Homeಮುಖಪುಟ'ಆನ್‌ಲೈನ್ ತರಗತಿ ಮತ್ತು ಆನ್‌ಲೈನ್ ಶಿಕ್ಷಣ ಬೇಡ' - ಸಾಮಾನ್ಯ ಖಾಸಗಿ ಶಾಲೆಗಳ ಮನವಿ!

‘ಆನ್‌ಲೈನ್ ತರಗತಿ ಮತ್ತು ಆನ್‌ಲೈನ್ ಶಿಕ್ಷಣ ಬೇಡ’ – ಸಾಮಾನ್ಯ ಖಾಸಗಿ ಶಾಲೆಗಳ ಮನವಿ!

ಎಸ್.ಎಸ್.ಎಲ್.ಸಿ. ಮಕ್ಕಳಿಗೆ ಆನ್‌ಲೈನ್‌ ಪಾಠ ಮಾಡುವುದರಿಂದ ಅನುಕೂಲ ಇಲ್ಲ. ಮಕ್ಕಳು ಹೆಚ್ಚು ಹೊತ್ತು ಮೊಬೈಲ್ ಹಿಡಿದು ಪಾಠ ಕೇಳಲು ಆಗುವುದಿಲ್ಲ. ವಿದ್ಯಾರ್ಥಿಗಳ ಮಿದುಳಿನ ಮೇಲೆ ಗಾಢ ಪರಿಣಾಮ ಬೀರುತ್ತದೆ. ಕಣ್ಣಿನ ಮೇಲೆ ಪರಿಣಾಮ ಬೀರಿ ನೋವು ಬರುತ್ತದೆ

- Advertisement -
- Advertisement -

ಕೊರೊನ ಸೋಂಕಿನಿಂದ ಮಕ್ಕಳನ್ನು ದೂರವಿಡಲು ರಾಜ್ಯ ಸರ್ಕಾರ ಆನ್‌ಲೈನ್ ಶಿಕ್ಷಣಕ್ಕೆ ಒತ್ತು ನೀಡಿದೆ. ಹಲವು ತಿಂಗಳುಗಳಿಂದಲೂ ಎಲ್ಲಾ ಹಂತದ ಮಕ್ಕಳಿಗೂ ಆನ್‌ಲೈನ್‌ನಲ್ಲಿ ಪಾಠ ಪ್ರವಚನ ಮಾಡಲಾಗುತ್ತಿದೆ. ಇದು ಪರಿಣಾಮಕಾರಿಯಾಗಿ ಮಕ್ಕಳಿಗೆ ತಲುಪುತ್ತಿದೆಯೇ? ಆನ್‌ಲೈನ್‌ ಪಾಠವನ್ನು ಮಕ್ಕಳು ಗ್ರಹಿಸುತ್ತಿದ್ದಾರೆಯೇ ಎಂಬ ಗೊಂದಲಕ್ಕೆ ಸರ್ಕಾರ ಯಾವುದೇ ಪರಿಹಾರವನ್ನು ಕಂಡುಕೊಂಡಿಲ್ಲ. ನೇರ ಕಲಿಕೆಯ ಮಕ್ಕಳಿಗೇ ಪಾಠ ಅರ್ಥವಾಗುವುದಿಲ್ಲ. ಇನ್ನು ಆನ್‌ಲೈನ್‌ ಶಿಕ್ಷಣ ಹೇಗೆ ಅರ್ಥವಾದೀತು! ಹಾಗಾಗಿಯೇ ಹಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಬಿಇಒ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರಿಗೆ ಹಲವು ಮನವಿಗಳನ್ನು ಸಲ್ಲಿಸಿ ಆನ್‌ಲೈನ್‌ ಶಿಕ್ಷಣ ನಿಲ್ಲಿಸುವಂತೆ ಆಗ್ರಹಿಸಿವೆ.

ಪ್ರಾಥಮಿಕ ಹಂತದಿಂದ ಸ್ನಾತಕೋತ್ತರ ಹಂತದವರೆಗೆ ಆನ್‌ಲೈನ್‌ನಲ್ಲಿ ಪಾಠ ಪ್ರವಚನಕ್ಕೆ ಅವಕಾಶ ನೀಡಿದೆ. ಆನ್‌ಲೈನ್‌ನಲ್ಲಿ ವಿದ್ಯಾರ್ಥಿಗಳು ಭಾಗಿಯಾದರೂ ಅವರ ಗೊಂದಲಗಳು ಮತ್ತು ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿಲ್ಲ. ಶಿಕ್ಷಕರು, ಉಪನ್ಯಾಸಕರು, ಪ್ರಾಧ್ಯಾಪಕರು ಆನ್‌ಲೈನ್‌ನಲ್ಲಿ ಪಾಠ ಹೇಗೆ ಮಾಡಬೇಕೆಂಬ ಬಗ್ಗೆ ತರಬೇತಿ ಪಡೆದಿಲ್ಲ. ಹಾಗಾಗಿ ಮಕ್ಕಳಿಗೆ ವಿಷಯ ಅರ್ಥ ಮಾಡಿಸುವುದು ಕಷ್ಟವೇ ಆಗಿದೆ.  ಶಿಕ್ಷಕ ವರ್ಗವೂ ಇದನ್ನು ಅಲ್ಲಗೆಳೆಯುತ್ತಿಲ್ಲ. ವಿದ್ಯಾರ್ಥಿಗಳಿಂದ “ಪಾಠ ಅರ್ಥವಾಗುತ್ತಿಲ್ಲ, ನಮಗೆ ಉದ್ಭವಿಸುವ ಸಮಸ್ಯೆಗಳಿಗೆ ಪರಿಹಾರವೂ ಸಿಗುತ್ತಿಲ್ಲ, ಹೆಚ್ಚು ಹೊತ್ತು ಕೇಳಲು ಆಗುತ್ತಿಲ್ಲ” ಎನ್ನುವ ದೂರು ಸಾಮಾನ್ಯ.

ಇದನ್ನೂ ಓದಿ: ‌ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

ಆದರೆ ಆನ್‌ಲೈನ್‌ ಶಿಕ್ಷಣ ನೀಡಬೇಕೇ ಅಥವಾ ಆಫ್‌ಲೈನ್ ಶಿಕ್ಷಣ ಕೊಡಬೇಕೇ ಎಂಬ ಬಗ್ಗೆ ಸರ್ಕಾರಕ್ಕೇ ಗೊಂದಲವಿದೆ. ಆ ಗೊಂದಲವನ್ನು ಮಕ್ಕಳ ಮೇಲೆ ಮತ್ತು ಶಿಕ್ಷಕ ವೃಂದದ ಮೇಲೆಯೂ ವರ್ಗಾಯಿಸಿದೆ. ಆದ್ದರಿಂದ ಗೊಂದಲದ ಸನ್ನಿವೇಶವೇ ಮುಂದುವರಿದಿದೆ. ಉನ್ನತ ಮತ್ತು ಪ್ರಾಥಮಿಕ ಶಿಕ್ಷಣ ಸಚಿವರಿಬ್ಬರೂ ಕೂಡ ಸ್ಪಷ್ಟ ತೀರ್ಮಾನಗಳನ್ನು ಕೈಗೊಳ್ಳಲು ಇದುವರೆಗೆ ಸಾಧ್ಯವಾಗಿಲ್ಲ. ದೊಡ್ಡದೊಡ್ಡ ಶಿಕ್ಷಣ ಸಂಸ್ಥೆಗಳ ಮಾಲಿಕರು ಮನೆಪಾಠವನ್ನು ಬೆಂಬಲಿಸುವ ಶಿಕ್ಷಣ ತಜ್ಞರಿಂದ ಸಲಹೆಗಳನ್ನು ಕೇಳುತ್ತಿದ್ದು, ಬಹುತ್ವವನ್ನು ಪ್ರತಿಪಾದಿಸುವ ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆಗಳನ್ನು ನಿರ್ಲಕ್ಷಿಸಿರುವುದೇ ಈ ಗೊಂದಲಕ್ಕೆ ಕಾರಣ ಎನ್ನಲಾಗುತ್ತಿದೆ.

ಗೊಂದಲ ಸನ್ನಿವೇಶವನ್ನೇ ಬಂಡವಾಳ ಮಾಡಿಕೊಂಡಿರುವ ಶ್ರೀಮಂತ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಮಕ್ಕಳಿಂದ ಮೊದಲ ಕಂತಿನ ಹಣವನ್ನು ಕಟ್ಟಿಸಿಕೊಂಡಿವೆ. ಈಗ ಎರಡನೇ ಕಂತಿನ ಹಣವನ್ನು ನೀಡುವಂತೆ ಮಕ್ಕಳ ಪೋಷಕರ ಮೇಲೆ ಒತ್ತಡ ಹೇರುತ್ತಿವೆ. ಎರಡನೇ ಕಂತಿನ ಹಣ ನೀಡಿಲ್ಲದ ಮಕ್ಕಳಿಗೆ (ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢಶಾಲೆ ಹಂತದ) ಆನ್‌ಲೈನ್‌ ಪಾಠದ ವಿಡಿಯೋಗಳನ್ನು ಹಾಕುವುದನ್ನು ನಿಲ್ಲಿಸಿದೆ. “ಹಣ ಕಟ್ಟಿ, ಪಾಠದ ವಿಡಿಯೋಗಳನ್ನು ಹಾಕುತ್ತೇವೆ” ಎಂದು ಮುಖ್ಯಶಿಕ್ಷಕರು ಮಕ್ಕಳ ಪೋಷಕರ ಮೊಬೈಲ್‌ಗಳಿಗೆ ಮೆಸೇಜ್ ಹಾಕಿ ಒತ್ತಡ ಹೇರುತ್ತಿದ್ದಾರೆ ಎಂಬ ಆರೋಪವೂ ವ್ಯಾಪಕವಾಗಿ ಕೇಳಿಬರುತ್ತಿದೆ.

ಇದನ್ನೂ ಓದಿ: 3 ತಿಂಗಳಲ್ಲಿ 350 ಆನ್‌ಲೈನ್ ಕೋರ್ಸ್; ವಿಶ್ವದಾಖಲೆ ಮಾಡಿದ ಆರತಿ ರಂಗನಾಥ್!

ಶ್ರೀಮಂತ ಖಾಸಗಿ ಶಿಕ್ಷಣ ಸಂಸ್ಥೆಗಳು ಪೋಷಕರ ಮೇಲೆ ಶುಲ್ಕದ ಹಣಕ್ಕಾಗಿ ಒತ್ತಡ ಹೇರುತ್ತಿದ್ದರೆ, ಬಡ ಖಾಸಗಿ ಶಿಕ್ಷಣ ಸಂಸ್ಥೆಗಳ ಆನ್‌ಲೈನ್‌ ಶಿಕ್ಷಣವನ್ನೇ ನಿಲ್ಲಿಸಿಬಿಡುವಂತೆ ಬಿಇಒ ಮತ್ತು ಡಿಡಿಪಿಐಗಳನ್ನು ಆಗ್ರಹಿಸಿವೆ. ಆನ್‌ಲೈನ್‌ ಶಿಕ್ಷಣ ಮಕ್ಕಳಿಗೆ ಅರ್ಥವಾಗುವುದಿಲ್ಲ. ಹಾಗಾಗಿ ಅದು ಫಲಿತಾಂಶದ ಮೇಲೆ ಪರಿಣಾಮ ಬೀರುತ್ತದೆ. ಎಸ್.ಎಸ್.ಎಲ್.ಸಿ. ಮಕ್ಕಳಿಗೆ ಆನ್‌ಲೈನ್‌ ಪಾಠ ಮಾಡುವುದರಿಂದ ಅನುಕೂಲ ಇಲ್ಲ. ಮಕ್ಕಳು ಹೆಚ್ಚು ಹೊತ್ತು ಮೊಬೈಲ್ ಹಿಡಿದು ಪಾಠ ಕೇಳಲು ಆಗುವುದಿಲ್ಲ. ವಿದ್ಯಾರ್ಥಿಗಳ ಮಿದುಳಿನ ಮೇಲೆ ಗಾಢ ಪರಿಣಾಮ ಬೀರುತ್ತದೆ. ಕಣ್ಣಿನ ಮೇಲೆ ಪರಿಣಾಮ ಬೀರಿ ನೋವು ಬರುತ್ತದೆ. ಫಲಿತಾಂಶದಲ್ಲಿ ಕಡಿಮೆಯಾದರೆ ಯಾರು ಹೊಣೆ? ಕಡಿಮೆ ಫಲಿತಾಂಶ ಬಂದರೆ ಅಂತಹ ಶಾಲೆಗಳನ್ನು ಮುಚ್ಚುವ ಭೀತಿಯೂ ಇದೆ.

ಕೋವಿಡ್ ಅವಧಿಯಲ್ಲಿ ಆನ್‌ಲೈನ್‌ ಶಿಕ್ಷಣ ಪಡೆಯುವ ಮಕ್ಕಳು ಸರಿಯಾಗಿ ಗ್ರಹಿಸಲು ಸಾಧ್ಯವಾಗದೆ ಕಡಿಮೆ ಅಂಕಗಳನ್ನು ಪಡೆಯುವ ಸಾಧ್ಯತೆ ಇದೆ. ಪಿಯುಸಿ ನಂತರದ ವಿದ್ಯಾರ್ಥಿಗಳು ವೈದ್ಯಕೀಯ, ಇಂಜಿನಿಯರಿಂಗ್‌ನಂತಹ ಕೋರ್ಸ್‌ಗಳಿಗೆ ಹೋಗಲು ತಡೆದಂತೆ ಆಗುತ್ತದೆ. ಕಡಿಮೆ ಅಂಕ ಗಳಿಸಿದವರ ಮುಂದಿನ ಭವಿಷ್ಯ ಮಂಕಾಗಲಿದೆ. ವಿದ್ಯಾರ್ಥಿಗೆ ಮುಂದಿನ ಆಯ್ಕೆ ಇಲ್ಲದಂತಾಗಿ ಶಿಕ್ಷಣವನ್ನು ಮೊಟುಕುಗೊಳಿಸಬೇಕಾದಂತಹ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು. ಕೇವಲ ಪ್ರತಿಷ್ಠಗಾಗಿ ಆನ್‌ಲೈನ್‌ ಶಿಕ್ಷಣದ ಮೂಲಕ ಪಾಠ ಮಾಡಿದರೆ ಅದು ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿಸಿದಂತೆಯೇ ಆಗುತ್ತದೆ. ಹಾಗಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸಾಮಾನ್ಯ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಶಿಕ್ಷಣ ಅಧಿಕಾರಿಗಳಿಗೆ ಆನ್‌ಲೈನ್‌ ಶಿಕ್ಷಣ ನಿಲ್ಲಿಸುವಂತೆ ಮನವಿ ಮಾಡಿದ್ದೇವೆ ಎನ್ನುತ್ತಾರೆ ಹನುಮಂತರಾಯಪ್ಪ.

ಇದನ್ನೂ ಓದಿ: ಶಾಲೆಗಳ ಆನ್‌ಲೈನ್‌ ತರಗತಿ ಹ್ಯಾಕ್‌ ಮಾಡಿ ಅಶ್ಲೀಲ ವಿಡಿಯೋ ಪೋಸ್ಟ್‌‌ ಮಾಡಿದ ದುಷ್ಕರ್ಮಿಗಳು

ಗ್ರಾಮೀಣ ಪ್ರದೇಶದ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣದ ಮಾತು ದೂರವೇ ಉಳಿದಿದೆ. ನೆಟ್‌ವರ್ಕ್ ಮತ್ತು ಸಿಗ್ನಲ್ ಸಿಗದೇ ಇರುವ ಸಮಸ್ಯೆಯಿಂದ ಪಾಠ ಕೇಳಲು ಆಗುವುದಿಲ್ಲ. ನಗರ ಪ್ರದೇಶದ ಕೆಲವೇ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣ ಅನುಕೂಲವಾಗಬಹುದು. ಆದರೆ ಆ ಪಾಠವನ್ನು ಅರ್ಥ ಮಾಡಿಕೊಳ್ಳುವ ಮಂದಿ ಕಡಿಮೆ. ಗ್ರಾಮೀಣ ಬಡ ವಿದ್ಯಾರ್ಥಿಗಳು ನೇರ ತರಗತಿಗಳಿಗೆ ಬರಬೇಕೆಂದರೆ ಬಸ್ ವ್ಯವಸ್ಥೆಯೂ ಇಲ್ಲ. ಇದು ಆ ವಿದ್ಯಾರ್ಥಿಗಳು ಉಭಯ ಸಂಕಟಕ್ಕೆ ಸಿಲುಕುವಂತೆ ಮಾಡಿದೆ. ಆನ್‌ಲೈನ್‌ ವ್ಯವಸ್ಥೆ ಶ್ರೀಮಂತ ಖಾಸಗಿ ಶಿಕ್ಷಣ ಸಂಸ್ಥೆಗಳ ಮಕ್ಕಳಿಗೆ ಲಭ್ಯವಾದರೆ ಬಡ ಖಾಸಗಿ ಶಿಕ್ಷಣ ಸಂಸ್ಥೆಗಳ ಮಕ್ಕಳು ಶಿಕ್ಷಣದಿಂದ ದೂರವೇ ಉಳಿಯುವಂತೆ ಮಾಡಿದೆ.

ಸರ್ಕಾರಿ ಶಾಲಾ ಕಾಲೇಜುಗಳ ಸ್ಥಿತಿ ಇದಕ್ಕಿಂತ ಭಿನ್ನವಾಗೇನೂ ಇಲ್ಲ. ಬಹುತೇಕ ಮಕ್ಕಳು ಬಡ-ಮಧ್ಯಮ ವರ್ಗದ ಕುಟುಂಬದವರಾಗಿದ್ದು 4ಜಿ ಯಂತಹ ಮೊಬೈಲ್ ಖರೀದಿ ಮಾಡಲು ಶಕ್ತವಾಗಿಲ್ಲ. ಮೊಬೈಲ್ ಇದ್ದವರು ನೆಟ್‌ವೆರ್ಕ್ ಸಿಗದೆ ಸಮಸ್ಯೆ ಎದುರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಶ್ರೀಮಂತ ಖಾಸಗಿ ಶಿಕ್ಷಣ ಸಂಸ್ಥೆಗಳ ಲಾಬಿ ಒಂದು ಕಡೆಯಾದರೆ ಮಧ್ಯಮ ವರ್ಗದ ಖಾಸಗಿ ಶಿಕ್ಷಣ ಸಂಸ್ಥೆಗಳು ಅಸಹಾಯಕತೆಯಿಂದ ಏನೂ ತೋಚದಂತಹ ಸ್ಥಿತಿಗೆ ತಲುಪಿವೆ. ಹೀಗಾಗಿ ವಿದ್ಯಾರ್ಥಿಗಳ ಕಲಿಕೆಯ ನಡುವೆ ಭಾರೀ ಕಂದಕ ನಿರ್ಮಾಣವಾಗಲಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ವೈಜ್ಞಾನಿಕ ಶಿಕ್ಷಣ ನೀಡುವತ್ತ ದಿಟ್ಟ ನಿರ್ಧಾರ ಕೈಗೊಳ್ಳಬೇಕಾಗಿದೆ.


ಇದನ್ನೂ ಓದಿ: ಮಕ್ಕಳ ಆನ್‌ಲೈನ್ ಶಿಕ್ಷಣಕ್ಕಾಗಿ ತಾಳಿ ಮಾರಿಕೊಂಡ ಘಟನೆ ನನ್ನ ಹೃದಯ ಹಿಂಡುತ್ತಿದೆ: ಎಚ್‌ಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಯವಿಟ್ಟು ಆನ್ಲೈನ್ ಶಿಕ್ಷಣವನ್ನು ನಿಲ್ಲಿಸಿ…!!!
    ಈ ಆನ್ಲೈನ್ ತರಗತಿಯಿಂದಾಗಿ ಅನೇಕ ಮಕ್ಕಳು ದುರಭ್ಯಾಸ ಗಳಿಗೆ ಬಲಿಯಾಗುತ್ತಿದ್ದಾರೆ.! ಹಾಗೂ ಆನ್ಲೈನ್ ನಲ್ಲಿ ಪಾಠ ಕೇಳುವುದಕ್ಕಿಂತ ಅನ್ಯರ ಜೊತೆಗೆ ಚಾಟಿಂಗ್ ಮಾಡುವುದೇ ಹೆಚ್ಚು…!
    ಆನ್ಲೈನ್ ಶಿಕ್ಷಣ ವ್ಯವಸ್ಥೆ ಯಿಂದಾಗಿ ಮಕ್ಕಳು ಹಾಳಾಗುತ್ತಿದ್ದಾರೆ, ಆನ್ಲೈನ್ ಶಿಕ್ಷಣ ದಿಂದ ಯಾವುದೇ ಪ್ರಯೋಜನ ಇಲ್ಲ, ನಿಜವಾಗಿಯೂ ನಮ್ಮ ರಾಜ್ಯದ ಈಗಿನ ಶಿಕ್ಷಣ ನೀತಿಯೇ ಮಕ್ಕಳನ್ನು ಹಾಳು ಮಾಡುತ್ತಿದೆ…!!!
    (ಆನ್ಲೈನ್ ಶಿಕ್ಷಣ ಸರಿ ಅನಿಸುವುದೇ ಆದರೆ ನನ್ನ ನಂಬರ್ ಗೆ ಕರೆ ಮಾಡಿ 8496092478)
    :- ಅನಿಲ್ ಕುಮಾರ್,
    ಹಂಗಳ ಗ್ರಾಮ, ಗುಂಡ್ಲುಪೇಟೆ ತಾಲೂಕು

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...