Homeಮುಖಪುಟ'ಮರಾಠ ಸಮುದಾಯಕ್ಕಿಂತ ಯಾರೂ ದೊಡ್ಡವರಲ್ಲ..'; ಮಹಾರಾಷ್ಟ್ರ ಸಿಎಂ-ಡಿಸಿಎಂ ವಿರುದ್ಧ ಜಾರಂಗೆ ವಾಗ್ದಾಳಿ

‘ಮರಾಠ ಸಮುದಾಯಕ್ಕಿಂತ ಯಾರೂ ದೊಡ್ಡವರಲ್ಲ..’; ಮಹಾರಾಷ್ಟ್ರ ಸಿಎಂ-ಡಿಸಿಎಂ ವಿರುದ್ಧ ಜಾರಂಗೆ ವಾಗ್ದಾಳಿ

- Advertisement -
- Advertisement -

ಮರಾಠಾ ಮೀಸಲಾತಿಗಾಗಿ ಹೋರಾಟಗಾರ ಮನೋಜ್ ಜಾರಂಗೆ ಪಾಟೀಲ್ ನಡೆಸುತ್ತಿರುವ ಆಂದೋಲನದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಪರಿಗಣಿಸಿ, ಜಿಲ್ಲಾಡಳಿತ ಹೊರಡಿಸಿದ ಆದೇಶ ಹೊರಡಿಸಿದ್ದು, ಮಹಾರಾಷ್ಟ್ರದ ಜಲ್ನಾ, ಬೀಡ್ ಮತ್ತು ಛತ್ರಪತಿ ಸಂಭಾಜಿನಗರ ಜಿಲ್ಲೆಗಳಲ್ಲಿ ಇಂಟರ್ನೆಟ್ ನಿಷೇಧದ ಜೊತೆಗೆ ಕರ್ಫ್ಯೂ ವಿಧಿಸಲಾಗಿದೆ.

ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಒತ್ತಾಯಿಸಿ ಮುಂಬೈಗೆ ತೆರಳಿ ಪ್ರತಿಭಟನೆ ನಡೆಸುವುದಾಗಿ ಮರಾಠ ಕೋಟಾ ಮೀಸಲಾತಿ ಪರ ಹೋರಾಟಗಾರ ಮನೋಜ್ ಜಾರಂಗೆ ಭಾನುವಾರ ಘೋಷಿಸಿದ್ದಾರೆ.

ಅವರು ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಜಲ್ನಾದ ಅಂತರವಾಲಿ ಸಾರತಿ ಗ್ರಾಮದಿಂದ ಅವರು ಮುಂಬೈಗೆ ಹೋಗದಂತೆ ತಡೆಯಲು ಪೊಲೀಸರು ಸಜ್ಜಾಗಿದ್ದಾರೆ. ಭಾರೀ ಜನಸಂದಣಿಯಿಂದಾಗಿ ಧುಲೆ-ಮುಂಬೈ ಹೆದ್ದಾರಿ ಮತ್ತು ಇತರ ಹತ್ತಿರದ ಪ್ರದೇಶಗಳಲ್ಲಿ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆಯಿದೆ. ಮನ್ನೆಚ್ಚರಿಕೆ ಕ್ರಮವಾಗಿ, ಕಾನೂನು ಸುವ್ಯವಸ್ಥೆಯನ್ನು ಪರಿಗಣಿಸಿ ಕರ್ಫ್ಯೂ ವಿಧಿಸಲಾಗಿದೆ.

ಸರ್ಕಾರಿ ಕಚೇರಿಗಳು, ಶಾಲೆಗಳು, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರ, ಹಾಲು ವಿತರಣೆ, ಮಾಧ್ಯಮ ಮತ್ತು ಆಸ್ಪತ್ರೆಗಳಿಗೆ ಈ ಆದೇಶದಿಂದ ವಿನಾಯಿತಿ ನೀಡಲಾಗಿದೆ. ಜಾರಂಗೆ ಭಾನುವಾರ ರಾತ್ರಿ ಅಂತರವಾಲಿ ಸಾರತಿಯಿಂದ ಹೊರಟು ಸಮೀಪದ ಭಂಬೇರಿ ಗ್ರಾಮಕ್ಕೆ ಬಂದರು.

ಆದರೆ, ಸೋಮವಾರ ಬೆಳಗ್ಗೆ ಪ್ರತಿಭಟನಾ ನಿರತ ಕಾರ್ಯಕರ್ತರು ಅಂತರವಾಲಿ ಸಾರಥಿಗೆ ತೆರಳಿ ಚಿಕಿತ್ಸೆ ಪಡೆಯಲಾರಂಭಿಸಿದರು. ಈ ಮಧ್ಯೆ, ಜಲ್ನಾದಲ್ಲಿ ಎಂಎಸ್ಆರ್‌ಟಿಸಿ ಬಸ್ಸು ಸುಟ್ಟುಹೋದ ಕಾರಣ, ಸದ್ಯಕ್ಕೆ ಸೇವೆಗಳನ್ನು ಬಂದ್ ಮಾಡಲಾಗಿದೆ.

ಕಳೆದ ಮಂಗಳವಾರ ನಡೆದ ಒಂದು ದಿನದ ವಿಶೇಷ ಅಧಿವೇಶನದಲ್ಲಿ ಮಹಾರಾಷ್ಟ್ರ ಶಾಸಕಾಂಗವು ಮರಾಠರಿಗೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಪ್ರತ್ಯೇಕ ವರ್ಗದಡಿಯಲ್ಲಿ ಶೇ.10 ಪ್ರತಿಶತ ಮೀಸಲಾತಿಯನ್ನು ಒದಗಿಸುವ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸಿತು. ಆದರೆ, ಒಬಿಸಿ ಅಡಿಯಲ್ಲಿ ಸಮುದಾಯಕ್ಕೆ ಕೋಟಾದ ಬೇಡಿಕೆಗೆ ಜಾರಂಗೆ ದೃಢವಾಗಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಜಾರಂಗೆ, ‘ನಾನು ಅದನ್ನು ಕೇಳಿಲ್ಲ. ಆದರೆ ಮರಾಠ ಸಮುದಾಯದ ಸಂಬಂಧಿಕರ (ಮರಾಠರ) ಕೋಟಾದ ಅಧಿಸೂಚನೆಯನ್ನು ಏಕೆ ಜಾರಿಗೊಳಿಸಲಿಲ್ಲ ಎಂದು ಅವರು ಹೇಳಬೇಕು. ನಾನು ಅವರನ್ನು ತುಂಬಾ ಗೌರವಿಸುತ್ತೇನೆ; ಅವರು ಹೀಗೆಲ್ಲಾ ಮಾಡಬಾರದು’ ಎಂದು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಲ್ಲಿ ಮನವಿ ಮಾಡಿದರು. ‘ಮರಾಠ ಸಮುದಾಯಕ್ಕಿಂತ ಯಾರೂ ದೊಡ್ಡವರಲ್ಲ’ ಎಂದು ಜಾರಂಗೆ ಹೇಳಿದರು.

‘ಮರಾಠರ ಅಧಿಸೂಚನೆಯನ್ನು ಜಾರಿಗೊಳಿಸುವುದು ಅವರ (ಶಿಂಧೆ) ಜವಾಬ್ದಾರಿಯಾಗಿದೆ ಮತ್ತು ಕುಂಬಿ ಜಾತಿಯ ಪ್ರಮಾಣಪತ್ರಗಳನ್ನು ನೀಡಲು (ನಿಜಾಮ್ ರಾಜ್ಯ, ಸತಾರಾ) ಗೆಜೆಟ್ ಅನ್ನು ಪುರಾವೆಯಾಗಿ ತೆಗೆದುಕೊಳ್ಳುವುದನ್ನು ಪರಿಗಣಿಸಿ, ಪ್ರಮಾಣಪತ್ರಗಳ ವಿತರಣೆಯನ್ನು ನಿಲ್ಲಿಸಲಾಗಿದೆ’ ಎಂದರು.

ಸರ್ಕಾರದ ವಿರುದ್ಧ ಮತ್ತೆ ಮತ್ತೆ ಪ್ರತಿಭಟನೆ ನಡೆಸುತ್ತಿರುವವರು ನಮ್ಮ ತಾಳ್ಮೆ ಪರೀಕ್ಷಿಸಬಾರದು, ಅವರು ಕಾನೂನು ಸುವ್ಯವಸ್ಥೆ ಸಮಸ್ಯೆ ಸೃಷ್ಟಿಸಬಾರದು’ ಎಂದು ಸಿಎಂ ಶಿಂಧೆ ಭಾನುವಾರ ಹೇಳಿದ್ದಾರೆ.

ಜಾರಂಗೆ ಅವರ ಭಾಷಣವು ಸಾಮಾನ್ಯವಾಗಿ ಶರದ್ ಪವಾರ್ ಮತ್ತು ಉದ್ಧವ್ ಠಾಕ್ರೆ ಬಳಸುವ ಸ್ಕ್ರಿಪ್ಟ್‌ನಂತೆ ಏಕೆ ಕಾಣುತ್ತದೆ ಎಂದು ಅವರು ಆಶ್ಚರ್ಯಪಟ್ಟರು.

ಸಿಎಂ ಹೆಳಿಕೆಗೆ ಪ್ರತಿಕ್ರಿಯಿಸಿರುವ ಜಾರಂಗೆ, ‘ನಾನು ಅವರನ್ನು (ಸಿಎಂ ಶಿಂಧೆ) ಈಗಲೂ ಗೌರವಿಸುತ್ತೇನೆ. ನಮ್ಮ ಜಾತಿಯೇ ನಮ್ಮ ‘ಸ್ಕ್ರಿಪ್ಟ್’, ನೀವು ನಿಜವಾದ ಮುಖ್ಯಮಂತ್ರಿ ಎಂದು ನಮ್ಮ ಭಾವನೆ. ನಾನು ಪ್ರಾಮಾಣಿಕನಿದ್ದೇನೆ ಮತ್ತು ನನಗೆ ಹೆಚ್ಚು ಮಾತನಾಡಲು ಬಿಡುವುದಿಲ್ಲ. ನಾನು ಮುಂಬೈಗೆ ಬರುತ್ತಿದ್ದೇನೆ, ನಮಗೆ ಮೋಸ ಮಾಡುತ್ತಿದ್ದರೆ ನಾವು ಏನು ಹೇಳಬೇಕು? ಮೂವರು (ಶಿಂಧೆ, ಫಡ್ನವೀಸ್ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್) ತಮ್ಮ ರಾಜಕೀಯಕ್ಕಾಗಿ ಮರಾಠ ಸಮುದಾಯವನ್ನು ಕೊಲ್ಲಲು ಬಯಸುತ್ತಾರೆಯೇ? ಮರಾಠ ಸಮುದಾಯವು ಈಗಲೂ ಶಿಂಧೆಯ ಪರವಾಗಿ ಮಾತನಾಡುತ್ತಾರೆ ಮತ್ತು ಅವರು ಹಾಗೆಲ್ಲಾ ಕೇಳಬಾರದು’ ಎಂದು ಅವರು ಹೇಳಿದರು.

‘ಜನರನ್ನು ಮೂರ್ಖರನ್ನಾಗಿಸಿ ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸುವುದು ಸರ್ಕಾರದ ಸಂಸ್ಕೃತಿಯೇ’ ಎಂದು ಕಾರ್ಯಕರ್ತ ಪ್ರಶ್ನಿಸಿದರು. ‘ಮರಾಠಾ ಕೋಟಾ ವಿಚಾರದಲ್ಲಿ ಸರ್ಕಾರ ಏನು ಮಾಡಿದೆ ಎಂಬುದನ್ನು ತಿಳಿಸಬೇಕು’ ಎಂದು ಸವಾಲು ಹಾಕಿದರು.

‘ಅವರು ಗೆಜೆಟ್ ತೆಗೆದುಕೊಂಡಿಲ್ಲ ಮತ್ತು ಮರಾಠವಾಡದಲ್ಲಿ ಪತ್ತೆಯಾದ ದಾಖಲೆಗಳ ಡೇಟಾವನ್ನು ನೀಡಿಲ್ಲ. ಪತ್ತೆಯಾದ ದಾಖಲೆಗಳ ಪಟ್ಟಿಯನ್ನು ಗ್ರಾಮ ಪಂಚಾಯಿತಿಗಳಲ್ಲಿ ಪ್ರದರ್ಶಿಸಲಾಗಿಲ್ಲ’ ಎಂದು ಅವರು ಪ್ರತಿಪಾದಿಸಿದರು.

ಇದಕ್ಕೂ ಮುನ್ನ ಮಾತನಾಡಿದ ಫಡ್ನವೀಸ್, ಜಾರಂಗೆಯ ಹಿಂದಿರುವ ಜನರ ಬಗ್ಗೆ ರಾಜ್ಯ ಸರ್ಕಾರಕ್ಕೆ ನ್ಯಾಯಯುತವಾದ ಕಲ್ಪನೆ ಇದೆ, ಸೂಕ್ತ ಸಮಯದಲ್ಲಿ ವಿವರಗಳು ಹೊರಬರುತ್ತವೆ’ ಎಂದು ಹೇಳಿದರು.

ಜಾರಂಗೆ ಅವರು ಫಡ್ವೀಸ್ ಬಂಗಲೆ ಎದುರು ಪ್ರತಿಭಟನೆ ನಡೆಸಲು ಮುಂಬೈಗೆ ಮೆರವಣಿಗೆ ನಡೆಸುವುದಾಗಿ ಘೋಷಿಸಿರುವ ಕುರಿತು ಕೇಳಿದ ಪ್ರಶ್ನೆಗೆ, ‘ಇದು ಉಪ ಮುಖ್ಯಮಂತ್ರಿ ಅವರ ಅಧಿಕೃತ ನಿವಾಸವಾಗಿದ್ದು, ಯಾವುದೇ ರೀತಿಯ ಕೆಲಸವಿರುವವರು ಭೇಟಿ ನೀಡಬಹುದು’ ಎಂದು ಹೇಳಿದರು.

ಇದನ್ನೂ ಓದಿ; ಮರಾಠ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆಗೆ ಕರೆಕೊಟ್ಟ ಮನೋಜ್ ಜಾರಂಗೆ; ಜಲ್ನಾ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...