Homeಕರೋನಾ ತಲ್ಲಣಲಸಿಕೆ ಕಡ್ಡಾಯದಿಂದ ಯಾರೂ ತಮ್ಮ ಹಕ್ಕುಗಳನ್ನು ಕಳೆದುಕೊಳ್ಳುತ್ತಿಲ್ಲ: ಒಕ್ಕೂಟ ಸರ್ಕಾರ

ಲಸಿಕೆ ಕಡ್ಡಾಯದಿಂದ ಯಾರೂ ತಮ್ಮ ಹಕ್ಕುಗಳನ್ನು ಕಳೆದುಕೊಳ್ಳುತ್ತಿಲ್ಲ: ಒಕ್ಕೂಟ ಸರ್ಕಾರ

- Advertisement -
- Advertisement -

ಹಲವು ರಾಜ್ಯ ಸರ್ಕಾರಗಳು ಹೊರಡಿಸಿರುವ ಕಡ್ಡಾಯ ಕೋವಿಡ್‌ ಲಸಿಕೆ ಆದೇಶಗಳಿಂದಾಗಿ ಜನರು ತಮ್ಮ ಉದ್ಯೋಗ ಮತ್ತು ಪಡಿತರವನ್ನು ಕಳೆದುಕೊಳ್ಳುತ್ತಿದ್ದಾರೆ ಎಂಬ ಹೇಳಿಕೆಗಳನ್ನು ಒಕ್ಕೂಟ ಸರ್ಕಾರವು ವಿರೋಧಿಸಿದ್ದು, ‘ಯಾರೂ ಏನನ್ನೂ ಕಳೆದುಕೊಳ್ಳುತ್ತಿಲ್ಲ’ ಎಂದು ಸೋಮವಾರ ಪ್ರತಿಪಾದಿಸಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಪ್ರಶಾಂತ್ ಭೂಷಣ್, ಹಲವಾರು ರಾಜ್ಯಗಳು ಮತ್ತು ಅಧಿಕಾರಿಗಳ ಆದೇಶದಿಂದ ಜನರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಲಸಿಕೆಯನ್ನು ಕಡ್ಡಾಯ ಮಾಡಿರುವುದರ ತುರ್ತು ಏನಿತ್ತು ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಲಸಿಕೆ ಅಭಿವೃದ್ಧಿಗೆ ಒಂದು ಪೈಸೆಯು ಕೊಡದ ಪಿಎಂ ಕೇರ್‌!

“ಇದೀಗ, ಲಸಿಕೆಯನ್ನು ಕಡ್ಡಾಯ ಮಾಡುವುದರ ತುರ್ತು ಏನಿದೆ? ಇದರಿಂದಾಗಿ ಜನರು ತಮ್ಮ ಉದ್ಯೋಗವನ್ನು ಮತ್ತು ಪಡಿತರವನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಲಸಿಕೆ ಕಡ್ಡಾಯ  ಆದೇಶಗಳ ಪರಿಣಾಮವಾಗಿ ಜನರು ಮುಕ್ತವಾಗಿ ತಿರುಗಾಡಲು ಕೂಡಾ ಸಾಧ್ಯವಾಗುತ್ತಿಲ್ಲ” ಎಂದು ಪ್ರಶಾಂತ್‌‌ ಭೂಷಣ್ ಹೇಳಿದ್ದಾರೆ.

ಈ ವಾದವನ್ನು ವಿರೋಧಿಸಿದ, ಒಕ್ಕೂಟ ಸರ್ಕಾರದ ಪ್ರತಿನಿಧಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಲಸಿಕೆ ಹಾಕದ ಕಾರಣ ಯಾರೂ ಉದ್ಯೋಗ ಕಳೆದುಕೊಳ್ಳುತ್ತಿಲ್ಲ ಎಂದು ಸುಪ್ರೀಂಕೋರ್ಟ್‌ ಮುಂದೆ ಹೇಳಿದ್ದಾರೆ.

ಕೋವಿಡ್‌ ಲಸಿಕೆಗಳ ಕ್ಲಿನಿಕಲ್ ಪ್ರಯೋಗಗಳ ದತ್ತಾಂಶದ ಬಹಿರಂಗಪಡಿಸುವಿಕೆಗೆ ಮತ್ತು ಲಸಿಕೆ ಕಡ್ಡಾಯ ಆದೇಶಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆಗಿನ ಪ್ರಕರಣವನ್ನು ಸುಪ್ರೀಂಕೋರ್ಟ್‌ ಪೀಠವು ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ: ಕೊರೊನಾ ಪ್ರಕರಣ ಹೆಚ್ಚಾದರೂ, ಲಸಿಕೆ ಕಾರಣಕ್ಕೆ ಸಾವು ನೋವು ಕಡಿಮೆಯಾಗಿದೆ: ICMR ಮುಖ್ಯಸ್ಥ

“ಕಡ್ಡಾಯ ಲಸಿಕೆಯಿಂದಾಗಿ ಯಾರೂ ಏನನ್ನೂ ಕಳೆದುಕೊಳ್ಳುತ್ತಿಲ್ಲ ಮತ್ತು ಈ ಬಗ್ಗೆ ಯಾರೂ ನ್ಯಾಯಾಲಯದ ಮುಂದೆ ಬಂದಿಲ್ಲ” ಎಂದು ಒಕ್ಕೂಟ ಸರ್ಕಾರ ಹೇಳಿದೆ.

ಒಬ್ಬ ವ್ಯಕ್ತಿಗೆ ಸೋಂಕು ತಗುಲಿದ್ದರೆ, ಈ ಸೋಂಕಿನಿಂದ ಅವರನ್ನು ರಕ್ಷಿಸಲು ಲಸಿಕೆಗಿಂತ ಉತ್ತಮವಾದ ಬೇರೆ ಮಾರ್ಗಗಳಿವೆ ಎಂದು ಸಾಬೀತಾಗಿದೆ ಎಂದು ಪ್ರಶಾಂತ್‌ ಭೂಷಣ್ ಸುಪ್ರೀಂಕೋರ್ಟ್‌ಗೆ ಹೇಳಿದ್ದಾರೆ.

ಕಡ್ಡಾಯ ಲಸಿಕೆ ಆದೇಶಗಳು ನಾಗರಿಕರ ಮೂಲಭೂತ ಹಕ್ಕುಗಳನ್ನು ನಿರ್ಬಂಧಿಸುತ್ತಿವೆ ಎಂದು ಅವರು ವಾದಿಸಿದ್ದಾರೆ. ತನಗೆ ಲಸಿಕೆ ಬೇಕೇ ಅಥವಾ ಬೇಡವೇ ಎಂದು ನಿರ್ಧರಿಸುವುದು ವ್ಯಕ್ತಿಯೊಬ್ಬರ ಮೂಲಭೂತ ಹಕ್ಕು ಎಂದು ಅವರು ಹೇಳಿದ್ದಾರೆ.

ವಾದಗಳನ್ನು ಆಲಿಸಿದ ನಂತರ, ಪ್ರಕರಣದ ಅಂತಿಮ ವಿಚಾರಣೆಗೆ ದಿನಾಂಕ ಪ್ರಕಟಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ಇದನ್ನೂ ಓದಿ: ದಡಾರ-ರುಬೆಲ್ಲಾ ಲಸಿಕೆ ಅತ್ಯಂತ ಸುರಕ್ಷಿತ; ಬೆಳಗಾವಿ ಮಕ್ಕಳ ಸಾವಿನ ಬಗ್ಗೆ ಸೂಕ್ತ ತನಿಖೆಯಾಗಬೇಕು: ಡಾ. ಹಿಮಾಂಶು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...