Homeಕರ್ನಾಟಕಸೂಕ್ತ ಪರಿಹಾರ ನೀಡದೆ ಯಾರ ಆಸ್ತಿಯನ್ನು ಕಿತ್ತುಕೊಳ್ಳುವಂತಿಲ್ಲ: ಸುಪ್ರೀಂ

ಸೂಕ್ತ ಪರಿಹಾರ ನೀಡದೆ ಯಾರ ಆಸ್ತಿಯನ್ನು ಕಿತ್ತುಕೊಳ್ಳುವಂತಿಲ್ಲ: ಸುಪ್ರೀಂ

- Advertisement -
- Advertisement -

ಹೊಸದಿಲ್ಲಿ: ಆಸ್ತಿಯ ಹಕ್ಕು ಎಂಬುದು ಪ್ರತಿಯೊಬ್ಬ ವ್ಯಕ್ತಿಯ ಮಾನವ ಹಕ್ಕು ಮತ್ತು ಸಾಂವಿಧಾನಿಕ ಹಕ್ಕು ಆಗಿದೆ. ಸೂಕ್ತ ಪರಿಹಾರವನ್ನು ನೀಡದೆ ಯಾವುದೇ ವ್ಯಕ್ತಿಯ ಆಸ್ತಿಯನ್ನು ಕಿತ್ತುಕೊಳ್ಳುವಂತಿಲ್ಲ ಎಂದು ಸುಪ್ರಿಂ ಕೋರ್ಟ್ ಗುರುವಾರ ತನ್ನ ತೀರ್ಪು ನೀಡಿದೆ.

ಕೆಲವು ಸಂದರ್ಭಗಳಲ್ಲಿ ಪರಿಹಾರ ವಿತರಣೆಯಲ್ಲಿ ವಿಳಂಬವಾಗಿದ್ದು, ಆಗ ಪರಿಹಾರದ ಧನದ ಮೊತ್ತವನ್ನು ಇತ್ತೀಚಿನ ಭೂಮಿಯ ಮಾರಾಟದ ಮೊತ್ತಕ್ಕೆ ಬದಲಾಯಿಸಬಹುದು ಎಂದು ನ್ಯಾಯಾಲಯ ಹೇಳಿದೆ.

2003ರಲ್ಲಿ ಬೆಂಗಳೂರು-ಮೈಸೂರು ಮೂಲಭೂತ ಸೌಕರ್ಯ ಕಾರಿಡಾರ್ ಯೋಜನೆಗಾಗಿ ಭೂ ಸ್ವಾಧೀನ ಪ್ರಶ್ನೆ ಕುರಿತು ಕರ್ನಾಟಕ ಉಚ್ಚ ನ್ಯಾಯಾಲಯದ ಏಕ ನ್ಯಾಯಾಧೀಶ ಪೀಠದ ತೀರ್ಪಿನ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ವಿಭಾಗೀಯ ಪೀಠದ ನ.22,2022ರ ಆದೇಶವನ್ನು ಪ್ರಶ್ನಿಸಿದ್ದ ಮೇಲ್ಮನವಿಗೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ಈ ತೀರ್ಪು ಹೊರಬಿದ್ದಿದೆ.

“ಸಂವಿಧಾನ (44ನೇ ತಿದ್ದುಪಡಿ) ಕಾಯಿದೆ, 1978ರ ಪ್ರಕಾರ ಆಸ್ತಿಯ ಹಕ್ಕು ಎಂಬುದು ಮೂಲಭೂತ ಹಕ್ಕು ಎಂದು ಹೇಳಿದೆ.  ಆದಾಗ್ಯೂ, ಇದು ಸಂವಿಧಾನದ 300-ಎ ವಿಧಿಯ ಅಡಿಯಲ್ಲಿ ಸಾಂವಿಧಾನಿಕ ಹಕ್ಕಾಗಿದೆ.  ಸಂವಿಧಾನದ 300-ಎ ವಿಧಿಯು ಯಾವುದೇ ವ್ಯಕ್ತಿ ತನ್ನ ಆಸ್ತಿಯಿಂದ ವಂಚಿತರಾಗಬಾರದು ಎಂದು ಹೇಳುತ್ತದೆ ಎಂದು ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರ ಪೀಠವು ತನ್ನ ತೀರ್ಪಿನಲ್ಲಿ ಹೇಳಿದೆ.

ತಮಗೆ ಪರಿಹಾರ ನೀಡಲಾಗಿಲ್ಲ ಎಂದು ರೈತರು ಸಲ್ಲಿಸಿದ್ದ ಅರ್ಜಿಯ ಕುರಿತು ವಿಶೇಷ ಭೂ ಸ್ವಾಧೀನಾಧಿಕಾರಿಗಳು ಎಪ್ರಿಲ್ 22, 2019ರ ಆದೇಶದ ಮೂಲಕ ಭೂಸ್ವಾಧೀನಕ್ಕೆ ಪೂರ್ವಭಾವಿ ಅಧಿಸೂಚನೆಯ ದಿನಾಂಕವನ್ನು ಜ.29,2003ರಿಂದ 2011ಕ್ಕೆ ಮುಂದೂಡಲು ನಿರ್ಧರಿಸಿದ್ದರು ಮತ್ತು ಆ ವರ್ಷದ ಭೂಮಿಯ ದರಗಳನ್ನು ಆದೇಶಿಸಿದ್ದರು. ಇದರಂತೆ 11 ಎಕರೆ 1.25 ಗುಂಟೆ ಜಮೀನಿಗೆ 32,69,45,789 ರೂ.ಮೌಲ್ಯವನ್ನು ನಿಗದಿಗೊಳಿಸಲಾಗಿತ್ತು.

ಯೋಜನೆಯ ಪ್ರತಿಪಾದಕರು ಇದನ್ನು ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದು, ಮೌಲ್ಯ ನಿಗದಿಯನ್ನು ರದ್ದುಗೊಳಿಸಿದ್ದ ಏಕ ನ್ಯಾಯಾಧೀಶ ಪೀಠವು ಕಾನೂನಿಗೆ ಅನುಗುಣವಾಗಿ ಹೊಸದಾಗಿ ಮೌಲ್ಯವನ್ನು ನಿಗದಿಗೊಳಿಸುವಂತೆ ನಿರ್ದೇಶನ ನೀಡಿತ್ತು. ಇದರ ವಿರುದ್ಧ ಮೇಲ್ಮನವಿಯನ್ನು ವಿಭಾಗೀಯ ಪೀಠವು ವಜಾಗೊಳಿಸಿತ್ತು ಮತ್ತು ಭೂ ಮಾಲಿಕರು ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದರು.

2003ರ ಮಾರುಕಟ್ಟೆ ದರದಲ್ಲಿ ಪರಿಹಾರವನ್ನು ಅನುಮತಿಸಿದರೆ ಅದು ನ್ಯಾಯದ ಅಪಹಾಸ್ಯಕ್ಕೆ ಅನುಮತಿ ನೀಡಿದಂತಾಗುತ್ತದೆ ಹಾಗೂ ವಿಧಿ 300-ಎ ಅಡಿ ಸಾಂವಿಧಾನಿಕ ನಿಬಂಧನೆಗಳ ಅಣಕವಾಗುತ್ತದೆ ಎಂದು ತನ್ನ ತೀರ್ಪಿನಲ್ಲಿ ಹೇಳಿರುವ ಸರ್ವೋಚ್ಚ ನ್ಯಾಯಾಲಯವು, ಮೇಲ್ಮನವಿದಾರರಿಗೆ ನೀಡಬೇಕಾದ ಪರಿಹಾರವನ್ನು ಎಪ್ರಿಲ್ 22,2019ರ ಮಾರುಕಟ್ಟೆ ದರದ ಆಧಾರದಲ್ಲಿ ನಿಗದಿಗೊಳಿಸುವಂತೆ ವಿಶೇಷ ಭೂಸ್ವಾಧೀನಾಧಿಕಾರಿಗೆ ಆದೇಶಿಸಿದೆ. ಮೇಲ್ಮನವಿದಾರರು 1894ರ ಭೂಸ್ವಾಧೀನ ಕಾಯ್ದೆಯಡಿ ತಮಗೆ ಲಭ್ಯವಿರುವ ಎಲ್ಲ ಶಾಸನಬದ್ಧ ಪ್ರಯೋಜನಗಳಿಗೂ ಅರ್ಹರಾಗಿರುತ್ತಾರೆ ಎಂದೂ ಅದು ಹೇಳಿದೆ.

ಸಂಚಾರ ನಿಯಂತ್ರಕರಾಗಿ 39 ಲಿಂಗತ್ವ ಅಲ್ಪಸಂಖ್ಯಾತರ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...

ಕೇರಳ: 2026 ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ; ಹಾಲಿ ಸಂಸದರು, ಲೈಂಗಿಕ ಪ್ರಕರಣದ ಆರೋಪಿಗಳಿಗಿಲ್ಲ ಸ್ಥಾನ

ತಿರುವನಂತಪುರಂ: ಬಹಳ ದಿನಗಳ ನಂತರ, ಏಪ್ರಿಲ್ 9 ರಂದು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಕೇರಳದ ಉಳಿದ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.  ಕಣ್ಣೂರು ಕಾರ್ಪೊರೇಷನ್‌ನ ಮಾಜಿ ಮೇಯರ್ ಟಿ.ಒ. ಮೋಹನನ್ ಅವರನ್ನು ಕಣ್ಣೂರಿನಲ್ಲಿ...

‘ನೀವು ಶಂಕಿತ’ : ಮುಹಮ್ಮದ್ ದೀಪಕ್‌ಗೆ ಉತ್ತರಾಖಂಡ ಹೈಕೋರ್ಟ್ ತರಾಟೆ!

ಇತ್ತೀಚೆಗೆ ಹಿಂದುತ್ವವಾದಿಗಳ ದಾಳಿಯಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿ ಶ್ಲಾಘನೆಗೆ ಪಾತ್ರರಾದ ಮುಹಮ್ಮದ್ ದೀಪಕ್ (ದೀಪಕ್ ಕುಮಾರ್) ಅವರನ್ನು ಉತ್ತರಾಖಂಡ ಹೈಕೋರ್ಟ್ ಗುರುವಾರ (ಮಾ.19) ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು barandbench.com ವರದಿ...

ಎಂಟು ವರ್ಷ ಜೈಲಿನಲ್ಲಿ ಕಳೆದ ಬಳಿಕ ಯುಎಪಿಎ ಅಡಿ ಬಂಧಿತ ಇಬ್ಬರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದ ನಂತರ, ದೆಹಲಿ ನ್ಯಾಯಾಲಯವು ಗುರುವಾರ (ಮಾರ್ಚ್ 19, 2026) ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲ್ಪಟ್ಟ ಇಬ್ಬರು ವ್ಯಕ್ತಿಗಳನ್ನು ಖುಲಾಸೆಗೊಳಿಸಿದೆ...

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...