Homeಮುಖಪುಟ‘ಹಸ್ತಕ್ಷೇಪ ಮಾಡುವ ಹಕ್ಕು ಯಾರಿಗೂ ಇಲ್ಲ’: ಅಂತರ್‌ಧರ್ಮೀಯ ಮದುವೆ ಎತ್ತಿ ಹಿಡಿದ ಅಲಹಾಬಾದ್ ಹೈಕೋರ್ಟ್

‘ಹಸ್ತಕ್ಷೇಪ ಮಾಡುವ ಹಕ್ಕು ಯಾರಿಗೂ ಇಲ್ಲ’: ಅಂತರ್‌ಧರ್ಮೀಯ ಮದುವೆ ಎತ್ತಿ ಹಿಡಿದ ಅಲಹಾಬಾದ್ ಹೈಕೋರ್ಟ್

ಹಿಂದೆಯೂ ಉತ್ತರಪ್ರದೇಶದಲ್ಲಿ ಬಲವಂತದ ಮತಾಂತರ ಕಾನೂನಿನಿಂದ ಕಿರುಕುಳಕ್ಕೆ ಒಳಗಾದ ಅಂತರ್‌ಧರ್ಮೀಯ ದಂಪತಿಗಳ ನೆರವಿಗೆ ಈ ಕೋರ್ಟ್ ಮುಂದಾಗಿತ್ತು

- Advertisement -
- Advertisement -

ಹಲವಾರು ಸಂದರ್ಭಗಳಲ್ಲಿ ಉತ್ತರಪ್ರದೇಶದ ಅಲಹಾಬಾದ್ ಹೈಕೋರ್ಟ್ ಅಂತರ್‌ಜಾತಿ ಮತ್ತು ಅಂತರ್ ಧರ್ಮೀಯ ಮದುವೆಗಳನ್ನು ಎತ್ತಿ ಹಿಡಿದು ದಂಪತಿಗಳಿಗೆ ರಕ್ಷಣೆ ನೀಡಿದೆ. ಮತಾಂತರ ವಿರೋಧಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಜನೆವರಿ 15ರಂದು ಕೈಗೆತ್ತಿಕೊಳ್ಳಲಿದೆ.

ಇದೇನೂ ಮೊದಲ ಸಲವಲ್ಲ, ಹಲವಾರು ಸಲ ಅಂತರ್‌ಧರ್ಮೀಯ ದಂಪತಿಗಳ ಪರ ಅಲಹಾಬಾದ್ ಹೈಕೋರ್ಟ್ ನಿಂತಿದೆ. ಮತಾಂತರ ವಿರೋಧಿ ಕಾನೂನು ಸೃಷ್ಟಿಸುತ್ತಿರುವ ಗೊಂದಲ-ಕಿರಿಕಿರಿಯ ಪ್ರಕರಣಗಳಲ್ಲಿ ಈ ಕೋರ್ಟ್ ಅಂತರ್‌ಧರ್ಮೀಯ ಮದುವೆಗಳ ಪರ ನಿಂತಿದೆ.

ಬುಧವಾರ ಕೂಡ, ಹೊಸ ಕಾನೂನಿನಿಂದ ಅನಗತ್ಯ ಕಿರುಕುಳಕ್ಕೆ ಒಳಗಾದ ಅಂತರ್‌ಧರ್ಮೀಯ ದಂಪತಿಗಳ ಪರ ನಿಂತ ಹೈಕೋರ್ಟ್, ‘ಇವರ ಶಾಂತಿಯುತ ಬದುಕಿನಲ್ಲಿ ಹಸ್ತಕ್ಷೇಪ ಮಾಡುವ ಅರ್ಹತೆ, ಅಧಿಕಾರ ಯಾರಿಗೂ ಇಲ್ಲ’ ಎಂದು ಸ್ಪಷ್ಟವಾಗಿ ಹೇಳಿದೆ ಎಂದು ಲೈವ್‌ಲಾ ವರದಿ ಮಾಡಿದೆ.

ಮುಸ್ಲಿಂ ಪುರುಷ ಮತ್ತು ಅವರ ಹಿಂದೂ ಪತ್ನಿ (ನಂತರದಲ್ಲಿ ಇವರು ಸ್ವ ಇಚ್ಛೆಯಿಂದ ಇಸ್ಲಾಂಗೆ ಮತಾಂತರಗೊಂಡಿದ್ದಾರೆ) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸರಳ್ ಶ್ರೀವಾಸ್ತವ ನೇತೃತ್ವದ ಹೈಕೋರ್ಟ್ ಪೀಠ ಈ ಕೆಳಗಿನಂತೆ ಅಭಿಪ್ರಾಯಪಟ್ಟಿದೆ.

‘ಮೆಜಾರಿಟಿ ವಯಸ್ಸು ತಲುಪಿದ ಇಬ್ಬರು ವ್ಯಕ್ತಿಗಳು ಜೊತೆಯಾಗಿ ಬದುಕುತ್ತಿದ್ದರೆ, ಅವರ ಶಾಂತಿಯುತ ಬದುಕಿನಲ್ಲಿ ಹಸ್ತಕ್ಷೇಪ ಮಾಡುವ ಅರ್ಹತೆ/ಅಧಿಕಾರ ಯಾರಿಗೂ ಇಲ್ಲ ಎಂದು ಈ ಕೋರ್ಟ್ ಮತ್ತೆ ಮತ್ತೆ ಸ್ಪಷ್ಟಪಡಿಸಿದೆ…’

ತಾವು ವಯಸ್ಕರಾಗಿದ್ದೇವೆ (ಮೆಜಾರಿಟಿ ವಯಸ್ಸಿನವರು) ಎಂದು ಹೇಳಿದ್ದ ದಂಪತಿ ತಾವು, 1997 ಮತ್ತು 1998ರಲ್ಲಿ ಜನಿಸಿರುವ ದಾಖಲೆಗಳನ್ನು ಕೋರ್ಟ್‌ಗೆ ಒದಗಿಸಿದ್ದರು.

‘ಅಗತ್ಯ ಬಿದ್ದರೆ ಈ ದಂಪತಿಗೆ ಸೂಕ್ತ ರಕ್ಷಣೆ ನೀಡಿ’ ಎಂದು ಬಿಜ್ನೋರ್ ಎಸ್‌ಪಿಗೆ ಸೂಚಿಸಿದ ನ್ಯಾ. ಶ್ರೀವಾಸ್ತವ್, ಫೆಬ್ರುವರಿ 8ಕ್ಕೆ ವಿಚಾರಣೆ ಮುಂದೂಡಿದರು ಎಂದು ಲೈವ್ ಲಾ ವರದಿ ಮಾಡಿದೆ. ‘ಪತ್ನಿ ಹೆಸರಲ್ಲಿ 3 ಲಕ್ಷ ರೂ. ಡಿಪಾಸಿಟ್ ಮಾಡಲು ಕೋರ್ಟ್ ಪತಿಗೆ ಸೂಚಿಸಿದ್ದು, ಇದು ಯಾವ ಕಾರಣಕ್ಕೆ ಎಂಬುದು ಸ್ಪಷ್ಟವಾಗಿಲ್ಲ.

ಈ ವಿಚಾರಣೆ ಸಂದರ್ಭದಲ್ಲಿ ಹೈಕೋರ್ಟ್ ಸುಪ್ರಿಂಕೋರ್ಟ್‌ನ ಎರಡು ತೀರ್ಪುಗಳನ್ನು ಉಲ್ಲೇಖಿಸಿದೆ. ಅಂತರ್‌ಧರ್ಮೀಯ ಮದುವೆ ವಿರೋಧಿಸಿ ಮಹಿಳೆಯ ಪಾಲಕರು ಸಲ್ಲಿಸಿದ ಅರ್ಜಿ ಪ್ರಕರಣದ ತೀರ್ಪು(2006) ಮತ್ತು ಸಂಬಂಧವೊಂದಕ್ಕಾಗಿ ಮಹಿಳೆಯನ್ನು ಆ ಕುಟುಂಬದವರೇ ಕೊಂದ ಪ್ರಕರಣದ ತೀರ್ಪು (2008)ಗಳನ್ನು ಕೋರ್ಟ್ ಉಲ್ಲೇಖಿಸಿದೆ.

2006ರಲ್ಲಿ ಸುಪ್ರೀಂ ಕೋರ್ಟಿನಲ್ಲಿ ನ್ಯಾ. ಮಾರ್ಖಂಡೇಯ ಖಟ್ಜು ತೀರ್ಪಿನಲ್ಲಿ ಉಲ್ಲೇಖಿಸಿದ ಸಾಲುಗಳನ್ನು ಅಲಹಾಬಾದ್ ಹೈಕೋರ್ಟ್ ಉಲ್ಲೇಖಿಸಿದೆ: ‘ಇದು ಮುಕ್ತ ಮತ್ತು ಪ್ರಜಾಪ್ರಭುತ್ವ ದೇಶವಾಗಿದ್ದು, ಮೇಜರ್ ವಯಸ್ಸು ತಲುಪಿದ ಯಾರೇ ಆಗಲಿ ತಮಗೆ ಇಷ್ಟವಾದವರನ್ನು ಮದುವೆ ಆಗಬಹುದು. ಹುಡುಗ ಅಥವಾ ಹುಡುಗಿಯ ಪೋಷಕರಿಗೆ ಇಂತಹ ಅಂತರ್‌ಜಾತಿ ಅಥವಾ ಅಂತರ್‌ಧರ್ಮೀಯ ಮದುವೆ ಇಷ್ಟವಾಗದಿದ್ದಲ್ಲಿ, ಅವರು ಹೆಚ್ಚೆಂದರೆ ಆ ದಂಪತಿಯ ಜೊತೆ ಸಾಮಾಜಿಕ ಸಂಪರ್ಕ ಕಡಿದುಕೊಳ್ಳಬಹುದು, ಆದರೆ ಆ ದಂಪತಿಗೆ ಬೆದರಿಕೆ ಹಾಕುವುದನ್ನಾಗಲಿ, ಅವರಿಗೆ ಹಿಂಸಿಸುವುದನ್ನಾಗಲಿ, ಹಿಂಸೆಗೆ ಪ್ರಚೋದನೆ ಮಾಡುವುದನ್ನಾಗಲಿ ಮಾಡುವಂತಿಲ್ಲ….’

ಒತ್ತಾಯದ ಮತಾಂತರ ತಡೆಗೆ ಇತ್ತೀಚೆಗೆ ಉತ್ತರಪ್ರದೇಶ ಸರ್ಕಾರ ಜಾರಿಗೆ ತಂದ ಕಾಯ್ದೆಯ ಹಿನ್ನೆಲೆಯಲ್ಲಿ ಅಲಹಾಬಾದ್ ಹೈಕೋರ್ಟಿನ ಈ ಅಭಿಪ್ರಾಯ ಮಹತ್ವದ್ದಾಗಿದೆ. ವಾಸ್ತವದಲ್ಲಿ ಈ ಕಾಯ್ದೆ ಸಂಘ ಪರಿವಾರದ ‘ಲವ್ ಜಿಹಾದ್’ ಕತೆಗೆ ಕಾನೂನಾತ್ಮಕ ಬೆಂಬಲ ಕೊಡಲು ಜಾರಿಗೆ ಬಂದಿದೆ. ‘ಮದುವೆ ಮೂಲಕ ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ಬಲವಂತದ ಮತಾಂತರ ಮಾಡುತ್ತಾರೆ’ ಎಂಬ ಕಪೋಕಲ್ಪಿತ ಸಂಚನ್ನು ಲವ್ ಜಿಹಾದ್ ಸೂಚಿಸುತ್ತದೆ.

ಕಾಯ್ದೆ ಅಂಗೀಕಾರದ ನಂತರ ಹಲವಾರು ಎಫ್‌ಐಆರ್ ದಾಖಲಾಗಿವೆ ಮತ್ತು ಹಲವಾರು ಸಂಶಯಾಸ್ಪದ ಬಂಧನಗಳು ನಡೆದಿವೆ. 2020ರ ನವೆಂಬರ್ ಒಂದರಲ್ಲೇ ಅಲಹಾಬಾದ್ ಹೈಕೋರ್ಟ್, 125 ಅಂತರ್‌ಧರ್ಮಿಯ ದಂಪತಿಗಳಿಗೆ ರಕ್ಷಣೆ ನೀಡಲು ಆದೇಶಿಸಿದೆ. ಆ ತಿಂಗಳಲ್ಲೇ ಏಕ ನ್ಯಾಯಾಧೀಶರ ಪೀಠವೊಂದು, ‘ಅಂತರ್‌ಧರ್ಮೀಯ ಮದುವೆಗಳು ಮತಾಂತರದ ಉದ್ದೇಶಕ್ಕೇ ನಡೆಯುತ್ತವೆ’ ಎಂದು ಪ್ರಕಟಿಸಿದ ನಿರ್ಧಾರವನ್ನು ಖಂಡಿಸಿದ್ದ ಹೈಕೋರ್ಟ್, ಇದು ಅಸಮ್ಮತ ನಿರ್ಧಾರವಾಗಿದ್ದು, ಈ ನಿರ್ಧಾರ ‘bad in law’ ಎಂದು ಟೀಕಿಸಿತ್ತು.

ಡಿಸೆಂಬರ್‌ನಲ್ಲಿ ಇದೇ ಅಲಹಾಬಾದ್ ಹೈಕೋರ್ಟ್, 21 ವರ್ಷದ ಹಿಂದೂ ಯುವತಿ ಶಿಖಾ ತನ್ನ ಮುಸ್ಲಿಂ ಪತಿಯೊಂದಿಗೆ ಮತ್ತೆ ಒಂದಾಗಲು ನೆರವು ನೀಡಿತ್ತು. ‘ಒಬ್ಬ ವಯಸ್ಕ ಮಹಿಳೆ ತನ್ನಿಷ್ಟದಂತೆ ಬದುಕುವ ಆಯ್ಕೆ ಹೊಂದಿದ್ದಾಳೆ. ಆಕೆ ಮೂರನೇ ವ್ಯಕ್ತಿಯ ಅಡೆತಡೆಗಳನ್ನು ಧಿಕ್ಕರಿಸಿ, ತನ್ನ ಆಯ್ಕೆಯಂತೆ ಮುಕ್ತವಾಗಿ ಮುನ್ನಡೆಯುವ ಸ್ವಾತಂತ್ರ್ಯ ಹೊಂದಿದ್ದಾಳೆ’ ಎಂದು ಪೀಠ ಅಭಿಪ್ರಾಯ ಪಟ್ಟಿತ್ತು.

ಡಿಸೆಂಬರ್ 7ರಂದು ಚೀಫ್ ಮ್ಯಾಜಿಸ್ಟ್ರೇಟ್ ಪೀಠವು ಶಿಖಾ ಅವರನ್ನು ಮಕ್ಕಳ ಕಲ್ಯಾಣ ಸಮಿತಿಯ ಆಶ್ರಯದಲ್ಲಿಟ್ಟು, ಆಕೆ ತನ್ನ ಪೋಷಕರ ಮನೆಯಲ್ಲಿ ವಾಸಿಸಲು ವ್ಯವಸ್ಥೆ ಮಾಡಲು ಸೂಚಿಸಿತ್ತು. ಆದರೆ ಅಲಹಾಬಾದ್ ಹೈಕೋರ್ಟ್ ಶಿಖಾ ತನ್ನ ಮುಸ್ಲಿಂ ಪತಿಯೊಂದಿಗೆ ಮತ್ತೆ ಒಂದಾಗುವಂತೆ ಮಾಡಿತ್ತು.

ಮತಾಂತರ ವಿರೋಧಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಅಲಹಾಬಾದ್ ಹೈಕೋರ್ಟ್ ಜನೆವರಿ 15ರಂದು ಕೈಗೆತ್ತಿಕೊಳ್ಳಲಿದೆ.


ಇದನ್ನೂ ಓದಿ: ಲವ್ ಜಿಹಾದ್ ಎಂಬ ಕಪೋಲಕಲ್ಪಿತ: ಮತಾಂತರ ವಿರೋಧ ಕಾಯ್ದೆಯ ಅವಾಂತರ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...