Homeಮುಖಪುಟ‘ಹಸ್ತಕ್ಷೇಪ ಮಾಡುವ ಹಕ್ಕು ಯಾರಿಗೂ ಇಲ್ಲ’: ಅಂತರ್‌ಧರ್ಮೀಯ ಮದುವೆ ಎತ್ತಿ ಹಿಡಿದ ಅಲಹಾಬಾದ್ ಹೈಕೋರ್ಟ್

‘ಹಸ್ತಕ್ಷೇಪ ಮಾಡುವ ಹಕ್ಕು ಯಾರಿಗೂ ಇಲ್ಲ’: ಅಂತರ್‌ಧರ್ಮೀಯ ಮದುವೆ ಎತ್ತಿ ಹಿಡಿದ ಅಲಹಾಬಾದ್ ಹೈಕೋರ್ಟ್

ಹಿಂದೆಯೂ ಉತ್ತರಪ್ರದೇಶದಲ್ಲಿ ಬಲವಂತದ ಮತಾಂತರ ಕಾನೂನಿನಿಂದ ಕಿರುಕುಳಕ್ಕೆ ಒಳಗಾದ ಅಂತರ್‌ಧರ್ಮೀಯ ದಂಪತಿಗಳ ನೆರವಿಗೆ ಈ ಕೋರ್ಟ್ ಮುಂದಾಗಿತ್ತು

- Advertisement -
- Advertisement -

ಹಲವಾರು ಸಂದರ್ಭಗಳಲ್ಲಿ ಉತ್ತರಪ್ರದೇಶದ ಅಲಹಾಬಾದ್ ಹೈಕೋರ್ಟ್ ಅಂತರ್‌ಜಾತಿ ಮತ್ತು ಅಂತರ್ ಧರ್ಮೀಯ ಮದುವೆಗಳನ್ನು ಎತ್ತಿ ಹಿಡಿದು ದಂಪತಿಗಳಿಗೆ ರಕ್ಷಣೆ ನೀಡಿದೆ. ಮತಾಂತರ ವಿರೋಧಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಜನೆವರಿ 15ರಂದು ಕೈಗೆತ್ತಿಕೊಳ್ಳಲಿದೆ.

ಇದೇನೂ ಮೊದಲ ಸಲವಲ್ಲ, ಹಲವಾರು ಸಲ ಅಂತರ್‌ಧರ್ಮೀಯ ದಂಪತಿಗಳ ಪರ ಅಲಹಾಬಾದ್ ಹೈಕೋರ್ಟ್ ನಿಂತಿದೆ. ಮತಾಂತರ ವಿರೋಧಿ ಕಾನೂನು ಸೃಷ್ಟಿಸುತ್ತಿರುವ ಗೊಂದಲ-ಕಿರಿಕಿರಿಯ ಪ್ರಕರಣಗಳಲ್ಲಿ ಈ ಕೋರ್ಟ್ ಅಂತರ್‌ಧರ್ಮೀಯ ಮದುವೆಗಳ ಪರ ನಿಂತಿದೆ.

ಬುಧವಾರ ಕೂಡ, ಹೊಸ ಕಾನೂನಿನಿಂದ ಅನಗತ್ಯ ಕಿರುಕುಳಕ್ಕೆ ಒಳಗಾದ ಅಂತರ್‌ಧರ್ಮೀಯ ದಂಪತಿಗಳ ಪರ ನಿಂತ ಹೈಕೋರ್ಟ್, ‘ಇವರ ಶಾಂತಿಯುತ ಬದುಕಿನಲ್ಲಿ ಹಸ್ತಕ್ಷೇಪ ಮಾಡುವ ಅರ್ಹತೆ, ಅಧಿಕಾರ ಯಾರಿಗೂ ಇಲ್ಲ’ ಎಂದು ಸ್ಪಷ್ಟವಾಗಿ ಹೇಳಿದೆ ಎಂದು ಲೈವ್‌ಲಾ ವರದಿ ಮಾಡಿದೆ.

ಮುಸ್ಲಿಂ ಪುರುಷ ಮತ್ತು ಅವರ ಹಿಂದೂ ಪತ್ನಿ (ನಂತರದಲ್ಲಿ ಇವರು ಸ್ವ ಇಚ್ಛೆಯಿಂದ ಇಸ್ಲಾಂಗೆ ಮತಾಂತರಗೊಂಡಿದ್ದಾರೆ) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸರಳ್ ಶ್ರೀವಾಸ್ತವ ನೇತೃತ್ವದ ಹೈಕೋರ್ಟ್ ಪೀಠ ಈ ಕೆಳಗಿನಂತೆ ಅಭಿಪ್ರಾಯಪಟ್ಟಿದೆ.

‘ಮೆಜಾರಿಟಿ ವಯಸ್ಸು ತಲುಪಿದ ಇಬ್ಬರು ವ್ಯಕ್ತಿಗಳು ಜೊತೆಯಾಗಿ ಬದುಕುತ್ತಿದ್ದರೆ, ಅವರ ಶಾಂತಿಯುತ ಬದುಕಿನಲ್ಲಿ ಹಸ್ತಕ್ಷೇಪ ಮಾಡುವ ಅರ್ಹತೆ/ಅಧಿಕಾರ ಯಾರಿಗೂ ಇಲ್ಲ ಎಂದು ಈ ಕೋರ್ಟ್ ಮತ್ತೆ ಮತ್ತೆ ಸ್ಪಷ್ಟಪಡಿಸಿದೆ…’

ತಾವು ವಯಸ್ಕರಾಗಿದ್ದೇವೆ (ಮೆಜಾರಿಟಿ ವಯಸ್ಸಿನವರು) ಎಂದು ಹೇಳಿದ್ದ ದಂಪತಿ ತಾವು, 1997 ಮತ್ತು 1998ರಲ್ಲಿ ಜನಿಸಿರುವ ದಾಖಲೆಗಳನ್ನು ಕೋರ್ಟ್‌ಗೆ ಒದಗಿಸಿದ್ದರು.

‘ಅಗತ್ಯ ಬಿದ್ದರೆ ಈ ದಂಪತಿಗೆ ಸೂಕ್ತ ರಕ್ಷಣೆ ನೀಡಿ’ ಎಂದು ಬಿಜ್ನೋರ್ ಎಸ್‌ಪಿಗೆ ಸೂಚಿಸಿದ ನ್ಯಾ. ಶ್ರೀವಾಸ್ತವ್, ಫೆಬ್ರುವರಿ 8ಕ್ಕೆ ವಿಚಾರಣೆ ಮುಂದೂಡಿದರು ಎಂದು ಲೈವ್ ಲಾ ವರದಿ ಮಾಡಿದೆ. ‘ಪತ್ನಿ ಹೆಸರಲ್ಲಿ 3 ಲಕ್ಷ ರೂ. ಡಿಪಾಸಿಟ್ ಮಾಡಲು ಕೋರ್ಟ್ ಪತಿಗೆ ಸೂಚಿಸಿದ್ದು, ಇದು ಯಾವ ಕಾರಣಕ್ಕೆ ಎಂಬುದು ಸ್ಪಷ್ಟವಾಗಿಲ್ಲ.

ಈ ವಿಚಾರಣೆ ಸಂದರ್ಭದಲ್ಲಿ ಹೈಕೋರ್ಟ್ ಸುಪ್ರಿಂಕೋರ್ಟ್‌ನ ಎರಡು ತೀರ್ಪುಗಳನ್ನು ಉಲ್ಲೇಖಿಸಿದೆ. ಅಂತರ್‌ಧರ್ಮೀಯ ಮದುವೆ ವಿರೋಧಿಸಿ ಮಹಿಳೆಯ ಪಾಲಕರು ಸಲ್ಲಿಸಿದ ಅರ್ಜಿ ಪ್ರಕರಣದ ತೀರ್ಪು(2006) ಮತ್ತು ಸಂಬಂಧವೊಂದಕ್ಕಾಗಿ ಮಹಿಳೆಯನ್ನು ಆ ಕುಟುಂಬದವರೇ ಕೊಂದ ಪ್ರಕರಣದ ತೀರ್ಪು (2008)ಗಳನ್ನು ಕೋರ್ಟ್ ಉಲ್ಲೇಖಿಸಿದೆ.

2006ರಲ್ಲಿ ಸುಪ್ರೀಂ ಕೋರ್ಟಿನಲ್ಲಿ ನ್ಯಾ. ಮಾರ್ಖಂಡೇಯ ಖಟ್ಜು ತೀರ್ಪಿನಲ್ಲಿ ಉಲ್ಲೇಖಿಸಿದ ಸಾಲುಗಳನ್ನು ಅಲಹಾಬಾದ್ ಹೈಕೋರ್ಟ್ ಉಲ್ಲೇಖಿಸಿದೆ: ‘ಇದು ಮುಕ್ತ ಮತ್ತು ಪ್ರಜಾಪ್ರಭುತ್ವ ದೇಶವಾಗಿದ್ದು, ಮೇಜರ್ ವಯಸ್ಸು ತಲುಪಿದ ಯಾರೇ ಆಗಲಿ ತಮಗೆ ಇಷ್ಟವಾದವರನ್ನು ಮದುವೆ ಆಗಬಹುದು. ಹುಡುಗ ಅಥವಾ ಹುಡುಗಿಯ ಪೋಷಕರಿಗೆ ಇಂತಹ ಅಂತರ್‌ಜಾತಿ ಅಥವಾ ಅಂತರ್‌ಧರ್ಮೀಯ ಮದುವೆ ಇಷ್ಟವಾಗದಿದ್ದಲ್ಲಿ, ಅವರು ಹೆಚ್ಚೆಂದರೆ ಆ ದಂಪತಿಯ ಜೊತೆ ಸಾಮಾಜಿಕ ಸಂಪರ್ಕ ಕಡಿದುಕೊಳ್ಳಬಹುದು, ಆದರೆ ಆ ದಂಪತಿಗೆ ಬೆದರಿಕೆ ಹಾಕುವುದನ್ನಾಗಲಿ, ಅವರಿಗೆ ಹಿಂಸಿಸುವುದನ್ನಾಗಲಿ, ಹಿಂಸೆಗೆ ಪ್ರಚೋದನೆ ಮಾಡುವುದನ್ನಾಗಲಿ ಮಾಡುವಂತಿಲ್ಲ….’

ಒತ್ತಾಯದ ಮತಾಂತರ ತಡೆಗೆ ಇತ್ತೀಚೆಗೆ ಉತ್ತರಪ್ರದೇಶ ಸರ್ಕಾರ ಜಾರಿಗೆ ತಂದ ಕಾಯ್ದೆಯ ಹಿನ್ನೆಲೆಯಲ್ಲಿ ಅಲಹಾಬಾದ್ ಹೈಕೋರ್ಟಿನ ಈ ಅಭಿಪ್ರಾಯ ಮಹತ್ವದ್ದಾಗಿದೆ. ವಾಸ್ತವದಲ್ಲಿ ಈ ಕಾಯ್ದೆ ಸಂಘ ಪರಿವಾರದ ‘ಲವ್ ಜಿಹಾದ್’ ಕತೆಗೆ ಕಾನೂನಾತ್ಮಕ ಬೆಂಬಲ ಕೊಡಲು ಜಾರಿಗೆ ಬಂದಿದೆ. ‘ಮದುವೆ ಮೂಲಕ ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ಬಲವಂತದ ಮತಾಂತರ ಮಾಡುತ್ತಾರೆ’ ಎಂಬ ಕಪೋಕಲ್ಪಿತ ಸಂಚನ್ನು ಲವ್ ಜಿಹಾದ್ ಸೂಚಿಸುತ್ತದೆ.

ಕಾಯ್ದೆ ಅಂಗೀಕಾರದ ನಂತರ ಹಲವಾರು ಎಫ್‌ಐಆರ್ ದಾಖಲಾಗಿವೆ ಮತ್ತು ಹಲವಾರು ಸಂಶಯಾಸ್ಪದ ಬಂಧನಗಳು ನಡೆದಿವೆ. 2020ರ ನವೆಂಬರ್ ಒಂದರಲ್ಲೇ ಅಲಹಾಬಾದ್ ಹೈಕೋರ್ಟ್, 125 ಅಂತರ್‌ಧರ್ಮಿಯ ದಂಪತಿಗಳಿಗೆ ರಕ್ಷಣೆ ನೀಡಲು ಆದೇಶಿಸಿದೆ. ಆ ತಿಂಗಳಲ್ಲೇ ಏಕ ನ್ಯಾಯಾಧೀಶರ ಪೀಠವೊಂದು, ‘ಅಂತರ್‌ಧರ್ಮೀಯ ಮದುವೆಗಳು ಮತಾಂತರದ ಉದ್ದೇಶಕ್ಕೇ ನಡೆಯುತ್ತವೆ’ ಎಂದು ಪ್ರಕಟಿಸಿದ ನಿರ್ಧಾರವನ್ನು ಖಂಡಿಸಿದ್ದ ಹೈಕೋರ್ಟ್, ಇದು ಅಸಮ್ಮತ ನಿರ್ಧಾರವಾಗಿದ್ದು, ಈ ನಿರ್ಧಾರ ‘bad in law’ ಎಂದು ಟೀಕಿಸಿತ್ತು.

ಡಿಸೆಂಬರ್‌ನಲ್ಲಿ ಇದೇ ಅಲಹಾಬಾದ್ ಹೈಕೋರ್ಟ್, 21 ವರ್ಷದ ಹಿಂದೂ ಯುವತಿ ಶಿಖಾ ತನ್ನ ಮುಸ್ಲಿಂ ಪತಿಯೊಂದಿಗೆ ಮತ್ತೆ ಒಂದಾಗಲು ನೆರವು ನೀಡಿತ್ತು. ‘ಒಬ್ಬ ವಯಸ್ಕ ಮಹಿಳೆ ತನ್ನಿಷ್ಟದಂತೆ ಬದುಕುವ ಆಯ್ಕೆ ಹೊಂದಿದ್ದಾಳೆ. ಆಕೆ ಮೂರನೇ ವ್ಯಕ್ತಿಯ ಅಡೆತಡೆಗಳನ್ನು ಧಿಕ್ಕರಿಸಿ, ತನ್ನ ಆಯ್ಕೆಯಂತೆ ಮುಕ್ತವಾಗಿ ಮುನ್ನಡೆಯುವ ಸ್ವಾತಂತ್ರ್ಯ ಹೊಂದಿದ್ದಾಳೆ’ ಎಂದು ಪೀಠ ಅಭಿಪ್ರಾಯ ಪಟ್ಟಿತ್ತು.

ಡಿಸೆಂಬರ್ 7ರಂದು ಚೀಫ್ ಮ್ಯಾಜಿಸ್ಟ್ರೇಟ್ ಪೀಠವು ಶಿಖಾ ಅವರನ್ನು ಮಕ್ಕಳ ಕಲ್ಯಾಣ ಸಮಿತಿಯ ಆಶ್ರಯದಲ್ಲಿಟ್ಟು, ಆಕೆ ತನ್ನ ಪೋಷಕರ ಮನೆಯಲ್ಲಿ ವಾಸಿಸಲು ವ್ಯವಸ್ಥೆ ಮಾಡಲು ಸೂಚಿಸಿತ್ತು. ಆದರೆ ಅಲಹಾಬಾದ್ ಹೈಕೋರ್ಟ್ ಶಿಖಾ ತನ್ನ ಮುಸ್ಲಿಂ ಪತಿಯೊಂದಿಗೆ ಮತ್ತೆ ಒಂದಾಗುವಂತೆ ಮಾಡಿತ್ತು.

ಮತಾಂತರ ವಿರೋಧಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಅಲಹಾಬಾದ್ ಹೈಕೋರ್ಟ್ ಜನೆವರಿ 15ರಂದು ಕೈಗೆತ್ತಿಕೊಳ್ಳಲಿದೆ.


ಇದನ್ನೂ ಓದಿ: ಲವ್ ಜಿಹಾದ್ ಎಂಬ ಕಪೋಲಕಲ್ಪಿತ: ಮತಾಂತರ ವಿರೋಧ ಕಾಯ್ದೆಯ ಅವಾಂತರ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...