಬರು ವ್ಯಕ್ತಿಗಳು ಜೊತೆಯಾಗಿ ಬದುಕುತ್ತಿದ್ದರೆ, ಅವರ ಶಾಂತಿಯುತ ಬದುಕಿನಲ್ಲಿ ಹಸ್ತಕ್ಷೇಪ ಮಾಡುವ ಅರ್ಹತೆ/ಅಧಿಕಾರ ಯಾರಿಗೂ ಇಲ್ಲ ಎಂದು ಈ ಕೋರ್ಟ್ ಮತ್ತೆ ಮತ್ತೆ ಸ್ಪಷ್ಟಪಡಿಸಿದೆ…’

ತಾವು ವಯಸ್ಕರಾಗಿದ್ದೇವೆ (ಮೆಜಾರಿಟಿ ವಯಸ್ಸಿನವರು) ಎಂದು ಹೇಳಿದ್ದ ದಂಪತಿ ತಾವು, 1997 ಮತ್ತು 1998ರಲ್ಲಿ ಜನಿಸಿರುವ ದಾಖಲೆಗಳನ್ನು ಕೋರ್ಟ್‌ಗೆ ಒದಗಿಸಿದ್ದರು.

‘ಅಗತ್ಯ ಬಿದ್ದರೆ ಈ ದಂಪತಿಗೆ ಸೂಕ್ತ ರಕ್ಷಣೆ ನೀಡಿ’ ಎಂದು ಬಿಜ್ನೋರ್ ಎಸ್‌ಪಿಗೆ ಸೂಚಿಸಿದ ನ್ಯಾ. ಶ್ರೀವಾಸ್ತವ್, ಫೆಬ್ರುವರಿ 8ಕ್ಕೆ ವಿಚಾರಣೆ ಮುಂದೂಡಿದರು ಎಂದು ಲೈವ್ ಲಾ ವರದಿ ಮಾಡಿದೆ. ‘ಪತ್ನಿ ಹೆಸರಲ್ಲಿ 3 ಲಕ್ಷ ರೂ. ಡಿಪಾಸಿಟ್ ಮಾಡಲು ಕೋರ್ಟ್ ಪತಿಗೆ ಸೂಚಿಸಿದ್ದು, ಇದು ಯಾವ ಕಾರಣಕ್ಕೆ ಎಂಬುದು ಸ್ಪಷ್ಟವಾಗಿಲ್ಲ.

ಈ ವಿಚಾರಣೆ ಸಂದರ್ಭದಲ್ಲಿ ಹೈಕೋರ್ಟ್ ಸುಪ್ರಿಂಕೋರ್ಟ್‌ನ ಎರಡು ತೀರ್ಪುಗಳನ್ನು ಉಲ್ಲೇಖಿಸಿದೆ. ಅಂತರ್‌ಧರ್ಮೀಯ ಮದುವೆ ವಿರೋಧಿಸಿ ಮಹಿಳೆಯ ಪಾಲಕರು ಸಲ್ಲಿಸಿದ ಅರ್ಜಿ ಪ್ರಕರಣದ ತೀರ್ಪು(2006) ಮತ್ತು ಸಂಬಂಧವೊಂದಕ್ಕಾಗಿ ಮಹಿಳೆಯನ್ನು ಆ ಕುಟುಂಬದವರೇ ಕೊಂದ ಪ್ರಕರಣದ ತೀರ್ಪು (2008)ಗಳನ್ನು ಕೋರ್ಟ್ ಉಲ್ಲೇಖಿಸಿದೆ.

2006ರಲ್ಲಿ ಸುಪ್ರೀಂ ಕೋರ್ಟಿನಲ್ಲಿ ನ್ಯಾ. ಮಾರ್ಖಂಡೇಯ ಖಟ್ಜು ತೀರ್ಪಿನಲ್ಲಿ ಉಲ್ಲೇಖಿಸಿದ ಸಾಲುಗಳನ್ನು ಅಲಹಾಬಾದ್ ಹೈಕೋರ್ಟ್ ಉಲ್ಲೇಖಿಸಿದೆ: ‘ಇದು ಮುಕ್ತ ಮತ್ತು ಪ್ರಜಾಪ್ರಭುತ್ವ ದೇಶವಾಗಿದ್ದು, ಮೇಜರ್ ವಯಸ್ಸು ತಲುಪಿದ ಯಾರೇ ಆಗಲಿ ತಮಗೆ ಇಷ್ಟವಾದವರನ್ನು ಮದುವೆ ಆಗಬಹುದು. ಹುಡುಗ ಅಥವಾ ಹುಡುಗಿಯ ಪೋಷಕರಿಗೆ ಇಂತಹ ಅಂತರ್‌ಜಾತಿ ಅಥವಾ ಅಂತರ್‌ಧರ್ಮೀಯ ಮದುವೆ ಇಷ್ಟವಾಗದಿದ್ದಲ್ಲಿ, ಅವರು ಹೆಚ್ಚೆಂದರೆ ಆ ದಂಪತಿಯ ಜೊತೆ ಸಾಮಾಜಿಕ ಸಂಪರ್ಕ ಕಡಿದುಕೊಳ್ಳಬಹುದು, ಆದರೆ ಆ ದಂಪತಿಗೆ ಬೆದರಿಕೆ ಹಾಕುವುದನ್ನಾಗಲಿ, ಅವರಿಗೆ ಹಿಂಸಿಸುವುದನ್ನಾಗಲಿ, ಹಿಂಸೆಗೆ ಪ್ರಚೋದನೆ ಮಾಡುವುದನ್ನಾಗಲಿ ಮಾಡುವಂತಿಲ್ಲ….’

ಒತ್ತಾಯದ ಮತಾಂತರ ತಡೆಗೆ ಇತ್ತೀಚೆಗೆ ಉತ್ತರಪ್ರದೇಶ ಸರ್ಕಾರ ಜಾರಿಗೆ ತಂದ ಕಾಯ್ದೆಯ ಹಿನ್ನೆಲೆಯಲ್ಲಿ ಅಲಹಾಬಾದ್ ಹೈಕೋರ್ಟಿನ ಈ ಅಭಿಪ್ರಾಯ ಮಹತ್ವದ್ದಾಗಿದೆ. ವಾಸ್ತವದಲ್ಲಿ ಈ ಕಾಯ್ದೆ ಸಂಘ ಪರಿವಾರದ ‘ಲವ್ ಜಿಹಾದ್’ ಕತೆಗೆ ಕಾನೂನಾತ್ಮಕ ಬೆಂಬಲ ಕೊಡಲು ಜಾರಿಗೆ ಬಂದಿದೆ. ‘ಮದುವೆ ಮೂಲಕ ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ಬಲವಂತದ ಮತಾಂತರ ಮಾಡುತ್ತಾರೆ’ ಎಂಬ ಕಪೋಕಲ್ಪಿತ ಸಂಚನ್ನು ಲವ್ ಜಿಹಾದ್ ಸೂಚಿಸುತ್ತದೆ.

ಕಾಯ್ದೆ ಅಂಗೀಕಾರದ ನಂತರ ಹಲವಾರು ಎಫ್‌ಐಆರ್ ದಾಖಲಾಗಿವೆ ಮತ್ತು ಹಲವಾರು ಸಂಶಯಾಸ್ಪದ ಬಂಧನಗಳು ನಡೆದಿವೆ. 2020ರ ನವೆಂಬರ್ ಒಂದರಲ್ಲೇ ಅಲಹಾಬಾದ್ ಹೈಕೋರ್ಟ್, 125 ಅಂತರ್‌ಧರ್ಮಿಯ ದಂಪತಿಗಳಿಗೆ ರಕ್ಷಣೆ ನೀಡಲು ಆದೇಶಿಸಿದೆ. ಆ ತಿಂಗಳಲ್ಲೇ ಏಕ ನ್ಯಾಯಾಧೀಶರ ಪೀಠವೊಂದು, ‘ಅಂತರ್‌ಧರ್ಮೀಯ ಮದುವೆಗಳು ಮತಾಂತರದ ಉದ್ದೇಶಕ್ಕೇ ನಡೆಯುತ್ತವೆ’ ಎಂದು ಪ್ರಕಟಿಸಿದ ನಿರ್ಧಾರವನ್ನು ಖಂಡಿಸಿದ್ದ ಹೈಕೋರ್ಟ್, ಇದು ಅಸಮ್ಮತ ನಿರ್ಧಾರವಾಗಿದ್ದು, ಈ ನಿರ್ಧಾರ ‘bad in law’ ಎಂದು ಟೀಕಿಸಿತ್ತು.

ಡಿಸೆಂಬರ್‌ನಲ್ಲಿ ಇದೇ ಅಲಹಾಬಾದ್ ಹೈಕೋರ್ಟ್, 21 ವರ್ಷದ ಹಿಂದೂ ಯುವತಿ ಶಿಖಾ ತನ್ನ ಮುಸ್ಲಿಂ ಪತಿಯೊಂದಿಗೆ ಮತ್ತೆ ಒಂದಾಗಲು ನೆರವು ನೀಡಿತ್ತು. ‘ಒಬ್ಬ ವಯಸ್ಕ ಮಹಿಳೆ ತನ್ನಿಷ್ಟದಂತೆ ಬದುಕುವ ಆಯ್ಕೆ ಹೊಂದಿದ್ದಾಳೆ. ಆಕೆ ಮೂರನೇ ವ್ಯಕ್ತಿಯ ಅಡೆತಡೆಗಳನ್ನು ಧಿಕ್ಕರಿಸಿ, ತನ್ನ ಆಯ್ಕೆಯಂತೆ ಮುಕ್ತವಾಗಿ ಮುನ್ನಡೆಯುವ ಸ್ವಾತಂತ್ರ್ಯ ಹೊಂದಿದ್ದಾಳೆ’ ಎಂದು ಪೀಠ ಅಭಿಪ್ರಾಯ ಪಟ್ಟಿತ್ತು.

ಡಿಸೆಂಬರ್ 7ರಂದು ಚೀಫ್ ಮ್ಯಾಜಿಸ್ಟ್ರೇಟ್ ಪೀಠವು ಶಿಖಾ ಅವರನ್ನು ಮಕ್ಕಳ ಕಲ್ಯಾಣ ಸಮಿತಿಯ ಆಶ್ರಯದಲ್ಲಿಟ್ಟು, ಆಕೆ ತನ್ನ ಪೋಷಕರ ಮನೆಯಲ್ಲಿ ವಾಸಿಸಲು ವ್ಯವಸ್ಥೆ ಮಾಡಲು ಸೂಚಿಸಿತ್ತು. ಆದರೆ ಅಲಹಾಬಾದ್ ಹೈಕೋರ್ಟ್ ಶಿಖಾ ತನ್ನ ಮುಸ್ಲಿಂ ಪತಿಯೊಂದಿಗೆ ಮತ್ತೆ ಒಂದಾಗುವಂತೆ ಮಾಡಿತ್ತು.

ಮತಾಂತರ ವಿರೋಧಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಅಲಹಾಬಾದ್ ಹೈಕೋರ್ಟ್ ಜನೆವರಿ 15ರಂದು ಕೈಗೆತ್ತಿಕೊಳ್ಳಲಿದೆ.


ಇದನ್ನೂ ಓದಿ: ಲವ್ ಜಿಹಾದ್ ಎಂಬ ಕಪೋಲಕಲ್ಪಿತ: ಮತಾಂತರ ವಿರೋಧ ಕಾಯ್ದೆಯ ಅವಾಂತರ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....