Homeಮುಖಪುಟಕಾಶ್ಮೀರದಲ್ಲಿ ಯಾರೊಬ್ಬರು ಉಸಿರಾಡಲೂ ಆಗುತ್ತಿಲ್ಲ: ಮೆಹಬೂಬಾ ಮುಫ್ತಿ

ಕಾಶ್ಮೀರದಲ್ಲಿ ಯಾರೊಬ್ಬರು ಉಸಿರಾಡಲೂ ಆಗುತ್ತಿಲ್ಲ: ಮೆಹಬೂಬಾ ಮುಫ್ತಿ

‘ಬಹುಕಾಲದವರೆಗೆ ಬಂದೂಕಿನ ಅಡಿಯಲ್ಲಿ ಯಾರನ್ನೂ ಅದುಮಿಡಲು ಸಾಧ್ಯವಿಲ್ಲ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಕಾಶ್ಮೀರದಲ್ಲಿ ಪ್ರಜಾಪ್ರಭುತ್ವಕ್ಕೆ ಯಾವುದೇ ಅವಕಾಶಗಳನ್ನು ಕೇಂದ್ರ ಸರ್ಕಾರ ನೀಡುತ್ತಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ಪೀಪಲ್ಸ್‌ ಡೆಮಾಕ್ರಟಿಕ್‌ ಪಾರ್ಟಿ (ಪಿಡಿಪಿ) ಅಧ್ಯಕ್ಷರಾದ ಮೆಹಬೂಬಾ ಮುಫ್ತಿ ಹೇಳಿದ್ದಾರೆ.

ಲೇಖಕ ಡೇವಿಡ್‌ ದೇವದಾಸ್‌ ಅವರು ‘ದಿ ಕ್ವಿಂಟ್’ ಜಾಲತಾಣಕ್ಕಾಗಿ ನಡೆಸಿರುವ ವಿಶೇಷ ಸಂದರ್ಶನದಲ್ಲಿ ಆರೋಪಿಸಿರುವ ಅವರು, “ಕಾಶ್ಮೀರಿ ಪ್ರಜೆಗಳನ್ನು ದುರ್ಬಲಗೊಳಿಸಲು ಮಾಡಬೇಕಾದದ್ದನ್ನೆಲ್ಲ ಸರ್ಕಾರ ಮಾಡಿದೆ” ಎಂದಿದ್ದಾರೆ.

‘ಕಾಶ್ಮೀರದಲ್ಲಿ ಯಾರೊಬ್ಬರೂ ಉಸಿರಾಡಲು ಸಾಧ್ಯವಾಗುತ್ತಿಲ್ಲ’ ಎಂದಿರುವ ಅವರು, ‘ಕಾಶ್ಮೀರವನ್ನು ತೆರೆದ ಕಾರಾಗೃಹ’ವನ್ನಾಗಿ ಮಾಡಲಾಗಿದೆ. ಈ ಹಿಂದೆಯೂ ದಬ್ಬಾಳಿಕೆ ನಡೆದಿರುವುದನ್ನು ಒಪ್ಪಿಕೊಂಡಿರುವ ಅವರು, “ಆಗಿನ ಪರಿಸ್ಥಿತಿ ಈಗಿನಷ್ಟು ಭೀಕರವಾಗಿರಲಿಲ್ಲ” ಎಂದಿದ್ದಾರೆ. “ಜನರು ತಮ್ಮ ಮನೆಯ ನಾಲ್ಕು ಗೋಡೆಗಳ ಒಳಗೆಯೂ ಇರಲು ಹೆದರುವಂತಾಗಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

‘ಬಹುಕಾಲದವರೆಗೆ ಬಂದೂಕಿನ ಅಡಿಯಲ್ಲಿ ಯಾರನ್ನೂ ಅದುಮಿಡಲು ಸಾಧ್ಯವಿಲ್ಲ’ ಎಂದು ಹೇಳಿರುವ ಅವರು, “ಜನರಿಗೆ ನೋವು ಮತ್ತು ಅವಮಾನದ ಅನುಭವವಾಗುತ್ತಿದೆ” ಎಂದಿದ್ದಾರೆ.

ಅಧಿಕಾರಿ ವರ್ಗದ ಇಬ್ಬಂದಿತನವನ್ನು ಉಲ್ಲೇಖಿಸಿರುವ ಅವರು, “25 ಮಂದಿಗಿಂತ ಹೆಚ್ಚು ಜನರು ಸಭೆಯಲ್ಲಿ ಸೇರಿದ್ದರೆಂದು ಕಾರಣ ನೀಡಿ ಕೋವಿಡ್‌ ಮಾರ್ಗಸೂಚಿ ಉಲ್ಲಂಘಿಸಿದ್ದಾರೆಂದು ನಮಗೆ ನೋಟೀಸ್ ನೀಡಲಾಯಿತು. ಆದರೆ ಲೆಫ್ಟಿನೆಂಟ್ ಗವರ್ನರ್‌ ಹಾಗೂ ಅವರ ಸಂಬಂಧಿಕರ ಸಮಾರಂಭ ದೊಡ್ಡ ಮಟ್ಟದಲ್ಲಿ ನಡೆಯಿತು. ಬಿಜೆಪಿ ನಾಯಕರೊಬ್ಬರ ಮಗನ ಮದುವೆ ಕಾರ್ಯಕ್ರಮಕ್ಕಾಗಿ ಖನದಾಲ್‌ನಲ್ಲಿನ ಡಕ್‌ ಬಂಗಲೆಯ ಮೈದಾನವನ್ನು ಮೀಸಲಿಡಲಾಗಿತ್ತು’ ಎಂದು ‌ಅವರು ಬೇಸರ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಜಮ್ಮು ಕಾಶ್ಮೀರ: 2019 ರಿಂದ 2,300 ಕ್ಕೂ ಹೆಚ್ಚು ಜನರ ಮೇಲೆ UAPA ಅಡಿ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಾಶ್ಮೀರ ಜನ ಆರಾಮ ವಾಗಿಯೇ ಇದ್ದಾರೆ ಈಗ ,ಆದರೆ ಈ ಅಯೋಗ್ಯ ,ಅವಿವೇಕಿ,ಪಾಕ್ ಪ್ರೇಮಿ ,ದೇಶದ್ರೋಹಿ ಮೆಹಭೂಬ ಹಾಗೂ ಅವರ ಸಂಘ ಪರಿವಾರದವರಿಗೆ, ಚೀನಿ ಪ್ರೇಮಿ ಕಮ್ಯೂನಿಸ್ಟ್ ರಿಗೆ ,ನಗರ ನಕ್ಸಲರಿಗೆ ಮಾತ್ರ ಅಲ್ಲಿ ಉಸಿರಾಟ ಮಾಡಲು ತೊಂದರೆ ಆಗಿದೆ……

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...