Homeಮುಖಪುಟ'ಆನ್‌ಲೈನ್ ತರಗತಿ ಮತ್ತು ಆನ್‌ಲೈನ್ ಶಿಕ್ಷಣ ಬೇಡ' - ಸಾಮಾನ್ಯ ಖಾಸಗಿ ಶಾಲೆಗಳ ಮನವಿ!

‘ಆನ್‌ಲೈನ್ ತರಗತಿ ಮತ್ತು ಆನ್‌ಲೈನ್ ಶಿಕ್ಷಣ ಬೇಡ’ – ಸಾಮಾನ್ಯ ಖಾಸಗಿ ಶಾಲೆಗಳ ಮನವಿ!

ಎಸ್.ಎಸ್.ಎಲ್.ಸಿ. ಮಕ್ಕಳಿಗೆ ಆನ್‌ಲೈನ್‌ ಪಾಠ ಮಾಡುವುದರಿಂದ ಅನುಕೂಲ ಇಲ್ಲ. ಮಕ್ಕಳು ಹೆಚ್ಚು ಹೊತ್ತು ಮೊಬೈಲ್ ಹಿಡಿದು ಪಾಠ ಕೇಳಲು ಆಗುವುದಿಲ್ಲ. ವಿದ್ಯಾರ್ಥಿಗಳ ಮಿದುಳಿನ ಮೇಲೆ ಗಾಢ ಪರಿಣಾಮ ಬೀರುತ್ತದೆ. ಕಣ್ಣಿನ ಮೇಲೆ ಪರಿಣಾಮ ಬೀರಿ ನೋವು ಬರುತ್ತದೆ

- Advertisement -
- Advertisement -

ಕೊರೊನ ಸೋಂಕಿನಿಂದ ಮಕ್ಕಳನ್ನು ದೂರವಿಡಲು ರಾಜ್ಯ ಸರ್ಕಾರ ಆನ್‌ಲೈನ್ ಶಿಕ್ಷಣಕ್ಕೆ ಒತ್ತು ನೀಡಿದೆ. ಹಲವು ತಿಂಗಳುಗಳಿಂದಲೂ ಎಲ್ಲಾ ಹಂತದ ಮಕ್ಕಳಿಗೂ ಆನ್‌ಲೈನ್‌ನಲ್ಲಿ ಪಾಠ ಪ್ರವಚನ ಮಾಡಲಾಗುತ್ತಿದೆ. ಇದು ಪರಿಣಾಮಕಾರಿಯಾಗಿ ಮಕ್ಕಳಿಗೆ ತಲುಪುತ್ತಿದೆಯೇ? ಆನ್‌ಲೈನ್‌ ಪಾಠವನ್ನು ಮಕ್ಕಳು ಗ್ರಹಿಸುತ್ತಿದ್ದಾರೆಯೇ ಎಂಬ ಗೊಂದಲಕ್ಕೆ ಸರ್ಕಾರ ಯಾವುದೇ ಪರಿಹಾರವನ್ನು ಕಂಡುಕೊಂಡಿಲ್ಲ. ನೇರ ಕಲಿಕೆಯ ಮಕ್ಕಳಿಗೇ ಪಾಠ ಅರ್ಥವಾಗುವುದಿಲ್ಲ. ಇನ್ನು ಆನ್‌ಲೈನ್‌ ಶಿಕ್ಷಣ ಹೇಗೆ ಅರ್ಥವಾದೀತು! ಹಾಗಾಗಿಯೇ ಹಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಬಿಇಒ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರಿಗೆ ಹಲವು ಮನವಿಗಳನ್ನು ಸಲ್ಲಿಸಿ ಆನ್‌ಲೈನ್‌ ಶಿಕ್ಷಣ ನಿಲ್ಲಿಸುವಂತೆ ಆಗ್ರಹಿಸಿವೆ.

ಪ್ರಾಥಮಿಕ ಹಂತದಿಂದ ಸ್ನಾತಕೋತ್ತರ ಹಂತದವರೆಗೆ ಆನ್‌ಲೈನ್‌ನಲ್ಲಿ ಪಾಠ ಪ್ರವಚನಕ್ಕೆ ಅವಕಾಶ ನೀಡಿದೆ. ಆನ್‌ಲೈನ್‌ನಲ್ಲಿ ವಿದ್ಯಾರ್ಥಿಗಳು ಭಾಗಿಯಾದರೂ ಅವರ ಗೊಂದಲಗಳು ಮತ್ತು ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿಲ್ಲ. ಶಿಕ್ಷಕರು, ಉಪನ್ಯಾಸಕರು, ಪ್ರಾಧ್ಯಾಪಕರು ಆನ್‌ಲೈನ್‌ನಲ್ಲಿ ಪಾಠ ಹೇಗೆ ಮಾಡಬೇಕೆಂಬ ಬಗ್ಗೆ ತರಬೇತಿ ಪಡೆದಿಲ್ಲ. ಹಾಗಾಗಿ ಮಕ್ಕಳಿಗೆ ವಿಷಯ ಅರ್ಥ ಮಾಡಿಸುವುದು ಕಷ್ಟವೇ ಆಗಿದೆ.  ಶಿಕ್ಷಕ ವರ್ಗವೂ ಇದನ್ನು ಅಲ್ಲಗೆಳೆಯುತ್ತಿಲ್ಲ. ವಿದ್ಯಾರ್ಥಿಗಳಿಂದ “ಪಾಠ ಅರ್ಥವಾಗುತ್ತಿಲ್ಲ, ನಮಗೆ ಉದ್ಭವಿಸುವ ಸಮಸ್ಯೆಗಳಿಗೆ ಪರಿಹಾರವೂ ಸಿಗುತ್ತಿಲ್ಲ, ಹೆಚ್ಚು ಹೊತ್ತು ಕೇಳಲು ಆಗುತ್ತಿಲ್ಲ” ಎನ್ನುವ ದೂರು ಸಾಮಾನ್ಯ.

ಇದನ್ನೂ ಓದಿ: ‌ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

ಆದರೆ ಆನ್‌ಲೈನ್‌ ಶಿಕ್ಷಣ ನೀಡಬೇಕೇ ಅಥವಾ ಆಫ್‌ಲೈನ್ ಶಿಕ್ಷಣ ಕೊಡಬೇಕೇ ಎಂಬ ಬಗ್ಗೆ ಸರ್ಕಾರಕ್ಕೇ ಗೊಂದಲವಿದೆ. ಆ ಗೊಂದಲವನ್ನು ಮಕ್ಕಳ ಮೇಲೆ ಮತ್ತು ಶಿಕ್ಷಕ ವೃಂದದ ಮೇಲೆಯೂ ವರ್ಗಾಯಿಸಿದೆ. ಆದ್ದರಿಂದ ಗೊಂದಲದ ಸನ್ನಿವೇಶವೇ ಮುಂದುವರಿದಿದೆ. ಉನ್ನತ ಮತ್ತು ಪ್ರಾಥಮಿಕ ಶಿಕ್ಷಣ ಸಚಿವರಿಬ್ಬರೂ ಕೂಡ ಸ್ಪಷ್ಟ ತೀರ್ಮಾನಗಳನ್ನು ಕೈಗೊಳ್ಳಲು ಇದುವರೆಗೆ ಸಾಧ್ಯವಾಗಿಲ್ಲ. ದೊಡ್ಡದೊಡ್ಡ ಶಿಕ್ಷಣ ಸಂಸ್ಥೆಗಳ ಮಾಲಿಕರು ಮನೆಪಾಠವನ್ನು ಬೆಂಬಲಿಸುವ ಶಿಕ್ಷಣ ತಜ್ಞರಿಂದ ಸಲಹೆಗಳನ್ನು ಕೇಳುತ್ತಿದ್ದು, ಬಹುತ್ವವನ್ನು ಪ್ರತಿಪಾದಿಸುವ ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆಗಳನ್ನು ನಿರ್ಲಕ್ಷಿಸಿರುವುದೇ ಈ ಗೊಂದಲಕ್ಕೆ ಕಾರಣ ಎನ್ನಲಾಗುತ್ತಿದೆ.

ಗೊಂದಲ ಸನ್ನಿವೇಶವನ್ನೇ ಬಂಡವಾಳ ಮಾಡಿಕೊಂಡಿರುವ ಶ್ರೀಮಂತ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಮಕ್ಕಳಿಂದ ಮೊದಲ ಕಂತಿನ ಹಣವನ್ನು ಕಟ್ಟಿಸಿಕೊಂಡಿವೆ. ಈಗ ಎರಡನೇ ಕಂತಿನ ಹಣವನ್ನು ನೀಡುವಂತೆ ಮಕ್ಕಳ ಪೋಷಕರ ಮೇಲೆ ಒತ್ತಡ ಹೇರುತ್ತಿವೆ. ಎರಡನೇ ಕಂತಿನ ಹಣ ನೀಡಿಲ್ಲದ ಮಕ್ಕಳಿಗೆ (ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢಶಾಲೆ ಹಂತದ) ಆನ್‌ಲೈನ್‌ ಪಾಠದ ವಿಡಿಯೋಗಳನ್ನು ಹಾಕುವುದನ್ನು ನಿಲ್ಲಿಸಿದೆ. “ಹಣ ಕಟ್ಟಿ, ಪಾಠದ ವಿಡಿಯೋಗಳನ್ನು ಹಾಕುತ್ತೇವೆ” ಎಂದು ಮುಖ್ಯಶಿಕ್ಷಕರು ಮಕ್ಕಳ ಪೋಷಕರ ಮೊಬೈಲ್‌ಗಳಿಗೆ ಮೆಸೇಜ್ ಹಾಕಿ ಒತ್ತಡ ಹೇರುತ್ತಿದ್ದಾರೆ ಎಂಬ ಆರೋಪವೂ ವ್ಯಾಪಕವಾಗಿ ಕೇಳಿಬರುತ್ತಿದೆ.

ಇದನ್ನೂ ಓದಿ: 3 ತಿಂಗಳಲ್ಲಿ 350 ಆನ್‌ಲೈನ್ ಕೋರ್ಸ್; ವಿಶ್ವದಾಖಲೆ ಮಾಡಿದ ಆರತಿ ರಂಗನಾಥ್!

ಶ್ರೀಮಂತ ಖಾಸಗಿ ಶಿಕ್ಷಣ ಸಂಸ್ಥೆಗಳು ಪೋಷಕರ ಮೇಲೆ ಶುಲ್ಕದ ಹಣಕ್ಕಾಗಿ ಒತ್ತಡ ಹೇರುತ್ತಿದ್ದರೆ, ಬಡ ಖಾಸಗಿ ಶಿಕ್ಷಣ ಸಂಸ್ಥೆಗಳ ಆನ್‌ಲೈನ್‌ ಶಿಕ್ಷಣವನ್ನೇ ನಿಲ್ಲಿಸಿಬಿಡುವಂತೆ ಬಿಇಒ ಮತ್ತು ಡಿಡಿಪಿಐಗಳನ್ನು ಆಗ್ರಹಿಸಿವೆ. ಆನ್‌ಲೈನ್‌ ಶಿಕ್ಷಣ ಮಕ್ಕಳಿಗೆ ಅರ್ಥವಾಗುವುದಿಲ್ಲ. ಹಾಗಾಗಿ ಅದು ಫಲಿತಾಂಶದ ಮೇಲೆ ಪರಿಣಾಮ ಬೀರುತ್ತದೆ. ಎಸ್.ಎಸ್.ಎಲ್.ಸಿ. ಮಕ್ಕಳಿಗೆ ಆನ್‌ಲೈನ್‌ ಪಾಠ ಮಾಡುವುದರಿಂದ ಅನುಕೂಲ ಇಲ್ಲ. ಮಕ್ಕಳು ಹೆಚ್ಚು ಹೊತ್ತು ಮೊಬೈಲ್ ಹಿಡಿದು ಪಾಠ ಕೇಳಲು ಆಗುವುದಿಲ್ಲ. ವಿದ್ಯಾರ್ಥಿಗಳ ಮಿದುಳಿನ ಮೇಲೆ ಗಾಢ ಪರಿಣಾಮ ಬೀರುತ್ತದೆ. ಕಣ್ಣಿನ ಮೇಲೆ ಪರಿಣಾಮ ಬೀರಿ ನೋವು ಬರುತ್ತದೆ. ಫಲಿತಾಂಶದಲ್ಲಿ ಕಡಿಮೆಯಾದರೆ ಯಾರು ಹೊಣೆ? ಕಡಿಮೆ ಫಲಿತಾಂಶ ಬಂದರೆ ಅಂತಹ ಶಾಲೆಗಳನ್ನು ಮುಚ್ಚುವ ಭೀತಿಯೂ ಇದೆ.

ಕೋವಿಡ್ ಅವಧಿಯಲ್ಲಿ ಆನ್‌ಲೈನ್‌ ಶಿಕ್ಷಣ ಪಡೆಯುವ ಮಕ್ಕಳು ಸರಿಯಾಗಿ ಗ್ರಹಿಸಲು ಸಾಧ್ಯವಾಗದೆ ಕಡಿಮೆ ಅಂಕಗಳನ್ನು ಪಡೆಯುವ ಸಾಧ್ಯತೆ ಇದೆ. ಪಿಯುಸಿ ನಂತರದ ವಿದ್ಯಾರ್ಥಿಗಳು ವೈದ್ಯಕೀಯ, ಇಂಜಿನಿಯರಿಂಗ್‌ನಂತಹ ಕೋರ್ಸ್‌ಗಳಿಗೆ ಹೋಗಲು ತಡೆದಂತೆ ಆಗುತ್ತದೆ. ಕಡಿಮೆ ಅಂಕ ಗಳಿಸಿದವರ ಮುಂದಿನ ಭವಿಷ್ಯ ಮಂಕಾಗಲಿದೆ. ವಿದ್ಯಾರ್ಥಿಗೆ ಮುಂದಿನ ಆಯ್ಕೆ ಇಲ್ಲದಂತಾಗಿ ಶಿಕ್ಷಣವನ್ನು ಮೊಟುಕುಗೊಳಿಸಬೇಕಾದಂತಹ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು. ಕೇವಲ ಪ್ರತಿಷ್ಠಗಾಗಿ ಆನ್‌ಲೈನ್‌ ಶಿಕ್ಷಣದ ಮೂಲಕ ಪಾಠ ಮಾಡಿದರೆ ಅದು ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿಸಿದಂತೆಯೇ ಆಗುತ್ತದೆ. ಹಾಗಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸಾಮಾನ್ಯ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಶಿಕ್ಷಣ ಅಧಿಕಾರಿಗಳಿಗೆ ಆನ್‌ಲೈನ್‌ ಶಿಕ್ಷಣ ನಿಲ್ಲಿಸುವಂತೆ ಮನವಿ ಮಾಡಿದ್ದೇವೆ ಎನ್ನುತ್ತಾರೆ ಹನುಮಂತರಾಯಪ್ಪ.

ಇದನ್ನೂ ಓದಿ: ಶಾಲೆಗಳ ಆನ್‌ಲೈನ್‌ ತರಗತಿ ಹ್ಯಾಕ್‌ ಮಾಡಿ ಅಶ್ಲೀಲ ವಿಡಿಯೋ ಪೋಸ್ಟ್‌‌ ಮಾಡಿದ ದುಷ್ಕರ್ಮಿಗಳು

ಗ್ರಾಮೀಣ ಪ್ರದೇಶದ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣದ ಮಾತು ದೂರವೇ ಉಳಿದಿದೆ. ನೆಟ್‌ವರ್ಕ್ ಮತ್ತು ಸಿಗ್ನಲ್ ಸಿಗದೇ ಇರುವ ಸಮಸ್ಯೆಯಿಂದ ಪಾಠ ಕೇಳಲು ಆಗುವುದಿಲ್ಲ. ನಗರ ಪ್ರದೇಶದ ಕೆಲವೇ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣ ಅನುಕೂಲವಾಗಬಹುದು. ಆದರೆ ಆ ಪಾಠವನ್ನು ಅರ್ಥ ಮಾಡಿಕೊಳ್ಳುವ ಮಂದಿ ಕಡಿಮೆ. ಗ್ರಾಮೀಣ ಬಡ ವಿದ್ಯಾರ್ಥಿಗಳು ನೇರ ತರಗತಿಗಳಿಗೆ ಬರಬೇಕೆಂದರೆ ಬಸ್ ವ್ಯವಸ್ಥೆಯೂ ಇಲ್ಲ. ಇದು ಆ ವಿದ್ಯಾರ್ಥಿಗಳು ಉಭಯ ಸಂಕಟಕ್ಕೆ ಸಿಲುಕುವಂತೆ ಮಾಡಿದೆ. ಆನ್‌ಲೈನ್‌ ವ್ಯವಸ್ಥೆ ಶ್ರೀಮಂತ ಖಾಸಗಿ ಶಿಕ್ಷಣ ಸಂಸ್ಥೆಗಳ ಮಕ್ಕಳಿಗೆ ಲಭ್ಯವಾದರೆ ಬಡ ಖಾಸಗಿ ಶಿಕ್ಷಣ ಸಂಸ್ಥೆಗಳ ಮಕ್ಕಳು ಶಿಕ್ಷಣದಿಂದ ದೂರವೇ ಉಳಿಯುವಂತೆ ಮಾಡಿದೆ.

ಸರ್ಕಾರಿ ಶಾಲಾ ಕಾಲೇಜುಗಳ ಸ್ಥಿತಿ ಇದಕ್ಕಿಂತ ಭಿನ್ನವಾಗೇನೂ ಇಲ್ಲ. ಬಹುತೇಕ ಮಕ್ಕಳು ಬಡ-ಮಧ್ಯಮ ವರ್ಗದ ಕುಟುಂಬದವರಾಗಿದ್ದು 4ಜಿ ಯಂತಹ ಮೊಬೈಲ್ ಖರೀದಿ ಮಾಡಲು ಶಕ್ತವಾಗಿಲ್ಲ. ಮೊಬೈಲ್ ಇದ್ದವರು ನೆಟ್‌ವೆರ್ಕ್ ಸಿಗದೆ ಸಮಸ್ಯೆ ಎದುರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಶ್ರೀಮಂತ ಖಾಸಗಿ ಶಿಕ್ಷಣ ಸಂಸ್ಥೆಗಳ ಲಾಬಿ ಒಂದು ಕಡೆಯಾದರೆ ಮಧ್ಯಮ ವರ್ಗದ ಖಾಸಗಿ ಶಿಕ್ಷಣ ಸಂಸ್ಥೆಗಳು ಅಸಹಾಯಕತೆಯಿಂದ ಏನೂ ತೋಚದಂತಹ ಸ್ಥಿತಿಗೆ ತಲುಪಿವೆ. ಹೀಗಾಗಿ ವಿದ್ಯಾರ್ಥಿಗಳ ಕಲಿಕೆಯ ನಡುವೆ ಭಾರೀ ಕಂದಕ ನಿರ್ಮಾಣವಾಗಲಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ವೈಜ್ಞಾನಿಕ ಶಿಕ್ಷಣ ನೀಡುವತ್ತ ದಿಟ್ಟ ನಿರ್ಧಾರ ಕೈಗೊಳ್ಳಬೇಕಾಗಿದೆ.


ಇದನ್ನೂ ಓದಿ: ಮಕ್ಕಳ ಆನ್‌ಲೈನ್ ಶಿಕ್ಷಣಕ್ಕಾಗಿ ತಾಳಿ ಮಾರಿಕೊಂಡ ಘಟನೆ ನನ್ನ ಹೃದಯ ಹಿಂಡುತ್ತಿದೆ: ಎಚ್‌ಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಯವಿಟ್ಟು ಆನ್ಲೈನ್ ಶಿಕ್ಷಣವನ್ನು ನಿಲ್ಲಿಸಿ…!!!
    ಈ ಆನ್ಲೈನ್ ತರಗತಿಯಿಂದಾಗಿ ಅನೇಕ ಮಕ್ಕಳು ದುರಭ್ಯಾಸ ಗಳಿಗೆ ಬಲಿಯಾಗುತ್ತಿದ್ದಾರೆ.! ಹಾಗೂ ಆನ್ಲೈನ್ ನಲ್ಲಿ ಪಾಠ ಕೇಳುವುದಕ್ಕಿಂತ ಅನ್ಯರ ಜೊತೆಗೆ ಚಾಟಿಂಗ್ ಮಾಡುವುದೇ ಹೆಚ್ಚು…!
    ಆನ್ಲೈನ್ ಶಿಕ್ಷಣ ವ್ಯವಸ್ಥೆ ಯಿಂದಾಗಿ ಮಕ್ಕಳು ಹಾಳಾಗುತ್ತಿದ್ದಾರೆ, ಆನ್ಲೈನ್ ಶಿಕ್ಷಣ ದಿಂದ ಯಾವುದೇ ಪ್ರಯೋಜನ ಇಲ್ಲ, ನಿಜವಾಗಿಯೂ ನಮ್ಮ ರಾಜ್ಯದ ಈಗಿನ ಶಿಕ್ಷಣ ನೀತಿಯೇ ಮಕ್ಕಳನ್ನು ಹಾಳು ಮಾಡುತ್ತಿದೆ…!!!
    (ಆನ್ಲೈನ್ ಶಿಕ್ಷಣ ಸರಿ ಅನಿಸುವುದೇ ಆದರೆ ನನ್ನ ನಂಬರ್ ಗೆ ಕರೆ ಮಾಡಿ 8496092478)
    :- ಅನಿಲ್ ಕುಮಾರ್,
    ಹಂಗಳ ಗ್ರಾಮ, ಗುಂಡ್ಲುಪೇಟೆ ತಾಲೂಕು

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...