Homeಮುಖಪುಟ‘ಹಸ್ತಕ್ಷೇಪ ಮಾಡುವ ಹಕ್ಕು ಯಾರಿಗೂ ಇಲ್ಲ’: ಅಂತರ್‌ಧರ್ಮೀಯ ಮದುವೆ ಎತ್ತಿ ಹಿಡಿದ ಅಲಹಾಬಾದ್ ಹೈಕೋರ್ಟ್

‘ಹಸ್ತಕ್ಷೇಪ ಮಾಡುವ ಹಕ್ಕು ಯಾರಿಗೂ ಇಲ್ಲ’: ಅಂತರ್‌ಧರ್ಮೀಯ ಮದುವೆ ಎತ್ತಿ ಹಿಡಿದ ಅಲಹಾಬಾದ್ ಹೈಕೋರ್ಟ್

ಹಿಂದೆಯೂ ಉತ್ತರಪ್ರದೇಶದಲ್ಲಿ ಬಲವಂತದ ಮತಾಂತರ ಕಾನೂನಿನಿಂದ ಕಿರುಕುಳಕ್ಕೆ ಒಳಗಾದ ಅಂತರ್‌ಧರ್ಮೀಯ ದಂಪತಿಗಳ ನೆರವಿಗೆ ಈ ಕೋರ್ಟ್ ಮುಂದಾಗಿತ್ತು

- Advertisement -
- Advertisement -

ಹಲವಾರು ಸಂದರ್ಭಗಳಲ್ಲಿ ಉತ್ತರಪ್ರದೇಶದ ಅಲಹಾಬಾದ್ ಹೈಕೋರ್ಟ್ ಅಂತರ್‌ಜಾತಿ ಮತ್ತು ಅಂತರ್ ಧರ್ಮೀಯ ಮದುವೆಗಳನ್ನು ಎತ್ತಿ ಹಿಡಿದು ದಂಪತಿಗಳಿಗೆ ರಕ್ಷಣೆ ನೀಡಿದೆ. ಮತಾಂತರ ವಿರೋಧಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಜನೆವರಿ 15ರಂದು ಕೈಗೆತ್ತಿಕೊಳ್ಳಲಿದೆ.

ಇದೇನೂ ಮೊದಲ ಸಲವಲ್ಲ, ಹಲವಾರು ಸಲ ಅಂತರ್‌ಧರ್ಮೀಯ ದಂಪತಿಗಳ ಪರ ಅಲಹಾಬಾದ್ ಹೈಕೋರ್ಟ್ ನಿಂತಿದೆ. ಮತಾಂತರ ವಿರೋಧಿ ಕಾನೂನು ಸೃಷ್ಟಿಸುತ್ತಿರುವ ಗೊಂದಲ-ಕಿರಿಕಿರಿಯ ಪ್ರಕರಣಗಳಲ್ಲಿ ಈ ಕೋರ್ಟ್ ಅಂತರ್‌ಧರ್ಮೀಯ ಮದುವೆಗಳ ಪರ ನಿಂತಿದೆ.

ಬುಧವಾರ ಕೂಡ, ಹೊಸ ಕಾನೂನಿನಿಂದ ಅನಗತ್ಯ ಕಿರುಕುಳಕ್ಕೆ ಒಳಗಾದ ಅಂತರ್‌ಧರ್ಮೀಯ ದಂಪತಿಗಳ ಪರ ನಿಂತ ಹೈಕೋರ್ಟ್, ‘ಇವರ ಶಾಂತಿಯುತ ಬದುಕಿನಲ್ಲಿ ಹಸ್ತಕ್ಷೇಪ ಮಾಡುವ ಅರ್ಹತೆ, ಅಧಿಕಾರ ಯಾರಿಗೂ ಇಲ್ಲ’ ಎಂದು ಸ್ಪಷ್ಟವಾಗಿ ಹೇಳಿದೆ ಎಂದು ಲೈವ್‌ಲಾ ವರದಿ ಮಾಡಿದೆ.

ಮುಸ್ಲಿಂ ಪುರುಷ ಮತ್ತು ಅವರ ಹಿಂದೂ ಪತ್ನಿ (ನಂತರದಲ್ಲಿ ಇವರು ಸ್ವ ಇಚ್ಛೆಯಿಂದ ಇಸ್ಲಾಂಗೆ ಮತಾಂತರಗೊಂಡಿದ್ದಾರೆ) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸರಳ್ ಶ್ರೀವಾಸ್ತವ ನೇತೃತ್ವದ ಹೈಕೋರ್ಟ್ ಪೀಠ ಈ ಕೆಳಗಿನಂತೆ ಅಭಿಪ್ರಾಯಪಟ್ಟಿದೆ.

‘ಮೆಜಾರಿಟಿ ವಯಸ್ಸು ತಲುಪಿದ ಇಬ್ಬರು ವ್ಯಕ್ತಿಗಳು ಜೊತೆಯಾಗಿ ಬದುಕುತ್ತಿದ್ದರೆ, ಅವರ ಶಾಂತಿಯುತ ಬದುಕಿನಲ್ಲಿ ಹಸ್ತಕ್ಷೇಪ ಮಾಡುವ ಅರ್ಹತೆ/ಅಧಿಕಾರ ಯಾರಿಗೂ ಇಲ್ಲ ಎಂದು ಈ ಕೋರ್ಟ್ ಮತ್ತೆ ಮತ್ತೆ ಸ್ಪಷ್ಟಪಡಿಸಿದೆ…’

ತಾವು ವಯಸ್ಕರಾಗಿದ್ದೇವೆ (ಮೆಜಾರಿಟಿ ವಯಸ್ಸಿನವರು) ಎಂದು ಹೇಳಿದ್ದ ದಂಪತಿ ತಾವು, 1997 ಮತ್ತು 1998ರಲ್ಲಿ ಜನಿಸಿರುವ ದಾಖಲೆಗಳನ್ನು ಕೋರ್ಟ್‌ಗೆ ಒದಗಿಸಿದ್ದರು.

‘ಅಗತ್ಯ ಬಿದ್ದರೆ ಈ ದಂಪತಿಗೆ ಸೂಕ್ತ ರಕ್ಷಣೆ ನೀಡಿ’ ಎಂದು ಬಿಜ್ನೋರ್ ಎಸ್‌ಪಿಗೆ ಸೂಚಿಸಿದ ನ್ಯಾ. ಶ್ರೀವಾಸ್ತವ್, ಫೆಬ್ರುವರಿ 8ಕ್ಕೆ ವಿಚಾರಣೆ ಮುಂದೂಡಿದರು ಎಂದು ಲೈವ್ ಲಾ ವರದಿ ಮಾಡಿದೆ. ‘ಪತ್ನಿ ಹೆಸರಲ್ಲಿ 3 ಲಕ್ಷ ರೂ. ಡಿಪಾಸಿಟ್ ಮಾಡಲು ಕೋರ್ಟ್ ಪತಿಗೆ ಸೂಚಿಸಿದ್ದು, ಇದು ಯಾವ ಕಾರಣಕ್ಕೆ ಎಂಬುದು ಸ್ಪಷ್ಟವಾಗಿಲ್ಲ.

ಈ ವಿಚಾರಣೆ ಸಂದರ್ಭದಲ್ಲಿ ಹೈಕೋರ್ಟ್ ಸುಪ್ರಿಂಕೋರ್ಟ್‌ನ ಎರಡು ತೀರ್ಪುಗಳನ್ನು ಉಲ್ಲೇಖಿಸಿದೆ. ಅಂತರ್‌ಧರ್ಮೀಯ ಮದುವೆ ವಿರೋಧಿಸಿ ಮಹಿಳೆಯ ಪಾಲಕರು ಸಲ್ಲಿಸಿದ ಅರ್ಜಿ ಪ್ರಕರಣದ ತೀರ್ಪು(2006) ಮತ್ತು ಸಂಬಂಧವೊಂದಕ್ಕಾಗಿ ಮಹಿಳೆಯನ್ನು ಆ ಕುಟುಂಬದವರೇ ಕೊಂದ ಪ್ರಕರಣದ ತೀರ್ಪು (2008)ಗಳನ್ನು ಕೋರ್ಟ್ ಉಲ್ಲೇಖಿಸಿದೆ.

2006ರಲ್ಲಿ ಸುಪ್ರೀಂ ಕೋರ್ಟಿನಲ್ಲಿ ನ್ಯಾ. ಮಾರ್ಖಂಡೇಯ ಖಟ್ಜು ತೀರ್ಪಿನಲ್ಲಿ ಉಲ್ಲೇಖಿಸಿದ ಸಾಲುಗಳನ್ನು ಅಲಹಾಬಾದ್ ಹೈಕೋರ್ಟ್ ಉಲ್ಲೇಖಿಸಿದೆ: ‘ಇದು ಮುಕ್ತ ಮತ್ತು ಪ್ರಜಾಪ್ರಭುತ್ವ ದೇಶವಾಗಿದ್ದು, ಮೇಜರ್ ವಯಸ್ಸು ತಲುಪಿದ ಯಾರೇ ಆಗಲಿ ತಮಗೆ ಇಷ್ಟವಾದವರನ್ನು ಮದುವೆ ಆಗಬಹುದು. ಹುಡುಗ ಅಥವಾ ಹುಡುಗಿಯ ಪೋಷಕರಿಗೆ ಇಂತಹ ಅಂತರ್‌ಜಾತಿ ಅಥವಾ ಅಂತರ್‌ಧರ್ಮೀಯ ಮದುವೆ ಇಷ್ಟವಾಗದಿದ್ದಲ್ಲಿ, ಅವರು ಹೆಚ್ಚೆಂದರೆ ಆ ದಂಪತಿಯ ಜೊತೆ ಸಾಮಾಜಿಕ ಸಂಪರ್ಕ ಕಡಿದುಕೊಳ್ಳಬಹುದು, ಆದರೆ ಆ ದಂಪತಿಗೆ ಬೆದರಿಕೆ ಹಾಕುವುದನ್ನಾಗಲಿ, ಅವರಿಗೆ ಹಿಂಸಿಸುವುದನ್ನಾಗಲಿ, ಹಿಂಸೆಗೆ ಪ್ರಚೋದನೆ ಮಾಡುವುದನ್ನಾಗಲಿ ಮಾಡುವಂತಿಲ್ಲ….’

ಒತ್ತಾಯದ ಮತಾಂತರ ತಡೆಗೆ ಇತ್ತೀಚೆಗೆ ಉತ್ತರಪ್ರದೇಶ ಸರ್ಕಾರ ಜಾರಿಗೆ ತಂದ ಕಾಯ್ದೆಯ ಹಿನ್ನೆಲೆಯಲ್ಲಿ ಅಲಹಾಬಾದ್ ಹೈಕೋರ್ಟಿನ ಈ ಅಭಿಪ್ರಾಯ ಮಹತ್ವದ್ದಾಗಿದೆ. ವಾಸ್ತವದಲ್ಲಿ ಈ ಕಾಯ್ದೆ ಸಂಘ ಪರಿವಾರದ ‘ಲವ್ ಜಿಹಾದ್’ ಕತೆಗೆ ಕಾನೂನಾತ್ಮಕ ಬೆಂಬಲ ಕೊಡಲು ಜಾರಿಗೆ ಬಂದಿದೆ. ‘ಮದುವೆ ಮೂಲಕ ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ಬಲವಂತದ ಮತಾಂತರ ಮಾಡುತ್ತಾರೆ’ ಎಂಬ ಕಪೋಕಲ್ಪಿತ ಸಂಚನ್ನು ಲವ್ ಜಿಹಾದ್ ಸೂಚಿಸುತ್ತದೆ.

ಕಾಯ್ದೆ ಅಂಗೀಕಾರದ ನಂತರ ಹಲವಾರು ಎಫ್‌ಐಆರ್ ದಾಖಲಾಗಿವೆ ಮತ್ತು ಹಲವಾರು ಸಂಶಯಾಸ್ಪದ ಬಂಧನಗಳು ನಡೆದಿವೆ. 2020ರ ನವೆಂಬರ್ ಒಂದರಲ್ಲೇ ಅಲಹಾಬಾದ್ ಹೈಕೋರ್ಟ್, 125 ಅಂತರ್‌ಧರ್ಮಿಯ ದಂಪತಿಗಳಿಗೆ ರಕ್ಷಣೆ ನೀಡಲು ಆದೇಶಿಸಿದೆ. ಆ ತಿಂಗಳಲ್ಲೇ ಏಕ ನ್ಯಾಯಾಧೀಶರ ಪೀಠವೊಂದು, ‘ಅಂತರ್‌ಧರ್ಮೀಯ ಮದುವೆಗಳು ಮತಾಂತರದ ಉದ್ದೇಶಕ್ಕೇ ನಡೆಯುತ್ತವೆ’ ಎಂದು ಪ್ರಕಟಿಸಿದ ನಿರ್ಧಾರವನ್ನು ಖಂಡಿಸಿದ್ದ ಹೈಕೋರ್ಟ್, ಇದು ಅಸಮ್ಮತ ನಿರ್ಧಾರವಾಗಿದ್ದು, ಈ ನಿರ್ಧಾರ ‘bad in law’ ಎಂದು ಟೀಕಿಸಿತ್ತು.

ಡಿಸೆಂಬರ್‌ನಲ್ಲಿ ಇದೇ ಅಲಹಾಬಾದ್ ಹೈಕೋರ್ಟ್, 21 ವರ್ಷದ ಹಿಂದೂ ಯುವತಿ ಶಿಖಾ ತನ್ನ ಮುಸ್ಲಿಂ ಪತಿಯೊಂದಿಗೆ ಮತ್ತೆ ಒಂದಾಗಲು ನೆರವು ನೀಡಿತ್ತು. ‘ಒಬ್ಬ ವಯಸ್ಕ ಮಹಿಳೆ ತನ್ನಿಷ್ಟದಂತೆ ಬದುಕುವ ಆಯ್ಕೆ ಹೊಂದಿದ್ದಾಳೆ. ಆಕೆ ಮೂರನೇ ವ್ಯಕ್ತಿಯ ಅಡೆತಡೆಗಳನ್ನು ಧಿಕ್ಕರಿಸಿ, ತನ್ನ ಆಯ್ಕೆಯಂತೆ ಮುಕ್ತವಾಗಿ ಮುನ್ನಡೆಯುವ ಸ್ವಾತಂತ್ರ್ಯ ಹೊಂದಿದ್ದಾಳೆ’ ಎಂದು ಪೀಠ ಅಭಿಪ್ರಾಯ ಪಟ್ಟಿತ್ತು.

ಡಿಸೆಂಬರ್ 7ರಂದು ಚೀಫ್ ಮ್ಯಾಜಿಸ್ಟ್ರೇಟ್ ಪೀಠವು ಶಿಖಾ ಅವರನ್ನು ಮಕ್ಕಳ ಕಲ್ಯಾಣ ಸಮಿತಿಯ ಆಶ್ರಯದಲ್ಲಿಟ್ಟು, ಆಕೆ ತನ್ನ ಪೋಷಕರ ಮನೆಯಲ್ಲಿ ವಾಸಿಸಲು ವ್ಯವಸ್ಥೆ ಮಾಡಲು ಸೂಚಿಸಿತ್ತು. ಆದರೆ ಅಲಹಾಬಾದ್ ಹೈಕೋರ್ಟ್ ಶಿಖಾ ತನ್ನ ಮುಸ್ಲಿಂ ಪತಿಯೊಂದಿಗೆ ಮತ್ತೆ ಒಂದಾಗುವಂತೆ ಮಾಡಿತ್ತು.

ಮತಾಂತರ ವಿರೋಧಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಅಲಹಾಬಾದ್ ಹೈಕೋರ್ಟ್ ಜನೆವರಿ 15ರಂದು ಕೈಗೆತ್ತಿಕೊಳ್ಳಲಿದೆ.


ಇದನ್ನೂ ಓದಿ: ಲವ್ ಜಿಹಾದ್ ಎಂಬ ಕಪೋಲಕಲ್ಪಿತ: ಮತಾಂತರ ವಿರೋಧ ಕಾಯ್ದೆಯ ಅವಾಂತರ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...