Homeಮುಖಪುಟ'ಮರಾಠ ಸಮುದಾಯಕ್ಕಿಂತ ಯಾರೂ ದೊಡ್ಡವರಲ್ಲ..'; ಮಹಾರಾಷ್ಟ್ರ ಸಿಎಂ-ಡಿಸಿಎಂ ವಿರುದ್ಧ ಜಾರಂಗೆ ವಾಗ್ದಾಳಿ

‘ಮರಾಠ ಸಮುದಾಯಕ್ಕಿಂತ ಯಾರೂ ದೊಡ್ಡವರಲ್ಲ..’; ಮಹಾರಾಷ್ಟ್ರ ಸಿಎಂ-ಡಿಸಿಎಂ ವಿರುದ್ಧ ಜಾರಂಗೆ ವಾಗ್ದಾಳಿ

- Advertisement -
- Advertisement -

ಮರಾಠಾ ಮೀಸಲಾತಿಗಾಗಿ ಹೋರಾಟಗಾರ ಮನೋಜ್ ಜಾರಂಗೆ ಪಾಟೀಲ್ ನಡೆಸುತ್ತಿರುವ ಆಂದೋಲನದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಪರಿಗಣಿಸಿ, ಜಿಲ್ಲಾಡಳಿತ ಹೊರಡಿಸಿದ ಆದೇಶ ಹೊರಡಿಸಿದ್ದು, ಮಹಾರಾಷ್ಟ್ರದ ಜಲ್ನಾ, ಬೀಡ್ ಮತ್ತು ಛತ್ರಪತಿ ಸಂಭಾಜಿನಗರ ಜಿಲ್ಲೆಗಳಲ್ಲಿ ಇಂಟರ್ನೆಟ್ ನಿಷೇಧದ ಜೊತೆಗೆ ಕರ್ಫ್ಯೂ ವಿಧಿಸಲಾಗಿದೆ.

ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಒತ್ತಾಯಿಸಿ ಮುಂಬೈಗೆ ತೆರಳಿ ಪ್ರತಿಭಟನೆ ನಡೆಸುವುದಾಗಿ ಮರಾಠ ಕೋಟಾ ಮೀಸಲಾತಿ ಪರ ಹೋರಾಟಗಾರ ಮನೋಜ್ ಜಾರಂಗೆ ಭಾನುವಾರ ಘೋಷಿಸಿದ್ದಾರೆ.

ಅವರು ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಜಲ್ನಾದ ಅಂತರವಾಲಿ ಸಾರತಿ ಗ್ರಾಮದಿಂದ ಅವರು ಮುಂಬೈಗೆ ಹೋಗದಂತೆ ತಡೆಯಲು ಪೊಲೀಸರು ಸಜ್ಜಾಗಿದ್ದಾರೆ. ಭಾರೀ ಜನಸಂದಣಿಯಿಂದಾಗಿ ಧುಲೆ-ಮುಂಬೈ ಹೆದ್ದಾರಿ ಮತ್ತು ಇತರ ಹತ್ತಿರದ ಪ್ರದೇಶಗಳಲ್ಲಿ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆಯಿದೆ. ಮನ್ನೆಚ್ಚರಿಕೆ ಕ್ರಮವಾಗಿ, ಕಾನೂನು ಸುವ್ಯವಸ್ಥೆಯನ್ನು ಪರಿಗಣಿಸಿ ಕರ್ಫ್ಯೂ ವಿಧಿಸಲಾಗಿದೆ.

ಸರ್ಕಾರಿ ಕಚೇರಿಗಳು, ಶಾಲೆಗಳು, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರ, ಹಾಲು ವಿತರಣೆ, ಮಾಧ್ಯಮ ಮತ್ತು ಆಸ್ಪತ್ರೆಗಳಿಗೆ ಈ ಆದೇಶದಿಂದ ವಿನಾಯಿತಿ ನೀಡಲಾಗಿದೆ. ಜಾರಂಗೆ ಭಾನುವಾರ ರಾತ್ರಿ ಅಂತರವಾಲಿ ಸಾರತಿಯಿಂದ ಹೊರಟು ಸಮೀಪದ ಭಂಬೇರಿ ಗ್ರಾಮಕ್ಕೆ ಬಂದರು.

ಆದರೆ, ಸೋಮವಾರ ಬೆಳಗ್ಗೆ ಪ್ರತಿಭಟನಾ ನಿರತ ಕಾರ್ಯಕರ್ತರು ಅಂತರವಾಲಿ ಸಾರಥಿಗೆ ತೆರಳಿ ಚಿಕಿತ್ಸೆ ಪಡೆಯಲಾರಂಭಿಸಿದರು. ಈ ಮಧ್ಯೆ, ಜಲ್ನಾದಲ್ಲಿ ಎಂಎಸ್ಆರ್‌ಟಿಸಿ ಬಸ್ಸು ಸುಟ್ಟುಹೋದ ಕಾರಣ, ಸದ್ಯಕ್ಕೆ ಸೇವೆಗಳನ್ನು ಬಂದ್ ಮಾಡಲಾಗಿದೆ.

ಕಳೆದ ಮಂಗಳವಾರ ನಡೆದ ಒಂದು ದಿನದ ವಿಶೇಷ ಅಧಿವೇಶನದಲ್ಲಿ ಮಹಾರಾಷ್ಟ್ರ ಶಾಸಕಾಂಗವು ಮರಾಠರಿಗೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಪ್ರತ್ಯೇಕ ವರ್ಗದಡಿಯಲ್ಲಿ ಶೇ.10 ಪ್ರತಿಶತ ಮೀಸಲಾತಿಯನ್ನು ಒದಗಿಸುವ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸಿತು. ಆದರೆ, ಒಬಿಸಿ ಅಡಿಯಲ್ಲಿ ಸಮುದಾಯಕ್ಕೆ ಕೋಟಾದ ಬೇಡಿಕೆಗೆ ಜಾರಂಗೆ ದೃಢವಾಗಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಜಾರಂಗೆ, ‘ನಾನು ಅದನ್ನು ಕೇಳಿಲ್ಲ. ಆದರೆ ಮರಾಠ ಸಮುದಾಯದ ಸಂಬಂಧಿಕರ (ಮರಾಠರ) ಕೋಟಾದ ಅಧಿಸೂಚನೆಯನ್ನು ಏಕೆ ಜಾರಿಗೊಳಿಸಲಿಲ್ಲ ಎಂದು ಅವರು ಹೇಳಬೇಕು. ನಾನು ಅವರನ್ನು ತುಂಬಾ ಗೌರವಿಸುತ್ತೇನೆ; ಅವರು ಹೀಗೆಲ್ಲಾ ಮಾಡಬಾರದು’ ಎಂದು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಲ್ಲಿ ಮನವಿ ಮಾಡಿದರು. ‘ಮರಾಠ ಸಮುದಾಯಕ್ಕಿಂತ ಯಾರೂ ದೊಡ್ಡವರಲ್ಲ’ ಎಂದು ಜಾರಂಗೆ ಹೇಳಿದರು.

‘ಮರಾಠರ ಅಧಿಸೂಚನೆಯನ್ನು ಜಾರಿಗೊಳಿಸುವುದು ಅವರ (ಶಿಂಧೆ) ಜವಾಬ್ದಾರಿಯಾಗಿದೆ ಮತ್ತು ಕುಂಬಿ ಜಾತಿಯ ಪ್ರಮಾಣಪತ್ರಗಳನ್ನು ನೀಡಲು (ನಿಜಾಮ್ ರಾಜ್ಯ, ಸತಾರಾ) ಗೆಜೆಟ್ ಅನ್ನು ಪುರಾವೆಯಾಗಿ ತೆಗೆದುಕೊಳ್ಳುವುದನ್ನು ಪರಿಗಣಿಸಿ, ಪ್ರಮಾಣಪತ್ರಗಳ ವಿತರಣೆಯನ್ನು ನಿಲ್ಲಿಸಲಾಗಿದೆ’ ಎಂದರು.

ಸರ್ಕಾರದ ವಿರುದ್ಧ ಮತ್ತೆ ಮತ್ತೆ ಪ್ರತಿಭಟನೆ ನಡೆಸುತ್ತಿರುವವರು ನಮ್ಮ ತಾಳ್ಮೆ ಪರೀಕ್ಷಿಸಬಾರದು, ಅವರು ಕಾನೂನು ಸುವ್ಯವಸ್ಥೆ ಸಮಸ್ಯೆ ಸೃಷ್ಟಿಸಬಾರದು’ ಎಂದು ಸಿಎಂ ಶಿಂಧೆ ಭಾನುವಾರ ಹೇಳಿದ್ದಾರೆ.

ಜಾರಂಗೆ ಅವರ ಭಾಷಣವು ಸಾಮಾನ್ಯವಾಗಿ ಶರದ್ ಪವಾರ್ ಮತ್ತು ಉದ್ಧವ್ ಠಾಕ್ರೆ ಬಳಸುವ ಸ್ಕ್ರಿಪ್ಟ್‌ನಂತೆ ಏಕೆ ಕಾಣುತ್ತದೆ ಎಂದು ಅವರು ಆಶ್ಚರ್ಯಪಟ್ಟರು.

ಸಿಎಂ ಹೆಳಿಕೆಗೆ ಪ್ರತಿಕ್ರಿಯಿಸಿರುವ ಜಾರಂಗೆ, ‘ನಾನು ಅವರನ್ನು (ಸಿಎಂ ಶಿಂಧೆ) ಈಗಲೂ ಗೌರವಿಸುತ್ತೇನೆ. ನಮ್ಮ ಜಾತಿಯೇ ನಮ್ಮ ‘ಸ್ಕ್ರಿಪ್ಟ್’, ನೀವು ನಿಜವಾದ ಮುಖ್ಯಮಂತ್ರಿ ಎಂದು ನಮ್ಮ ಭಾವನೆ. ನಾನು ಪ್ರಾಮಾಣಿಕನಿದ್ದೇನೆ ಮತ್ತು ನನಗೆ ಹೆಚ್ಚು ಮಾತನಾಡಲು ಬಿಡುವುದಿಲ್ಲ. ನಾನು ಮುಂಬೈಗೆ ಬರುತ್ತಿದ್ದೇನೆ, ನಮಗೆ ಮೋಸ ಮಾಡುತ್ತಿದ್ದರೆ ನಾವು ಏನು ಹೇಳಬೇಕು? ಮೂವರು (ಶಿಂಧೆ, ಫಡ್ನವೀಸ್ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್) ತಮ್ಮ ರಾಜಕೀಯಕ್ಕಾಗಿ ಮರಾಠ ಸಮುದಾಯವನ್ನು ಕೊಲ್ಲಲು ಬಯಸುತ್ತಾರೆಯೇ? ಮರಾಠ ಸಮುದಾಯವು ಈಗಲೂ ಶಿಂಧೆಯ ಪರವಾಗಿ ಮಾತನಾಡುತ್ತಾರೆ ಮತ್ತು ಅವರು ಹಾಗೆಲ್ಲಾ ಕೇಳಬಾರದು’ ಎಂದು ಅವರು ಹೇಳಿದರು.

‘ಜನರನ್ನು ಮೂರ್ಖರನ್ನಾಗಿಸಿ ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸುವುದು ಸರ್ಕಾರದ ಸಂಸ್ಕೃತಿಯೇ’ ಎಂದು ಕಾರ್ಯಕರ್ತ ಪ್ರಶ್ನಿಸಿದರು. ‘ಮರಾಠಾ ಕೋಟಾ ವಿಚಾರದಲ್ಲಿ ಸರ್ಕಾರ ಏನು ಮಾಡಿದೆ ಎಂಬುದನ್ನು ತಿಳಿಸಬೇಕು’ ಎಂದು ಸವಾಲು ಹಾಕಿದರು.

‘ಅವರು ಗೆಜೆಟ್ ತೆಗೆದುಕೊಂಡಿಲ್ಲ ಮತ್ತು ಮರಾಠವಾಡದಲ್ಲಿ ಪತ್ತೆಯಾದ ದಾಖಲೆಗಳ ಡೇಟಾವನ್ನು ನೀಡಿಲ್ಲ. ಪತ್ತೆಯಾದ ದಾಖಲೆಗಳ ಪಟ್ಟಿಯನ್ನು ಗ್ರಾಮ ಪಂಚಾಯಿತಿಗಳಲ್ಲಿ ಪ್ರದರ್ಶಿಸಲಾಗಿಲ್ಲ’ ಎಂದು ಅವರು ಪ್ರತಿಪಾದಿಸಿದರು.

ಇದಕ್ಕೂ ಮುನ್ನ ಮಾತನಾಡಿದ ಫಡ್ನವೀಸ್, ಜಾರಂಗೆಯ ಹಿಂದಿರುವ ಜನರ ಬಗ್ಗೆ ರಾಜ್ಯ ಸರ್ಕಾರಕ್ಕೆ ನ್ಯಾಯಯುತವಾದ ಕಲ್ಪನೆ ಇದೆ, ಸೂಕ್ತ ಸಮಯದಲ್ಲಿ ವಿವರಗಳು ಹೊರಬರುತ್ತವೆ’ ಎಂದು ಹೇಳಿದರು.

ಜಾರಂಗೆ ಅವರು ಫಡ್ವೀಸ್ ಬಂಗಲೆ ಎದುರು ಪ್ರತಿಭಟನೆ ನಡೆಸಲು ಮುಂಬೈಗೆ ಮೆರವಣಿಗೆ ನಡೆಸುವುದಾಗಿ ಘೋಷಿಸಿರುವ ಕುರಿತು ಕೇಳಿದ ಪ್ರಶ್ನೆಗೆ, ‘ಇದು ಉಪ ಮುಖ್ಯಮಂತ್ರಿ ಅವರ ಅಧಿಕೃತ ನಿವಾಸವಾಗಿದ್ದು, ಯಾವುದೇ ರೀತಿಯ ಕೆಲಸವಿರುವವರು ಭೇಟಿ ನೀಡಬಹುದು’ ಎಂದು ಹೇಳಿದರು.

ಇದನ್ನೂ ಓದಿ; ಮರಾಠ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆಗೆ ಕರೆಕೊಟ್ಟ ಮನೋಜ್ ಜಾರಂಗೆ; ಜಲ್ನಾ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...